Home ಕರಾವಳಿ Archive by category ಉಡುಪಿ (Page 9)

ಕಾಪು ತಾಲೂಕು ದಸರಾ ಕ್ರೀಡಾಕೂಟ:ಹೆಜಮಾಡಿ ರಾಜೀವಗಾಂಧಿ ಕ್ರೀಡಾಂಗಣದಲ್ಲಿ ಚಾಲನೆ

ಪಡುಬಿದ್ರಿ :ಕಾಪು ತಾಲೂಕು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯೋಜನೆಯಲ್ಲಿ ಹೆಜಮಾಡಿ ರಾಜೀವಗಾಂಧಿ ಕ್ರೀಡಾಂಗಣದಲ್ಲಿ ನಡೆದ ಕಾಪು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ 2025 – 26 ಭಾನುವಾರದಂದು ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ಕಾಪು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ನವೀನ್ ಚಂದ್ರ ಎಸ್ ಸುವರ್ಣ ಉದ್ಘಾಟಿಸಿದರು. ಈ

ಶ್ರೀ ಓಂಕಾರೇಶ್ವರೀ ಮಂದಿರ ಹಾಗೂ ಮುಂಡಾಲ ಸಮಾಜ ಸೇವಾ ಟ್ರಸ್ಟ್ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ

ಹಳೆಯಂಗಡಿ:79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶ್ರೀ ಓಂಕಾರೇಶ್ವರೀ ಮಂದಿರ(ರಿ) ಹಾಗೂ ಮುಲ್ಕಿಹೋಬಳಿ 9 ಮಾಗಣೆಯ ಮುಂಡಾಲ ಸಮಾಜ ಸೇವಾ ಟ್ರಸ್ಟ್(ರಿ) ವತಿಯಿಂದ ಜಂಟಿಯಾಗಿ ನಡೆಸಲಾಯಿತು. ಅಧ್ಯಕ್ಷರಾದ ಶ್ರೀ ಟಿ .ಸದಾಶಿವ ಕುಂದರ್ ರವರು ಧ್ವಜಾರೋಹಣವನ್ನು ನೆರವೇರಿಸಿದರು. 9 ಮಾಗಣೆ ಮುಂಡಾಲ ಸಮಾಜದ ಸೇವಾ ಟ್ರಸ್ಟ್ ನ ಉಪಾಧ್ಯಕ್ಷರಾದ ಶ್ರೀ ಶಂಕರ ಮಾಸ್ಟರ್ ಗೋಳಿಜೋರ ಇವರು ಸ್ವಾತಂತ್ರ್ಯ ದಿನಾಚರಣೆಯ ಮಹತ್ವವನ್ನು ತಿಳಿಸಿ ನೂರಾರು ವರ್ಷಗಳಿಂದ ದೇಶದ

ಜನತಾ ಪಿಯು ಕಾಲೇಜು ಹೆಮ್ಮಾಡಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ-ಜನತಾ ವಿರಾಟ್

ಜನತಾ ಪಿಯು ಕಾಲೇಜು ಹೆಮ್ಮಾಡಿ ಹಾಗೂ ಜನತಾ ನ್ಯೂಸ್ಯ ಇಂಗ್ಲೀಷ್ ಮಿಡಿಯಂ ಸ್ಕೂಲ್ ಕಿರಿಮಂಜೇಶ್ವರ ಇವರ ಆಸರೆಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ-ಜನತಾ ವಿರಾಟ್ ಕಾರ್ಯಕ್ರಮ ಸಂಭ್ರಮ ನಡೆಯಿತು ನಂತರ ವಿದ್ಯಾರ್ಥಿಗಳಿಂದ ದೇಶ ಭಕ್ತಿ ಬಿಂಬಿಸುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.ದ್ವಜಾರೋಹಣ ಕಾರ್ಯಕ್ರಮದಲ್ಲಿ ಶ್ರೀ ವಿವಿವಿ ಮಂಡಳಿಯ ಅಧ್ಯಕ್ಷರು ಹಾಗೂ ಮಾಜಿ ಶಾಸಕರಾದ ಗೋಪಾಲ ಪೂಜಾರಿಯವರು ಧ್ವಜಾರೋಹಣಗೈದುಮಾತನಾಡಿ ದೇಶ ಭಕ್ತಿ, ದೇಶ ಪ್ರೇಮ ಬೆಳಿಸಿಕೊಂಡು

ರಾಮನಗರದ ಅಂಬೇಡ್ಕರ್ ಭವನದಲ್ಲಿ ಸಂಭ್ರಮದ ಸ್ವತಂತ್ರೋತ್ಸವ ಆಚರಣೆ

ಸ್ವತಂತ್ರೋತ್ಸವದ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ರಾಮನಗರ ಮತ್ತು ಫ್ರೆಂಡ್ಸ್ ರಾಮನಗರ ವತಿಯಿಂದ ರಾಮನಗರದ ಅಂಬೇಡ್ಕರ್ ಭವನದಲ್ಲಿ ಸಂಭ್ರಮದ ಸ್ವತಂತ್ರೋತ್ಸವ ಆಚರಿಸಲಾಯಿತು. ಗ್ರಾಮ ಪಂಚಾಯತಿ ನೌಕರನಾಗಿದ್ದು ಇತ್ತೀಚೆಗೆ ನಿವೃತ್ತಿ ಹೊಂದಿರುವ ಹಿರಿಯ ಸಾಮಾಜಿಕ ಹೋರಾಟಗಾರ ದಲಿತ ಹೋರಾಟಗಾರ ಮಾಧವ ಪಡುಕೋಣೆ ಅವರನ್ನು ಸಂಘಟನೆ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ತಾಲೂಕು ಸಂಘರ್ಷ ಸಮಿತಿಯ ಸಂಘಟನ ಸಂಚಾಲಕರಾಗಿರುವ ಸತೀಶ್ ಕೆ ರಾಮನಗರ

ಉಪ್ಪುಂದ ಶ್ರೀ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ; 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ

ಉಪ್ಪುಂದ ಶ್ರೀ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಬಹಳ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಶಾಲೆಯ ಪ್ರಧಾನ ಕಾರ್ಯದರ್ಶಿಯವರಾದ ಕುಮಾರಿ ಯಶಶ್ರೀ ಬಿ ಶೆಟ್ಟಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಸ್ವಾತಂತ್ರ್ಯವು ನಮ್ಮ ಹಿರಿಯರ ನಿಸ್ವಾರ್ಥ, ತ್ಯಾಗ, ಸಂಕಲ್ಪ ಮತ್ತು ಹೋರಾಟಗಳ ಫಲವಾಗಿದೆ. ಅವರು ಮಾಡಿದ ಹೋರಾಟದಿಂದ ಇಂದು ನಾವೆಲ್ಲರೂ ಸುಖವಾಗಿದ್ದೇವೆ. ಇದನ್ನು ನಾವು ಎಂದಿಗೂ ಮರೆಯದೆ, ಆ ಹಿರಿಯರಿಗೆ ಕೃತಜ್ಞರಾಗಿರಬೇಕು

ಕಾಪು: ಕೃಷಿ, ಕೈಗಾರಿಕೆ, ವಿಜ್ಞಾನ ಕ್ಷೇತ್ರದ ಪ್ರಗತಿಗೆ ಕಾಂಗ್ರೆಸ್ ಕೊಡುಗೆ ಅಪಾರ: ಮಾಜಿ ವಿನಯ ಕುಮಾರ್ ಸಚಿವ ಸೊರಕೆ

ಕಾಪು: 79 ನೇ ಸ್ವಾತಂತ್ರ್ಯದಿನಾಚರಣೆಯ ಸಂಭ್ರಮೋತ್ಸವವು ಕಾಪು ಬ್ಲಾಕ್ ಕಾಂಗ್ರೆಸ್ ಕಚೇರಿ, ರಾಜೀವ್ ಭವನದಲ್ಲಿ ನಡೆಯಿತು. ಧ್ವಜಾರೋಹಣವನ್ನು ಮಾಜಿ ಸಚಿವ ವಿನಯಕುಮಾರ್ ಸೊರಕೆ ಅವರು ನೆರವೇರಿಸಿದರು. ಭಾರತವು ಇಂದು 79 ನೇ ಸ್ವಾತಂತ್ರ್ಯದಿನಾಚರಣೆಯ ಸಂಭ್ರಮೋತ್ಸವವನ್ನು ದೇಶದೆಲ್ಲೆಡೆ ವಿಜೃಂಭಣೆಯಿಂದ ಆಚರಿಸುತ್ತಿದೆ. ಸ್ವಾತಂತ್ರ್ಯಕ್ಕಾಗಿ ವಿವಿಧ ಧರ್ಮ, ಜಾತಿಯ ಅನೇಕ ಮಹಾನ್ ನಾಯಕರು, ನಾಯಕಿಯರು ತಮ್ಮ ಪ್ರಾಣವನ್ನೇ ಮುಡಿಪಾಗಿಟ್ಟು ಹೋರಾಡಿ ಹುತಾತ್ಮರಾಗಿರುವುದು

ಹೆಜಮಾಡಿ: ಮಟ್ಟು ಗ್ರಾಮದ ಹೆಮ್ಮೆಯ ಯೋಧ ಚೇತನ್ ಶ್ರೀಯನ್ ರವರಿಗೆ ಕೋಟೆ ಮಟ್ಟು ಬಿಜೆಪಿ ವತಿಯಿಂದ ಸನ್ಮಾನ

ಹೆಜಮಾಡಿ: 79ನೇ ಸ್ವತಂತ್ರ ದಿನಾಚರಣೆಯ ಶುಭ ಸಂದರ್ಭದಲ್ಲಿ ಭಾರತೀಯ ಸೇನೆಯ ಆರ್ಟಿಲರಿ ವಿಭಾಗದಲ್ಲಿ 21 ವರ್ಷಗಳ ಕಾಲ ಸೇವೆ ಸಲ್ಲಿಸಿದ ನಮ್ಮ ಮಟ್ಟು ಗ್ರಾಮದ ಹೆಮ್ಮೆಯ ಯೋಧ ಚೇತನ್ ಶ್ರೀಯನ್ ರವರಿಗೆ ಕೋಟೆ ಮಟ್ಟು ಬಿಜೆಪಿ ವತಿಯಿಂದ ಮಂಡಲ ಪ್ರದಾನ ಕಾರ್ಯದರ್ಶಿ ಶ್ರೀ ಗೋಪಾಲ್ ಕೃಷ್ಣ ರಾವ್ ನೇತೃತ್ವದಲ್ಲಿ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ನಿವೃತ್ತ ಯೋಧ ಚೇತನ್ ಶ್ರೀಯನ್ ರವರ ಬಗ್ಗೆ ಕೋಟೆ ಪಂಚಾಯತ್ ಉಪಾಧ್ಯಕ್ಷರಾದ ಯೋಗೀಶ್ ಸುವರ್ಣ ರವರು

ಕಾಪು ಮಾರುಕಟ್ಟೆ ವತಿಯಿಂದ ನಡೆದ 79 ನೇ ಸ್ವಾತಂತ್ರ್ಯ ದಿನಾಚರಣೆ

ಕಾಪು ಮಾರುಕಟ್ಟೆ ವತಿಯಿಂದ ನಡೆದ 79 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಧ್ವಜಾರೋಹಣವನ್ನು ನೆರವೇರಿಸಿ ಸ್ವಾತಂತ್ರ್ಯೋತ್ಸವದ ಶುಭಾಶಯ ತಿಳಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ವಿನಯಕುಮಾರ್ ಸೊರಕೆ, ಕಾಪು ಪುರಸಭೆಯ ಸದಸ್ಯರು ಹಾಗೂ ಅಧಿಕಾರಿಗಳು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.

ಬೈಂದೂರು: ಪೊಲೀಸ್‌ ಇಲಾಖೆಯ ಮಹತ್ವಕಾಂಕ್ಷೆಯ ದೃಷ್ಟಿ ಯೋಜನೆ ಉದ್ಘಾಟನೆ

ಉಡುಪಿ ಜಿಲ್ಲಾ ಪೊಲೀಸ್‌ ಹಾಗೂ ಆರಕ್ಷಕ ಠಾಣೆ ಬೈಂದೂರು ಇದರ ವತಿಯಿಂದ ಪೊಲೀಸ್‌ ಇಲಾಖೆಯ ಮಹತ್ವಕಾಂಕ್ಷೆಯ ದೃಷ್ಟಿ ಯೋಜನೆ ಉದ್ಘಾಟನೆ ಬೈಂದೂರು ರೋಟರಿ ಭವನದಲ್ಲಿ ನಡೆಯಿತು. ಜಿಲ್ಲಾ ಪೊಲೀಸ್‌ ವರಿಷ್ಠ ಹರಿರಾಂ ಶಂಕರ್ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಉಡುಪಿ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯದಲ್ಲಿ ಯೇ ಪ್ರಥಮ ಬಾರಿಗೆ ದೃಷ್ಟಿ ಎಂಬ ವಿನೂತನ ಕ್ರಮ ಅಳವಡಿಸುತ್ತಿದ್ದೇವೆ. ದೃಷ್ಟಿ ಯೋಜನೆಯನ್ನು

ಕುಂದಾಪುರ : ಕಂದಾಯ ಅಧಿಕಾರಿಗಳ ನೇತೃತ್ವದಲ್ಲಿತ್ರಾಸಿ-ಮರವಂತೆ ಗ್ರಾಮದ ಗಡಿ ಗುರುತು

ಕುಂದಾಪುರ ತಾಲೂಕಿನ ತ್ರಾಸಿ ಹಾಗೂ ಬೈಂದೂರು ತಾಲೂಕಿನ ಮರವಂತೆ ಈ ಎರಡು ಸ್ಥಳಗಳ ಮಧ್ಯಭಾಗದ ಗಡಿ ಗುರುತು ಮಾಡುವ ಕಾರ್ಯ ರಾಷ್ಟ್ರೀಯ ಹೆದ್ದಾರಿಯ 66 ಬಳಿ ನಡೆದಿದೆ.ತ್ರಾಸಿ ಮತ್ತು ಮರವಂತೆ ಮಧ್ಯ ಭಾಗದ ನಡುವೆ ತ್ರಾಸಿ ಗ್ರಾಮದ ಗಡಿ ಗುರುತು ಮಾಡಿಕೊಡುವಂತೆ ತ್ರಾಸಿ ಗ್ರಾಮ ಪಂಚಾಯತ್ ಮನವಿ ಮೇರೆಗೆ ಕುಂದಾಪುರ ತಹಶೀಲ್ದಾರ್ ಅವರು ರಾಷ್ಟ್ರೀಯ ಯ ಹೆದ್ದಾರಿ 66ರ ಬಳಿ ತ್ರಾಸಿ ಗ್ರಾಮದ ಗಡಿ ಹಾಗೂ ಅದೇ ಹೆದ್ದಾರಿಯ ಮರವಂತೆ ಈ ಎರಡು ಸ್ಥಳಗಳು ಸಂಧಿಸುವ ಗಡಿ […]