Home ಕರಾವಳಿ Archive by category ಉಳ್ಳಾಳ (Page 21)

ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ನಟಿ ರಚಿತರಾಮ್ ಭೇಟಿ

ಉಳ್ಳಾಲ: ಸ್ಯಾಂಡಲ್‍ವುಡ್‍ನ ಡಿಂಪಲ್ ಬೆಡಗಿ ರಚಿತಾರಾಮ್ ಅವರಿಂದು ಮಂಗಳೂರು ಹೊರವಲಯದ ಕುತ್ತಾರು ದೆಕ್ಕಾಡಿನ ಕೊರಗಜ್ಜ ದೈವದ ಆದಿತಳಕ್ಕೆ ಭೇಟಿ ನೀಡಿ ತಮ್ಮ ನಟನೆಯ ಹೊಸ ಚಿತ್ರಗಳಾದ ಮ್ಯಾಟ್ನಿ,ಬ್ಯಾಡ್ ಮ್ಯಾನರ್ಸ್ ಯಶಸ್ಸಿಗಾಗಿ ಪ್ರಾರ್ಥನೆ ಸಲ್ಲಿಸಿದರು. ನನ್ನ ಸ್ನೇಹಿತರೆಲ್ಲರೂ ಕೊರಗಜ್ಜ ದೈವದ ಕಾರಣೀಕದ ಬಗ್ಗೆ ಹೇಳಿದ್ರು. ಹಾಗಾಗಿ ನನಗೂ

ಉಳ್ಳಾಲ: ವಿವಾಹಿತ ನಿಗೂಢ ನಾಪತ್ತೆ

ಉಳ್ಳಾಲ: ವಿವಾಹಿತರೋರ್ವರು ನಿಗೂಢ ರೀತಿಯಲ್ಲಿ ನಾಪತ್ತೆಯಾಗಿರುವ ಕುರಿತು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಕೊಣಾಜೆ ಹರೇಕಳ ಪಂಜಿಲಗುಳಿ ನಿವಾಸಿ ಜಯರಾಜ್ (35) ನಾಪತ್ತೆಯಾದವರು. ಪತ್ನಿ ಮೂರು ತಿಂಗಳ ಗರ್ಭಿಣಿಯಾಗಿದ್ದು, ಅವರ ಆರೋಗ್ಯ ತಪಾಸಣೆ ನಡೆಸಿದ ನಂತರ ಜೆಪ್ಪು ಕಂರ್ಭಿಸ್ಥಾನ ಸಮೀಪ ತಾಯಿ ಮನೆಯಲ್ಲಿ ಬಿಟ್ಟು ಕೆಲಸಕ್ಕೆ ತೆರಳುವುದಾಗಿ ತಿಳಿಸಿ ಹೋದವರು ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದಾರೆ. ಖಾಸಗಿ ಸಂಸ್ಥೆಯೊಂದರಲ್ಲಿ

ನಿಟ್ಟೆ ಕ್ಷೇಮದಲ್ಲಿ ಮದ್ಯವರ್ಜನ ಶಿಬಿರದ ಉದ್ಘಾಟನೆ

ಉಳ್ಳಾಲ: ದಾನ ಧರ್ಮದ ಸೇತುವೆಯನ್ನು ಕಟ್ಟಿ, ಸಂಪತ್ತು ಸೌಭಾಗ್ಯದ ಐರಾವತವನ್ನು ಈ ಧರೆಗಿಳಿಸಿ ಎಲ್ಲರೂ ಅವರ ಕರ್ತವ್ಯ, ದಾನ, ವಸತಿ, ಆರೊಗ್ಯ, ವಿದ್ಯೆ, ಈ ಪಂಚಮೂಲ ಅವಶ್ಯಕತೆಗೆ ಪೂರಕವಾಗಿ ನೆಮ್ಮದಿಯ ಜೀವನ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುವ ಎಂದು ರಾಜ್ಯ ಸಭಾಸದಸ್ಯ, ಧರ್ಮಸ್ಥಳ ಶ್ರೀ ಕ್ಷೇತ್ರದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಹೇಳಿದರು. ನಿಟ್ಟೆ ವಿಶ್ವವಿದ್ಯಾಲಯ ಕಾಲೇಜಿನ ಕ್ಷೇಮ ಸಭಾಂಗಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ,ಜಿಲ್ಲಾ

ಉಳ್ಳಾಲ. ಕಾರು ಮತ್ತು ಬೈಕ್ ನಡುವೆ ಅಪಘಾತ – ಸವಾರರಿಬ್ಬರಿಗೆ ಗಾಯ

ಉಳ್ಳಾಲ : ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರರಿಬ್ಬರು ಗಾಯಗೊಂಡಿರುವ ಘಟನೆ ಉಳ್ಳಾಲದ ಮಾಸ್ತಿಕಟ್ಟೆ ಬಳಿ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ.ತೊಕ್ಕೊಟ್ಟು ಕಡೆಯಿಂದ ಬರುತ್ತಿದ್ದ ಕಾರು ಎಡಬದಿಗೆ ತಿರುಗಿಸುವ ಸಂದರ್ಭ ಅದೇ ದಾರಿಯಲ್ಲಿ ಅಮಿತ ವೇಗದಲ್ಲಿ ಬಂದಿರುವ ಬೈಕ್ ಕಾರಿಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರರಿಬ್ಬರು ರಸ್ತೆಗೆಸೆಯಲ್ಪಟ್ಟಿದ್ದಾರೆ. ಗಾಯಾಳುಗಳಿಬ್ಬರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರು

ಮೇ 27. ಉಳ್ಳಾಲ ಕಪ್-2023 – ವಾಲಿಬಾಲ್ ಪಂದ್ಯಾಟ

ದಕ್ಷಿಣ ಕನ್ನಡ ಜಿಲ್ಲಾ ವಾಲಿಬಾಲ್ ಅಸೋಸಿಯೇಶನ್ ವತಿಯಿಂದ ಉಳ್ಳಾಲ ತಾಲೂಕು ವಾಲಿಬಾಲ್ ಅಸೋಸಿಯೇಶನ್ ಅಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪುರುಷರ ಮತ್ತು ಮಹಿಳೆಯರ ಹಗಲಿರುಳು ವಾಲಿಬಾಲ್ ಪಂದ್ಯಾಟ ಜಿಲ್ಲಾ ಚಾಂಪಿಯನ್ ಶಿಪ್ ಉಳ್ಳಾಲ ಕಪ್-2023 ಮೇ 27ರಂದು ಮುಡಿಪುವಿನ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆಯಲಿದೆ. ಈ ಬಗ್ಗೆ ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ವಾಲಿಬಾಲ್

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ : ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ಮದ್ಯವರ್ಜನ ಶಿಬಿರ

ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಮಂಗಳೂರು ಮತ್ತಿತರ ಸಂಘಟನೆಗಳ ಆಶ್ರಯದಲ್ಲಿ ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ 7 ದಿನಗಳ ಕಾಲ ನಡೆಯುವ 1661ನೇ ಮದ್ಯವರ್ಜನ ಶಿಬಿರಕ್ಕೆ ನಿಟ್ಟೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸತೀಶ್ ಕುಮಾರ್ ಭಂಡಾರಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಮದ್ಯವರ್ಜನ ಶಿಬಿರಗಳು ಸಾಮಾಜಿಕ ಪರಿವರ್ತನೆಯಲ್ಲಿ ಬಹಳಷ್ಟು ಪರಿಣಾಮ ಬೀರಿದ್ದು ಇಂತಹ ಶಿಬಿರಗಳು ದೇಶವ್ಯಾಪಿ ನಡೆದಾಗ

ಜೂಜಾಟಗಾರರ ಜತೆ ಶಾಮೀಲು ಆರೋಪ – ಉಳ್ಳಾಲ ಠಾಣೆ ಎಸ್.ಬಿ ಅಮಾನತು

ಉಳ್ಳಾಲ: ಇಲ್ಲಿನ ಪೊಲೀಸ್ ಠಾಣೆಯಲ್ಲಿ ಸ್ಪೆಷಲ್ ಬ್ರಾಂಚ್ ಕಾನ್ಸ್ ಟೇಬಲ್ ಆಗಿದ್ದ ವಾಸುದೇವ ಚೌಹಾಣ್ ಅವರನ್ನು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಅಮಾನತು ಮಾಡಿದ್ದಾರೆ.ಇತ್ತೀಚೆಗೆ ತಲಪಾಡಿ ಗಡಿಭಾಗದಲ್ಲಿ ಜೂಜಾಟ ನಡೆಸುತ್ತಿದ್ದ ತಂಡವನ್ನು ಎಸಿಪಿ ನೇತೃತ್ವದ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದರು. ಆದರೆ ಈ ಬಗ್ಗೆ ಉಳ್ಳಾಲ ಎಸ್ ಬಿ ಆಗಿದ್ದ ವಾಸುದೇವ್ ಗೆ ಮಾಹಿತಿಗಳಿದ್ದವು. ಅಲ್ಲದೆ, ಆರೋಪಿಗಳ ಜೊತೆ ವಾಸುದೇವ ಶಾಮೀಲಾಗಿದ್ದ ಎನ್ನುವ ಆರೋಪಗಳಿದ್ದವು. ಈ ಬಗ್ಗೆ

ಉಳ್ಳಾಲ : ಓಮ್ನಿ ಅಪಘಾತ: ವೃದ್ಧೆ ಸಾವು, ಮೂವರಿಗೆ ಗಂಭೀರ ಗಾಯ

ಉಳ್ಳಾಲ:ಹೆದ್ದಾರಿ ಬದಿಯ ಕಬ್ಬಿಣದ ಸಲಾಕೆಯ ತಡೆಬೇಲಿಗೆ ಓಮ್ನಿ‌ ಕಾರು ಢಿಕ್ಕಿ ಹೊಡೆದ ಪರಿಣಾಮ 85ರ ವೃದ್ಧೆಯೋರ್ವರ ದೇಹ ಛಿದ್ರಗೊಂಡು ಸಾವನ್ನಪ್ಪಿದ ಘಟನೆ ರಾ.ಹೆ 66 ರ ಉಚ್ಚಿಲ ಎಂಬಲ್ಲಿ ಇಂದು ಮುಂಜಾನೆ ನಸುಕಿನ ಜಾವ ಸಂಭವಿಸಿದೆ. ಕಾಸರಗೋಡು ಜಿಲ್ಲೆಯ ಮಂಜೇಶ್ವರ ,ಕುಂಜತ್ತೂರು ನಿವಾಸಿ ಬಿ.ಫಾತಿಮಾ(85)ಮೃತ ಪಟ್ಟ ವೃದ್ಧೆ.ಫಾತಿಮಾ ಅವರು ತನ್ನ ಮಗ ಮೂಸ(50) ಮೊಮ್ಮಗ ಮಸ್ತಫಾ(24) ಜೊತೆ ನಿನ್ನೆ ಮಂಗಳೂರಿನ ಅಡ್ಡೂರಿಗೆ ತೆರಳಿ ಸಂಬಂಧಿಕರೋರ್ವರ

ಉಳ್ಳಾಲ : ರೈಲು ಢಿಕ್ಕಿ ಹೊಡೆದು ಕಾರ್ಮಿಕ ಮೃತ್ಯು

ಉಳ್ಳಾಲ: ರೈಲು ಡಿಕ್ಕಿ ಹೊಡೆದ ಪರಿಣಾಮ ಹಳಿ ದಾಟುತ್ತಿದ್ದ ಕಾರ್ಮಿಕ  ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ತೊಕ್ಕೊಟ್ಟು ಒಳಪೇಟೆ ಬಳಿ ಶನಿವಾರ ರಾತ್ರಿ ನಡೆದಿದೆ ‌ ಮೃತ ಕಾರ್ಮಿಕ ನನ್ನು ಬಿಹಾರ ಮೂಲದ ಶ್ರವಣ್ ದಾಸ್ (40) ಎಂದು ಗುರುತಿಸಲಾಗಿದೆ. ಅವರು ಕಲ್ಕಟ್ಟ ದಲ್ಲಿ ಕೆಲಸ ಮುಗಿಸಿ ತೊಕ್ಕೊಟ್ಟು ವಿನಲ್ಲಿರುವ ನಿವಾಸಕ್ಕೆ ಬಂದಿದ್ದರು.ಈ ವೇಳೆ ಸಾಂಬಾರ್ ತರಲೆಂದು ಹೊಟೇಲಿಗೆ ತೆರಳಿ ವಾಪಸ್ ರೈಲ್ವೇ ಹಳಿ ದಾಟಿ ಬರುವಾಗ ರೈಲು

ಮಳೆಗಾಲದಲ್ಲಿ ಜನರಿಗೆ ತೊಂದರೆಯಾಗದಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು-ಶಾಸಕ ಖಾದರ್ ಆದೇಶ

ಉಳ್ಳಾಲ: ಮಳೆಗಾಲದಲ್ಲಿ ಜನರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಅಧಿಕಾರಿಗಳು ತಕ್ಷಣದಿಂದ ಕ್ರಮಕೈಗೊಳ್ಳಬೇಕು, ಉಳ್ಳಾಲ ನಗರಸಭೆಯಾದ್ಯಂತ 8 ಟ್ಯಾಂಕರ್ಗಳ ಮೂಲಕ ಸರಬರಾಜು ಆಗುತ್ತಿರುವ ಕುಡಿಯುವ ನೀರು ಸಮರ್ಪಕವಾಗಿ ಎಲ್ಲರ ಉಪಯೋಗಕ್ಕೆ ಬರಬೇಕು. ಕಡಲ್ಕೊರೆತದಿಂದ ಹಾನಿಗೊಳಗಾದ ಮುಕ್ಕಚ್ಚೇರಿ ಸೀಗ್ರೌಂಡ್ ಮತ್ತು ಉಚ್ಚಿಲ ಸೋಮೇಶ್ವರದಲ್ಲಿ ಅನುದಾನ ಮಂಜೂರುಗೊಳಿಸಿದ ತಕ್ಷಣ ಕಾಮಗಾರಿ ಆರಂಭಿಸಿ ಮುಗಿಸಬೇಕು ಎಂದು ಶಾಸಕ ಯು.ಟಿ ಖಾದರ್ ಅಧಿಕಾರಿಗಳಿಗೆ ಆದೇಶ