Home ಕರಾವಳಿ Archive by category ಉಡುಪಿ (Page 8)

ಕಾಪು ಹೊಸ ಮಾರಿಗುಡಿ ಇಪ್ಪತ್ತೈದು ವರ್ಷಗಳಿಂದ ಕರ್ತವ್ಯವನ್ನು ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ವ್ಯವಸ್ಥಾಪನಾ ಸಮಿತಿ ವತಿಯಿಂದ ಸನ್ಮಾನ

ಕಾಪು: ಶ್ರೀ ಹೊಸಮಾರಿಗುಡಿಯ ನವರಾತ್ರಿ ಮಹೋತ್ಸವದ ಸಂದರ್ಭದಲ್ಲಿ ಕಳೆದ ಇಪ್ಪತ್ತೈದು ವರ್ಷಗಳಿಂದಸೇವಾ ಕರ್ತವ್ಯವನ್ನು ನಿರ್ವಹಿಸುತ್ತಿರುವ ಹತ್ತು ಜನರನ್ನು ವ್ಯವಸ್ಥಾಪನಾ ಸಮಿತಿ ವತಿಯಿಂದ ಸನ್ಮಾನಿಸಲಾಯಿತು.ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ನಡಿಕೆರೆ ರತ್ನಾಕರ ಶೆಟ್ಟಿಯವರು ಅಮ್ಮನ ಆಲಯದಲ್ಲಿ ಸುಧೀರ್ಘ ಸಮಯದಿಂದ ,ಪೌರೋಹಿತ್ಯದಿಂದ ಮೊದಲ್ಗೊಂಡು ಸ್ವಚ್ಛತೆಯ

ಉಡುಪಿ: ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (DISHA) ಸಭೆ

ಉಡುಪಿ ಜಿಲ್ಲಾ ಪಂಚಾಯತ್ ಡಾ. ವಿ. ಎಸ್. ಆಚಾರ್ಯ ಸಭಾಂಗಣದಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ವೈ ರಾಘವೇಂದ್ರ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (DISHA) ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಕೇಂದ್ರ ಸರ್ಕಾರ ವಿವಿಧ ಯೋಜನೆಗಳ ಬಗ್ಗೆ ಮತ್ತು ಪ್ರಸ್ತುತ ನಡೆಯುತ್ತಿರುವ ವಿವಿಧ ಕಾಮಗಾರಿಗಳ ಪ್ರಗತಿಯ ಬಗ್ಗೆ ಚರ್ಚಿಸಿದರು. ಈ ಸಂದರ್ಭದಲ್ಲಿ

ಪಾದೆಬೆಟ್ಟು ಕೋಡ್ದಬ್ಬು ದೈವಸ್ಥಾನದಿಂದ ಸುಬ್ರಮಣ್ಯ ದ್ವಾರದ ರಸ್ತೆ ಅಭಿವೃದ್ಧಿ ಗುದ್ದಲಿ ಪೂಜೆ

ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾದೆಬೆಟ್ಟು ಕೋಡ್ದಬ್ಬು ದೈವಸ್ಥಾನದಿಂದ ಸುಬ್ರಮಣ್ಯ ದ್ವಾರದ ರಸ್ತೆಗೆ ಅಭಿವೃದ್ಧಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ ಸಮಾಜ ಕಲ್ಯಾಣ ಇಲಾಖೆಯಿಂದ 50 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಇಂದು ದಿನಾಂಕ 20-09-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಶಿಕಲಾ, ಮಾಜಿ

ಮಹಿಳಾ ಕಥಾಹಂದರವಿರುವ ಡಾ. ಶಯದೇವಿಸುತೆ ಮರವಂತೆಯವರ “ಕೆಂದಾವರೆ” ಕೃತಿಗೆ ಸಿನಿಮಾ ರೂಪ

ವಿನೋದ್‌ಕುಮಾರ್ ಪಿ. ಇವರ ಪರಿಕಲ್ಪನೆಯಲ್ಲಿ ಮೂಡಿ ಬಂದಿರುವ ಡಾ. ಶಯದೇವಿಸುತೆ ಮರವಂತೆ (ಡಾ. ಜ್ಯೋತಿ ಜೀವನ್‌ಸ್ವರೂಪ್) ಅವರ ಹೊಚ್ಚ ಹೊಸ ಮಹಾ ಕಾದಂಬರಿಯು ಸಿನಿಮಾ ಶೈಲಿಯ ಬರವಣಿಗೆಗಳಿಂದ ವಿಶೇಷ ಮುಖಪುಟ ವಿನ್ಯಾಸದೊಂದಿಗೆ ಪುನಃ ಸಿದ್ಧತೆಗೊಂಡಿದ್ದು, ಅದನ್ನ ಇತ್ತೀಚೆಗಷ್ಟೇ ದಿನಾಂಕ 28/08/2025ರಂದು ಕರ್ನಾಟಕ ಸರ್ಕಾರ ರಾಜ್ಯ ಮಹಿಳಾ ಆಯೋಗದ ಮಾನ್ಯ ಅಧ್ಯಕ್ಷೆ (ಮಕ್ಕಳ ವೈದ್ಯೆ & ಪ್ರಾಧ್ಯಾಪಕಿ), ಡಾ. ನಾಗಲಕ್ಷ್ಮೀ ಚೌಧರಿಯವರು ಗೌರಿ-ಗಣೇಶ ಚತುರ್ಥಿ ಹಬ್ಬದ

ಬೈಂದೂರು : ಜೇಸಿಐ ಉಪ್ಪುಂದ ಸುಪ್ರೀಮ್ ಜೇಸಿ ಸಪ್ತಾಹ- 2025 ಸಪ್ತ ಸಂಭ್ರಮ

ಜೇಸಿಐ ಉಪ್ಪುಂದ ಸುಪ್ರೀಮ್ ಜೇಸಿ ಸಪ್ತಾಹ- 2025-ಸಪ್ತ ಸಂಭ್ರಮ ನಾಗೂರು ಶ್ರೀಕೃಷ್ಣ ಲಲಿತಕಲಾ ಮಂದಿರ ನಾಗೂರಿನಲ್ಲಿ ಸಂಭ್ರಮದಲ್ಲಿ ನಡೆಯಿತು. ಉಪ್ರಳ್ಳಿ ಶ್ರೀ ಕಾಳಿಕಾಂಬಾ ದೇವಸ್ಥಾನದ ಟ್ರಸ್ಟಿ, ಉದ್ಯಮಿ ತ್ರಾಸಿ ಸುಧಾಕರ ಆಚಾರ್ಯ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿಇಂದಿನ ಯುವ ಜನತೆ ಸುಂದರ ಸಮಾಜ ನಿರ್ಮಾಣದ ಮೂಲಕ ದೇಶವನ್ನು ಕಟ್ಟುವ ಕೆಲಸ ಮಾಡಬೇಕು. ಎಲ್ಲವನ್ನೂ ಕೊಟ್ಟ ಸಮಾಜದ ಋಣವನ್ನು ತೀರಿಸುವ ನೆಲೆಯಲ್ಲಿ ಜಿಸಿಐನಂತಹ ಸಂಘಟನೆಗೆ ಸೇರುವ ಮೂಲಕ

ಬೈಂದೂರು : ತಾಲೂಕು ಆಡಳಿತ ಸೌಧ ವಿಶ್ವಕರ್ಮ ಜಯಂತಿ

ತಾಲೂಕು ಆಡಳಿತ ಸೌಧ ಬೈಂದೂರು, ತಾಲೂಕು ಪಂಚಾಯತ್ ಬೈಂದೂರು ವತಿಯಿಂದ ವಿಶ್ವಕರ್ಮ ಜಯಂತಿ‌ ಬುಧವಾರ ಬೈಂದೂರು ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ನಡೆಯಿತು. ಉಪ್ರಳ್ಳಿ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರರ ಕಳಿ ಚಂದ್ರಯ್ಯ ಆಚಾರ್ಯ ವಿಶ್ವಕರ್ಮ ಜಯಂತಿ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,  ವಿಶ್ವಕರ್ಮ ಜಯಂತಿಯು ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗಿಲ್ಲ. ಇಡೀ ವಿಶ್ವಕ್ಕೆ ಗುರುವಾದ, ದೇವಲೋಕ, ಸ್ವರ್ಗಲೋಕವನ್ನು ಹಾಗೂ ದೇವತೆಗಳಿಗೆ ವಾಹನಗಳನ್ನು

ಪುತ್ತಿಗೆ ಶ್ರೀಪಾದರ “64 ಜನ್ಮನಕ್ಷತೋತ್ಸವ ಸಂಭ್ರಮ

ಉಡುಪಿ: ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ದಿನಾಂಕ 30-08-2025 ಶನಿವಾರದಂದು ನಡೆದ ಪರ್ಯಾಯ ಶ್ರೀಪುತ್ತಿಗೆ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ “64 ಜನ್ಮನಕ್ಷತೋತ್ಸವ ಸಂಭ್ರಮ”ದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಜಗದ್ಗುರು ಶ್ರೀಮನ್ಮಧ್ವಾಚಾರ್ಯ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆ ಸಮಾರಂಭ ನೆರವೇರಿತು. ಅದಮಾರು ಮಠದ ಶ್ರೀ ಶ್ರೀ

ಪಡುಬಿದ್ರಿ:14 ವರ್ಷಗಳಿಂದ ತಲೆಮರಿಸಿಕೊಂಡಿರುವ LPC ವಾರಂಟ್ ಆಸಾಮಿಯ ಬಂಧನ

ಉಡುಪಿ ಜಿಲ್ಲೆಯ ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ 22-01-2010 ರಂದು ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸುಮಾರು 14 ವರ್ಷಗಳಿಂದ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರಸಿಕೊಂಡಿದ್ದ ವಾರಂಟು ಆಸಾಮಿ ಮೈಸೂರಿನ ನಿವಾಸಿ ಇಕ್ಬಾಲ್ ಅಹಮದ್ ಅನ್ಸಾರಿ ಎಂಬಾತನನ್ನು ಪಡುಬಿದ್ರಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿ ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಮಾನ್ಯ ನ್ಯಾಯಾಲವು ಆರೋಪಿಗೆ ನ್ಯಾಯಾಂಗ ಬಂಧನವನ್ನು ವಿಧಿಸಿರುತ್ತದೆ.ದಿನಾಂಕ

ಉಡುಪಿ: ಧರ್ಮ, ಪೂಜೆ, ಭಕ್ತಿ ಪ್ರದರ್ಶನದ ವಸ್ತುವಲ್ಲ: ಧರ್ಮವನ್ನು ಉಳಿಸಿಕೊಂಡು ಮುಂದೆ ಸಾಗೋಣ: ಡಿಸಿಎಂ ಡಿಕೆಶಿ

ಧರ್ಮ, ಪೂಜೆ, ಭಕ್ತಿ ಪ್ರದರ್ಶನದ ವಸ್ತುವಲ್ಲ. ಆಚಾರ, ವಿಚಾರವನ್ನು ಎಲ್ಲರೂ ಒಟ್ಟಾಗಿ ಕೊಂಡೊಯ್ಯಬೇಕು.ಮರಕ್ಕೆ ಬೇರು ಎಷ್ಟು ಮುಖ್ಯವೋ ಹಾಗೆಯೇ ಮನುಷ್ಯನಿಗೆ ನಂಬಿಕೆ ಮುಖ್ಯ. ಹೀಗಾಗಿ ಧರ್ಮವನ್ನು ಉಳಿಸಿಕೊಂಡು ನಾವೆಲ್ಲರೂ ಮುಂದೆ ಸಾಗೋಣ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು. ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀಕೃಷ್ಣ ಮಠದ ವತಿಯಿಂದ ಪರ್ಯಾಯ ಪುತ್ತಿಗೆ ಮಠಾ ಧೀಶ ರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ 64ನೇ ಜನ್ಮ ನಕ್ಷತ್ರೋತ್ಸವ ಸಂಭ್ರಮ

ಮಲ್ಪೆ: ಸಮುದ್ರ ತೀರದ ತೊಟ್ಟಂ:ಸಮುದ್ರದ ರಭಸಕ್ಕೆ ಮಗುಚಿ ಬಿದ್ದ ದೋಣಿ ನಾಲ್ವರು ಮೀನುಗಾರರು ಪ್ರಾಣಾಪಾಯದಿಂದ ಪಾರು

ಉಡುಪಿ ಜಿಲ್ಲೆಯ ಮಲ್ಪೆಯ ಸಮುದ್ರ ತೀರದ ತೊಟ್ಟಂ ಬಳಿ ಸಮುದ್ರದ ರಭಸಕ್ಕೆ ದೋಣಿ ಮಗಚಿ ಬಿದ್ದಿದ್ದು, ಏಡಿಬಲೆಗೆ ಹೋದ ನಾಲ್ವರು ಮೀನುಗಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತೊಟ್ಟಂ ವಾರ್ಡಿನ ನಗರ ಸಭಾ ಸದಸ್ಯರಾದ ಯೋಗೇಶ್ ರವರು ಈಶ್ವರ್ ಮಲ್ಪೆ ತಂಡಕ್ಕೆ ಮಾಹಿತಿ ನೀಡಿದ್ದು, ಸ್ಥಳಿಯರಾದ ಪ್ರವೀಣ್, ಉದಯ್ ಯವರ ಜೊತೆ ಸೇರಿ ಲೈಫ್ ಜಾಕೇಟ್ ನೀಡಿ ನಾಲ್ಕುರು ಮೀನುಗಾರರ ಜೀವ ಉಳಿಸಲಾಗಿದೆ ಎಂದು ಮುಳುಗು ತಜ್ಞ ಈಶ್ವರ್ ಮಲ್ಪೆ ತಿಳಿಸಿದ್ದಾರೆ. ಕ್ಷಣ ಕ್ಷಣಕ್ಕೂ ಮಲ್ಪೆಯ