Home ಕರಾವಳಿ Archive by category ಉಡುಪಿ (Page 36)

ಉಡುಪಿ : ತಂತಿಬೇಲಿಗೆ ಸಿಲುಕಿದ್ದ ಚಿರತೆಯನ್ನು ರಕ್ಷಿಸಿದ ಅರಣ್ಯ ಇಲಾಖೆ

ಉಡುಪಿ : ತಂತಿ ಬೇಲಿಯಲ್ಲಿ ಸಿಲುಕಿಕೊಂಡಿದ್ದ ಚಿರತೆಯೊಂದನ್ನು ಅರಣ್ಯ ಇಲಾಖೆಯವರು ರಕ್ಷಿಸಿರುವ ಘಟನೆ ಕುಕ್ಕೆಹಳ್ಳಿ- ಹಿರಿಯಡ್ಕ ರಸ್ತೆಯ ಬಕ್ಕಾರೆ ಎಂಬಲ್ಲಿ ನಡೆದಿದೆ. ಸರಕಾರಿ ಜಾಗದಲ್ಲಿ ಅಳವಡಿಸಲಾಗಿದ್ದ ತಂತಿ ಬೇಲಿಯಲ್ಲಿ ಸುಮಾರು 4-5 ವರ್ಷ ಪ್ರಾಯದ ಗಂಡು ಚಿರತೆಯೊಂದು ಸಿಲುಕಿಕೊಂಡಿತ್ತು. ತಂತಿಯು ಚಿರತೆಯ ಸೊಂಟದ ಭಾಗಕ್ಕೆ ಉರುಳು ಬಿದ್ದಿದ್ದ ಕಾರಣ ಚಿರತೆ

ಉಡುಪಿ: ಜೂ.27ರಂದು ಉಚಿತ ನೇತ್ರ ತಪಾಸಣೆ, ಶಸ್ತ್ರ ಚಿಕಿತ್ಸಾ ಶಿಬಿರ

ಕರ್ನಾಟಕ ಸರ್ಕಾರ ಉಡುಪಿ ಜಿಲ್ಲಾ ಅಂಧತ್ವ ನಿವಾರಣಾ ವಿಭಾಗ, ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಾಥಮಿಕ ಆರೋಗ್ಯ ಕೇಂದ್ರ ನಾಡ ಗ್ರಾಮ ಪಂಚಾಯತ್ ನಾಡ ಶ್ರೀ ಮಹಾಗಣಪತಿ ಸೇವಾ ಸಮಿತಿ ಗುಡ್ಡೆ ಹೊಟೆಲ್ ನಾಡ ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಶಿರೂರು ಮುದ್ದುಮನೆ ಸಂಯುಕ್ತ ಆಶ್ರಯದಲ್ಲಿ ಜೂನ್ 27ರಂದು ಬೆಳಿಗ್ಗೆ 9 ಗಂಟೆಯಿಂದ 12ರ ವರೆಗೆ ಉಚಿತ ನೇತ್ರ ತಪಾಸಣಾ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರ ಆಯೋಜಿಸಿದ್ದಾರೆ. ಶ್ರೀ ಮಹಾಗಣಪತಿ

ಉಡುಪಿ: ಹಿರಿಯ ನರರೋಗ ತಜ್ಞ ಡಾ.ರಾಜಾ ನಿಧನ

ಉಡುಪಿ ಆದರ್ಶ ಆಸ್ಪತ್ರೆಯ ವೈದ್ಯ ಹಾಗೂ ಹಿರಿಯ ನರರೋಗ ತಜ್ಞ ಡಾ.ರಾಜಾ ರವಿವಾರ ಹೃದಯಾಘಾತದಿಂದ ನಿಧನರಾದರು. ಮಣಿಪಾಲದ ರಾಜೀವನಗರದ ಮನೆಯಲ್ಲಿ ಬೆಳಗ್ಗೆ ಹೃದಯಾಘಾತಕ್ಕೆ ಒಳಗಾದ ಇವರನ್ನು ಕೂಡಲೇ ಉಡುಪಿ ಆದರ್ಶ ಆಸ್ಪತ್ರೆಗೆ ಕರೆತರಲಾಯಿತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದರು. ಇವರು ಪತ್ನಿ, ಓರ್ವ ಪುತ್ರಿಯನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಹಲವು ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಕಾರ್ಕಳ: ಗ್ರಂಥ ಭಂಡಾರ ಸ್ಥಾಪನಾ ಕಾರ್ಯಕ್ರಮ

ಕಾರ್ಕಳ : ಪಂಡಿತರತ್ನ ಎತ್ತೂರು ಶಾಂತಿರಾಜ ಶಾಸ್ತ್ರಿ ಟ್ರಸ್ಟ್‌ನ ಆಶ್ರಯದಲ್ಲಿ ಇರ್ವತ್ತೂರಿನ ಭಗವಾನ್ ಶ್ರೀ ಆದಿನಾಥ ಸ್ವಾಮಿ ಸನ್ನಿಧಿಯಲ್ಲಿ ಟ್ರಸ್ಟಿನ ವತಿಯಿಂದ “ಗ್ರಂಥ ಭಂಡಾರ ಸ್ಥಾಪನಾ”ಕಾರ್ಯಕ್ರಮ ನಡೆಯಿತು. ಕಾರ್ಕಳ ಪರಮಪೂಜ್ಯ ರಾಜಗುರು ಧ್ಯಾನಯೋಗಿ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿ ಹಾಗೂ ಶ್ರೀ ಜೈನಮಠ, ಮೂಡುಬಿದಿರೆ ಪರಮಪೂಜ್ಯ ಭಾರತಭೂಷಣ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಯವರು

ಮಣಿಪಾಲ ಡಾ. ಟಿಎಂಎ ಪೈ ಪಾಲಿಟೆಕ್ನಿಕ್ – ಗುಣಮಟ್ಟದ ಡಿಪ್ಲೊಮಾ ಎಂಜಿನಿಯರಿಂಗ್ ಶಿಕ್ಷಣ

ಎಂಜಿನಿಯರಿಂಗ ಪದವಿಯ ಕನಸು ಹೊತ್ತ ಆಸಕ್ತ ವಿದ್ಯಾರ್ಥಿಗಳಿಗೆ ನೇರವಾಗಿ 10ನೇ ತರಗತಿಯ ಅನಂತರ 3 ವರ್ಷಗಳ ಡಿಪ್ಲೋಮಾ ಪೂರೈಸಿ ಯಾವುದೇ ಪ್ರವೇಶ ಪರೀಕ್ಷೆಯ ಒತ್ತಡವಿಲ್ಲದೆ ಲ್ಯಾಟರಲ್ ಎಂಟ್ರಿ ಸೌಲಭ್ಯದೊಂದಿಗೆ ಆಯ್ಕೆಯ ಎಂಜಿನಿಯರಿಂಗ್ ಪದವಿಯ ದ್ವಿತೀಯ ವರ್ಷಕ್ಕೆ ಎಂಐಟಿ ಮಣಿಪಾಲದಲ್ಲಿ ನೇರ ಪ್ರವೇಶಕ್ಕೆ ಸಂಸ್ಥೆಯ ಮೂಲಕ ಸದಾವಕಾಶ ಕಲ್ಪಿಸಲಾಗಿದೆ. ಸಂಸ್ಥೆಯ ಲ್ಯಾಟರಲ್ ಎಂಟ್ರಿ ಆಸಕ್ತ ವಿದ್ಯಾರ್ಥಿಗಳಿಗೆ ಎಂಐಟಿ ಶುಲ್ಕದ ಒಟ್ಟು ಶುಲ್ಕದಲ್ಲಿ ಶೇ.75ರಷ್ಟು

ಟೊಯೊಟಾ ಮಾನ್ಸೂನ್ ಕಾರೋತ್ಸವ ಕಾರ್ಯಕ್ರಮ ಬ್ರಹ್ಮಾವರದಲ್ಲಿ ಉದ್ಘಾಟನೆ

ಬ್ರಹ್ಮಾವರ:ಯುನೈಟೆಡ್ ಟೊಯೊಟ ವತಿಯಿಂದ ಟೊಯೊಟಾ ಮಾನ್ಸೂನ್ ಕಾರೋತ್ಸವ  ಕಾರ್ಯಕ್ರಮ ಬ್ರಹ್ಮಾವರದಲ್ಲಿ ಸೋಮವಾರ ನಡೆಯಿತು. ಟೊಯೊಟಾ ಮಾನ್ಸೂನ್ ಕಾರೋತ್ಸವ ಕಾರ್ಯಕ್ರಮ ಜೂ.10 ರಿಂದ ಜೂ.16 ರ ವರೆಗೆ ಬ್ರಹ್ಮವಾರದಲ್ಲಿ ನಡೆಯಲಿದೆ. ಮಾನ್ಸೂನ್ ಕಾರೋತ್ಸವ ಕಾರ್ಯಕ್ರಮದ ಅಂಗವಾಗಿ ಗ್ರಾಹಕರಿಗೆ ಆಕರ್ಷಕ  ಆಫರ್ ಗಳನ್ನು ನೀಡಲಾಗುತ್ತಿದ್ದು.ತಮ್ಮ ಹಳೆ ಕಾರನ್ನು ನೀಡಿ ಉತ್ತಮ ಬೆಲೆಯನ್ನು ಪಡೆದುಕೊಂಡು ಹೊಸ ಕಾರನ್ನು ಖರೀದಿಸಲು ಅವಕಾಶವನ್ನು ಕಲ್ಪಿಸಲಾಗಿದೆ.ಕಡಿಮೆ

ಕುಂದಾಪುರ : ತ್ರಾಸಿ ಅಂಬಾ ಶೋ ರೂಂ ಗೆ ಆಕಸ್ಮಿಕ ಬೆಂಕಿ

ಕುಂದಾಪುರ:ತಾಲೂಕಿನ ತ್ರಾಸಿ ಅಂಬಾ ಶೋ ರೂಂ ಗೆ ತಗುಲಿದ ಆಕಸ್ಮಿಕ ಬೆಂಕಿ ಯಿಂದಾಗಿ ಶೋ ರೂಂ ದಗದಹಿಸಿದೆ.ಕೋಟಿ.ಗೂ ಅಧಿಕ ನಷ್ಟ ಸಂಭವಿಸಿದ ಘಟನೆ ಭಾನುವಾರ ನಡೆದಿದೆ. ಕರಾವಳಿ ಭಾಗದಲ್ಲಿ ಪದೆ ಪದೆ ಅಗ್ನಿ ಅವಘಡಗಳು ಸಂಭವಿಸುತ್ತ ಇದ್ದರು, ಹೆಚ್ಚಿನ ಯಾವುದೇ ರೀತಿಯ ಸೌಲಭ್ಯ ಇಲ್ಲದೆ ಇರುವುದು ಅಗ್ನಿ ಅನಾಹುತದಲ್ಲಿ ನಷ್ಟ ಪ್ರಮಾಣ ಅಧಿಕವಾಗುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ. ಆಕಸ್ಮಿಕವಾಗಿ ತಗುಲಿದ ಬೆಂಕಿ ಶೊ ರೂಂ ಇಡಿ ವ್ಯಾಪಿಸಿದ್ದು ಬೆಂಕಿ ನಂದಿಸಲು

ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನ ವಾರ್ಷಿಕೋತ್ಸವ ಮತ್ತು ಫ್ಯಾಶನ್ ಶೋ ಕಾರ್ಯಕ್ರಮ

ಬ್ರಹ್ಮಾವರ : ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನ ವಾರ್ಷಿಕೋತ್ಸವ ಮತ್ತು . ಕಾಲೇಜಿನ ವಿದ್ಯಾರ್ಥಿಗಳೇ ಸ್ವತಃ ತಾವೇ ವಿನ್ಯಾಸಗೊಳಿಸಿರುವ ಉಡುಪುಗಳ ಪ್ರದರ್ಶನ ಮತ್ತು ರ್‍ಯಾಂಪ್ ವಾಕ್ ನಡೆಯಿತು. ಅನೇಕ ಸ್ಪರ್ಧೆಗಳನ್ನು ನಡೆಸಿ ವಿಜೇತರಿಗೆ ಬಹುಮಾನ ವಿತರಣೆ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಅತಿಥಿಯಾಗಿ ತುಳು ಮತ್ತು ಕನ್ನಡ ಭಾಷೆಯ ನಾಟಕ, ಚಲನಚಿತ್ರಗಳಲ್ಲಿ ಹಾಸ್ಯ ಕಲಾವಿದರಾಗಿರುವ  ಅರವಿಂದ ಬೋಳಾರ್  ಕಾರ್ಯಕ್ರಮ ಉದ್ಘಾಟಿಸಿ

ಕಾಪು ಬೀಚ್ ಬಳಿ ಬೈಕ್ ಬಿಟ್ಟು ಯುವಕ ನಾಪತ್ತೆ : ಮುಂದುವರಿದ ಹುಡುಕಾಟ

ಯುವಕನೋರ್ವ ಬೀಚ್ ಬಳಿ ಬೈಕ್ ಇಟ್ಟು ನಿಗೂಡವಾಗಿ ನಾಪತ್ತೆಯಾದ ಘಟನೆ ಕಾಪುವಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಕಾಪು ಪಡುಗ್ರಾಮ ನಿವಾಸಿ ತುಳಸಿ ಸಾಲ್ಯಾನ್ ಅವರ ಪುತ್ರ ಕರಣ್ ಸಾಲ್ಯಾನ್ (20) ನಾಪತ್ತೆಯಾದ ಯುವಕ. ಈತ ಗುರುವಾರ ಸಂಜೆಯಿಂದ ನಾಪತ್ತೆಯಾಗಿದ್ದು ಶುಕ್ರವಾರ ಬೆಳಿಗ್ಗೆ ಕಾಪು ಬೀಚ್ ಬಳಿ ಬೈಕ್, ಬೆಲೆಬಾಳುವ ಫೋನ್, ನಗದು ಸಹಿತವಾಗಿ ಪರ್ಸ್ ಪತ್ತೆಯಾಗಿದೆ.‌ ಮನೆಯವರು ಮತ್ತು ಸ್ಥಳೀಯರು ಕಾಪು ಬೀಚ್ ಬಳಿ, ಸಮುದ್ರ ತೀರ ಮತ್ತು ಸಮುದ್ರದಲ್ಲಿ ತೀವ್ರ

ಉಡುಪಿ : ಜೂ. 9ರಂದು ಸ್ವಯಂಪ್ರೇರಿತ ರಕ್ತದಾನ ಶಿಬಿರ

ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಉಡುಪಿ ಟೆಂಪಲ್ ಸಿಟಿ ಲಿಜನ್ ಮತ್ತು ಯೂತ್ ಸ್ಪೋರ್ಟ್ಸ್ & ಕಲ್ಬರಲ್‌ ಅಸೋಸಿಯೇಶನ್ (ರಿ.) ಮರ್ಣಿ, ಉಡುಪಿ, ಇವರ ಜಂಟಿ ಆಶ್ರಯದಲ್ಲಿ ಜಿಲ್ಲಾಸ್ಪತ್ರೆ ರಕ್ತನಿಧಿ ಕೇಂದ್ರ ಅಜ್ಜರಕಾಡು ಉಡುಪಿ ಇದರ ಸಹಯೋಗದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರವು ಜೂ. 9 ರವಿವಾರದಂದು ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಮರ್ಣೆಯಲ್ಲಿ ಬೆಳಿಗ್ಗೆ 8.30 ರಿಂದ ಮಧ್ಯಾಹ್ನ 1.00 ರ ವರೆಗೆ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ  ಸಂಪರ್ಕಿಸಿ :