ಉಳ್ಳಾಲ: ಪ್ರಾಕೃತಿಕ ವಿಕೋಪದಡಿ ಜು. 04 ರಂದು ಮೃತಪಟ್ಟ ಸೋಮೇಶ್ವರ ಗ್ರಾಮದ ಪಿಲಾರು ಎಂಬಲ್ಲಿನ ನಿವಾಸಿ ಸುರೇಶ್ ಗಟ್ಟಿ ಮನೆಗೆ ಸಹಾಯಕ ಆಯುಕ್ತರಾದ ರಾಜು.ಕೆ ಭೇಟಿ ನೀಡಿ ಸಾಂತ್ವನ ಹೇಳಿದರು. ಮೃತರ ಪತ್ನಿಗೆ ವೃದ್ಧಾಪ್ಯ ವೇತನ ಹಾಗೂ ಹೆಚ್ಚುವರಿ ರೂ. 20,000 ಅನುದಾನವನ್ನು ಸರಕಾರದ ವತಿಯಿಂದ ಒದಗಿಸುವ ಪ್ರಯತ್ನ ಮಾಡುವ ಭರವಸೆ ನೀಡಿದರು ಈ ಸಂದರ್ಭ ಕಂದಾಯ
ಉಳ್ಳಾಲ: ಬಾಡಿಗೆ ಮನೆಯಲ್ಲಿ ತಾಯಿ ಮತ್ತು ಅಣ್ಣನೊಂದಿಗೆ ವಾಸವಿದ್ದ ಯುವತಿಯೋರ್ವಳು ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಪಜೀರು ಗ್ರಾಮದ ಅಡಪ್ಪ ರೆಸಿಡೆನ್ಸಿಯಲ್ಲಿ ನಡೆದಿದೆ. ಪ್ರೀತಿಕಾ ಪೂಜಾರಿ(21)ಆತ್ಮ ಹತ್ಯೆಗೈದ ಯುವತಿ. ಪ್ರೀತಿಕ ತನ್ನ ತಾಯಿ ಮತ್ತು ಅಣ್ಣನೊಂದಿಗೆ ಪಜೀರು ಗ್ರಾಮದ ಅಡಪ್ಪ ರೆಸಿಡೆನ್ಸಿಯ ಬಾಡಿಗೆ ಮನೆಯಲ್ಲಿ ವಾಸವಿದ್ದರು.ಮಂಗಳೂರಿನ ಕಾಲ್ ಸೆಂಟರ್ ಒಂದರಲ್ಲಿ ಪ್ರೀತಿಕಾ ಉದ್ಯೋಗದಲ್ಲಿದ್ದರು.ಇಂದು ಮದ್ಯಾಹ್ನ 12.30ರ ವೇಳೆಗೆ
ಉಳ್ಳಾಲ: ಮಳೆ ನೀರಿಗೆ ಬಿದ್ದು ಸಾವನ್ನಪ್ಪಿದ ಸೋಮೇಶ್ವರ ಪಿಲಾರು ಬಳಿಯ ಬಾಡಿಗೆ ಮನೆ ನಿವಾಸಿ ಸುರೇಶ್ ಗಟ್ಟಿ (52) ಕುಟುಂಬಸ್ಥರಿಗೆ ಪ್ರಾಕೃತಿಕ ವಿಕೋಪದಡಿ ರೂ.5 ಲಕ್ಷ ಪರಿಹಾರವನ್ನು ಕಂದಾಯ ಇಲಾಖೆಯು ಖಜಾನೆ 2 ಮುಖೇನ ನೀಡಿದೆ. ಘಟನಾ ಸ್ಥಳಕ್ಕೆ ತಹಶೀಲ್ದಾರ್ ಪ್ರಭಾಕರ್ ಖರ್ಜುರೆ,. ಕಂದಾಯ ನಿರೀಕ್ಷಕರು ಮಂಜುನಾಥ್ ಕೆ.ಹೆಚ್, ಪುರಸಭೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಶವಮಹಜರು ವರದಿಯನ್ನು ಸಂಗ್ರಹಿಸಿ, ಮೃತ ಪ್ರಮಾಣ ಪತ್ರವನ್ನು
ಉಳ್ಳಾಲ: ಕರ್ತವ್ಯವಾದರೂ ನಿಭಾಯಿಸಲು ಛಲ ಬೇಕು. ಮಳೆಗಾಲದ ಸಂದರ್ಭ ಮೆಸ್ಕಾಂ ಪವರ್ಮೆನ್ಗಳು ಜನರ ಬಾಯಿಂದ ಕೇಳುವುದೇ ಜಾಸ್ತಿ. ಆದರೆ ಮೆಸ್ಕಾಂನ ಉಳ್ಳಾಲ-2 ಘಟಕದ ಪವರ್ಮೆನ್ ವಸಂತ್ ಹಾಗೂ ಸುರೇಶ್ ಗದ್ದೆಯೊಂದರಲ್ಲಿ ಕೃತಕ ನೆರೆಯಾಗಿದ್ದರೂ ಅದನ್ನು ಕಷ್ಟಪಟ್ಟು ದಾಟಿ 40 ಮನೆಗಳಿಗೆ ವಿದ್ಯುತ್ ಪೂರೈಸಿದ್ದಾರೆ. ಈ ಕುರಿತ ವೀಡಿಯೋವನ್ನು ಮೆಸ್ಕಾಂ ಜೆ.ಇ ನಿತೇಶ್ ಹೊಸಗದ್ದೆ ಇವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ತಮ್ಮ ಸಿಬ್ಬಂದಿ ಕಾರ್ಯಕ್ಕೆ ಮೆಚ್ಚುಗೆ
ಉಳ್ಳಾಲ ಹಾಗೂ ಉಚ್ಚಿಲ ಭಾಗದಲ್ಲಿ ಕಡಲ್ಕೊರೆತ ತೀವ್ರಗೊಂಡಿದ್ದು, ಉಳ್ಳಾಲ ಬೀಚ್ ಬಳಿ ಹಾಕಲಾಗಿದ್ದ ಚರ್ಮುರಿ ಅಂಗಡಿಗಳು ಸಮುದ್ರಪಾಲಾಗಿದೆ. ಉಚ್ಚಿಲ ಭಾಗದಲ್ಲಿ ಸಮುದ್ರ ತೀರದ ಮನೆಗಳಿಗೆ ಅಪ್ಪಳಿಸಿ, ಹಲವು ಮರಗಳು ಸಮುದ್ರಪಾಲಾಗಿವೆ. ಸಮುದ್ರತೀರದಲ್ಲಿ 80 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿರುವುದರಿಂದ ಭಾರೀ ಗಾತ್ರದ ಅಲೆಗಳು ತೀರಕ್ಕೆ ಅಪ್ಪಳಿಸುತ್ತಿವೆ. ಉಳ್ಳಾಲ ಬೀಚ್, ಮೊಗವೀರಪಟ್ನ, ಸುಭಾಷನಗರ, ಕೈಕೋ, ಕಿಲೆರಿಯಾನಗರ, ಸೋಮೇಶ್ವರ, ಉಚ್ಚಿಲ, ಬಟ್ಟಪ್ಪಾಡಿ
ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಾರ್ಭಟ ಮುಂದುವರೆದಿದ್ದು ಉಳ್ಳಾಲ ತಾಲೂಕಿನ ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ಎಂಬಲ್ಲಿ ಮನೆ ಸಂಪರ್ಕದ ಮೋರಿ ದಾಟುವ ಸಂದರ್ಭ ವ್ಯಕ್ತಿಯೋರ್ವರು ಆಯ ತಪ್ಪಿ ಬಿದ್ದು ಮಳೆ ನೀರಿಗೆ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ಪಂಜಂದಾಯ ದೈವಸ್ಥಾನದ ಬಳಿಯ ಬಾಡಿಗೆ ಮನೆ ನಿವಾಸಿ ಸುರೇಶ್ ಗಟ್ಟಿ(52)ಮೃತ ವ್ಯಕ್ತಿ. ಸುರೇಶ್ ಗಟ್ಟಿ ಅವರು ವೃತ್ತಿಯಲ್ಲಿ ಪೈಂಟರ್ ಆಗಿದ್ದು ಕೆಲಸ
ಉಳ್ಳಾಲ: ಆಂಬ್ಯುಲೆನ್ಸ್ ಢಿಕ್ಕಿ ಹೊಡೆದು ಪಾದಚಾರಿ ಸಾವನ್ನಪ್ಪಿದ ಘಟನೆ ತಲಪಾಡಿ ಮರೋಳಿ ಬಾರ್ ಎದುರುಗಡೆ ಸಂಭವಿಸಿದೆ. ಕಾಸರಗೋಡು ಮಂಗಲ್ಪಾಡಿ ಹೇರೂರು ನಿವಾಸಿ ಫ್ರಾನ್ಸಿಸ್ ಡಿಸೋಜ (62) ಮೃತರು. ಮನೆಯಿಂದ ತಲಪಾಡಿಗೆ ಬಂದಿದ್ದ ಫ್ರಾನ್ಸಿಸ್, ಮರೋಳಿ ಬಾರ್ ಎದುರುಗಡೆಯಿಂದ ವಾಪಸ್ಸು ಮನೆಗೆ ತೆರಳಲು ರಾಷ್ಟ್ರೀಯ ಹೆದ್ದಾರಿಯನ್ನು ದಾಟುವ ಸಂದರ್ಭ ಕೇರಳದಿಂದ ಮಂಗಳೂರು ಕಡೆಗೆ ಅಮಿತ ವೇಗದಲ್ಲಿ ಬರುತ್ತಿದ್ದ ಖಾಲಿ ಆಂಬ್ಯುಲೆನ್ಸ್ ಫ್ರಾನ್ಸಿಸ್ ಅವರಿಗೆ ಢಿಕ್ಕಿ
ಉಳ್ಳಾಲ: ಸಮುದ್ರ ವಿಹಾರಕ್ಕೆ ತೆರಳಿದ್ದ ಬೆಂಗಳೂರು ಮೂಲದ ಯುವಕ ಸಮುದ್ರದ ಭಾರೀ ಗಾತ್ರದ ಅಲೆಗಳ ನಡುವೆ ಸಿಲುಕಿದ್ದು, ಪ್ರಾಣಾಪಾಯದಲ್ಲಿದ್ದ ಆತನನ್ನು ಮೊಗವೀರಪಟ್ನದ ಶಿವಾಜಿ ಜೀವರಕ್ಷಕ ದಳದ ಸದಸ್ಯರು ರಕ್ಷಿಸಿರುವ ಘಟನೆ ಇಂದು ಉಳ್ಳಾಲ ಬೀಚ್ ನಲ್ಲಿ ನಡೆದಿದೆ. ಬೆಂಗಳೂರು ಯಶವಂತಪುರ ನಿವಾಸಿ ನಿಝಾಮ್ (35) ಎಂಬಾತನನ್ನು ರಕ್ಷಿಸಲಾಗಿದೆ. ಈತನನ್ನು ಮೊಗವೀರಪಟ್ನ ಶಿವಾಜಿ ಜೀವರಕ್ಷಕ ದಳದ ವಿಕ್ರಮ್ ಪುತ್ರನ್, ಶ್ರಾವಣ್, ದೀಕ್ಷಿತ್ ಬಂಗೇರ, ದೀಕ್ಷಿತ್ ಚಂದನ್,
ಉಳ್ಳಾಲ: ಎರಡು ಕಂಟೈನರ್ ಲಾರಿಗಳ ನಡುವೆ ಸಿಲುಕಿ ಲಾರಿ ಚಾಲಕ ದಾರುಣವಾಗಿ ಸಾವನ್ನಪ್ಪಿರುವ ಘಟನೆ ರಾ,.ಹೆ.66ರ ತಲಪಾಡಿ ಟೋಲ್ ಗೇಟ್ ಸಮೀಪ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ. ಹರ್ಯಾಣ ಮೂಲದ ಶಮೀಮ್ (38) ಮೃತಪಟ್ಟ ಚಾಲಕ. ಹರಿಯಾಣದಿಂದ ಕೇರಳ ಕಡೆಗೆ ಒಂದೇ ಸಂಸ್ಥೆಗೆ ಸೇರಿದ , ಸಂಬಂಧಿ ಚಾಲಕರು ಎರಡು ಕಂಟೈನರ್ ಲಾರಿಗಳಲ್ಲಿ ಕೇರಳ ಕಡೆಗೆ ಸರಕು ಸಾಗಾಟ ನಡೆಸುತ್ತಿದ್ದರು. ತಲಪಾಡಿ ಟೋಲ್ ಸಮೀಪ ಒಂದು ಕಂಟೈನರ್ ಲಾರಿಯನ್ನು ಚಾಲಕ ಶಮೀಮ್ ಚಹಾ ಕುಡಿಯಲೆಂದು
ಉಳ್ಳಾಲ: ಚಾಲಕನ ನಿಯಂತ್ರಣ ತಪ್ಪಿದ ಕಾರು ಜಂಕ್ಷನ್ನಲ್ಲಿ ತಿರುವು ಪಡೆದುಕೊಳ್ಳುತ್ತಿರುವಂತೆಯೇ ರಸ್ತೆಯ ಪಕ್ಕದಲ್ಲಿದ್ದ ಆಕ್ಟಿವಾ ಸ್ಕೂಟರ್ಗೆ ಢಿಕ್ಕಿ ಹೊಡೆದು ಬಳಿಕ ಪ್ರಯಾಣಿಕರ ತಂಗುದಾಣಕ್ಕೆ ಢಿಕ್ಕಿಯಾದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ತೌಡುಗೋಳಿ ಕ್ರಾಸ್ ನಲ್ಲಿ ನಡೆದಿದೆ.ಘಟನೆಯಿಂದ ಸ್ಕೂಟರ್ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ತಂಗುದಾಣದ ಮುಂಭಾಗದ ಕಿರುಗೋಡೆ ನೆಲಕ್ಕುರುಳಿದೆ. ಅದೇ ಸಮಯದಲ್ಲಿ ಪ್ರಯಾಣಿಕರ



























