Home ಕರಾವಳಿ Archive by category ಉಡುಪಿ (Page 86)

ಪೇಜಾವರ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿಯವರಿಂದ ವಿವಿಧ ಯೋಗಾಸನದ ಭಂಗಿಗಳು

ಉಡುಪಿ : 9 ವರ್ಷಗಳ ಹಿಂದೆ ಜೂನ್ 21 ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಇಂದು ದೇಶ ವಿದೇಶದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜನ ಆಚರಿಸುತ್ತಿದ್ದಾರೆ. ಉಡುಪಿ ಜಿಲ್ಲೆಯ ಪೇಜಾವರ ಮಠಾಧೀಶರಾದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿಯವರು ಸ್ವತಃ ಯೋಗ ಪಟು. ತನ್ನ ದೈನಂದಿನ ಚಟುವಟಿಕೆಗಳ ನಡುವೆ ಸಮಯ ಸಿಕ್ಕಷ್ಟು

ಮಣಿಪಾಲ ಆರೋಗ್ಯ ಕಾರ್ಡ್ 2023ರ ನೋಂದಣಿ ಪ್ರಕ್ರಿಯೆಗೆ ಚಾಲನೆ

ಉಡುಪಿ : ಉಡುಪಿ ಜಿಲ್ಲೆಯ ಮಾಹೆ ಮಣಿಪಾಲದ ಸಂಸ್ಥಾಪಕರಾದ ಡಾ. ಟಿ.ಎಂ.ಎ.ಪೈ ಅವರ 125ನೇ ವರ್ಷದ ಜನ್ಮ ದಿನಾಚರಣೆಯ ಅಂಗವಾಗಿ, ಮಣಿಪಾಲ ಆರೋಗ್ಯ ಕಾರ್ಡ್ 2023ರ ನೋಂದಣಿ ಪ್ರಕ್ರಿಯೆಗೆ ಮಂಗಳವಾರದಂದು ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮಾಹೆ ಮಣಿಪಾಲದ ಸಹ ಕುಲಾಧಿಪತಿಗಳಾದ ಡಾ. ಎಚ್. ಎಸ್. ಬಲ್ಲಾಳ್ ಮಾತನಾಡಿ, ಈ ವರ್ಷ ನಮ್ಮ ದೂರದೃಷ್ಟಿಯ ಸಂಸ್ಥಾಪಕ ನಾಯಕ ಡಾ. ಟಿ. ಎಂ. ಎ. ಪೈ ಅವರ 125 ನೇ ವರ್ಷದ ಜನ್ಮದಿನಾಚರಣೆಯನ್ನು ನಾವು ಆಚರಿಸುತ್ತಿದ್ದೇವೆ. ಅವರ ಉದಾತ್ತ

ಕಾಪುವಿನಲ್ಲಿ ಬಿಜೆಪಿ ಪಕ್ಷ ಕಛೇರಿ ಉದ್ಘಾಟನೆ

ಕಾಪುವಿನಲ್ಲಿ ಬಿಜೆಪಿ ಪಕ್ಷದ ಕಛೇರಿಯನ್ನು ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿದರು. ಕಾಪು ಬಿಜೆಪಿ ಮಂಡಲ ಅಧ್ಯಕ್ಷ ಶ್ರೀಕಾಂತ್ ನಾಯಕ್ ಮಾತನಾಡಿ, ಪಕ್ಷದ ಕಾರ್ಯಕರ್ತರಿಗೆ ಅನುಕೂಲವಾಗುವ ರೀತಿಯಲ್ಲಿ ಈ ಕಛೇರಿಯನ್ನು ಸ್ಥಾಪಿಸಲಾಗಿದೆ ಎಂದು ಹೇಳಿದರು. ಮಾಜಿ ಶಾಸಕ ಲಾಲಾಜಿ ಮೆಂಡನ್ ಕಛೇರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭ ಪಕ್ಷದ ಜಿಲ್ಲಾಧ್ಯಕ್ಷ ಕೊಯಿಲಾಡಿ ಸುರೇಶ್ ನಾಯಕ್, ನವೀನ್ ಮುಂತಾದ ಮುಖಂಡರಿದ್ದರು.

ಮೂಲ ಸೌಕರ್ಯ ವಂಚಿತ ತ್ರಾಸಿ ಮರವಂತೆ ಬೀಚ್ : ಸೂಕ್ತ ಭದ್ರತೆಗೆ ಸ್ಥಳೀಯರ ಆಗ್ರಹ

ಬೈಂದೂರು: ವಿಶ್ವ ಪ್ರಸಿದ್ಧ ತ್ರಾಸಿ ಮರವಂತೆ ಕಡಲ ಸೌಂದರ್ಯ ನೋಡಲು ದೇಶ, ವಿದೇಶಗಳಿಂದ ಸಾವಿರಾರು ಪ್ರವಾಸಿಗರು ಬರುತ್ತಿದ್ದಾರೆ. ಆದರೆ ಪ್ರವಾಸಿ ತಾಣದ ಅಭಿವೃದ್ಧಿ ಸೇರಿದಂತೆ ಸೂಕ್ತ ಭದ್ರತೆಯನ್ನು ಒದಗಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ಒಂದು ಕಡೆ ಸಮುದ್ರ ಇನ್ನೊಂದು ಕಡೆ ನದಿ ಮಧ್ಯದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಾಗುವುದೇ ರೋಚಕದ ಅನುಭವ. ರಸ್ತೆಯಲ್ಲಿ ಸಂಚಾರ ಮಾಡುತ್ತಲೆ ಕಡಲ ತೀರಕ್ಕೆ ಹಾಲಿನ ನೊರೆಯಂತೆ ಧುಮುಕ್ಕಿ ಬರುವ ಕಡಲ

ಉಡುಪಿಯ ಕೋಡಿ ಬೆಂಗ್ರೆ ಶಾಲೆಯಲ್ಲಿ ಶಿಕ್ಷಕರ ಕೊರತೆ: ಶಿಕ್ಷಕರ ಸಂಖ್ಯೆ ಹೆಚ್ಚಳ ಮಾಡುವಂತೆ ವಿದ್ಯಾರ್ಥಿಗಳ ಪ್ರತಿಭಟನೆ

ಉಡುಪಿ ಜಿಲ್ಲೆಯ ಕೋಡಿ ಬೆಂಗ್ರೆಯಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ಸಂಖ್ಯೆ ಹೆಚ್ಚು ಮಾಡುವಂತೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. 98 ವರ್ಷ ಇತಿಹಾಸ ಇರುವ ಉಡುಪಿಯ ಕೋಡಿ ಬೆಂಗ್ರೆ ಶಾಲೆಯಲ್ಲಿ ಈಗ ಕೇವಲ ಮೂವರು ಖಾಯಂ ಶಿಕ್ಷಕರಿದ್ದು 1ರಿಂದ 7ನೇ ತರಗತಿಯವರೆಗೆ ವಿದ್ಯಾರ್ಥಿಗಳಿಗೆ ಬೋಧನೆಯನ್ನು ಮಾಡುತ್ತಿದ್ದಾರೆ. ಕಳೆದ ವರ್ಷ ಇಲ್ಲಿ ಹೆಚ್ಚುವರಿ ಶಿಕ್ಷಕರ ವರ್ಗಾವಣೆಯ ನೆಪ ಒಡ್ಡಿ ಮೂವರು ಶಿಕ್ಷಕರಲ್ಲಿ ಒಬ್ಬರನ್ನು ವರ್ಗಾವಣೆ

ಅಂಬಲಪಾಡಿ ನೀರಿನ‌ ಸಮಸ್ಯೆ: ಪಂಚಾಯತ್ ಅಧ್ಯಕ್ಷರ ಹೇಳಿಕೆ ವಿರುದ್ಧ ಗ್ರಾಮಸ್ಥರು ಗರಂ

ಉಡುಪಿ: ಉಡುಪಿ ಜಿಲ್ಲೆಯ ಅಂಬಲಪಾಡಿ ಪಂಚಾಯತ್ ವ್ಯಾಪ್ತಿಯಲ್ಲಿ ನೀರಿನ‌ ಸಮಸ್ಯೆ ತೀವ್ರಗೊಂಡಿದ್ದು ಗ್ರಾಮದ ಮಹಿಳೆಯರು ಪಂಚಾಯತ್ ಗೆ ಮುತ್ತಿಗೆ ಹಾಕಿದ್ದರು. ಅಲ್ಲಿನ 90ಕ್ಕು ಅಧಿಕ ಮನೆಗಳಿಗೆ ನೀರು ಸಿಗದಿರುವ ಪರಿಣಾಮ, ನೀರು ಪೂರೈಕೆ ಮಾಡಬೇಕು ಎಂದು ಕೊಡ ಹಿಡಿದು ಪಂಚಾಯತ್ ಗೆ ಮುತ್ತಿಗೆ ಹಾಕಿದ್ದ ಮಹಿಳೆಯರು ಮತ್ತು ಗ್ರಾಮಸ್ಥರು ತಮ್ಮ ಪ್ರತಿಭಟನೆ ದಾಖಲಿಸಿದ್ದರು. ಆದರೆ ಈ ಪ್ರತಿಭಟನೆ ರಾಜಕೀಯ ಪ್ರೇರಿತ ಎಂದು ಅಂಬಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರೋಹಿಣಿ

ಗಂಗೊಳ್ಳಿ : ಸಂಪೂರ್ಣ ನಿರ್ಲಕ್ಷ್ಯಕ್ಕೆ ಒಳಗಾದ ಜೆಟ್ಟಿ ನಿರ್ಮಾಣ ಕಾರ್ಯ

ಕರಾವಳಿಯ ಪ್ರಮುಖ ಮೀನುಗಾರಿಕಾ ಬಂದರುಗಳಲ್ಲಿ ಒಂದಾದ ಗಂಗೊಳ್ಳಿ ಮೀನುಗಾರಿಕಾ ಜೆಟ್ಟಿ ಸಂಪೂರ್ಣ ನಿರ್ಲಕ್ಷ್ಯಕ್ಕೊಗಾದ ಸ್ಥಿತಿಗೆ ತಲುಪಿದೆ. ಕಳೆದ ವರ್ಷದ ಮಳೆಗಾಲದಲ್ಲಿ ಇಲ್ಲಿನ ಜೆಟ್ಟಿಯ ಒಂದು ಭಾಗ ಕುಸಿದು ಮೀನುಗಾರಿಕೆಗೆ ತೊಂದರೆಯಾಗಿದ್ದರೂ ಜೆಟ್ಟಿಯ ಮರು ನಿರ್ಮಾಣದ ಕಾರ್ಯ ಕನಸಾಗಿಯೇ ಉಳಿದಿದೆ. ಗಂಗೊಳ್ಳಿಯಲ್ಲಿ 2013ರಲ್ಲಿ 10 ಕೋಟಿ ವೆಚ್ಚದಲ್ಲಿ ಜೆಟ್ಟಿ ನಿರ್ಮಿಸಲಾಗಿತ್ತು. ಇದು 2016ರಲ್ಲಿ ಹಾನಿಗೊಳಗಾಯಿತು. 2018 ರಲ್ಲಿ ದುರಸ್ತಿಗಾಗಿ ಹೆಚ್ಚುವರಿ 3

ಬೈಂದೂರು : ರಾಷ್ಟ್ರೀಯ ಹೆದ್ದಾರಿ ಸಮಸ್ಯೆ ಆಲಿಸಿದ ಶಾಸಕ ಗುರುರಾಜ್

ಬೈಂದೂರು ವಿಧಾನಸಭಾ ಕ್ಷೇತ್ರದ ತಲ್ಲೂರಿನಿಂದ ಬೈಂದೂರಿನ ತನಕ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಳೆಗಾಲದ ಸಂದರ್ಭ ಸಮಸ್ಯೆ ಉದ್ಭವವಾಗುವ ಪ್ರದೇಶಗಳಿಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ ನೀಡಿ, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಹೆಮ್ಮಾಡಿ, ಮುಳ್ಳಿಕಟ್ಟೆ, ತ್ರಾಸಿ, ಮರವಂತೆ, ನಾಗೂರು, ಉಪ್ಪುಂದ, ಬೈಂದೂರು ಭಾಗಗಳಲ್ಲಿ, ಜನಸಾಮಾನ್ಯರ ಸಮಸ್ಯೆ ಬಗ್ಗೆ ವಿಚಾರಿಸಿ, ಸ್ಥಳೀಯರ ಒಂದಿಷ್ಟು ಮನವಿಗಳನ್ನು

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನ : ಮೀನುಗಾರಿಕಾ ಸಚಿವ ಮಂಕಾಳ ಎಸ್ ವೈದ್ಯರಿಗೆ ಅಭಿನಂದನೆ ಕಾರ್ಯಕ್ರಮ

ಕರ್ನಾಟಕ ಸರಕಾರದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ನೂತನ ಸಚಿವರಾದ ಮಂಕಾಳ ಎಸ್. ವೈದ್ಯ ಅವರಿಗೆ ಉಡುಪಿಯ ಸಮಸ್ತ ಮೀನುಗಾರರ ವತಿಯಿಂದ ಅಭಿನಂದನಾ ಸಮಾರಂಭ ನಡೆಯಿತು. ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಅವರು ಮಾತನಾಡಿ, ಹೆಜಮಾಡಿ ಬಂದರಿನ 60 ಶೇಕಡಾ ಕಾಮಗಾರಿ ಪೂರ್ಣಗೊಂಡಿದ್ದು, ಬಾಕಿ ಉಳಿದ ಕಾಮಗಾರಿಗೆ ಅನುದಾನವನ್ನು ಶೀಘ್ರದಲ್ಲಿ ಬಿಡುಗಡೆ ಗೊಳಿಸುವಂತೆ

ಕಟಪಾಡಿ ಕೇಶವ ಭಂಡಾರಿ ನಿಧನ

ಉಡುಪಿ ತಾಲೂಕು ಸವಿತಾ ಸಮಾಜದ ಮಾಜಿ ಅಧ್ಯಕ್ಷರು, ಸಮಾಜ ಮುಖಿ ಹೋರಾಟಗಾರ, ಸಂಘಟಕ, ಸಮಾಜದ ಮುಖಂಡ ಕಟಪಾಡಿ ಕೇಶವ ಭಂಡಾರಿಯವರು ಅಸೌಖ್ಯದಿಂದ ನಿಧನರಾಗಿದ್ದಾರೆ. ಕೇಶವ ಭಂಡಾರಿ ಅವರು, ಸವಿತಾ ಸಮಾಜ ವಿವಿಧೋದ್ದೇಶ ಸೌಹಾರ್ದ ಸಹಕಾರಿಯ ಸ್ಥಾಪಕ ನಿರ್ದೇಶಕರೂ, ಪ್ರಸ್ತುತ ಜಿಲ್ಲಾ ಸವಿತಾ ಸಮಾಜದ ಗೌರವ ಸಲಹೆಗಾರರಾಗಿ ಸೇವೆಯಲ್ಲಿ ಸಲ್ಲಿಸುತ್ತಿದ್ದರು. ಅವರು ಪತ್ನಿ, ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಕೇಶವ ಭಂಡಾರಿ ಅಂತ್ಯಕ್ರಿಯೆಯಲ್ಲಿ ಉಡುಪಿ ಜಿಲ್ಲಾ