Home ಕರಾವಳಿ Archive by category ಉಡುಪಿ (Page 87)

ಹೆಜಮಾಡಿ ಗ್ರಾ.ಪಂ. ವ್ಯಾಪ್ತಿಯ ರಸ್ತೆ ಕಾಮಗಾರಿ ಉದ್ಘಾಟನೆ

ಉಡುಪಿ ಜಿಲ್ಲೆಯ ಕಾಪು ವಿಧಾನಸಭಾ ಕ್ಷೇತ್ರದ ಹೆಜಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 3 ಕೋಟಿ 75 ಲಕ್ಷ ರೂಪಾಯಿ ವೆಚ್ಚದ ವಿವಿಧ ರಸ್ತೆ ಕಾಮಗಾರಿಗಳ ಉದ್ಘಾಟನೆಯನ್ನು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಉಡುಪಿ ಜಿಲ್ಲೆಯ ಹೆಜಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪರಪಟ್ಟ ಬಳಿಯ ನಡಿದಂಡೆ ಸಂರಕ್ಷಣೆ – 2 ಕೋಟಿ, ಪರಪಟ್ಟ

ಬಾರಕೂರಿನಲ್ಲಿ ಸರಣಿ ಕಳ್ಳತನ : ಪೆಟ್ರೋಲ್ ಬಂಕ್, ಟಯರ್ ಅಂಗಡಿ, ಹಾಲು ಅಂಗಡಿಗಳಲ್ಲಿ ನಗದು ಕಳವು

ಬಾರಕೂರು ಮುಖ್ಯ ರಸ್ತೆಯ ಪೆಟ್ರೋಲ್ ಬಂಕ್, ಟಯರ್ ಅಂಗಡಿ, ಹಾಲು ಅಂಗಡಿಗಳಲ್ಲಿ ಸರಣಿ ಕಳ್ಳತನ ನಡೆದಿದೆ. ಅಜಿತ್ ಕುಮಾರ್ ಶೆಟ್ಟಿಯವರ ಮಾಲಕತ್ವದ ಶ್ರೀ ಗಣೇಶ್ ಇಂಡಿಯನ್ ಆಯಿಲ್‍ನಲ್ಲಿ 8 ಸಿಸಿ ಕ್ಯಾಮರಾ ಇದ್ದು ಕಛೇರಿ ಹಿಂಭಾಗದಲ್ಲಿರುವ ಕ್ಯಾಮರಾಕ್ಕೆ ಸೊಪ್ಪು ಮತ್ತು ಬಟ್ಟೆ ಮುಚ್ಚಿ ಬಳಿಕ ಬೀಗವನ್ನು ಒಡೆದು ಕಪಾಟಿನಲ್ಲಿದ್ದ 20 ಸಾವಿರದಷ್ಟು ನಗದು, ಅಲ್ಲೇ ಪಕ್ಕದಲ್ಲಿದ್ದ ಟಯರ್ ಅಂಗಡಿಯ 3 ರಾಡ್, ನಂದಿನಿ ಹಾಲು ಅಂಗಡಿಯ ಬಾಗಿಲು ಮುರಿದು ನಗದು

ಕಾಪು : ಕಡಲು ಕೊರೆತ ಪ್ರದೇಶಕ್ಕೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ

ಕಾಪು ಕ್ಷೇತ್ರದ ಮೂಳೂರು, ಪೊಲಿಪು, ಉದ್ಯಾವರದ ಕಡಲು ಕೊರೆತ ಪ್ರದೇಶಕ್ಕೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು, ಕಾಪು ಪುರಸಭಾ ಅಧಿಕಾರಿಗಳು ಹಾಗೂ ಕಾರ್ಯಕರ್ತರೊಂದಿಗೆ ತೆರಳಿ ಪರಿಶೀಲನೆ ನಡೆಸಿದರು. ಪ್ರತಿ ಬಾರಿಯೂ ಮಳೆಗಾಲ ಆರಂಭವಾದಾಗ ಜನಪ್ರತಿನಿಧಿಗಳು ಆಗಮಿಸಿ ಭರವಸೆ ನೀಡುವುದು, ಒಂದಿಷ್ಟು ಬಂಡೆಕಲ್ಲುಗಳನ್ನು ತಂದು ಕಡಲಿಗೆ ಹಾಕುವುದು ಮಾಮೂಲು. ನಮ್ಮ ಈ ಭಾಗದ ಸಮಸ್ಯೆ ಜೀವಂತ ಎಂಬುದಾಗಿ ಸ್ಥಳೀಯರು ಅಸಮಾದಾನ ವ್ಯಕ್ತ ಪಡಿಸಿದ್ದಾರೆ. ಮಾಧ್ಯಮದೊಂದಿಗೆ

ಕಾಪು: ಕಡಲು ಕೊರೆತ ಪ್ರದೇಶಕ್ಕೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ: ಶೀಘ್ರ ಪರಿಹಾರದ ಭರವಸೆ

ಕಾಪು ಕ್ಷೇತ್ರದ ಮೂಳೂರು, ಪೊಲಿಪು, ಉದ್ಯಾವರದ ಕಡಲು ಕೊರೆತ ಪ್ರದೇಶಕ್ಕೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು, ಕಾಪು ಪುರಸಭಾ ಅಧಿಕಾರಿಗಳು ಹಾಗೂ ಕಾರ್ಯಕರ್ತರೊಂದಿಗೆ ತೆರಳಿ ಪರಿಶೀಲನೆ ನಡೆಸಿದರು.  ಪ್ರತಿ ಬಾರಿಯೂ ಮಳೆಗಾಲ ಆರಂಭವಾದಾಗ ಜನಪ್ರತಿನಿಧಿಗಳು ಆಗಮಿಸಿ ಭರವಸೆ ನೀಡುವುದು, ಒಂದಿಷ್ಟು ಬಂಡೆಕಲ್ಲುಗಳನ್ನು ತಂದು ಕಡಲಿಗೆ ಹಾಕುವುದು ಮಾಮೂಲು. ನಮ್ಮ ಈ ಭಾಗದ ಸಮಸ್ಯೆ ಜೀವಂತ ಎಂಬುದಾಗಿ ಸ್ಥಳೀಯರು ಅಸಮಾದಾನ ವ್ಯಕ್ತ ಪಡಿಸಿದ್ದಾರೆ. ಇದೇ ವೇಳೆ

ಉದ್ಯಾವರ ಮಹತೋಭಾರ ಶ್ರೀ ಸಿದ್ಧಿವಿನಾಯಕ ದೇವಸ್ಥಾನ : ಪರಿವಾರ ದೈವಗಳಿಗೆ ಸಿರಿ ಸಿಂಗಾರದ ನೇಮೋತ್ಸವ

ಉಡುಪಿ : ಉಡುಪಿ ಜಿಲ್ಲೆಯ ಉದ್ಯಾವರ ಮಹತೋಭಾರ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಪರಿವಾರ ದೈವಗಳಾದ ವಾರ್ತಾಳಿ ಪಾಶಾಣ ಕಲ್ಲುರ್ಟಿ ದೈವಗಳಿಗೆ ಬ್ರಹ್ಮಕಲಶೋತ್ಸವ, ರಾಶಿ ಪೂಜೆ ಮತ್ತು ಸಿರಿ ಸಿಂಗಾರದ ನೇಮೋತ್ಸವದ ಪ್ರಯುಕ್ತ ಬೆಳಿಗ್ಗೆ ನವಕ ಪ್ರಧಾನ ಕಲಶಾಭಿಷೇಕ ನಡೆದು ಸಾಮೂಹಿಕ ಪ್ರಾರ್ಥನೆಯೊಂದಿಗೆ ಭಂಡಾರ ಇಳಿದು ಮಧ್ಯಾಹ್ನ ಅನ್ನಸಂತರ್ಪಣೆ ಜರಗಿತು. ರಾತ್ರಿ ನೇಮೋತ್ಸವ ನಡೆಯಿತು. ಈ ಸಂದರ್ಭ ದೇಗುಲದ ವ್ಯವಸ್ಥಾಪನ ಸಮಿತಿ ಮತ್ತು ಸಮಿತಿ ಅಧ್ಯಕ್ಷ ಯು.ಎ. ಪ್ರಭಾಕರ

ಉಡುಪಿಯಲ್ಲಿ ಎಪಿಎಂಸಿ ಅಧಿಕಾರಿಗಳಿಂದ ಭ್ರಷ್ಟಚಾರ : ಎಪಿಎಂಸಿ ಆಡಳಿತಾಧಿಕಾರಿ ಕಚೇರಿ ಎದುರು ವರ್ತಕರ ಪ್ರತಿಭಟನೆ

ಉಡುಪಿ : ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಅಧಿಕಾರಿಗಳು ಭ್ರಷ್ಟಚಾರ ಮತ್ತು ಅನ್ಯಾಯ ಮಾಡುತ್ತಿದ್ದಾರೆಂದು ಆರೋಪಿಸಿ ಉಡುಪಿಯ ಎಪಿಎಂಸಿ ಆಡಳಿತಾಧಿಕಾರಿ ಕಚೇರಿ ಎದುರು ವರ್ತಕರು ಪ್ರತಿಭಟನೆ ನಡೆಸಿದ್ದಾರೆ. ಆಡಳಿತಾಧಿಕಾರಿ ಮಹದೇವ ಈಸಾರಿ ಅವರಿಗೆ ಮನವಿ ಸಲ್ಲಿಸಿದ್ದಾರೆ. “ಉಡುಪಿ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಸುಮಾರು 20-25 ವರ್ಷಗಳಿಂದ ಇಲ್ಲಿಯ ವರ್ತಕರು ವ್ಯಾಪಾರವನ್ನು ಮಾಡಿಕೊಂಡು ಬಂದಿದ್ದಾರೆ. ಆದರೆ ಇಲ್ಲಿಯ ಅಧಿಕಾರಿಗಳು ಇಲ್ಲಿನ

ಖ್ಯಾತ ಸ್ಯಾಕ್ಸೋಫೋನ್ ವಾದಕ ಉಡುಪಿಯ ಸುಂದರ ಸೇರಿಗಾರ್ ಇನ್ನಿಲ್ಲ

ಉಡುಪಿ : ಖ್ಯಾತ ಸ್ಯಾಕ್ಸೋಫೋನ್ ವಾದಕ ಮತ್ತು ಸ್ಯಾಕ್ಸೋಫೋನ್ ಗುರು ಉಡುಪಿ ಜಿಲ್ಲೆಯ ಅಲೆವೂರು ಮೂಲದ ಸುಂದರ ಸೇರಿಗಾರ್ ಬುಧವಾರ ಜೂನ್ 14 ರಂದು ಬೆಳಿಗ್ಗೆ ನಿಧನರಾಗಿದ್ದಾರೆ. ಸುಂದರ ಸೇರಿಗಾರ್ ಅವರು ಉಡುಪಿಯಲ್ಲಿ ವಿದ್ಯಾರ್ಥಿಗಳಿಗೆ ಪ್ರಥಮತವಾಗಿ ಸ್ಯಾಕ್ಸೋಫೋನ್ ವಾದನದ ಕಲಿಕೆಯನ್ನು ಆರಂಭಿಸಿದ್ದರು. ಉಡುಪಿ ಮಂಗಳೂರು ಭಾಗದಲ್ಲಿ ಸ್ಯಾಕ್ಸೋಫೋನ್ ಗುರುಗಳಾಗಿ ಸಾವಿರಾರು ವಿದ್ಯಾರ್ಥಿಗಳಿಗೆ ಸ್ಯಾಕ್ಸೋಫೋನ್ ಕಲಿಸಿಕೊಟ್ಟಿರುವ ಕೀರ್ತಿ ಅವರದ್ದು. ಸುಂದರ ಸೇರಿಗಾರ್

ಉಡುಪಿ ಜಿಲ್ಲಾ ಯುವ ಉತ್ಸವ 2023 : ಸಚಿವೆ ಶೋಭಾ ಕರಂದ್ಲಾಜೆ ಭಾಗಿ

ಉಡುಪಿ : ನೆಹರು ಯುವ ಕೇಂದ್ರ ಉಡುಪಿ ಇದರ ಆಶ್ರಯದಲ್ಲಿ ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಉಡುಪಿ ಜಿಲ್ಲೆಯ ಪೂರ್ಣಪ್ರಜ್ಞ ಕಾಲೇಜಿನ ಆಡಿಟೋರಿಯಂನಲ್ಲಿ ಜಿಲ್ಲಾ ಯುವ ಉತ್ಸವ ಕಾರ್ಯಕ್ರಮವನ್ನು ಜೂನ್ 14 ರಂದು ಜರುಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೇಂದ್ರ ಕೃಷಿ ಮತ್ತು ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಅವರು, ಯುವ ಜನತೆ ತಾವು ಬೆಳೆಯುವುದರ ಜೊತೆಗೆ ದೇಶದ ಬೆಳವಣಿಗೆಯ ಸಂಕಲ್ಪ ಮಾಡಬೇಕು. ಮೊದಲು ಭಾರತ ದೇಶವನ್ನು

ಚಂಡಮಾರುತದಿಂದ ಸಮುದ್ರ ಪ್ರಕ್ಷುಬ್ಧ : ಮಲ್ಪೆ ಬೀಚ್‌ನ ಉದ್ದಕ್ಕೂ ಸುರಕ್ಷತಾ ಬಲೆಗಳ ನಿರ್ಮಾಣ

ಉಡುಪಿ : ಚಂಡಮಾರುತದಿಂದ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಉಡುಪಿ ಜಿಲ್ಲೆಯ ಮಲ್ಪೆ ಬೀಚ್‌ನಲ್ಲಿ ಪ್ರವಾಸಿಗರು ನೀರಿಗೆ ಇಳಿಯದಂತೆ ಸುರಕ್ಷತಾ ಬೇಲಿಯನ್ನು ಅಳವಡಿಸಲಾಗಿದೆ. ಮುಂಗಾರು ಮಳೆ ಕಡಿಮೆಯಾಗಿದ್ದರೂ, ದೊಡ್ಡ ಅಲೆಗಳು ಸಮುದ್ರದ ತೀರಕ್ಕೆ ಅಪ್ಪಳಿಸುತ್ತಿದ್ದು ಸಮುದ್ರದ ಅಬ್ಬರ ಮುಂದುವರಿದಿದೆ. ಈ ಸಮಯದಲ್ಲಿ ನೀರಿಗೆ ಇಳಿಯುವುದು ಅಪಾಯಕಾರಿ. ಈ ನಿಟ್ಟಿನಲ್ಲಿ ಮಲ್ಪೆ ಅಭಿವೃದ್ಧಿ ಸಮಿತಿಯು ಪ್ರವಾಸಿಗರು ಸಮುದ್ರಕ್ಕೆ ಇಳಿಯದಂತೆ ಬೀಚ್‌ನ ಒಂದು ಕಿಲೋ ಮೀಟರ್

Bynduru : ಚಂದು ಪೂಜಾರ್ತಿ ಅವರ ಸುಸಜ್ಜಿತ ಮನೆಯ ಉದ್ಘಾಟನಾ ಕಾರ್ಯಕ್ರಮ

ಬೈಂದೂರಿನ ನಾಡ ಗ್ರಾ.ಪಂ. ವ್ಯಾಪ್ತಿಯ ತೆಂಕಬೈಲು ಗೋಳಿಹಕ್ಲು ಕಾಲೋನಿಯಲ್ಲಿ ಶಿಥಿಲಾವ್ಯಸ್ಥೆಯಲ್ಲಿರುವ ಗುಡಿಸಲಿನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಚಂದು ಪೂಜಾರ್ತಿ ಅವರಿಗೆ ಸಮಾನ ಮನಸ್ಕರ ಯುವಕರ ತಂಡ ಆಸರೆಯಾಗಿದೆ. ಸುಸಜ್ಜಿತವಾಗಿ ಮನೆಯನ್ನು ನಿರ್ಮಿಸಿಕೊಟ್ಟಿದ್ದು, ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಲಯನ್ಸ್ ಕ್ಲಬ್ ನಾವುಂದ, ಅಜ್ಜಿ ಮನೆ ಕನಸು ನನಸು ಮಾಡೋಣ ವಾಟ್ಸಾಪ್ ಗ್ರೂಪ್, ನಾಡ ಗ್ರಾ.ಪಂ ಹಾಗೂ ಪತ್ರಕರ್ತರ ಮಿತ್ರ ಸಹಕಾರದಿಂದ ಮಂಜುನಾಥ ನಿಲಯ