Home ಕರಾವಳಿ Archive by category ಉಡುಪಿ (Page 19)

ಸಿದ್ದಾಪುರ: ಪೆಟ್ರೋಲ್ ಕಳವು ಅಡ್ಡೆಗೆ ಪೊಲೀಸ್ ದಾಳಿ; ಪ್ರಮುಖ ಅರೋಪಿ ಪರಾರಿ, ಚಾಲಕನ ಬಂಧನ

ಸಿದ್ದಾಪುರ: ಸಿದ್ದಾಪುರ ಪೇಟೆ ಸಮೀಪದ ಸುಬ್ಬರಾವ್‌ ಕಾಂಪ್ಲೆಕ್ಸ್ ಪಕ್ಕದಲ್ಲಿ ಇರುವ ಸರ್ವಿಸ್ ಸ್ಟೇಷನ್ ನಲ್ಲಿ ನಿರಂತರವಾಗಿ ಟ್ಯಾಂಕರ್‌ನ ಪೆಟ್ರೋಲ್ ಕಳವು ಮಾಡುತ್ತಿರುವ ಬಗ್ಗೆ ಸಿಕ್ಕಿದ ಮಾಹಿತಿ ಮೇರೆಗೆ ಮಾ. 10ರಂದು ರಾತ್ರಿ ಕುಂದಾಪುರ ಉಪವಿಭಾಗದ ಡಿವೈಎಸ್‌ಪಿ ಎಚ್.ಡಿ. ಕುಲಕರ್ಣಿ ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಇದರ ಪ್ರಮುಖ ಸೂತ್ರಧಾರ ವಿಜಯ ನಾಯ್ಕ

ಹತ್ತು ಸಾವಿರ ಮನೆಗಳ ಪೈಕಿ ಒಂದೂ ಮತ್ಸ್ಯಾಶ್ರಯ ಮನೆ ಹಂಚಿಕೆಯಾಗಿಲ್ಲ, ಗಂಟಿಹೊಳೆ ಪ್ರಶ್ನೆಗೆ ಸರ್ಕಾರದ ಉತ್ತರ

ಬಜೆಟ್ ಅಧಿವೇಶನದಲ್ಲಿ ಬೈಂದೂರು ಶಾಸಕ ಗುರುರಾಜ್‌ ಗಂಟಿಹೊಳೆ ಅವರು ಮೀನುಗಾರರ ಪರವಾಗಿ ಧ್ವನಿ ಎತ್ತಿದ್ದು, ಸರ್ಕಾರದ ಉತ್ತರಕ್ಕೆ ಶಾಸಕರು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ಸದನದಲ್ಲಿ, 2023-24 ಹಾಗೂ 2024-25 ನೇ ಸಾಲಿನಲ್ಲಿ ಮೀನುಗಾರಿಕೆ ಮತ್ಸ್ಯಾಶ್ರಯ ವಸತಿ ಯೋಜನೆಯಡಿ ಮಂಜೂರಾದ ಮನೆಗಳ ಪೈಕಿ ಎಷ್ಟು ಮನೆಗಳ ಕಾಮಗಾರಿ ಪ್ರಗತಿಯಲ್ಲಿವೆ ಎಂದು ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಶಾಸಕರ ಪ್ರಶ್ನೆಗೆ ಉತ್ತರಿಸಿರುವ ಮೀನುಗಾರಿಕ ಸಚಿವ ಮಾಂಕಾಳ್ ವೈದ್ಯ, 2023-24

ಬ್ರಹ್ಮಾವರದಲ್ಲಿ ಎಂ.ಸಿ.ಸಿ ಬ್ಯಾಂಕಿನ ಎಟಿಎಮ್ ಉದ್ಘಾಟನೆ

ಬ್ರಹ್ಮಾವರ ಶಾಖೆಯು ಆರಂಭಗೊoಡು ಒಂದು ವರ್ಷ ಪೂರ್ಣಗೊಂಡ ಸಂದರ್ಭ ವಾರ್ಷಿಕೋತ್ಸವ, 10 ಕೋಟಿ ವ್ಯವಹಾರದ ಸಾಧನೆ ಮತ್ತು ನೂತನ ಎಟಿಮ್ ಉದ್ಘಾಟಣಾ ಸಮಾರಂಭ 2025 ಬ್ರಹ್ಮಾವರ ಶಾಖೆಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಎಂ.ಸಿ.ಸಿ. ಬ್ಯಾಂಕಿನ 8ನೇ ಎಟಿಎಮ್ ಅನ್ನು ಬ್ರಹ್ಮಾವರ ಶಾಖೆಯಲ್ಲಿ ಬ್ರಹ್ಮಾವರ ಕ್ಯಾಥೋಲಿಕ್ ಕ್ರೇಡಿಟ್ ಸಹಕಾರ ಸಂಘದ ಅಧ್ಯಕ್ಷರಾದ ಶ್ರೀ ಜೆರಾಲ್ಡ್ ಗೊನ್ಸಾಲ್ವಿಸ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಹೋಲಿ ಫ್ಯಾಮಿಲಿ ಚರ್ಚಿನ ಧರ್ಮಗುರುಗಳಾದ ವಂದನೀಯ

ಕುಖ್ಯಾತ ದನಕಳ್ಳ ಮೊಹಮ್ಮದ್‌ ಯೂನಸ್‌ ಬಂಧನ

ಕುಖ್ಯಾತ ದನಕಳ್ಳ ಮೊಹಮ್ಮದ್‌ ಯೂನಸ್‌ ಬಂಧನವಾಗಿದೆ.ವಿವಿಧ ಠಾಣೆಗಳ ಪೊಲೀಸರಿಗೆ ಬೇಕಾಗಿದ್ದ ನಟೋರಿಯಸ್‌ ದನಕಳ್ಳ ಮೊಹಮ್ಮದ್‌ ಯೂನಸ್‌ನನ್ನು ಮಾ. 7ರಂದು ಕಾರ್ಕಳ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಲ್ಲೂರು ಗ್ರಾಮದ ಬೋರ್ಕಟ್ಟೆ ದೊಡ್ಡಕಜೆಯ ಮೊಹಮ್ಮದ್‌ ಯೂನಸ್‌ (30) ಕಾರ್ಕಳ ತಾಲೂಕು ರೆಂಜಾಳದಲ್ಲಿ ಶುಕ್ರವಾರ ಬಂಧಿಸಲ್ಪಟಿದ್ದಾನೆ. ಈತನ ಮೇಲೆ ದನಕಳ್ಳತನಕ್ಕೆ ಸಂಬಂಧಿಸಿದಂತೆ ಕಾರ್ಕಳ ನಗರ, ಅಜೆಕಾರು, ಹೆಬ್ರಿ, ಶಿರ್ವ, ಮೂಡುಬಿದಿರೆ ಮಾತ್ರವಲ್ಲದೇ

ಕರಾವಳಿ, ಮೀನುಗಾರರು ಹಾಗೂ ಮೀನುಗಾರಿಕೆಯನ್ನು ಸಂಪೂರ್ಣ ಕಡೆಗಣಿಸಿದ ಬಜೆಟ್‌:ಶಾಸಕ ಗುರುರಾಜ್‌ ಗಂಟಿಹೊಳೆ

ಬೈಂದೂರು : ಮೀನುಗಾರಿಕೆ, ಮೀನುಗಾರರನ್ನು ಮತ್ತು ಕರಾವಳಿಯನ್ನು ದ್ವೇಷಿಸುವ ಬಜೆಟ್‌ ಇದಾಗಿದೆ. ರಾಜ್ಯದ ಆರ್ಥಿಕತೆಗೆ ತನ್ನದೆ ಕೊಡುಗೆ ನೀಡುತ್ತಾ ಬರುತ್ತಿರುವ ಮೀನುಗಾರಿಕೆ ವಲಯದ ಉತ್ತೇಜನಕ್ಕೆ ಯಾವುದೇ ಯೋಜನೆಯನ್ನು ಘೋಷಣೆ ಮಾಡಿಲ್ಲ. ಅಲ್ಲದೆ, ಮೀನುಗಾರರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. ಎಂದು ಬೈಂದೂರು ಶಾಸಕ ಗುರುರಾಜ್‌ ಗಂಟಿಹೊಳೆ ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್‌ ಮಂಡನೆ ಹಿನ್ನೆಲೆಯಲ್ಲಿ ಸಾಕಷ್ಟು

ಓಂ ಕ್ರಿಕೆಟರ್ಸ್ ಪಾವಂಜೆ -16ನೇ ವಾರ್ಷಿಕೋತ್ಸವ

ಹಳೆಯಂಗಡಿ, ಓಂ ಕ್ರಿಕೆಟರ್ಸ್ ಪಾವಂಜೆ ವತಿಯಿಂದ 16ನೇ ವಾರ್ಷಿಕೋತ್ಸವವನ್ನು ಶ್ರೀ ಮಹಾಲಿಂಗೇಶ್ವರ ಮಹಾ ಗಣಪತಿ ಶ್ರೀ ಜ್ಞಾನಶಕ್ತಿ ಸುಬ್ರಮಣ್ಯ ಸ್ವಾಮಿ ವೇದಿಕೆಯಲ್ಲಿ ನೆರವೇರಿಸಲಾಯಿತು.ಕಾರ್ಯಕ್ರಮದಲ್ಲಿ ಹಳೆಯಂಗಡಿ ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಶ್ರೀಮತಿ ಪೂರ್ಣಿಮಾ, ಬ್ರಹ್ಮಶ್ರೀ ನಾರಾಯಣ ಗುರು ಸಂಘ ಹಳೆಯಂಗಡಿ ಇದರ ಅಧ್ಯಕ್ಷರಾದ ಶ್ರೀ ಚಂದ್ರಶೇಖರ ನಾನಿಲ್, ಜ್ಞಾನಶಕ್ತಿ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಪಾವಂಜೆ ಇಲ್ಲಿನ ಆಡಳಿತ ಮೊಕ್ತೇಸರರಾದ ಶ್ರೀ

ಉಡುಪಿ: ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಡಿಸಿಎಂ ಡಿಕೆಶಿ ಭೇಟಿ

ಉಡುಪಿ: ಪ್ರತಿಷ್ಠಾ ಬ್ರಹ್ಮಕಲಶೋತ್ಸವ ನಡೆಯುತ್ತಿರುವ ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭೇಟಿ ನೀಡಿ ದೇವಿಯ ದರ್ಶನ ಪಡೆದರು. ದೇವಿಯ ಪ್ರತಿಷ್ಠೆಯಾದ ಬಳಿಕ ಮೊದಲ ಪ್ರಸಾದವನ್ನು ಡಿ.ಕೆ. ಶಿವಕುಮಾರ್ ಅವರಿಗೆ ನೀಡಲಾಯಿತು.ಬಳಿಕ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಪ್ರತಿಯೊಬ್ಬರೂ ಮಾನವೀಯತೆಗೆ ತಲೆ ಬಾಗಿ , ನಮ್ಮ ನಮ್ಮ ಧರ್ಮವನ್ನು ಉಳಿಸಿಕೊಳ್ಳಬೇಕು. ಇನ್ನೊಂದು ಧರ್ಮದವರಿಗೆ ತೊಂದರೆ ಕೊಡಬೇಕೆಂದು ಯಾವ

ಕಟಪಾಡಿ: ಗ್ರಾಹಕರನ್ನು ಆಕರ್ಷಿಸುತ್ತಿರುವ  ರಾಸಾಯನಿಕ ಮುಕ್ತ ಕಲ್ಲಂಗಡಿ ಹಣ್ಣುಗಳು..!!

ಕೃಷಿಯನ್ನೇ ನಂಬಿ ಜೀವನ ನಡೆಸುವ ಕಟಪಾಡಿಯ ಅಂಬಾಡಿ ಬೈಲು ಕೋಟೆ ಮಟ್ಟುವಿನ ರವಿ ಶೇರಿಗಾರ್ ಐದು ಬಗೆಯ ಕಲ್ಲಂಗಡಿ ಹಣ್ಣು ಸಹಿತ ವಿವಿಧ ಬಗೆಯ ಕೃಷಿ ಉತ್ಪನ್ನಗಳನ್ನು ನಡೆಸಿ ತನ್ನ ಮನೆಯನ್ನೇ ಮಾರುಕಟ್ಟೆಯನ್ನಾಗಿಸಿ ಯಶಸ್ವಿ ಕೃಷಿಕರಾಗಿದ್ದಾರೆ. ರವಿ ಶೇರಿಗಾರ್ ಕಳೆದ ಸುಮಾರು ಹತ್ತು ವರ್ಷಗಳಿಂದ  ಐದು ಎಕರೆ ಗದ್ದೆಯಲ್ಲಿ ಕಲ್ಲಂಗಡಿ ಹಣ್ಣು, ಮಟ್ಟುಗುಳ್ಳ, ಸೌತೆಕಾಯಿ, ಮುಳ್ಳುಸೌತೆ, ಹೀರೇಕಾಯಿ ಹಾಗೂ ಕಪ್ಪು ಹೆಸರು ಇವುಗಳನ್ನು ಬೆಳೆಸಿ ಉತ್ತಮ ಪಸಲು

ಉಡುಪಿ: ಲಾರಿ ಪಲ್ಟಿ:ಚಾಲಕ ಮೃತ್ಯು

ಉಡುಪಿ ಟಿಪ್ಪರ್ ಲಾರಿ ಪಲ್ಟಿಯಾಗಿ ಚಾಲಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಳ್ಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಟ್ಟಿಂಗೇರಿ ಗಣಪಣಕಟ್ಟೆ ತಿರುವಿನ ಬಳಿ ಮಂಗಳವಾರ (ಫೆ.25ರಂದು) ಮುಂಜಾನೆ ನಡೆದಿದೆ.ಮೃತರನ್ನು ಬೈಂದೂರಿನ ಸುಬ್ರಮಣ್ಯ ಆಚಾರ್ಯ (40) ಎಂದು ಗುರುತಿಸಲಾಗಿದೆ. ಮಂಗಳವಾರ ಮುಂಜಾನೆ ಸುಮಾರಿಗೆ ಈ ಘಟನೆ ನಡೆದಿದೆ. 4 ಗಂಟೆಯ ಟಿಪ್ಪರ್ ಬೈಂದೂರಿನಿಂದ ಪಳ್ಳಿಯ ಕೋರೆಗೆ ಜಲ್ಲಿ ತರಲು ಹೋಗುತ್ತಿದ್ದ ವೇಳೆ ಪಲ್ಟಿಯಾಗಿದೆ. ಪರಿಣಾಮ ಚಾಲಕ ಸುಬ್ರಮಣ್ಯ

ಉಡುಪಿ: ಹೆದ್ದಾರಿ ಮಧ್ಯದಲ್ಲೇ ತ್ಯಾಜ್ಯ ಮೂಟೆ – ಸೂಕ್ತ ಕ್ರಮ ಕೈಗೊಳ್ಳುವಂತೆ ಮಣೂರು ಜನರ ಆಗ್ರಹ

ಉಡುಪಿ:-ಮಣೂರು ರಾಷ್ಟ್ರೀಯ ಹೆದ್ದಾರಿ 66ರ ಮಧ್ಯದಲ್ಲಿ ಕಿಡಿಗೇಡಿಗಳು ಮೂಟೆ ಗಟ್ಟಲೆ ತ್ಯಾಜ್ಯ ಎಸೆದು ಹೋಗುತ್ತಿರುವ ಘಟನೆ ಕಳೆದ ಎರಡು ದಿನಗಳಿಂದ ಸತತವಾಗಿ ನಡೆಯುತ್ತಿದೆ. ಸೋಮವಾರ ರಾತ್ರಿ ಬೆಳಗಾಗುವದರೊಳಗೆ ಒಂದು ಬಾರಿ ಗಾತ್ರದ ತ್ಯಾಜ್ಯದ ಚೀಲ ಕಾಣಿಸಿಕೊಂಡಿತ್ತು. ನಂತರ ಮಂಗಳವಾರ ಮುಂಜಾನೆಯೊಳಗೆ ಮತ್ತೆ ಮೂರು ಬಾರಿ ಗಾತ್ರದ ತ್ಯಾಜ್ಯದ ಚೀಲ ಅದೇ ಡಿವೈಡರ್ ಮಧ್ಯದಲ್ಲಿ ಕಿಡಿ ಗೇಡಿಗಳು ಎಸೆದು ಹೋಗಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬಾರೀ ಆಕ್ರೋಶ