Home ಕರಾವಳಿ Archive by category ಉಡುಪಿ (Page 4)

ಶ್ರೀ ನಿತಿನ್ ಗಡ್ಕರಿಯವರ ಧರ್ಮಪತ್ನಿ ಶ್ರೀಮತಿ ಕಾಂಚನ ನಿತಿನ್ ಗಡ್ಕರಿ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ

ಉಚ್ಚಿಲ:ಕೇಂದ್ರ ಸಚಿವರಾದ ಸನ್ಮಾನ್ಯ ಶ್ರೀ ನಿತಿನ್ ಗಡ್ಕರಿಯವರ ಧರ್ಮಪತ್ನಿ ಶ್ರೀಮತಿ ಕಾಂಚನ ನಿತಿನ್ ಗಡ್ಕರಿ ಅವರು ಇಂದು ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿದರು. ಭೇಟಿ ನೀಡಿದ ಅವರು ಶ್ರೀ ದೇವರ ದರ್ಶನ ಪಡೆದು ಶ್ರೀಕ್ಷೇತ್ರದ ವತಿಯಿಂದ ನೀಡಿದ ಸ್ಮರಣಿಕೆ ಹಾಗೂ ಪ್ರಸಾದ ಮತ್ತು ಗೌರವವನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಶ್ರೀಕ್ಷೇತ್ರ

ಉಡುಪಿ ಗ್ರಾಮೀಣ ಬಂಟರ ಸಂಘ ಚಾರಿಟೇಬಲ್ ಟ್ರಸ್ಟ್‌ನ ವತಿಯಿಂದ ಎಂಆರ್‌ಜಿ ಗ್ರೂಪ್‌ನ ಸಿಎಂಡಿ ಡಾ. ಕೆ. ಪ್ರಕಾಶ್ ಶೆಟ್ಟಿ ಅವರಿಗೆ ಸನ್ಮಾನ

ಪಡುಬಿದ್ರಿ: ಉಡುಪಿ ಗ್ರಾಮೀಣ ಬಂಟರ ಸಂಘ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷರು, ಕಾರ್ಯದರ್ಶಿ , ಖಜಾಂಚಿ ಮತ್ತು ಟ್ರಸ್ಪಿಗಳಿಂದ ಉದ್ಯೋಗ ಮೇಳ-2025 ಉದಾರ ಪ್ರಾಯೋಜಕತ್ವವನ್ನು ನೀಡಿದ ಎಂಆರ್‌ಜಿ ಗ್ರೂಪ್‌ನ ಸಿಎಂಡಿ ಡಾ. ಕೆ. ಪ್ರಕಾಶ್ ಶೆಟ್ಟಿ ಅವರಿಗೆ ಸನ್ಮಾನ ಕಾರ್ಯಕ್ರಮವು ಸೋಮವಾರದಂದು ಪಡುಬಿದ್ರಿಯಲ್ಲಿ ನಡೆಯಿತು. ಈ ಬಾರಿಯ ಉದ್ಯೋಗ ಮೇಳದಲ್ಲಿ 1,517 ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದ್ದು ಉಳಿದವರನ್ನು ಮುಂದಿನ ಆಯ್ಕೆ ಪ್ರಕ್ರಿಯೆಯಲ್ಲಿ ಇರಿಸಲಾಗಿದೆ.

ಮಲ್ಪೆ: ಸರಕಾರಿ ಜಾಗ ವಿವಾದ: ಸ್ಥಳೀಯ ಮೀನುಗಾರರಲ್ಲಿ ಉಂಟಾಗಿದ್ದ ಆತಂಕ ನಿವಾರಣೆ

ಮಲ್ಪೆ ಪ್ರದೇಶದಲ್ಲಿ ಉಂಟಾದ ಸರಕಾರಿ ಜಾಗ ವಿವಾದದಿಂದ ಸ್ಥಳೀಯ ಮೀನುಗಾರರಲ್ಲಿ ಉಂಟಾದ ಆತಂಕ ನಿವಾರಣೆ, ನೈಜ ಮೀನುಗಾರರ ರಕ್ಷಣೆ ಹಾಗೂ ಸರ್ಕಾರ ಹೊರಡಿಸಿದ ಆದೇಶವನ್ನು ರದ್ದುಗೊಳಿಸುವ ಕುರಿತು ಉಡುಪಿ ಜಿಲ್ಲಾಧಿಕಾರಿಗೂ ಹಾಗೂ ಉಡುಪಿ ಜಿಲ್ಲಾ ವರಿಷ್ಠಾಧಿಕಾರಿಗಳಿಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಮೀನುಗಾರರ ಸಮಿತಿ ವತಿಯಿಂದ ಮನವಿ ನೀಡಲಾಯಿತು. ಮಲ್ಪೆ ಪರಿಸರದಲ್ಲಿ ಇತ್ತೀಚೆಗೆ ಸರಕಾರಿ ಮೀನುಗಾರಿಕಾ ಜಾಗಕ್ಕೆ ಸಂಬAಧಿಸಿದAತೆ ಸರ್ಕಾರದಿಂದ ಹೊರಡಿಸಿದ ಆದೇಶದಿಂದ

ಎಂ.ಸಿ.ಸಿ. ಬ್ಯಾಂಕಿನ 15ನೇ ಎಟಿಎಂ ಉಡುಪಿ ಶಾಖೆಯಲ್ಲಿ ಉದ್ಘಾಟನೆ

ಎಂಸಿಸಿ ಬ್ಯಾಂಕ್, ಮಂಗಳೂರು ತನ್ನ 15ನೇ ಎಟಿಎಂ ಅನ್ನು ನವಂಬರ್ 23, 2025ರ ರವಿವಾರ ಉಡುಪಿ ಶಾಖೆಯಲ್ಲಿ ಉದ್ಘಾಟಿಸಲಾಯಿತು.ಈ ಎಟಿಎಂ ಅನ್ನು ಉದ್ಯಾವರದ ಸೇಂಟ್ ಕ್ಸೇವಿಯರ್ ಚರ್ಚ್ ಧರ್ಮಗುರು ವಂದನೀಯ ಫಾ| ಅನಿಲ್ ಡಿಸೋಜಾ ಉದ್ಘಾಟಿಸಿದರು. ಉಡುಪಿಯ ಶೋಕಮಾತೆ ಚರ್ಚ್ ಧರ್ಮಗುರು ವಂದನೀಯ ಫಾ| ಚಾರ್ಲ್ಸ್ ಮಿನೇಜಸ್ ಅವರು ಎಟಿಎಂ ಅನ್ನು ಆಶೀರ್ವದಿಸಿದರು. ಹೊಸದಾಗಿ ಉದ್ಘಾಟನೆಗೊಂಡ ಎಟಿಎಂನಿAದ ಮೊದಲ ನಗದು ಹಿಂಪಡೆಯುವಿಕೆಯನ್ನು ತಲ್ಲೂರಿನ ಶ್ರೀ ಶಿವಪ್ರಸಾದ್ ಶಿವರಾಮ

ನ. 28 ಉಡುಪಿ ಕೃಷ್ಣ ಮಠಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ :ಪೂರ್ವಭಾವಿ ಸಭೆ

ಉಡುಪಿ: ಉಡುಪಿ ಪರ್ಯಾಯ ಪುತ್ತಿಗೆ ಮಠದ ಶ್ರೀ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ನವೆಂಬರ್ 28 ರಂದು ನಡೆಯುವ “ಲಕ್ಷ ಕಂಠ ಗೀತಾ ಪಾರಾಯಣ – ಬ್ರಹತ್ ಗೀತೋತ್ಸವ” ಕಾರ್ಯಕ್ರಮದಲ್ಲಿ ದೇಶದ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದು ಇದರ ಪೂರ್ವಭಾವಿಯಾಗಿ ಇಂದು ದಿನಾಂಕ 24-11-2025 ರಂದು ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ಕಚೇರಿ ನಡೆದ ಇಲಾಖಾಧಿಕಾರಿಗಳ ಸಭೆಯಲ್ಲಿ ಶಾಸಕರಾದ ಗುರ್ಮೆ

ಶಾಸಕರಿಂದ ಕೊಡಿಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಜನ ಸಂಪರ್ಕ ಸಭೆ – ಗ್ರಾಮಸ್ಥರ ಅಹವಾಲು ಸ್ವೀಕಾರ

ಹಿರಿಯಡ್ಕ: ಕೊಡಿಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರಿಂದ ಅಹವಾಲು ಸ್ವೀಕಾರ, ಜನಸಂಪರ್ಕ ಸಭೆ ಹಾಗೂ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮ ಇಂದು ದಿನಾಂಕ 19-11-2025 ರಂದು ಕೊಡಿಬೆಟ್ಟು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಉಪಸ್ಥಿತಿಯಲ್ಲಿ ನಡೆಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಂಗನವಾಡಿ ಮಕ್ಕಳಿಗೆ ಟಿ.ವಿ, ಮಕ್ಕಳ ಆಟಿಕೆ ಕಿಟ್ ಹಾಗೂ ಪಂಚಾಯತ್ ವರ್ಗ ಅನುದಾನ ಹಾಗೂ ಶೇಖರ 25ರ ನಿಧಿ ಮತ್ತು

ಉಡುಪಿಯ ಬನ್ನಂಜೆ ಬಿಲ್ಲವರ ಸೇವಾ ಸಂಘದ ಶ್ರೀ ನಾರಾಯಣಗುರು ವಿದ್ಯಾನಿಧಿ ಟ್ರಸ್ಟ್‌

ಉಡುಪಿಯ ಬನ್ನಂಜೆ ಬಿಲ್ಲವರ ಸೇವಾ ಸಂಘದ ಶ್ರೀ ನಾರಾಯಣಗುರು ವಿದ್ಯಾನಿಧಿ ಟ್ರಸ್ಟ್‌ ವತಿಯಿಂದ 431 ವಿದ್ಯಾರ್ಥಿಗಳಿಗೆ 25 ಲಕ್ಷ ರೂಪಾಯಿ ವಿದ್ಯಾರ್ಥಿ ವೇತನ ವಿತರಣೆ, ಸಾಧಕರಿಗೆ ಸಮ್ಮಾನ ಕಾರ್ಯಕ್ರಮವು ರವಿವಾರ ಬನ್ನಂಜೆ ನಾರಾಯಣಗುರು ಆಡಿಟೋರಿಯಂನಲ್ಲಿ ಜರಗಿತು. ನಾರಾಯಣಗುರು ಆಭಿವೃದ್ದಿ ನಿಗಮದ ಅಧ್ಯಕ್ಷ ಮಂಜುನಾಥ್‌ ಪೂಜಾರಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಮಾತನಾಡಿ ಸಮಾಜದ ಪ್ರತಿಯೊಬ್ಬ ಮಕ್ಕಳು ಉನ್ನತವಾದ ಶಿಕ್ಷಣ ಪಡೆದು,

ಉಚ್ಚಿಲ: ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಹಿರಿಯ ನಟ ಜೈ ಜಗದೀಶ್ ದಂಪತಿ ಭೇಟಿ

ಉಚ್ಚಿಲ ಶ್ರೀ ಮಾಹಲಕ್ಷ್ಮೀ ದೇವಸ್ಥಾನಕ್ಕೆ ಕನ್ನಡ ಚಿತ್ರರಂಗದ ಹಿರಿಯ ನಟ ಜೈ ಜಗದೀಶ್ ದಂಪತಿ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು.ಶ್ರೀ ಕ್ಷೇತ್ರದ ವತಿಯಿಂದ ಅವರಿಗೆ ಶಾಲು ಹೊದಿಸಿ, ಸ್ಮರಣಿಕೆ ಹಾಗೂ ಪ್ರಸಾದ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾದ ಗಿರಿಧರ್ ಸುವರ್ಣ, ಪ್ರಧಾನ ಅಚರ್ಕರಾದ ರಾಘವೇಂದ್ರ ಉಪಾಧ್ಯಾಯ ಹಾಗೂ ಅನೇಕ ಸದಸ್ಯರು ಉಪಸ್ಥಿತರಿದ್ದರು.

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಕನ್ನಡ ಚಿತ್ರರಂಗದ ಖ್ಯಾತ ನಟಿ ಶ್ರುತಿ ಕುಟುಂಬ ಭೇಟಿ

ಉಚ್ಚಿಲ:ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಕನ್ನಡ ಚಿತ್ರರಂಗದ ಖ್ಯಾತ ನಟಿ ಶ್ರೀಮತಿ ಶ್ರುತಿಯವರು ಕುಟುಂಬ ಸಮೇತ ಇಂದು ಭೇಟಿ ನೀಡಿದರು. ಸ್ವ ಕುಟುಂಬ ಸಮೇತರಾಗಿ ಬಂದ ಅವರು ಶ್ರೀ ಮಹಾಲಕ್ಷ್ಮೀ ದೇವಿಯ ದರ್ಶನ ಪಡೆದರು ಹಾಗೂ ಶ್ರೀ ಕ್ಷೇತ್ರದ ವತಿಯಿಂದ ಶ್ರುತಿಯವರಿಗೆ ಶಾಲು ಹೊದಿಸಿ, ಸ್ಮರಣಿಕೆ ಹಾಗೂ ಪ್ರಸಾದ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾದ ಗಿರಿಧರ್ ಸುವರ್ಣ, ಪ್ರಧಾನ ಅರ್ಚಕರಾದ ರಾಘವೇಂದ್ರ ಉಪಾಧ್ಯಾಯ,

ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಪಡುಬಿದ್ರೆ ಶಾಖೆಯಲ್ಲಿ ಗ್ರಾಹಕರ ದಿನಾಚರಣೆ

ಮುಲ್ಕಿ:ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಪಡುಬಿದ್ರೆ ಶಾಖೆಯ ಗ್ರಾಹಕರ ದಿನಾಚರಣೆಯು ನವೆಂಬರ್ 11 ಸಂಘದ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ವಸಂತ್ ಬೆರ್ನಾಡ್ ವಹಿಸಿ ಮಾತನಾಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಅಭಿವೃದ್ಧಿಗೆ ಗ್ರಾಹಕರ ಸಹಕಾರ ಕಾರಣವಾಗಿದ್ದು ಆತ್ಮೀಯತೆ ಕರ್ತವ್ಯ ನಿಷ್ಠೆ ಇದ್ದರೆ ಮಾತ್ರ ಗ್ರಾಹಕರ ವಿಶ್ವಾಸ ಸಾಧ್ಯ ಎಂದರು. ಮುಖ್ಯ ಅತಿಥಿಗಳಾಗಿ ಪಡುಬಿದ್ರಿ ನವಶಕ್ತಿ ಮಹಿಳಾ