Home ಕರಾವಳಿ Archive by category ಉಳ್ಳಾಳ (Page 3)

ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯ ಬರ್ಬರ ಹತ್ಯೆ

ಉಳ್ಳಾಲ: ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯನ್ನು ಅಟ್ಟಾಡಿಸಿ ತಲವಾರಿನಿಂದ ಕಡಿದು ಹತ್ಯೆ ನಡೆಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲಾಪುವಿನಲ್ಲಿ ನಡೆದಿದೆ. ಉಳ್ಳಾಲ ಕಡಪ್ಪುರ ನಿವಾಸಿ ಸಮೀರ್ (35) ಹತ್ಯೆಯಾದವರು. ರಾತ್ರಿ 10ರ ಸುಮಾರಿಗೆ ತಾಯಿ ಜೊತೆಗೆ ಕಲ್ಲಾಪುವಿನ ರೆಸ್ಟೋರೆಂಟ್ ಒಂದಕ್ಕೆ ಊಟಕ್ಕೆಂದು ಬಂದ ಸಂದರ್ಭ ಹಿಂಬದಿಯಿಂದ

ಉಳ್ಳಾಲ : ಮನವಿ ಸಲ್ಲಿಸಿದ್ದರೂ ಸ್ಪಂಧಿಸದ ಉಳ್ಳಾಲ ನಗರಸಭೆ – ಕುಸಿದುಬಿದ್ದ ಮನೆ ಮಹಡಿ, ಮನೆಮಂದಿಗೆ ಗಾಯ

ಉಳ್ಳಾಲ : ಮದನಿನಗರ ಬಳಿ ಕಂಪೌಂಡ್ ವಾಲ್ ಬಿದ್ದು ನಾಲ್ವರು ಮೃತಪಟ್ಟ ಬೆನ್ನಲ್ಲೇ ಉಳ್ಳಾಲ ನಗರಸಭಗೆ ಕೌನ್ಸಿಲರ್ ಓರ್ವರು ಅಪಾಯದಂಚಿನಲ್ಲಿರುವ ಮನೆಮಂದಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಮನವಿ ಮಾಡಿದ್ದು, ಮನವಿಗೆ ಸ್ಪಂಧಿಸದ ಹಿನ್ನೆಲೆಯಲ್ಲಿ ಇಂದು ಮನೆ ಮಹಡಿ ಕುಸಿದು ಮನೆಯೊಳಗಿದ್ದ ಬಾಲಕಿ ಸೇರಿದಂತೆ ತಂದೆ ಗಾಯಗೊಂಡ ಘಟನೆ ಉಳ್ಳಾಲ ನಗರಸಭೆ ವ್ಯಾಪ್ತಿಯ ಮೇಲಂಗಡಿ ಮಸೀದಿ ಸಮೀಪ ನಡೆದಿದೆ. ಮನೆಯೊಳಗಿದ್ದ ಅಬ್ಬಾಸ್ ಹಾಗೂ ಅವರ ಪುತ್ರಿ ಮನೆ ಕುಸಿತದ ಸಂದರ್ಭ

ಉಳ್ಳಾಲ : ಕರಂಬಾರು ಶಾಲೆಯಲ್ಲಿ ಆಟಿಡೊಂಜಿ ದಿನ, ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ಹಳೆ ವಿದ್ಯಾರ್ಥಿ ಸಂಘ, ದ.ಕ.ಜಿ.ಪಂ. ಪ್ರಾಥಮಿಕ ಶಾಲೆ ಕರಂಬಾರು ನೇತೃತ್ವದಲ್ಲಿ ಶಾಲಾಭಿವೃದ್ಧಿ ಸಮಿತಿ, ಮುಖ್ಯೋಪಾಧ್ಯಾಯರು, ಸಹಶಿಕ್ಷಕರು ಹಾಗೂ ಪೋಷಕರ ಸಹಕಾರದೊಂದಿಗೆ ಆಟಿಡೊಂಜಿ ದಿನ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಅತಿಥಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಗುಣಪಾಲ ದೇವಾಡಿಗ ಉದ್ಘಾಟನೆ ನೆರವೇರಿಸಿ ಮಾತನಾಡಿ, “ಹಿಂದಿನ ಕಾಲದಲ್ಲಿ ಆಟಿ ತಿಂಗಳು ತುಳುವರ ಕಷ್ಟದ ದಿನಗಳಾಗಿತ್ತು.

ದೇರಳಕಟ್ಟೆ : ಪ್ರಾಕೃತಿಕ ವಿಕೋಪಗಳ ಕುರಿತು ತುರ್ತು ಸಭೆ

ಉಳ್ಳಾಲ ತಾಲೂಕು ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳನ್ನು ಸೇರಿಸಿಕೊಂಡು ಪ್ರಾಕೃತಿಕ ವಿಕೋಪಗಳ ಕುರಿತು ತುರ್ತು ಸಭೆ ದೇರಳಕಟ್ಟೆಯ ಬಿಸಿಸಿ ಸಭಾಂಗಣದಲ್ಲಿ ನಡೆಯಿತು‌. ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್‌ ಫರೀದ್ ಸಭೆ ಉದ್ದೇಶಿಸಿ ಮಾತನಾಡಿ, ತಾಲೂಕು ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಜಂಟಿಯಾಗಿ ಎಲ್ಲಾ ಗ್ರಾಮಗಳಿಗೆ ಭೇಟಿಯಾಗಿ ಸಮಸ್ಯೆಗಳನ್ನು ಆಲಿಸಬೇಕು. ಸ್ಥಳೀಯ ಜನಪ್ರತಿನಿಧಿಗಳ ಜೊತೆಗೆ ಅಧಿಕಾರಿಗಳಿಗೆ ಇರುವ ಸಮನ್ವಯ

ಮಂಗಳೂರು: ಸ್ಪೀಕರ್ ಯು.ಟಿ. ಖಾದರ್ ಅವರಿಗೆ ತುಳು ಅಕಾಡೆಮಿಯಿಂದ ಸನ್ಮಾನ

ಕರ್ನಾಟಕ ವಿಧಾನಸಭೆಯಲ್ಲಿ ತುಳು ಭಾಷೆಯನ್ನು ಮಾತನಾಡಲು ಅವಕಾಶ ಮಾಡಿಕೊಟ್ಟಿರುವ ಹಿನ್ನೆಲೆಯಲ್ಲಿ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ಮಂಗಳೂರಲ್ಲಿ ಸನ್ಮಾನಿಸಿದರು. ಖಾದರ್ ಅವರಿಗೆ ಸಾಲು ಹಾಗೂ ಪುಸ್ತಕ ಮತ್ತು ಸ್ಮರಣಿಕೆ ನೀಡಿ, ಅಭಿನಂದಿಸಿದರು. ಈ ವೇಳೆ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯರಾದ ರೋಹಿತ್ ಉಳ್ಳಾಲ್ ಉಪಸ್ಥಿತರಿದ್ದರು.

ಸಂಕಷ್ಟ ಪರಿಹಾರ ಹಾಗೂ ಇಷ್ಟಾರ್ಥ ಸಿದ್ಧಿಗಾಗಿ ಕೊರಗಜ್ಜ ದೈವದ ಮೊರೆ ಹೋದ ಶಾಸಕ ವಿನಯ್ ಕುಲಕರ್ಣಿ!

ಉಳ್ಳಾಲ: ತೊಕ್ಕೊಟ್ಟು ಜಂಕ್ಷನ್‌ನಲ್ಲಿರುವ ಕೊರಗಜ್ಜನ ಕಟ್ಟೆಯಲ್ಲಿ ಧಾರವಾಡ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ವಿನಯ್ ಕುಲಕರ್ಣಿಯಿಂದ ಸಂಕಷ್ಟ ಪರಿಹಾರ ಹಾಗೂ  ಇಷ್ಟಾರ್ಥ ಸಿದ್ಧಿಗಾಗಿ ಕೊರಗಜ್ಜ ದೈವಕ್ಕೆ ಹರಕೆ ಕೋಲ ಸೇವೆಯು ಶನಿವಾರದಂದು ನಡೆಯಿತು. ಈ ಸಂದರ್ಭದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಇವರು ಚುನಾವಣಾ ಪೂರ್ವದಲ್ಲಿಯೇ ಕಾಂಗ್ರೆಸ್ ನಾಯಕರು ಹಾಗೂ ಮಂಗಳೂರಿನ ನನ್ನ ಸ್ನೇಹಿತರು ಕೋಲ ಸೇವೆ ಕೊಡುವ ಬಗ್ಗೆ ಹೇಳಿದ್ದರು.ಈಗ ಘಳಿಗೆ

ಉಳ್ಳಾಲ: ಉಳ್ಳಾಲ ಖಾಝಿ ಆಗಿ ಸೇವೆಯಲ್ಲಿದ್ದ ಫಝಲ್ ಕೋಯಮ್ಮ ತಂಙಳ್ ವಿಧಿವಶ

ಉಳ್ಳಾಲ: ಉಳ್ಳಾಲ ಖಾಝಿ ಆಗಿ ಸೇವೆಯಲ್ಲಿದ್ದ ಫಝಲ್ ಕೋಯಮ್ಮ ತಂಙಳ್ (65) ಎಟ್ಟಿಕುಳದಲ್ಲಿ ಸೋಮವಾರ ವಿಧಿವಶರಾದರು.ಅವರ ತಂದೆ ಮರ್ಹೂಂ ತಾಜುಲ್ ಉಲಮಾ ಅವರು ಉಳ್ಳಾಲ ಖಾಝಿ ಸಯ್ಯದ್ ಅಬ್ದುಲ್ ರಹಿಮಾನ್ ಕುಂಞಿ ಕೋಯ ತಂಙಳ್ಆಗಿದ್ದ ಸಂದರ್ಭದಲ್ಲಿ ಸಹಾಯಕ ಖಾಝಿ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. 2014ರಲ್ಲಿ ತಾಜುಲ್ ಉಲಮಾ ಸಯ್ಯದ್ ಅಬ್ದುಲ್ ರಹಿಮಾನ್ ಕುಂಞಿ ಕೋಯ ತಂಙಳ್ ನಿಧನ ಹೊಂದಿದ್ದು, ಇದರ ಬಳಿಕ ಫಝಲ್ ಕೋಯಮ್ಮ ತಂಙಳ್ ಖಾಝಿ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.

ಹಾಲಿನ ದರ ಏರಿಕೆ ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಪ್ರತಿಭಟನೆ

ಉಳ್ಳಾಲ: ಹಾಲಿನ ದರವನ್ನು ಏರಿಸುವ ಮೂಲಕ ರಾಜ್ಯದ ಮಕ್ಕಳಿಗೆ ಹಾಲು ಕುಡಿಯದಂತೆ ಮಾಡಿರುವ ರಾಜ್ಯ ಕಾಂಗ್ರೆಸ್ ಸರಕಾರದ ನೀತಿಯಿಂದಾಗಿ ಮಕ್ಕಳು ಪೌಷ್ಠಿಕಾಂಶದ ಕೊರತೆಯಿಂದ ಬಳಲಿದ್ದಾರೆ. ಹಿಂದೆ ಮಕ್ಕಳಲ್ಲಿ ಇದ್ದಂತಹ ನ್ಯೂನ್ಯತೆಗಳು ಮತ್ತೆ ಮರುಕಳಿಸಲಿದೆ ಎಂದು ಫಲಾನುಭವಿಗಳ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯೆ ಧನಲಕ್ಷ್ಮೀ ಗಟ್ಟಿ ಹೇಳಿದರು. ಬಿಜೆಪಿ ಮಂಗಳೂರು ವಿಧಾನಸಭಾ ಕ್ಷೇತ್ರದ ಮಹಿಳಾ ಮೋರ್ಚಾದ ವತಿಯಿಂದ ಹಾಲಿನ ದರ ಏರಿಕೆ ಖಂಡಿಸಿ ರಾಜ್ಯ ಸರಕಾರದ ವಿರುದ್ಧ

ಉಳ್ಳಾಲ: ಟಿಪ್ಪರ್‌ ಅಪಘಾತ -ಗಾಯಾಳು ಸ್ಕೂಟರ್‌ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

ಉಳ್ಳಾಲ: ಟಿಪ್ಪರ್‌ ಹಾಗೂ ಸ್ಕೂಟರ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಪಾವೂರು ಮಲಾರು ಅಕ್ಷರನಗರ ನಿವಾಸಿ ವಿಶ್ವನಾಥ್‌ ಆಚಾರ್ಯ ಎಂಬವರ ಪುತ್ರ ಗಣೇಶ್‌ ಆಚಾರ್ಯ ( 27) ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಫಸ್ಟ್‌ ನ್ಯುರೋ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯಲು ಸಹಕರಿಸಿದ ಹಿತೈಷಿಗಳ,ಸಂಬಂಧಿಕರ, ಸ್ನೇಹಿತರ ಪ್ರಾರ್ಥನೆ ಕೊನೆಗೂ ಈಡೇರಲಿಲ್ಲ.ಜೂ.28 ರಂದು ಗಣೇಶ ಪಾವೂರು

ಪಾವೂರಿನಲ್ಲಿ ಕಾಂಕ್ರೀಟ್ ರಸ್ತೆಯ ಉದ್ಘಾಟನೆ

ಉಳ್ಳಾಲ: ಮಂಗಳೂರು ನಗರದಲ್ಲಿರುವಂತಹ ಸೌಕರ್ಯಗಳನ್ನು ಕ್ಷೇತ್ರದ ಅತ್ಯಂತ ಹಿಂದುಳಿದ ಪ್ರದೇಶಕ್ಕೆ ಮಾಡಿಕೊಡುವುದೇ ನನ್ನ ಕಲ್ಪನೆ , ಅದರಂತೆ ಪಾವೂರು ಗ್ರಾಮದ ಚಿತ್ರಣ ಮುಂದಿನ 10 ವರ್ಷಗಳಲ್ಲೇ ಬದಲಾವಣೆಯಾಗಲಿದೆ ಎಂದು ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್ ಹೇಳಿದರು. ಪಾವೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೋಡಾರ್ ಸೈಟ್ ಹಾಗೂ ಒಂದನೇ ವಾರ್ಡಿಗೆ ಶಾಸಕರ ಅನುದಾನದಲ್ಲಿ ನಿರ್ಮಿಸಲಾದ ಕಾಂಕ್ರೀಟ್ ರಸ್ತೆಯನ್ನು ಉದ್ಘಾಟಿಸಿ ಮಾತನಾಡಿದರು.ಪೋಡಾರು ಭಾಗದಲ್ಲಿ ಹಿಂದೆ