Home ಕರಾವಳಿ Archive by category ಉಡುಪಿ (Page 75)

ಮಣಿಪುರ ಜನಾಂಗೀಯ ಸಂಘರ್ಷ ನಿಯಂತ್ರಿಸಲು ಕೇಂದ್ರ ಸರಕಾರ ವಿಫಲ : ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರಪಾಲ್ ಹೇಳಿಕೆ

ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಸಂಘರ್ಷ ಮತ್ತು ಒಂದು ನಿರ್ದಿಷ್ಟ ಪಂಗಡದ ಮಹಿಳೆಯರ ಮೇಲಿನ ಅಮಾನವೀಯ ಲೈಂಗಿಕ ದೌರ್ಜನ್ಯ ವಿಶ್ವದ ಎದುರು ದೇಶ ತಲೆ ತಗ್ಗಿಸುವಂತೆ ಮಾಡಿದೆ. ಇದಕ್ಕೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರ ಮತ್ತು ಅಲ್ಲಿನ ರಾಜ್ಯ ಸರಕಾರದ ಬೇಜವಾಬ್ಧಾರಿ ನಡೆಯೇ ನೇರ ಕಾರಣ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರಪಾಲ್

ಮಣಿಪುರದ ಹಿಂಸಾಚಾರ ಖಂಡಿಸಿ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

ಮಣಿಪುರದಲ್ಲಿ ನಡೆದ ಹಿಂಸಾಚಾರವನ್ನು ಖಂಡಿಸಿ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬ್ರಹ್ಮಾವರದ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಅವರು, ಕೇಂದ್ರದ ಬಿಜೆಪಿ ಸರಕಾರ ಬೇಟಿ ಬಚಾವೋ ಎಂದು ಹೇಳಿ ಅಧಿಕಾರಕ್ಕೆ ಬಂದು, ಇದೀಗ ಬೇಟಿಕೋ ಮಾರ್‍ಡಾಲೋ ಮಾಡುತ್ತಿದೆ. ಬಿಜೆಪಿಯವರು ಮುಂದಿನ ಲೋಕಸಭಾ ಚುನಾವಣೆಯ ಸಿದ್ದತೆಗೆ ಮಣಿಪುರದಲ್ಲಿ ಮತ ರಾಜಕೀಯ

ಮಣಿಪುರದಲ್ಲಿ ಹಿಂಸಾಚಾರ ಖಂಡಿಸಿ ಉಡುಪಿಯ ಸಮಾನ ಮನಸ್ಕರ ವೇದಿಕೆ ವತಿಯಿಂದ ಕಾಲ್ನಡಿಗೆ ಜಾಥ

ಮಣಿಪುರದಲ್ಲಿ ನಡೆಯುತ್ತಿರುವ ದೌರ್ಜನ್ಯ ಹಾಗೂ ಹಿಂಸಾಚಾರ ಖಂಡಿಸಿ ಆಗಸ್ಟ್ 2ರಂದು ಉಡುಪಿಯ ಸಮಾನ ಮನಸ್ಕರ ವೇದಿಕೆ ವತಿಯಿಂದ ಕಾಲ್ನಡಿಗೆ ಜಾಥ ನಡೆಯಲಿದೆ. ಈ ಬಗ್ಗೆ ಮಾಹಿತಿನೀಡಿದ ಪ್ರಶಾಂತ್ ಜತ್ತನ್ ಮಣಿಪುರದಲ್ಲಿ ಹಿಂಸಚಾರ ಶುರುವಾಗಿ ಸುಮಾರು ಮೂರು ತಿಂಗಳಾಗಿದೆ ,ಸುಮಾರು 114 ಮಂದಿ ಹತ್ಯೆಯಾಗಿದ್ದಾರೆ.ಅರವತ್ತು ಸಾವಿರಕ್ಕೂ ಹೆಚ್ಚು ಜನ ನಿರ್ವಸಿತರಾಗಿದ್ದಾರೆ ,ಮಹಿಳೆಯರ ಮೇಲೆ ಮಕ್ಕಳ ಮೇಲೆ ದೌರ್ಜನ್ಯಗಳು ಹೆಚ್ಚಾಗಿವೆ, ಚರ್ಚುಗಳು ಮಸೀದಿಗಳು ಧ್ವಸಂವಾಗಿದೆ.

ಜಿಲ್ಲಾ ಎಸ್ಪಿಯವರ ತನಿಖೆಯಲ್ಲೂ ಬಿಜೆಪಿಗರಿಗೆ ವಿಶ್ವಾಸವಿಲ್ಲ : ಮಾಜಿ ಸಚಿವ ವಿನಯಕುಮಾರ್ ಸೊರಕೆ

ಉಡುಪಿಯಲ್ಲಿ ಶೌಚಾಲಯ ವಿಡಿಯೋ ನಡೆದಿದೆ ಎಂಬ ಪ್ರಕರಣಕ್ಕೆ ಉತ್ತರ ನೀಡ ಬೇಕಾದವರು ಕಾಲೇಜು ಆಡಳಿತ. ಆದರೆ ಆ ಘಟನೆಯನ್ನು ಹಿಜಾಬಿಗೆ ಹೋಲಿಕೆ ಮಾಡಿಕೊಂಡು ಉಡುಪಿ ಶಾಸಕರೇ ಸೇರಿ ಡೊಂಬರಾಟ ನಡೆಸುತ್ತಿದ್ದಾರೆ ಎಂಬುದಾಗಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ವ್ಯಂಗವಾಡಿದ್ದಾರೆ. ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದರು. ಬಿಜೆಪಿ ಆಡಳಿತದಲ್ಲಿರುವ ಸಂದರ್ಭದಲ್ಲೇ ಅವರೇ ಕರೆತಂದ ಜಿಲ್ಲಾ ಎಸ್ಪಿಯವರ ತನಿಖೆಯಲ್ಲೂ ಬಿಜೆಪಿಗರಿಗೆ ವಿಶ್ವಾಸವಿಲ್ಲದಂತಾಗಿದೆ. ಮಹಿಳಾ

ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಣಿಪುರ ಹಿಂಸಾಚಾರ ಖಂಡಿಸಿ ಪ್ರತಿಭಟನೆ

ಮಣಿಪುರದಲ್ಲಿ ನಡೆದ ಹಿಂಸಾಚಾರವನ್ನು ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸುಧೀರ್ ಕುಮಾರ್ ಅವರು, ಮೈಥೇಯಿ-ಕುಕಿ-ನಾಗಾ ಸಮುದಾಯದಲ್ಲಿ ಎಷ್ಟು ಸಂಖ್ಯೆ ಇದೆ ಗೊತ್ತಿಲ್ಲ. ಚುನಾವಣೆ ಉದ್ದೇಶದಿಂದ ಬಿಜೆಪಿ ಸರ್ಕಾರ ಮೈಥೇಯಿ ಪರವಾಗಿ ನಿಂತಿದೆ. ಬಿಜೆಪಿ ಮನುಷ್ಯ ವಿರೋಧಿ ನೀತಿ ಅನುಸರಿಸುತ್ತಿದೆ. ದೇಶದಲ್ಲಿ ದೌರ್ಜನ್ಯ ನಡೆಯುತ್ತಿರುವಾಗ ಮೋದಿ ವಿಶ್ವನಾಯಕನಾಗಲು ಸಾಧ್ಯವಿಲ್ಲ ಎಂದರು. ಇನ್ನು

ಮಣಿಪುರ ಕೃತ್ಯ ಖಂಡಿಸಿ ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ನಡೆದ ಪ್ರತಿಭಟನೆ

ಮಹಿಳೆಯರನ್ನು ಮಾತೆಯರೆನ್ನುವ ಬಿಜೆಪಿ ಸರ್ಕಾರದ ಇನ್ನೊಂದು ಮುಖ ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡುವುದರ ಮೂಲಕ ಮಣಿಪುರದಲ್ಲಿ ಬಹಿರಂಗಗೊಂಡಿದೆ ಎಂಬುದಾಗಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ. ಅವರು ಬಿಜೆಪಿ ಆಡಳಿತ ನಡೆಸುತ್ತಿರುವ ಮಣಿಪುರ ರಾಜ್ಯದಲ್ಲಿ ನಡೆದ ಪೈಶಾಚಿಕ ಕೃತ್ಯವನ್ನು ವಿರೋಧಿಸಿ ಕಾಪು ಬ್ಲಾಕ್ ಕಾಂಗ್ರೆಸ್ ಕಾಪು ಪೇಟೆಯಲ್ಲಿ ಆಯೋಜಿಸಿದ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್

ಖಾಸಗಿ ವಿಚಾರ ಹರಿದಾಡಿ ದುರ್ಬಳಕೆ ಮಾಡಿದವರಿಗೆ ಶಿಕ್ಷೆ ಆಗಬೇಕು : ಶೋಭಾ ಕರಂದ್ಲಾಜೆ

ಉಡುಪಿಯ ಕಾಲೇಜೊಂದರ ಶೌಚಾಲಯಲ್ಲಿ ನಡೆದ ಶೂಟಿಂಗ್ ಘಟನೆ ದೇಶದ ಗಮನ ಸೆಳೆದಿದೆ. ನಮಗೆ ನಮ್ಮ ವಿದ್ಯಾರ್ಥಿನಿಯರ ರಕ್ಷಣೆ ಮುಖ್ಯವಾಗಿದೆ. ಖಾಸಗಿ ವಿಚಾರ ಹೊರಗಡೆ ಹರಿದಾಡಿ ದುರ್ಬಳಕೆ ಮಾಡಿದವರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಸದಸ್ಯೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಉಡುಪಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜನಪ್ರತಿನಿಧಿಗಳು ,ಡಿಸಿ, ಎಸ್‍ಪಿಗೆ ವಿದ್ಯಾರ್ಥಿನಿಯರು ಮಾಹಿತಿ ನೀಡಿದ್ದಾರೆ. ಲಂಚ್ ಬ್ರೇಕ್

ಪಡುಬಿದ್ರಿ : ಗಾಳಿಗೆ ಟ್ರಾನ್ಸ್ ಫಾರ್ಮರ್ ಧರೆಗೆ

ರಾತ್ರಿ ಬೀಸಿದ ಬಾರೀ ಮಳೆಗಾಳಿಗೆ ವಿದ್ಯುತ್ ಟ್ರಾನ್ಸ್ ಫಾರ್ಮರ್ ಧರೆಗುರುಳಿ ಮೆಸ್ಕಾಂಗೆ ಸುಮಾರು ಐದು ಲಕ್ಷ ರೂಪಾಯಿ ನಷ್ಟ ಸಂಭವಿಸಿದೆ.ಪಡುಬಿದ್ರಿ ಮೆಸ್ಕಾಂ ವ್ಯಾಪ್ತಿಯ ಎರ್ಮಾಳು ಪೊಂದಾಡು ಆಲಡೆ ಬೆಟ್ಟು ಎಂಬಲ್ಲಿ ರಾತ್ರಿ ಹೊತ್ತು ಈ ಘಟನೆ ನಡೆದಿದ್ದು, ಹಗಲು ಹೊತ್ತು ನಡೆದಿದ್ದರೆ ಬಾರೀ ಅನಾಹುತ ನಡೆಯುವ ಸಾಧ್ಯತೆ ಇತ್ತು ಎನ್ನುತ್ತಾರೆ ಸ್ಥಳೀಯರು, ವಿದ್ಯುತ್ ಇಲ್ಲದೆ ಗ್ರಾಮದ ಜನರು ಭಾರೀ ಸಮಸ್ಯೆ ಅನುಭವಿಸಿದ್ದು, ತುರ್ತಾಗಿ ಪಡುಬಿದ್ರಿ ಮೆಸ್ಕಾಂ

ಉಡುಪಿಯಲ್ಲಿ ಬಿಜೆಪಿಯಿಂದ ಪ್ರತಿಭಟನೆ

ಉಡುಪಿಯ ಕಾಲೇಜಿನ ಶೌಚಾಲಯದಲ್ಲಿ ವೀಡಿಯೋ ಚಿತ್ರೀಕರಣ ಪ್ರಕರಣದ ವಿರುದ್ಧ ಇಂದು ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ “ಬೃಹತ್ ಪ್ರತಿಭಟನೆ ಮತ್ತು ಸಮಗ್ರ ತನಿಖೆಗೆ ಹಕ್ಕೊತ್ತಾಯ” ಸಭೆ ನಡೆಸಿದರು.   ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ರವರ ನೇತೃತ್ವದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಕಛೇರಿಯ ಬಳಿಯಿಂದ ಹೊರಟ ಉಡುಪಿ ಸಿಟಿ ಬಸ್ ನಿಲ್ದಾಣದ ಮೂಲಕ ಬನ್ನಂಜೆ ಎಸ್.ಪಿ. ಕಛೇರಿಯ ಬಳಿ ಸಮಾಗಮಗೊಂಡಿತು. ನಂತರ ಪ್ರತಿಭಟನಾ ಸಭೆ

ಭದ್ರಾವತಿಯ ಯುವಕನ ಪತ್ತೆಗಾಗಿ ತೀವ್ರ ಹುಡುಕಾಟ: ಡ್ರೋನ್ ಕ್ಯಾಮರಾದಿಂದ ಶೋಧ ಕಾರ್ಯ

ಬೈಂದೂರು ಸಮೀಪದ ಕೊಲ್ಲೂರಿನ ಅರಶಿನಗುಂಡಿ ಎಂಬಲ್ಲಿ ಜಲಪಾತದ ಹರಿಯುವ ನೀರಿನಲ್ಲಿ ನಾಪತ್ತೆಯಾದ ಭದ್ರಾವತಿಯ ಯುವಕನ ಪತ್ತೆಗಾಗಿ ಡ್ರೋನ್ ಕ್ಯಾಮೆರಾ ಮೂಲಕ ಶೋಧ ಕಾರ್ಯ ನಡೆಯುತ್ತಿದೆ.   ಭಾನುವಾರ ಮಧ್ಯಾಹ್ನ ಕೊಲ್ಲೂರು ಸಮೀಪದ ಅರಸಿನಗುಂಡಿ ಜಲಪಾತದಲ್ಲಿ ಕಾಲುಜಾರಿ ಬಿದ್ದು ನಾಪತ್ತೆಯಾಗಿರುವ ಭದ್ರಾವತಿ ತಾಲ್ಲೂಕಿನ ಸುಣ್ಣದ ಹಳ್ಳಿಯ ಕೆ.ಎಚ್.ನಗರದ ಯುವ ಉದ್ಯಮಿ ಶರತ್ ಕುಮಾರ್ ಅವರ ಪತ್ತೆ ಕಾರ್ಯ ನಿನ್ನ ಮತ್ತು ಇವತ್ತು ಡ್ರೋನ್ ಕ್ಯಾಮೆರಾದ ಮೂಲಕ ಹುಡುಕಾಟ ಬರದಿಂದ