Home ಕರಾವಳಿ Archive by category ಉಳ್ಳಾಳ (Page 17)

ಉಳ್ಳಾಲ: ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಲಾರಿ

ಉಳ್ಳಾಲ: ಓವರ್ ಲೋಡ್ ಇದ್ದ ಲಾರಿ ತಿರುವೊಂದರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಘಟನೆ ನಾಟೆಕಲ್ – ಮಂಜನಾಡಿ ಮಾರ್ಗ ಮಧ್ಯೆ ಸಂಭವಿಸಿದ್ದು, ಘಟನೆಯಲ್ಲಿ ಚಾಲಕ ಅಲ್ಪಸ್ವಲ್ಪ ಗಾಯದಿಂದ ಪಾರಾಗಿದ್ದು, ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ದೇರಳಕಟ್ಟೆ ಕಡೆಯಿಂದ ತೌಡುಗೋಳಿ ಕಡೆಗೆ ಪ್ಲೈವುಡ್ ಇದ್ದ ಲಾರಿ ತೆರಳುತ್ತಿದ್ದು, ಈ ನಡುವೆ

ಮುಡಿಪು : ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ

ಉಳ್ಳಾಲ: ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿರುವ ಘಟನೆ ಮುಡಿಪು ಜಂಕ್ಷನ್ನಿನಲ್ಲಿ ಸಂಭವಿಸಿದೆ. ಘಟನೆಯಲ್ಲಿ ಕಾರು ಚಾಲಕ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಮಂಗಳೂರಿನಿಂದ ಬಿ.ಸಿ ರೋಡಿನತ್ತ ತೆರಳುತ್ತಿದ್ದ ಎನ್.ಎಸ್ ಟ್ರಾವೆಲ್ಸ್ ಬಸ್ಸು ಮುಡಿಪು ಜಂಕ್ಷನ್ನಿನಲ್ಲಿ ತಿರುಗುವ ಸಂದರ್ಭ , ಭಾರತಿ ಶಾಲೆ ಕಡೆಯಿಂದ ಬರುತ್ತಿದ್ದ ಝೆನ್ ಕಾರಿಗೆ ಮುಖಾಮುಖಿ ಢಿಕ್ಕಿ ಹೊಡೆದಿದೆ. ಬಸ್ಸು ಮುಂಭಾಗಕ್ಕೆ ಕಾರು ಒಳನುಗ್ಗಿದ್ದು, ಕಾರು ಚಾಲಕ ಪವಾಡಸದೃಶ

ಉಳ್ಳಾಲ : ಸಿಟಿ ಬಸ್ ಚಾಲಕನ ಬೇಜವಾಬ್ದಾರಿ ವರ್ತನೆ ವಿರುದ್ಧ ಆಕ್ರೋಶ

ಉಳ್ಳಾಲ : ಸ್ಟೇಟ್ ಬ್ಯಾಂಕ್ ತಲಪಾಡಿ ನಡುವೆ ಚಲಿಸುವ ಸಿಟಿ ಬಸ್ ಚಾಲಕ ಚಾಲನೆ ವೇಳೆ ಮೊಬೈಲ್ ಉಪಯೋಗಿಸುತ್ತಿರುವುದನ್ನು ಪ್ರಯಾಣಿಕರೊಬ್ಬರು ಸೆರೆಹಿಡಿದಿರುವುದು, ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವೀಡಿಯೋ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕ ವಲಯದಿಂದ ಚಾಲಕನ ವಿರುದ್ಧ ಕ್ರಮಕ್ಕಾಗಿ ಆಗ್ರಹ ವ್ಯಕ್ತವಾಗಿದೆ. ಖಾಸಗಿ ಬಸ್ ಚಾಲಕ ನಿರ್ಲಕ್ಷ್ಯರೀತಿಯಲ್ಲಿ ಬಸ್ ಚಲಾಯಿಸಿದ್ದಾನೆ. ನೇತ್ರಾವತಿ ಸೇತುವೆಯಿಂದ ಮೊಬೈಲ್ ನೋಡಲು ಆರಂಭಿಸಿದ ಚಾಲಕ

ಕೊಣಾಜೆ ಗ್ರಾ.ಪಂ ಮಾಜಿ ಅಧ್ಯಕ್ಷ ದೇವಪ್ಪ ಗಟ್ಟಿ ನಿಧನ

ಉಳ್ಳಾಲ: ಕೊಣಾಜೆ ಗ್ರಾಮ ಪಂಚಾಯತ್‍ನ ಮಾಜಿ ಅಧ್ಯಕ್ಷ ಬೆಳ್ಮ ಕಟ್ಟಪುಣಿ ನಿವಾಸಿ ದೇವಪ್ಪ ಗಟ್ಟಿ (90) ಅಲ್ಪಕಾಲದ ಅಸೌಖ್ಯದಿಂದ ಜು.22ರಂದು ಶನಿವಾರ ನಿಧನ ಹೊಂದಿದರು. ಮೃತರು ಪತ್ನಿ, ಇಬ್ಬರು ಪುತ್ರಿಯರು, ಮೂವರು ಪುತ್ರರನ್ನು ಅಗಲಿದ್ದಾರೆ. ಸೋಮೇಶ್ವರ ಸೋಮನಾಥ ದೇವಸ್ಥಾನದ ಬೃಹ್ಮಕಲಶೋತ್ಸವ, ಸಮಿತಿ ಉಪಾಧ್ಯಕ್ಷರಾಗಿ, ಗಟ್ಟಿ ಸಮಾಜ ಶ್ರೀ ಸೋಮನಾಥ ಸೇವಾ ಸಮಿತಿ ಅಧ್ಯಕ್ಷರಾಗಿ, ಮುಲಾರ ಶ್ರೀ ಗೋಪಾಲಕೃಷ್ಣ ಭಜನಾ ಮಂದಿರದ ಅಧ್ಯಕ್ಷರಾಗಿ, ಗೌರವಾಧ್ಯಕ್ಷರಾಗಿ,

ಉಳ್ಳಾಲ : ಮಟ್ಕಾ ಅಡ್ಡೆಗೆ ದಾಳಿ: ಐವರ ಬಂಧನ 

ಉಳ್ಳಾಲ ಠಾಣಾ ವ್ಯಾಪ್ತಿಯ ತೊಕ್ಕೊಟ್ಟು ಓಳಪೇಟೆ ಬಳಿ ಖಾಸಗಿ ಜಾಗದಲ್ಲಿ ಮಟ್ಕಾ ಅಡ್ಡೆಗೆ ದಾಳಿ ನಡೆಸಿದ ಉಳ್ಳಾಲ ಠಾಣಾ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಬಂಧಿತರನ್ನು ಲ್ಯಾನ್ಸಿ ವೇಗಸ್, ನವಾಝ್ , ಸತೀಶ್ ಗಟ್ಟಿ, ನಾಸೀರ್ ಮತ್ತು ಮಧು ಯಾನೆ ಮನು ಎಂದು ಗುರುತಿಸಲಾಗಿದೆ. ಬಂಧಿತರಿಂದ 7040ರೂ .ನಗದು, ಐದು ಮೊಬೈಲ್ ಹಾಗೂ ಜೂಜಾಟಕ್ಕೆ ಬಳಸಿದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಉಳ್ಳಾಲದಲ್ಲಿ ಮಟ್ಕಾ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸ್ ಆಯುಕ್ತ

ಮುನ್ನೂರು ಗ್ರಾ.ಪಂ ಸದಸ್ಯ ಭುಜಂಗ ರೈ ನಿಧನ

ಉಳ್ಳಾಲ: ಸಿಪಿಎಂ ನೇತಾರ, ಮುನ್ನೂರು ಗ್ರಾ.ಪಂ. ಸದಸ್ಯ ಕುತ್ತಾರು ಮದಕ ನಿವಾಸಿ ಭುಜಂಗ ರೈ (74) ಇವರು ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಮೂಲತ: ಕಾಸರಗೋಡು ನಿವಾಸಿಯಾಗಿರುವ ಇವರು ಕುತ್ತಾರು ಮದಕಕ್ಕೆ 30 ವರ್ಷಗಳ ಹಿಂದೆ ಬಂದಿದ್ದರು. ರಿಕ್ಷಾ ಚಾಲಕರಾಗಿ ವೃತ್ತಿ ನಿರ್ವಹಿಸುತ್ತಿದ್ದವರು. ಸಿಪಿಎಂ ಪಕ್ಷದ ಚಟುವಟಿಕೆಗಳು ಹಾಗೂ ಸಾಮಾಜಿಕ ಸೇವೆಯಲ್ಲಿ ಮುಂಚೂಣಿಯಲ್ಲಿದ್ದರು. ಯಕ್ಷಗಾನ ಕಲಾವಿದರೂ ಆಗಿದ್ದ ಇವರು ಆಂಗ್ಲ ಭಾಷೆಯಲ್ಲಿ

ಕುಂಪಲ : ನವ ವಧು ವರರ ರಂಗ ರುಕ್ಮಿಣಿ ಸಮಾಗಮ ಕಾರ್ಯಕ್ರಮ

ಕುಂಪಲ ಶ್ರೀ ಬಾಲಕೃಷ್ಣ ಮಂದಿರದ ವತಿಯಿಂದ ನವ ವಧು ವರರ ರಂಗ ರುಕ್ಮಿಣಿ ಸಮಾಗಮ ಕಾರ್ಯಕ್ರಮ ನಡೆಯಿತು. ಉದ್ಯಮಿ ಕಂಪಾರ್ಟ್ ಇನ್ ಮಾಲಕ ಚಂದ್ರಹಾಸ ಶೆಟ್ಟಿ ಕಾರ್ಯಕ್ರಮಕ್ಕೆ ದೀಪಬೆಳಗಿಸಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಜೀವನವನ್ನು ರೂಪಿಸಲು ನಮಗೆ ಸಂಸ್ಕಾರ ಬಹಳ ಮುಖ್ಯ, ಇದನ್ನು ಅರಿತಾಗ ಮಾತ್ರ ನಮ್ಮ ಜೀವನ ಸುಂದರವಾಗುತ್ತದೆ, ಈ ನಿಟ್ಟಿನಲ್ಲಿ ರಂಗ ರುಕ್ಮಿಣಿ ಕಾರ್ಯಕ್ರಮ ಶ್ಲಾಘನೀಯ. ಹೊಸ ಬಾಳಿನಲ್ಲಿ ಸದಾ ಕಾಲ ನಗುವಿನೊಂದಿಗೆ ಬದುಕಿ ಎಂದು ಹಾರೈಸಿದರು.

ಉಳ್ಳಾಲ : ಪುಣ್ಯಕೋಟಿ ನಗರದಲ್ಲಿ ಬಾರ್ ಓಪನ್‍ಗೆ ಆಕ್ರೋಶ – ಶಾಲಾ ವಿದ್ಯಾರ್ಥಿಗಳಿಂದ ಗ್ರಾ.ಪಂ.ಗೆ ಮುತ್ತಿಗೆ

ಉಳ್ಳಾಲದ ಕೈರಂಗಳ ಪುಣ್ಯಕೋಟಿನಗರದಲ್ಲಿ ನೂತನವಾಗಿ ಆರಂಭವಾದ ಬಾರ್ ಎಂಡ್ ರೆಸ್ಟೋರೆಂಟ್ ತೆರವು ಆಗುವವರೆಗೂ ಪ್ರಜಾಪ್ರಭುತ್ವ ರೀತಿಯಲ್ಲಿ ಅಮರಣಾಂತ ಸತ್ಯಾಗ್ರಹದಂತಹ ಹೋರಾಟ ನಡೆಸಲು ಶಾಲಾಡಳಿತ ಮಂಡಳಿ ಸಿದ್ಧವಿದೆ ಎಂದು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ರಾಜಾರಾಮ ಭಟ್ ಹೇಳಿದ್ದಾರೆ. ಬಾಳೆಪುಣಿ ಗ್ರಾ.ಪಂ ವ್ಯಾಪ್ತಿಯ ಪುಣ್ಯಕೋಟಿನಗರ ಸಮೀಪದಲ್ಲಿ ನೂತನವಾಗಿ ಆರಂಭವಾದ ಬಾರ್ ಎಂಡ್ ರೆಸ್ಟೋರೆಂಟ್ ವಿರೋಧಿಸಿ ಪುಣ್ಯಕೋಟಿ ನಗರ ಶಾರದಾ ವಿದ್ಯಾಗಣಪತಿ ವಿದ್ಯಾಕೇಂದ್ರದ

ಉಳ್ಳಾಲ : ಸಿಡಿಲು ಬಡಿದು ಅಂಗಡಿ ಭಸ್ಮ

ಉಳ್ಳಾಲ: ಭಾರೀ ಸಿಡಿಲು ಮಳೆಗೆ ಅಂಗಡಿ ಸಂಪೂರ್ಣವಾಗಿ ಸುಟ್ಟುಹೋಗಿ ಲಕ್ಷಾಂತರ ನಷ್ಟ ಸಂಭವಿಸಿರುವ ಘಟನರ ರಾಣಿಪುರದಲ್ಲಿ ಸಂಭವಿಸಿದೆ.ಕಟ್ಟಡದಲ್ಲೇ ಇದ್ದ ಮನೆಗೂ ಬೆಂಕಿ ವ್ಯಾಪಿಸಿದ್ದು ಸ್ಥಳಕ್ಕೆ ತಕ್ಷಣ ಬಂದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಮುನ್ನೂರು ಗ್ರಾಮದ ರಾಣಿಪುರ ಚರ್ಚ್ ಎದುರಿನ ಪೀಟರ್ ಆಫ್ರೋಸ್ ಎಂಬವರ ದಿನಸಿ ಅಂಗಡಿಗೆ ಸಿಡಿಲು ಬಡಿದು ಭಸ್ಮವಾಗಿದೆ. ಇಂದು ಮುಂಜಾನೆ ನಸುಕಿನ ವೇಳೆ ಸಿಡಿಲು ಬಡಿದು ಘಟನೆ ಸಂಭವಿಸಿದೆ. ಘಟನೆ ವೇಳೆ ಪೀಟರ್

ಉಳ್ಳಾಲ ಕ್ಷೇತ್ರದ ಮಳೆ ಹಾನಿ ಪ್ರದೇಶಗಳಿಗೆ ಸ್ಪೀಕರ್ ಖಾದರ್ ಭೇಟಿ, ಪರಿಶೀಲನೆ

ಕರ್ನಾಟಕ ವಿಧಾನಸಭೆ ಅಧಿವೇಶನದ ವಾರಾಂತ್ಯದ ಬಿಡುವಿನ ದಿನ ತಮ್ಮ ಕ್ಷೇತ್ರಕ್ಕೆ ಭೇಟಿ ನೀಡಿದ ಯು.ಟಿ. ಖಾದರ್ ಅವರು ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ಕರ್ನಾಟಕ ಹದಿನಾರನೇಯ ವಿಧಾನಸಭೆಯ ಅಧಿವೇಶನವು ಜುಲೈ ಮೂರರಂದು ಪ್ರಾರಂಭವಾಗಿದ್ದು, ಯು.ಟಿ ಖಾದರ್ ಸಭಾಧ್ಯಕ್ಷರಾದ ಬಳಿಕ ಪೂರ್ಣ ಪ್ರಮಾಣದ ಮೊದಲ ಅಧಿವೇಶನ ನಡೆಯುತ್ತಾ ಇದೆ. ಮೊದಲ ವಾರದ ಅಧಿವೇಶನದಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರು ಬಜೆಟ್ ಮಂಡನೆ ನಡೆಸಿದ್ದು , ವಾರಾಂತ್ಯದ ಬಿಡುವು ನೀಡಲಾಗಿದೆ. ಈ