Home ಕರಾವಳಿ Archive by category ಉಳ್ಳಾಳ (Page 16)

ಮಂಗಳೂರು ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಪ್ರೊ. ಉದಯ ಬಾರ್ಕೂರು ನಿಧನ

ಉಳ್ಳಾಲ: ಮಂಗಳೂರು ವಿವಿ ಇತಿಹಾಸ ವಿಭಾಗದ ಹಿರಿಯ ಪ್ರಾಧ್ಯಾಪಕ ಪ್ರೊ.ಉದಯ ಬಾರ್ಕೂರು(59) ಅವರು ಶುಕ್ರವಾರ ಸಂಜೆ‌ ನಿಧನರಾದರು.ಮೃತರಿಗೆ ಪತ್ನಿ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. ಮಂಗಳೂರು ವಿಶ್ವವಿದ್ಯಾಲಯದಲ್ಲಿ ಕಳೆದ 34 ವರ್ಷಗಳಿಂದ(1989)ರಿಂದ ಇತಿಹಾಸ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿರುವ ಅವರು ವಿಭಾಗದ ಅಧ್ಯಕ್ಷರಾಗಿ, ವಿವಿಯ ಸಿಂಡಿಕೇಟ್ ಸದಸ್ಯರಾಗಿ,

ತಲಪಾಡಿ ಗ್ರಾ.ಪಂ ಬಿಜೆಪಿ ಸದಸ್ಯರ ಬೆಂಬಲ, ಎಸ್‌ಡಿಪಿಐ ಸದಸ್ಯರಿಗೆ ಅಧ್ಯಕ್ಷ ಸ್ಥಾನ

ಉಳ್ಳಾಲ: ತಲಪಾಡಿ ಗ್ರಾ.ಪಂ ಎರಡನೇ ಅವಧಿಗೆ ಎಸ್‌ ಡಿಪಿಐ ಬೆಂಬಲಿತ ಅಧ್ಯಕ್ಷ ಟಿ.ಇಸ್ಮಾಯಿಲ್‌ ಅಧ್ಯಕ್ಷರಾಗಿ ಆಯ್ಕೆಯಾದರೆ, ಉಪಾಧ್ಯಕ್ಷೆಯಾಗಿ ಬಿಜೆಪಿ ಬೆಂಬಲಿತ ಪುಷ್ಪಾವತಿ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿ ಬೆಂಬಲಿತರು ಎಸ್‌ ಡಿಪಿಐ ಬೆಂಬಲಿತರಿಗೆ ಬೆಂಬಲಿಸಿದ ಹಿನ್ನೆಲೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ನಿರೀಕ್ಷಿತ ಅಭ್ಯರ್ಥಿಯಾಗಿದ್ದ ಸತ್ಯರಾಜ್‌ ಪರಾಭವಗೊಂಡಿದ್ದಾರೆ. ಗ್ರಾಮದ ಆಡಳಿತದಲ್ಲಿ ಒಟ್ಟು 24 ವಾರ್ಡುಗಳ ಸದಸ್ಯರ ಪೈಕಿ 13 ಬಿಜೆಪಿ

Ullala – ಯುವಕ ಮಂಡಲ ಇರಾ ; ವನಮಹೋತ್ಸವ ಹಾಗು ಆಟಿದಕೂಟ ಕಾರ್ಯಕ್ರಮ

ಯುವಕ ಮಂಡಲ ಇರಾ ಇದರ ಸುವರ್ಣ ಮಹೋತ್ಸವದ ಅಂಗವಾಗಿ ವನಮಹೋತ್ಸವ ಹಾಗು ಆಟಿದಕೂಟ ಇರಾ ಬಂಟರ ಭವನದಲ್ಲಿ ನಡೆಯಿತು. ವನಮಹೋತ್ಸವ ಕಾರ್ಯಕ್ರಮದಲ್ಲಿ ಪರಿಸರ ಪ್ರೇಮಿ ಮಾಧವ ಉಳ್ಳಾಲ ಅವರ ಮಾರ್ಗದರ್ಶನದಲ್ಲಿ ಸುವರ್ಣ ಮಹೋತ್ಸವ ಸಮಿತಿಯ ಅಧ್ಯಕ್ಷರಾದ ಜಯರಾಮ್ ಪೂಜಾರಿ ಹಾಗು ಗಣೇಶ್ ಕೊಟ್ಟಾರಿ ಗಿಡ ನಡುವ ಮೂಲಕ ಉದ್ಘಾಟಿಸಿದರು. ನಂತರ ಆಟಿದಕೂಟ ಕಾರ್ಯಕ್ರಮ ಉದ್ಘಾಟಿಸಿದ ಸೈಂಟ್ ಆಗ್ನೆಸ್ ಕಾಲೀಜಿನ ಪ್ರಾಧ್ಯಾಪಕರೂ, ಪ್ರಖರ ವಾಗ್ಮಿಯೂ ಆದ ಡಾ | ಅರುಣ್ ಉಳ್ಳಾಲ್ ತುಳು

ಉಳ್ಳಾಲ ; ನಿಷೇಧಿತ ಎಂಡಿಎಂಎ ಮಾರಾಟ – ರಿಕ್ಷಾ ಚಾಲಕ ಸೆರೆ

ಉಳ್ಳಾಲ : ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಪಲದ ಭಗಂಬಿಲ ಸ್ಮಶಾನದ ಮೈದಾನದಲ್ಲಿ ಸಾರ್ವಜನಿಕವಾಗಿ ಎಂಡಿಎಂಎ ಮಾದಕ ವಸ್ತುವನ್ನು ಮಾರಾಟ ಮಾಡುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಶಾಂತಿಬಾಗ್ ನಿವಾಸಿ ಮಹಮ್ಮದ್ ಶರೀಫ್ ಯಾನೆ ಫೈಝಲ್ ನನ್ನು ಬಂಧಿಸಲಾಗಿದೆ. ಬಂಧಿತನಿಂದ 12 ಗ್ರಾಂ ಎಂಡಿಎಂಎ ಮಾದಕ ವಸ್ತು ಹಾಗೂ ಎರಡು ಮೊಬೈಲ್ ಫೋನ್ ಸಮೇತ ಮಾದಕ ವಸ್ತುವನ್ನು ಮಾರಾಟ ಮಾಡಲು ಉಪಯೋಗಿಸಿದ ಆಟೋರಿಕ್ಷವನ್ನು ವಶಕ್ಕೆ ಪಡೆದು ವಶಕ್ಕೆ ಪಡೆದು ಕಾನೂನು ಕ್ರಮ

ತೊಕ್ಕೊಟ್ಟಿನಲ್ಲಿ ಸರಣಿ ಕಳವು ಪ್ರಕರಣ

ತೊಕ್ಕೊಟ್ಟು ಒಳಪೇಟೆಯಲ್ಲಿರುವ ಮೂರು ಅಂಗಡಿಗೆ ನುಗ್ಗಿದ ಕಳ್ಳನೋರ್ವ ನಗದು ಹಾಗೂ ಸಾಮಗ್ರಿಗಳನ್ನು ಕಳವುಗೈದಿರುವ ಘಟನೆ ನಡೆದಿದ್ದು, ಕಳ್ಳತನದ ಕೃತ್ಯ ಸಿಸಿಟಿವಿಯಲ್ಲಿ ಪತ್ತೆಯಾಗಿದೆ. ತೊಕ್ಕೊಟ್ಟು ಒಳಪೇಟೆಯಲ್ಲಿರುವ ಹರಿಶ್ಚಂದ್ರ ಶೆಟ್ಟಿ ಎಂಬವರಿಗೆ ಸೇರಿದ ಲಕ್ಷ್ಮೀ ಕ್ಯಾಂಟೀನ್ , ಹ್ಯಾರೀಸ್ ಎಂಬವರಿಗೆ ಸೇರಿದ ಸಿಲ್ವರ್ ಸ್ಟಾರ್ ಎಂಟರ್‍ಪ್ರೈಸ್ ಸ್ಟೀಲ್ ಸಾಮಗ್ರಿಗಳ ಮಾರಾಟ ಮಳಿಗೆ ಹಾಗೂ ಮೋಹನ್ ಎಂಬವರಿಗೆ ಸೇರಿದ ಎಸ್ ಎಸ್ ಕಮ್ಯುನಿಕೇಷನ್ಸ್ ಮೊಬೈಲ್

ಉಳ್ಳಾಲ: ನಿವೃತ್ತ ಯೋಧನಿಂದ ಮಹಿಳಾ ಪೇದೆಗೆ ಕಿರುಕುಳ

ಉಳ್ಳಾಲ: ಮಹಿಳಾ ಪೊಲೀಸ್ ಪೇದೆಗೆ ನಿವೃತ್ತ ಯೋಧನೋರ್ವ ಲೈಂಗಿಕ ಕಿರುಕುಳ ನೀಡಿರುವ ಘಟನೆ ಕುಂಪಲದ ಬಗಂಬಿಲ ಎಂಬಲ್ಲಿ ನಡೆದಿದೆ. ಕೊಲ್ಯ ಕನೀರುತೋಟ ನಿವಾಸಿ, ಸದ್ಯ ಕುಂಪಲ ಅಮೃತನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುವ ಪ್ರಶಾಂತ್ (45) ಕಿರುಕುಳ ನೀಡಿದಾತ. ಠಾಣೆಯೊಂದರ ಮಹಿಳಾ ಪೇದೆ ಸ್ಕೂಟರಿನಲ್ಲಿ ಕರ್ತವ್ಯಕ್ಕೆ ತೆರಳುತ್ತಿದ್ದ ಸಂದರ್ಭ ಅಡ್ಡಗಟ್ಟಿದ ನಿವೃತ್ತ ಯೋಧ ಪ್ರಶಾಂತ್, ಆಕೆ ಮೈಮೇಲೆ ಕೈ ಹಾಕಿ ಲೈಂಗಿಕ ಕಿರುಕುಳ ನೀಡಿದ್ದಾನೆ. ತಕ್ಷಣ ಬೊಬ್ಬಿಟ್ಟಾಗ

ನರಿಂಗಾನ ಗ್ರಾ.ಪಂ.ನ ದ್ವಿತೀಯ ಹಂತದ ಗ್ರಾಮಸಭೆ

ನರಿಂಗಾನ ಗ್ರಾಮದಲ್ಲಿ ರೈತರು ಹಿಂದಿನಿಂದಲೂ ಹೈನುಗಾರಿಕೆ ಬಗ್ಗೆ ಒಲವು ಹೊಂದಿದ್ದು ಅತಿ ಹೆಚ್ಚು ದನಗಳನ್ನು ಸಾಕುತ್ತಿದ್ದಾರೆ. ಆದರೆ ಗೋವುಗಳಿಗೆ ಆರೋಗ್ಯದಲ್ಲಿ ಏರುಪೇರಾದಾಗ ಸ್ವತಃ ದನದ ಮಾಲೀಕರೇ ಪಶು ವೈದ್ಯರ ಬಳಿಗೆ ಹೋದರೂ ಚಿಕಿತ್ಸೆಗೆ ಬರುತ್ತಿಲ್ಲ. ವೈದ್ಯರು ಈ ರೀತಿ ವರ್ತಿಸಿದರೆ ಹೈನುಗಾರಿಕೆ ಹೇಗೆ ಅಭಿವೃದ್ಧಿ ಸಾಧ್ಯ ಎಂದು ನರಿಂಗಾನ ಗ್ರಾಮಸ್ಥರೊಬ್ಬರು ನರಿಂಗಾನಗ್ರಾಮ ಪಂಚಾಯ್ ಸಭಾಭವನದಲ್ಲಿ ನಡೆದ ದ್ವಿತೀಹ ಹಂತದ ಗ್ರಾಮಸಭೆಯಲ್ಲಿ ವೈದ್ಯರನ್ನು

ತಲಪಾಡಿ, ಅಪ್ರಾಪ್ತೆಗೆ ಕಿರುಕುಳ : ಪೋಕ್ಸೊ ಕಾಯಿದೆಯಡಿ ಆರೋಪಿ ಬಂಧನ

ಉಳ್ಳಾಲ: ಅಪ್ರಾಪ್ತೆ ಮೇಲೆ ಕಿರುಕುಳ ನೀಡಿರುವ ಘಟನೆ ತಲಪಾಡಿ ರಿಕ್ಷಾ ಸ್ಟ್ಯಾಂಡ್ ಬಳಿ ಇಂದು ಸಂಜೆ ವೇಳೆ ನಡೆದಿದ್ದು, ಆರೋಪಿ ಮುಡಿಪು ದರ್ಖಾಸು ಸೈಟ್ ನಿವಾಸಿ ಮುವಾದ್ (35) ಎಂಬಾತನನ್ನು ಉಳ್ಳಾಲ ಪೊಲೀಸರು ಬಂಧಿಸಿ ಪೋಕ್ಸೊ ಕಾಯಿದೆಯಡಿ ಪ್ರಕರಣ ದಾಖಲಿಸಿದ್ದಾರೆ.ಆರೋಪಿ ಮುವಾದ್ ವಿರುದ್ಧ ಕೊಣಾಜೆ ಠಾಣೆಯಲ್ಲಿ ಗಾಂಜಾ ಸಹಿತ ಇತರೆ ಎರಡು ಪ್ರಕರಣಗಳಿದ್ದು, ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿದೆ. ಇಂದು ಸಂಜೆ ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿ ಶಾಲೆಯಿಂದ

ಉಳ್ಳಾಲ : ನೇತ್ರಾವತಿ ನದಿತಟದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಉಳ್ಳಾಲ: ನೇತ್ರಾವತಿ ನದಿತಟದಲ್ಲಿ ಪತ್ತೆಯಾದ ಅಪರಿಚಿತ ವ್ಯಕ್ತಿಯ ಗುರುತು ಪತ್ತೆಯಾಗಿದ್ದು, ಹಾಸನ ಬೇಳೂರು ನಿವಾಸಿ ಮೊಹಮ್ಮದ್ ಝಾಕಿರ್ (50) ಎಂದು ಉಳ್ಳಾಲ ಠಾಣೆಗೆ ಆಗಮಿಸಿದ ಮನೆಮಂದಿ ತಿಳಿಸಿದ್ದಾರೆ. ಕೆಲ ತಿಂಗಳುಗಳಿಂದ ಅಸೌಖ್ಯಕ್ಕೀಡಾಗಿದ್ದ ಝಾಕೀರ್ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಬರುತ್ತಿದ್ದರು. ಎರಡು ದಿನಗಳ ಹಿಂದೆಯೂ ಊರುಬಿಟ್ಟು ಔಷಧಿಗೆಂದು ಬಂದಿದ್ದವರು ಬಳಿಕ ನಾಪತ್ತೆಯಾಗಿದ್ದರು. ಈ ಬಗ್ಗೆ ಮನೆಮಂದಿ ಎಲ್ಲೆಡೆ ಎರಡು ದಿನಗಳ ಕಾಲ

ಉಳ್ಳಾಲ: ಪೋಕ್ಸೊ ಕಾಯಿದೆಯಡಿ ದಾಖಲಾದ ಪ್ರಕರಣದ ಆರೋಪಿ ಪರಾರಿ

ಉಳ್ಳಾಲ: ಅಪ್ರಾಪ್ತ ವಿದ್ಯಾರ್ಥಿನಿ ವಿರುದ್ಧ ಕಿರುಕುಳ ನೀಡಿದ ರಿಕ್ಷಾ ಚಾಲಕನ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯಿದೆಯಡಿ ಪ್ರಕರಣ ದಾಖಲಾಗಿದೆ.ಅಂಬ್ಲಮೊಗರು ನಿವಾಸಿ ಇಕ್ಬಾಲ್ ಎಂಬಾತ ನ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿ ತಲೆಮರೆಸಿಕೊಂಡಿದ್ದಾನೆ. ಬಸ್ಸಿಗಾಗಿ ಕಾಯುವ ಸಂದರ್ಭ ಮಾತನಾಡಿಸಲು ಯತ್ನಿಸಿದ್ದ ರಿಕ್ಷಾ ಚಾಲಕ ವಿದ್ಯಾರ್ಥಿನಿ ಜೊತೆಗೆ ಅಸಭ್ಯವಾಗಿ ವರ್ತಿಸಿದ್ದನು. ಜೂನ್ ತಿಂಗಳಲ್ಲಿ ನಡೆದ ಘಟನೆ ಕುರಿತು ಅಪ್ರಾಪ್ತೆ ಹೆತ್ತವರಲ್ಲಿ