Home ಕರಾವಳಿ Archive by category ಉಡುಪಿ (Page 3)

ಪುತ್ತಿಗೆ ಶ್ರೀಪಾದರ “64 ಜನ್ಮನಕ್ಷತೋತ್ಸವ ಸಂಭ್ರಮ

ಉಡುಪಿ: ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ದಿನಾಂಕ 30-08-2025 ಶನಿವಾರದಂದು ನಡೆದ ಪರ್ಯಾಯ ಶ್ರೀಪುತ್ತಿಗೆ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ “64 ಜನ್ಮನಕ್ಷತೋತ್ಸವ ಸಂಭ್ರಮ”ದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಜಗದ್ಗುರು

ಪಡುಬಿದ್ರಿ:14 ವರ್ಷಗಳಿಂದ ತಲೆಮರಿಸಿಕೊಂಡಿರುವ LPC ವಾರಂಟ್ ಆಸಾಮಿಯ ಬಂಧನ

ಉಡುಪಿ ಜಿಲ್ಲೆಯ ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ 22-01-2010 ರಂದು ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸುಮಾರು 14 ವರ್ಷಗಳಿಂದ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರಸಿಕೊಂಡಿದ್ದ ವಾರಂಟು ಆಸಾಮಿ ಮೈಸೂರಿನ ನಿವಾಸಿ ಇಕ್ಬಾಲ್ ಅಹಮದ್ ಅನ್ಸಾರಿ ಎಂಬಾತನನ್ನು ಪಡುಬಿದ್ರಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿ ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಮಾನ್ಯ ನ್ಯಾಯಾಲವು ಆರೋಪಿಗೆ ನ್ಯಾಯಾಂಗ ಬಂಧನವನ್ನು ವಿಧಿಸಿರುತ್ತದೆ.ದಿನಾಂಕ

ಉಡುಪಿ: ಧರ್ಮ, ಪೂಜೆ, ಭಕ್ತಿ ಪ್ರದರ್ಶನದ ವಸ್ತುವಲ್ಲ: ಧರ್ಮವನ್ನು ಉಳಿಸಿಕೊಂಡು ಮುಂದೆ ಸಾಗೋಣ: ಡಿಸಿಎಂ ಡಿಕೆಶಿ

ಧರ್ಮ, ಪೂಜೆ, ಭಕ್ತಿ ಪ್ರದರ್ಶನದ ವಸ್ತುವಲ್ಲ. ಆಚಾರ, ವಿಚಾರವನ್ನು ಎಲ್ಲರೂ ಒಟ್ಟಾಗಿ ಕೊಂಡೊಯ್ಯಬೇಕು.ಮರಕ್ಕೆ ಬೇರು ಎಷ್ಟು ಮುಖ್ಯವೋ ಹಾಗೆಯೇ ಮನುಷ್ಯನಿಗೆ ನಂಬಿಕೆ ಮುಖ್ಯ. ಹೀಗಾಗಿ ಧರ್ಮವನ್ನು ಉಳಿಸಿಕೊಂಡು ನಾವೆಲ್ಲರೂ ಮುಂದೆ ಸಾಗೋಣ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು. ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀಕೃಷ್ಣ ಮಠದ ವತಿಯಿಂದ ಪರ್ಯಾಯ ಪುತ್ತಿಗೆ ಮಠಾ ಧೀಶ ರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ 64ನೇ ಜನ್ಮ ನಕ್ಷತ್ರೋತ್ಸವ ಸಂಭ್ರಮ

ಮಲ್ಪೆ: ಸಮುದ್ರ ತೀರದ ತೊಟ್ಟಂ:ಸಮುದ್ರದ ರಭಸಕ್ಕೆ ಮಗುಚಿ ಬಿದ್ದ ದೋಣಿ ನಾಲ್ವರು ಮೀನುಗಾರರು ಪ್ರಾಣಾಪಾಯದಿಂದ ಪಾರು

ಉಡುಪಿ ಜಿಲ್ಲೆಯ ಮಲ್ಪೆಯ ಸಮುದ್ರ ತೀರದ ತೊಟ್ಟಂ ಬಳಿ ಸಮುದ್ರದ ರಭಸಕ್ಕೆ ದೋಣಿ ಮಗಚಿ ಬಿದ್ದಿದ್ದು, ಏಡಿಬಲೆಗೆ ಹೋದ ನಾಲ್ವರು ಮೀನುಗಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತೊಟ್ಟಂ ವಾರ್ಡಿನ ನಗರ ಸಭಾ ಸದಸ್ಯರಾದ ಯೋಗೇಶ್ ರವರು ಈಶ್ವರ್ ಮಲ್ಪೆ ತಂಡಕ್ಕೆ ಮಾಹಿತಿ ನೀಡಿದ್ದು, ಸ್ಥಳಿಯರಾದ ಪ್ರವೀಣ್, ಉದಯ್ ಯವರ ಜೊತೆ ಸೇರಿ ಲೈಫ್ ಜಾಕೇಟ್ ನೀಡಿ ನಾಲ್ಕುರು ಮೀನುಗಾರರ ಜೀವ ಉಳಿಸಲಾಗಿದೆ ಎಂದು ಮುಳುಗು ತಜ್ಞ ಈಶ್ವರ್ ಮಲ್ಪೆ ತಿಳಿಸಿದ್ದಾರೆ. ಕ್ಷಣ ಕ್ಷಣಕ್ಕೂ ಮಲ್ಪೆಯ

ಉಡುಪಿ:ಆ.30ರಂದು ಉಡುಪಿ ಮಿಷನ್ ಆಸ್ಪತ್ರೆಯಲ್ಲಿ ಸ್ತನ ಕ್ಯಾನ್ಸರ್ ಪರೀಕ್ಷಾ ಘಟಕದ ಉದ್ಘಾಟನೆ

ಉಡುಪಿ: ಉಡುಪಿ ಸಿ.ಎಸ್.ಐ ಲೊಂಬಾರ್ಡ್ ಸ್ಮಾರಕ (ಮಿಷನ್) ಆಸ್ಪತ್ರೆಯ ಸ್ತನ ಕ್ಯಾನ್ಸರ್ ಪರೀಕ್ಷಾ ಘಟಕದ (ಮ್ಯಾಮೋಗ್ರಫಿ ಯುನಿಟ್) ಉದ್ಘಾಟನೆ ಇದೇ ಆಗಸ್ಟ್ 30 ರಂದು ಬೆಳಿಗ್ಗೆ 10 ಗಂಟೆಗೆ ಆಸ್ಪತ್ರೆಯ ಚಾಪೆಲ್ ನಲ್ಲಿ ನಡೆಯಲಿದೆ ಎಂದು ಮಿಷನ್ ಆಸ್ಪತ್ರೆಯ ನಿರ್ದೇಶಕ ಡಾ. ಸುಶೀಲ್ ಜತ್ತನ್ನ ತಿಳಿಸಿದರು.ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ ಅವರು ನೂತನ ಘಟಕವನ್ನು ಉದ್ಘಾಟಿಸಲಿದ್ದಾರೆ. ಸಿಎಸ್‌ಐ, ಕೆಎಸ್ ಡಿ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಉಳ್ಳೂರ್ 11 : 25ನೇ ವರ್ಷದ ರಜತ ಮಹೋತ್ಸವದ ಸಂಭ್ರಮ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಉಳ್ಳೂರ್ 11 25ನೇ ವರ್ಷದ ರಜತ ಮಹೋತ್ಸವದ ಸಂಭ್ರಮ ನಡೆಯಿತು. ಗಣೇಶೋತ್ಸವ ಸಂಭ್ರಮದಲ್ಲಿ ಗಣೇಶನ ವಿಗ್ರಹವನ್ನು ಭವ್ಯ ಮೆರವಣಿಗೆ ಮೂಲಕ ಕರೆತರಲಾಯಿತು ನಂತರ ಪೂಜಾ ಸ್ಥಳವನ್ನು ಸ್ವಚ್ಛಗೊಳಿಸಿ, ಕಲಶ ಸ್ಥಾಪಿಸಿ, ಅರಿಶಿನ, ಕುಂಕುಮ, ಗಂಧ, ಗರಿಕೆ, ಹೂವು, ಅಗರಬತ್ತಿ, ವೀಳ್ಯದೆಲೆ, ಅಡಿಕೆ, ಬೆಲ್ಲ, ಫಲಪುಷ್ಪ, ಹಾಗೂ 21 ಮೋದಕಗಳನ್ನು ನೈವೇದ್ಯ ಮಾಡಿ ಪೂಜೆಯನ್ನು ನೆರವೇರಿಸಲಾಯಿತು. ಪೂಜೆಯು ಕಾಯಾ, ವಾಚಾ, ಮನಸಾ, ಶೋಡಶೋಪಚಾರ

ಉದ್ಯಾವರ 36ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

ಉದ್ಯಾವರ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ಉದ್ಯಾವರ ಇದರ 36ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಮತ್ತು ಉದ್ಯಾವರ ಯುವಕ ಮಂಡಲ (ರಿ.) ಉದ್ಯಾವರ ಇದರ 62ನೇ ವಾರ್ಷಿಕೋತ್ಸವದ ಸಭಾ ಕಾರ್ಯಕ್ರಮ ಆಗಸ್ಟ್ 27 ಬುಧವಾರ ದಂದು ಗುರ್ಮೆ ಸುರೇಶ್ ಶೆಟ್ಟಿ ಅವರ ಉಪಸ್ಥಿತಿಯಲ್ಲಿ ನೆರವೇರಿತು. ವಾರ್ಷಿಕೋತ್ಸವದ ಸಭಾ ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ ಶೆಟ್ಟಿ ಅವರು ಭಾಗವಹಿಸಿ ಶುಭಹಾರೈಸಿದರು.

ಉಡುಪಿ:ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಘಟಕದ ವತಿಯಿಂದ ಮಣಿಪಾಲ ಟೈಗರ್ ಸರ್ಕಲ್ ನಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಜಾಥಾ ಕಾರ್ಯಕ್ರಮ

ಮಣಿಪಾಲ ಟೈಗರ್ ಸರ್ಕಲ್ ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಉಡುಪಿ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ತೆಗೆಯುವುದು ಮತ್ತು ಸಾಗಾಣಿಕೆಗೆ ನಿರ್ಬಂಧ ಹೇರಿರುವ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಘಟಕದ ಅ ರಾ ಪ್ರಭಾಕರ ಪೂಜಾರಿ ಮುಂದಾಳತ್ವದಲ್ಲಿ ಇಂದು ಜಾಥಾ ಕಾರ್ಯಕ್ರಮ ಹಾಗೂ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು. ಕರ್ನಾಟಕ ರಕ್ಷಣಾ ವೇದಿಕೆಯ ಉಡುಪಿ ಘಟಕದ ಜಿಲ್ಲಾಧ್ಯಕ್ಷರಾದ ಅ ರಾ ಪ್ರಭಾಕರ ಪೂಜಾರಿ ಜಾಥಾ ಕಾರ್ಯಕ್ರಮದಲ್ಲಿ

ಕಾರ್ಕಳ:ಕಾಳು ಪಾಣಾರ ಅವರಿಗೆ ತುಳು ಅಕಾಡೆಮಿಯ ಚಾವಡಿ ತಮ್ಮನ

ಕಾರ್ಕಳ: ತುಳುನಾಡಿನ ಕಂಬಳವು ಒಂದು ಕ್ರೀಡೆ ಮಾತ್ರವಲ್ಲ, ಅದು ಜಾತ್ಯತೀತವಾಗಿ ಮತ್ತು ಮೇಲುಕೀಳು ಎಂಬ ಭಾವನೆಯಿಲ್ಲದೆ, ಸಮಾಜದ ಎಲ್ಲ ಜನರು ಒಂದೆಡೆ ಸೇರುವ ತೌಳವ ಆಚರಣೆಯಾಗಿದೆ. ಕಂಬಳದಲ್ಲಿ ಗೆಲ್ಲುವ-ಸೋಲುವ ಸ್ಪರ್ಧೆ ಇದ್ದರೂ ಅಂತಿಮವಾಗಿ ಇದು ಸಮಾಜದ ಸರ್ವರನ್ನು ಒಂದಾಗಿಸುತ್ತದೆ’ ಎಂದು ಕಂಬಳದ ವಿದ್ವಾಂಸರಾದ ಗುಣಪಾಲ ಕಡಂಬ ಅವರು ಅಭಿಪ್ರಾಯ ಪಟ್ಟರು. ಅವರು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ನ ಸೆಂಟರ್‌

ಭಜನಾ ಮಂದಿರದ ಕಾಮಗಾರಿಗಳ ಮನವಿ ಪತ್ರ ಬಿಡುಗಡೆ

ಶ್ರೀ ಬ್ರಹ್ಮರಾಮೇಶ್ವರ ಭಜನಾ ಮಂಡಳಿ (ರಿ.) ಆರ್ಬಿಕೋಡಿ 80 ಬಡಗುಬೆಟ್ಟು ಇದರ ಭಜನಾ ಮಂದಿರದ ತಗಡು ಚಪ್ಪರ ನಿರ್ಮಾಣ, ನೆಲಹಾಸು, ಆಡಳಿತ ಕಚೇರಿ ಹಾಗೂ ಇತರ ಕಾಮಗಾರಿಗಳ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರಿಂದ ಮನವಿ ಪತ್ರ ಬಿಡುಗಡೆ ಶ್ರೀ ಬ್ರಹ್ಮರಾಮೇಶ್ವರ ಭಜನಾ ಮಂಡಳಿ (ರಿ.) ಆರ್ಬಿಕೋಡಿ 80 ಬಡಗುಬೆಟ್ಟು ಇದರ ಭಜನಾ ಮಂದಿರದ ವಠಾರದಲ್ಲಿ ಶಾಶ್ವತ ತಗಡು ಚಪ್ಪರ ನಿರ್ಮಾಣ, ನೆಲಹಾಸು, ಆಡಳಿತ ಕಚೇರಿ ಹಾಗೂ ಇತರ ಕಾಮಗಾರಿಗಳ “ಮನವಿ ಪತ್ರ ಬಿಡುಗಡೆ