Home ಕರಾವಳಿ Archive by category ಉಳ್ಳಾಳ (Page 25)

ನೇತ್ರಾವತಿ ನದಿಗೆ ಕಾಲುಜಾರಿ ಬಿದ್ದು ಸಾವು

ಉಳ್ಳಾಲ: ನೇತ್ರಾವತಿ ನದಿಗೆ ಕಾಲುಜಾರಿ ಬಿದ್ದು ಹರೇಕಳ ಬೈತಾರ್ ನಿವಾಸಿ ಪ್ರಕಾಶ್ ಗಟ್ಟಿ (೪೬) ಎಂಬವರು ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ.ಹರೇಕಳದ ಉಳಿದೊಟ್ಟು ಬಳಿಯ ಕೊಡಮಣಿತ್ತಾಯ ದೈವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ನಡೆಯುತ್ತಿದ್ದು, ಅದಕ್ಕಾಗಿ ಪ್ರಕಾಶ್ ಅವರು ಸ್ನೇಹಿತರು ಹಾಗೂ ಸಂಬಂಧಿಕರನ್ನು ಮನೆಗೆ ಕರೆದಿದ್ದರು. ಸುಮಾರು ೨೦ ರಷ್ಟು ನೆಂಟರು

ಭಾರತೀಯ ಕಿಸಾನ್ ಸಂಘದ ಉಳ್ಳಾಲ ಘಟಕದಿಂದ ಪ್ರತಿಭಟನೆ

ಉಳ್ಳಾಲ: ರೈತರ ತಾಳ್ಮೆಯನ್ನು ಪರೀಕ್ಷಿಸುವ ಕೆಲಸ ಉಳ್ಳಾಲದಲ್ಲಿ ಆಗುತ್ತಿದೆ, ಬಡ ರೈತರ ಕುಮ್ಕಿ ಜಾಗದ ಹಕ್ಕನ್ನು ಒತ್ತಾಯಪೂರ್ವಕವಾಗಿ ಕಸಿಯಲಾಗುತ್ತಿದೆ. ಈ ನಿಟ್ಟಿನಲ್ಲಿ ಉಳ್ಳಾಲದ ರೈತರು ಒಗ್ಗಟ್ಟಾಗಿ ತಮ್ಮ ಹಕ್ಕುಗಳನ್ನು ಪಡೆಯುವ ಹೋರಾಟಕ್ಕೆ ಮುಂದಾಗಬೇಕಿದೆ ಎಂದು ಭಾರತೀಯ ಕಿಸಾನ್ ಸಂಘದ ಜಿಲ್ಲಾಧ್ಯಕ್ಷ ಶಾಂತಿಪ್ರಸಾದ್ ಹೆಗ್ಡೆ ಹೇಳಿದರು. ಅವರು ಭಾರತೀಯ ಕಿಸಾನ್ ಸಂಘ ಕರ್ನಾಟಕ ಪ್ರದೇಶ ಉಳ್ಳಾಲ ತಾಲೂಕು ಘಟಕದ ವತಿಯಿಂದ ಸರಕಾರದ ರೈತ ವಿರೋಧಿ ಧೋರಣೆ ವಿರೋಧಿಸಿ

ಮಾ.25ರಂದು ಮೋರ್ಲ ಬೋಳದಲ್ಲಿ ಪ್ರಥಮ ವರ್ಷದ ನರಿಂಗಾನ ಕಂಬಳ

ಉಳ್ಳಾಲ: ಇಲ್ಲಿನ ತಾಲೂಕಿನಲ್ಲಿ ಇದೇ ಮೊದಲ ಬಾರಿಗೆ ಸರಕಾರಿ ಕಂಬಳ ಆಯೋಜನೆ ಮಾಡಲಾಗಿದ್ದು ನರಿಂಗಾನ ಗ್ರಾಮದ ಮೋರ್ಲ ಬೋಳದಲ್ಲಿ ಲವಕುಶ ಜೋಡುಕರೆ ಹೆಸರಿನಲ್ಲಿ ನರಿಂಗಾನ ಕಂಬಳ ಮಾ. 25ರಂದು ಹೊನಲು ಬೆಳಕಿನಲ್ಲಿ ನಡೆಯಲಿದ್ದು ಬೆಳಗ್ಗೆ 10.30ಕ್ಕೆ ಗಣ್ಯರ ಉಪಸ್ಥಿತಿಯಲ್ಲಿ ತುಳುನಾಡಿನ ಧಾರ್ಮಿಕ ವಿಧಿಗಳೊಂದಿಗೆ ಉದ್ಘಾಟನೆಗೊಳ್ಳಲಿದೆ ಎಂದು ಶಾಸಕ ಯು.ಟಿ.ಖಾದರ್ ಹೇಳಿದರು.ಕಂಬಳ ಕರೆಯ ಬಳಿಯಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರುಮಾ. 25ರಂದು

ನರಿಂಗಾನ ಗ್ರಾಮದ ನೆತ್ತಿಲಕೋಡಿ ರಸ್ತೆ ಶಿಲನ್ಯಾಸ

ಉಳ್ಳಾಲ: ವೈದ್ಯಕೀಯ ಕಾಲೇಜು ಜೊತೆಗೆ ಶಿಕ್ಷಣ ಸಂಸ್ಥೆಗಳ ಸ್ಥಾಪನೆಯೊಂದಿಗೆ ಕೇರಳ ಗಡಿಭಾಗದ ನರಿಂಗಾನ ಗ್ರಾಮ ಸಾಕಷ್ಟು ಅಭಿವೃದ್ಧಿಯನ್ನು ಶಾಸಕರ ಮುತುವರ್ಜಿಯೊಂದಿಗೆ ನಡೆಯುತ್ತಿದ್ದು, ಶೀಘ್ರವೇ ತುಳು ಗ್ರಾಮ ಸ್ಥಾಪನೆಯೊಂದಿಗೆ ಇತಿಹಾಸದ ಪುಟಗಳಲ್ಲಿ ಗ್ರಾಮ ಅಚ್ಚಳಿಯದೆ ನೆಲೆ ನಿಲ್ಲಲಿದೆ ಎಂದು ಜಿ.ಪಂ ಮಾಜಿ ಸದಸ್ಯೆ ಮಮತಾ ಡಿ.ಯಸ್ ಗಟ್ಟಿ ಹೇಳಿದ್ದಾರೆ. ಅವರು ನರಿಂಗಾನ ಗ್ರಾಮದ ನೆತ್ತಿಲಕೋಡಿ ರಸ್ತೆ ಕಾಂಕ್ರೀಟಿಕರಣದ ಶಿಲನ್ಯಾಸ ನೆರವೇರಿಸಿ ಮಾತನಾಡಿದರು.ಶಾಸಕರ

ರಾಸಾಯನಿಕ ಲೋಡ್‍ನ ಟ್ಯಾಂಕರ್ ಪಲ್ಟಿ : ಗ್ಯಾಸ್ ಲೀಕೇಜ್ ನಡುವೆ ತಡರಾತ್ರಿ ವರೆಗೆ ತೆರವು ಕಾರ್ಯಾಚರಣೆ

ಉಳ್ಳಾಲ: ಕೇರಳದ ಕೊಚ್ಚಿಯಿಂದ ಬೈಕಂಪಾಡಿ ಪೈಂಟ್ ತಯಾರಿಕಾ ಇಂಡಸ್ಟ್ರಿ ಗೆ ರಾಸಾಯನಿಕ ಸಾಗಾಟ ನಡೆಸುತ್ತಿದ್ದ ಟ್ಯಾಂಕರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪು ಬಳಿ ತಡರಾತ್ರಿ ವೇಳೆ ಸಂಭವಿಸಿದೆ. ಹೆದ್ದಾರಿ ಮದ್ಯೆಯೇ ಪಲ್ಟಿಯಾಗಿ ಬಿದ್ದು ಚಾಲಕ ಮಯೂರ್ (40) ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಅವರನ್ನು ಕಂಕನಾಡಿ ಫಾದರ್ ಮುಲ್ಲರ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ತಡರಾತ್ರಿ 1ರ ವರೆಗೆ ನಡೆದ ತೆರವು ಕಾರ್ಯಾಚರಣೆ !ಲಾರಿ ಹಾಗೂ

ಉಳ್ಳಾಲ : ರಸ್ತೆ ಅವ್ಯವಸ್ಥೆ : ಕಾಂಗ್ರೆಸ್ ಚುನಾವಣಾ ಪ್ರಚಾರದ ಬ್ಯಾನರಿಗೆ ಸ್ಟಿಕ್ಕರ್ ಅಂಟಿಸಿ ವಿರೋಧ

ಉಳ್ಳಾಲ: ಕಾಂಗ್ರೆಸ್ ಚುನಾವಣಾ ಪ್ರಚಾರವಾಗಿ ಸೋಮೇಶ್ವರ ಕೊಲ್ಯ ಸಮೀಪ ಹಾಕಲಾದ ಬ್ಯಾನರಿಗೆ ಗ್ರಾಮಸ್ಥರು ಸ್ಟಿಕ್ಕರ್ ಅಂಟಿಸಿ 15 ವರ್ಷಗಳಿಂದ ಹದಗೆಟ್ಟಿರುವ ರಸ್ತೆ ನಿರ್ಮಾಣಕ್ಕೆ ಒತ್ತಾಯಿಸಿದ್ದಾರೆ. 15 ವರ್ಷಗಳಿಂದ ಇಲ್ಲಿಯ ರಸ್ತೆ ಕಾಮಗಾರಿ ನಡೆಯದೆ ಜನರು ಕೊಳಚೆಯಲ್ಲಿಯೇ ಬದುಕಬೇಕಾಗಿದೆ. ಯಾವ ಪಕ್ಷಕ್ಕೆ ಮತ ಹಾಕಬೇಕು? ಅನ್ನುವ ಸ್ಟಿಕ್ಕರ್ ಅಂಟಿಸಲಾಗಿದೆ. ಉಳ್ಳಾಲ ಶಾಸಕ ಯು.ಟಿ ಖಾದರ್ ಭಾವಚಿತ್ರ ಹೊಂದಿರುವ ಬ್ಯಾನರ್ ಹಾಗೂ ಕಾಂಗ್ರೆಸ್ ಚುನಾವಣೆ ಭರವಸೆಗಳಿರುವ

ಉಳ್ಳಾಲ : ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ತಾನೇ ಆಂಬ್ಯುಲೆನ್ಸ್ ಹತ್ತಿದ್ದ ವ್ಯಕ್ತಿ ಸಾವು

ಉಳ್ಳಾಲ: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ವ್ಯಕ್ತಿಯೋರ್ವ ಪತ್ನಿಯ ಸಂಬಂಧಿಕರ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಮುಚ್ಚಿಲಕೋಡಿ ಎಂಬಲ್ಲಿ ಸಂಭವಿಸಿದೆ.ವಿಟ್ಲ ಕನ್ಯಾನ ನಿವಾಸಿ ಬಾಬು ಶೆಟ್ಟಿಗಾರ್ ಎಂಬವರ ಪುತ್ರ ಹರೀಶ್ (33) ಆತ್ಮಹತ್ಯೆ ಮಾಡಿಕೊಂಡವರು. ಇವರು 10 ವರ್ಷಗಳಿಂದ ಮುಡಿಪುವಿನ ಇನ್ಫೋಸಿಸ್ ಸಂಸ್ಥೆಯ ಗಾರ್ಡನ್ ಕೆಲಸ ನಿರ್ವಹಿಸುತ್ತಿದ್ದರು. ನವವಿವಾಹಿತರಾಗಿದ್ದ ಹರೀಶ್ ಅವರು ಸಿದ್ದಕಟ್ಟೆ ಸಂಗಬೆಟ್ಟು

ಕಣಚೂರು ಆರೋಗ್ಯ ವಿಜ್ಞಾನ ಸಂಸ್ಥೆಯಲ್ಲಿ ಸಾಂಕ್ರಾಮಿಕ ರೋಗಗಳ ಅಧ್ಯಯನ ಪೀಡಿಯಾಕಾನ್ -2023ಕ್ಕೆ ಚಾಲನೆ

ಆರೋಗ್ಯಕ್ಕೆ ಸೋಂಕು ಅತ್ಯಂತ ಅಪಾಯಕಾರಿ, ಈ ಕುರಿತು ಚಿಕಿತ್ಸಾ ವಿಧಾನಗಳ ನಾವೀನ್ಯತೆ ಹಾಗೂ ಬದಲಾವಣೆಗಳ ಕುರಿತು ಸಮ್ಮೇಳನ ಬೆಳಕು ಚೆಲ್ಲಲಿದೆ ಎಂದು ಕೇಂದ್ರ  ಇಂಡಿಯನ್ ಅಸೋಸಿಯೇಷನ್ನಿನ ಪೀಡಿಯಾಟ್ರಿಕ್ ಅಧ್ಯಕ್ಷ ಡಾ.ಜಿ.ವಿ ಬಸವರಾಜ ಅಭಿಪ್ರಾಯಪಟ್ಟರು. ಅವರು ನಾಟೆಕಲ್ ಕಣಚೂರು ಆರೋಗ್ಯ ವಿಜ್ಞಾನ ಹಾಗೂ ಆಸ್ಪತ್ರೆ ವಠಾರದಲ್ಲಿ ಇಂಡಿಯನ್ ಅಕಾಡೆಮಿ ಆಫ್ ಪೀಡಿಯಾಟ್ರಿಷಿಯನ್ ದಕ್ಷಿಣ ಕನ್ನಡ , ಕಣಚೂರು ಆರೋಗ್ಯ ವಿಜ್ಞಾನಗಳ  ಸಂಯುಕ್ತಾಶ್ರಯದಲ್ಲಿ ಸಾಂಕ್ರಾಮಿಕ

ಮುಡಿಪು: “ವಿದ್ಯಾರ್ಥಿ-ಪೋಷಕ ವಿಜಯ ಪಥ” ಪುಸ್ತಕ ಬಿಡುಗಡೆ

ದ.ಕ ಜಿಲ್ಲಾ ಸಾಹಿತ್ಯ ಪರಿಷತ್, ಮಂಗಳೂರು ತಾಲೂಕು ಘಟಕದ ವತಿಯಿಂದ ಮುಡಿಪು ಸೂರಜ್ ಪಿ.ಯು ಕಾಲೇಜ್ ಆಶ್ರಯದಲ್ಲಿ ರೋಟರಿ ಮಂಗಳೂರು ಸೆಂಟ್ರಲ್ ಸಹಕಾರದೊಂದಿಗೆ “ವಿದ್ಯಾರ್ಥಿ -ಪೋಷಕ ವಿಜಯ ಪಥ” ಪುಸ್ತಕ ಬಿಡುಗಡೆ ಹಾಗೂ ಉಪನ್ಯಾಸ ಕಾರ್ಯಕ್ರಮ ಮುಡಿಪು ಪಿಯು ಕಾಲೇಜು ಸಭಾಂಗಣದಲ್ಲಿ  ನಡೆಯಿತು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್ ಕಾರ್ಯಕ್ರಮಕ್ಕೆದೀಪ ಬೆಳಗಿಸಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ವಿದ್ಯಾರ್ಥಿ

ರಸ್ತೆ ಕಾಮಗಾರಿಗೆ ಊರಿನ ಜನ ಸಹಕರಿಸಿರಿ, ಗೊಂದಲಗಳಿದ್ದರೆ ಇಂಜಿನಿಯರನ್ನು ಸಂಪರ್ಕಿಸಿ : ಖಾದರ್ ಹೇಳಿಕೆ

ಉಳ್ಳಾಲ: ಇವತ್ತು ನಾವು ಇರಬಹುದು, ನಾಳೆ ಇಲ್ಲವಾಗಿರಬಹುದು. ಇದು ಊರವರ ರಸ್ತೆ, ಕಾಮಗಾರಿ ವೇಳೆ ಎಲ್ಲರೂ ಸಹಕರಿಸಿ ಗೊಂದಲಗಳಿದ್ದರೆ ಇಂಜಿನಿಯರನ್ನು ಸಂಪರ್ಕಿಸಿ ಬಗೆಹರಿಸಿಕೊಳ್ಳಿ ಎಂದು ವಿಪಕ್ಷ ಉಪನಾಯಕ ಯು.ಟಿ ಖಾದರ್ ಹೇಳಿದರು. ಅವರು ಕೋಟೆಕಾರು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಬೀರಿ ಜಂಕ್ಷನ್ನಿನಿಂದ ಉಚ್ಚಿಲ ಬೀಚ್ ಸಂಪರ್ಕಿಸುವ ರಸ್ತೆ ಕಾಂಕ್ರೀಟಿಕರಣ ಕಾಮಗಾರಿಯ ಶಿಲನ್ಯಾಸ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ವಾಣಿಜ್ಯ, ವಸತಿ, ಶಾಲೆಗೆ ಸೇರಿದ ಅನೇಕ