ಮಾಜೀ ಮುಖ್ಯಮಂತ್ರಿ ಸದಾನಂದ ಗೌಡರ ಹೆಸರು ಈಗ ಉಡುಪಿ ಚಿಕ್ಕಮಗಳೂರು ಕ್ಷೇತ್ರಕ್ಕೂ ಕೇಳಿ ಬರುತ್ತಿದೆ. ಅವರು ಹಿಂದೆ ಅಲ್ಲಿ ಸಂಸದರಾಗಿದ್ದರು. 2009ರ ಲೋಕಸಭಾ ಚುನಾವಣೆಯಲ್ಲಿ ಡಿ. ಕೆ. ಸದಾನಂದ ಗೌಡರು ಉಡುಪಿ ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿದ್ದರು. ಆದರೆ ಅವರಿಗೆ ದಿಢೀರನೆ ಮುಖ್ಯಮಂತ್ರಿ ಆಗುವ ಅವಕಾಶ ಬಂದುದರಿಂದ ರಾಜೀನಾಮೆ ನೀಡಿದ್ದರು. ಉಪ
ನಿಟ್ಟೆ ಸುಫಲ ರೈತ ಉತ್ಪಾದಕ ಮತ್ತು ಹಲಸು ಸಂಸ್ಕರಣಾ ಘಟಕದ ಉದ್ಘಾಟನಾ ಕಾರ್ಯಕ್ರಮ ನೆರವೇರಿತು. ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಎಂಎಸ್ಎಂಇಯ ಡೈರೆಕ್ಟರ್ ಡಾ. ಗ್ಲೋರಿ ಸ್ವರೂಪ ಉದ್ಘಾಟಿಸಿ ಮಾತನಾಡಿ, ಸುಫಲ ರೈತ ಉತ್ಪಾದಕ ಘಟಕವು ಸುಮಾರು ಆರು ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿದ್ದು ಮೂರು ವರ್ಷಗಳ ಕಾಲ ಹಲಸಿನ ಹಣ್ಣಿನ ಬಗ್ಗೆ ಅಧ್ಯಯನ ಮಾಡಿ ಅದರಿಂದ ತಯಾರಿಸಲಾಗುವ ವಿವಿಧ ಖಾದ್ಯಗಳು ಮತ್ತು ಆರೋಗ್ಯಕ್ಕೆ ಆಗುವ ಉಪಯೋಗಗಳ ಮೂಲಕ, ಸ್ಥಳೀಯ ಜನರಿಗೆ ಉದ್ಯೋಗ
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರು ಕುಂದಾಪುರದ ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರನ್ನು ಭೇಟಿಯಾಗಿ ಬೆಂಬಲ ಕೋರಿದರು.ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರ ಭೇಟಿ ಬಗ್ಗೆ ಟ್ವೀಟ್ ಮಾಡಿರುವ ಕೋಟ ಅವರು, ‘ಕುಂದಾಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು, ಅತ್ಯಂತ ಸರಳ ವ್ಯಕ್ತಿತ್ವದ ಮೇರು ನಾಯಕರಾದ ಗೌರವಾನ್ವಿತ ಶ್ರೀ ಹಾಲಾಡಿ ಶ್ರೀನಿವಾಸ ಶೆಟ್ಟಿಯವರನ್ನು ಭೇಟಿಯಾಗಿ ಬೆಂಬಲ ಕೋರಿದೆ. ಈ
ಉಡುಪಿಯ ಮಹಾತ್ಮ ಗಾಂಧಿ ಮೈದಾನದಲ್ಲಿ ಗ್ಯಾರೆಂಟಿ ಸಮಾವೇಶದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಗ್ಯಾರಂಟಿ ಸಮಾವೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಬಿಜೆಪಿಯವರು ಗ್ಯಾರೆಂಟಿ ಯೋಜನೆ ಬಗ್ಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ. ನೇರವಾಗಿ ಫಲಾನುಭವಿಗಳಿಗೆ ಪ್ರಯೋಜನ ತಿಳಿಸಲು ಈ ಸಮಾವೇಶವನ್ನು ಹಮ್ಮಿಕೊಂಡಿದ್ದೇವೆ. ಜಿಲ್ಲಾ ಮಟ್ಟದಲ್ಲಿ ಅನುಷ್ಟಾನ ಸಮಿತಿ ರಚನೆ ಮಾಡಿದ್ದೇವೆ. ಎಲ್ಲಾ ಅರ್ಹರಿಗೆ ಗ್ಯಾರೆಂಟಿ ತಲುಪಬೇಕು.
ಪೌರತ್ವ ಕಾಯ್ದೆಯನ್ನು ಕೇವಲ ಚುನಾವಣೆಯ ದೃಷ್ಡಿಯಿಂದ ಕೇಂದ್ರ ಸರಕಾರ ಜಾರಿ ಮಾಡಿದ್ದು, ಬಿಜೆಪಿಯವರಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಕಾಡುತ್ತಿರುವುದರಿಂದ ಈ ರೀತಿಯ ಗಿಮಿಕ್ಸ್ ಗಳನ್ನು ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ರಾಜ್ಯದಲ್ಲಿ ಪೌರತ್ವ ಕಾಯ್ದೆ ಜಾರಿ ಬಗ್ಗೆ ಮುಖ್ಯಮಂತ್ರಿಗಳ ನಿಲುವಿನ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ, ಇಷ್ಟು ವರ್ಷಗಳ ಕಾಲ ಈ ಬಗ್ಗೆ
ಉಡುಪಿ: ಕಾಪು ಹೊಸ ಮಾರಿಗುಡಿಯ ಜೀರ್ಣೋದ್ಧಾರ ಕಾರ್ಯವು ಭರದಿಂದ ಸಾಗುತ್ತಿದ್ದು,ಹೊಸ ಮಾರಿಗುಡಿಗೆ ಮಂಗಳವಾರದಂದು ರಾಷ್ಟ್ರೀಯ ಬಿಲ್ಲವರ ಮಹಾ ಮಂಡಲದ ಅಧ್ಯಕ್ಷರಾದ ಡಾ. ರಾಜ್ ಶೇಖರ್ ಕೋಟ್ಯಾನ್ ರವರು ಸಮಾಜದ ಮುಖಂಡರೊಂದಿಗೆ ಭೇಟಿ ನೀಡಿ ಕ್ಷೇತ್ರದ ಅಭಿವೃದ್ಧಿ ಕಾರ್ಯಕ್ಕೆ ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿ ತಮ್ಮ ಸಮಾಜಕ್ಕೆ ಮೀಸಲಿಟ್ಟ ಒಂದು ಕೋಟಿ ವೆಚ್ಚದ ಬೃಹತ್ ಶಿಲಾ ಸ್ತಂಭದ ವೆಚ್ಚವನ್ನು ತಮ್ಮ ಸಮಾಜ ಬಾಂಧವರಿಂದಲೇ ಭರಿಸಿ ಶೀಘ್ರದಲ್ಲೇ ನೀಡುವುದಾಗಿ
ಕುಂದಾಪುರ: ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರು ಕೊಲ್ಲೂರು ಶ್ರೀ ಮೂಕಾಂಬಿಕ ದೇವಳಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಕುಟುಂಬ ಸಮೇತರಾಗಿ ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಬಳಿಕ ವೀರಭದ್ರ ದೇವರಿಗೆ ಕಾಯಿ ಸಮರ್ಪಿಸಿದದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಕೆ ಎಸ್ ಈಶ್ವರಪ್ಪ, ಯಾವಾಗಲೂ ಕೊಲ್ಲೂರಿಗೆ ಆಗಮಿಸಿತಾಯಿಯ ದರ್ಶನ ಪಡೆಯುತ್ತಿರುತ್ತೇನೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನನ್ನ ಮಗ ಕಾಂತೇಶ್ ಹಾವೇರಿಯಿಂದ
ಎಂ.ಕೆ. ಬಾಲರಾಜ್ ಸಾರಥ್ಯದ “ಎಂಕಲ್ನ ಕಲಾವಿದೆರ್” ಮಟ್ಟು ಕಟಪಾಡಿ ಅಭಿನಯಿಸಿದ “ಮಾಯೊದ ಮಹಾಶಕ್ತಿಲು” ಎಂಬ ತುಳು ಭಕ್ತಿ ಪ್ರಧಾನ ಅದ್ಧೂರಿ ನಾಟಕ ಪ್ರಥಮ ಪ್ರಯೋಗದಲ್ಲೇ ಜನರ ಮನಗೆಲ್ಲುವಲ್ಲಿ ಯಶಸ್ವಿಯಾಗಿದೆ. ಕಳೆದ ಏಳನೇ ತಾರೀಕಿನಂದ್ದು ಉಡುಪಿಯ ಅಜ್ಜರಗಾಡು ಭುಜಂಗ ಪಾರ್ಕಿನ ಬಯಲು ರಂಗಮಂದಿರಲ್ಲಿ ನಡೆದ ನಾಟಕ ವೀಕ್ಷಿಸಲು ಕಲಾಭಿಮಾನಿಗಳು ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿ ನಾಟಕದ ಪ್ರತಿಯೊಂದು ಮಜಲುಗಳನ್ನು ಆಡಿಕೊಂಡಾಡಿ ನಾಟಕ
ನಿರಂತರವಾದ ಕಠಿಣ ಪ್ರಯತ್ನದಿಂದ ಮಾತ್ರ ಸಾಧನೆ ಮಾಡಲು ಸಾಧ್ಯ. ಸೋಲೇ ಗೆಲುವಿನ ಸೋಪಾನ ಕ್ರೀಡಾ ಕ್ಷೇತ್ರವು ಏಕಾಗ್ರತೆ ಮತ್ತು ಸ್ಪರ್ಧಾ ಮನೋಭಾವವನ್ನು ಬೆಳೆಸುತ್ತದೆ ಕ್ರೀಡೆಯಿಂದ ಶಿಸ್ತು ಸಂಯಮ ಮತ್ತು ಆರೋಗ್ಯ ವೃದ್ಧಿಸುತ್ತದೆ. ಜೀವನದಲ್ಲಿ ಉತ್ತಮ ಸಾಧನೆಗಳನ್ನು ಸಾಧಿಸಲು ಕ್ರೀಡೆಯಿಂದ ಸಾಧ್ಯ ಎಂದು ಮುಲ್ಲಡ್ಕ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲ ಫಾ. ಮಿಲ್ಟನ್ ಡಿಸೋಜಾ ಹೇಳಿದರು. ಅವರು ಮುಂಡ್ಕೂರು ಭಾರ್ಗವ ವೇದಿಕೆಯ ಮುಂಭಾಗದಲ್ಲಿ ಶ್ರೀ
ತುಳುನಾಡ ರಾಜಧಾನಿ ಆಗಿದ್ದ ದೇವಾಲಯಗಳ, ರಾಜ ಮಹಾರಾಜರುಗಳ ಖ್ಯಾತಿಯ ಬಾರಕೂರು ಕೋಟೆಯಲ್ಲಿ 5 ವರ್ಷಗಳ ಹಿಂದೆ ನಡೆದ ಅಳುಪೋತ್ಸವ ನಡೆದಿತ್ತು. ಅಲ್ಲಿ ಈಗ ಮುಳ್ಳು ಪೊದೆಗಳು ರಾಜ್ಯಭಾರ ನಡೆಸಿವೆ. 2019 ಜನವರಿ 25ರಿಂದ 27ರತನಕ ಕರ್ನಾಟಕ ಪ್ರವಾಸೋದ್ಯಮ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಉಡುಪಿ ಜಿಲ್ಲಾಡಳಿತ ಮತ್ತು ಸ್ಥಳಿಯ ಸಂಘ ಸಂಸ್ಥೆಗಳ ಸಹಕಾರದಲ್ಲಿ ನಡೆದ ಅಳುಪೋತ್ಸವ ಬಾರಕೂರಿನ ಗತ ವೈಭವಕ್ಕೆ ಸಾಕ್ಷಿಯಾಗಿತ್ತು. ಕೋಟೆಯ ಸುತ್ತ ಏರು




























