Home ಕರಾವಳಿ Archive by category ಉಳ್ಳಾಳ (Page 31)

ಸಂಘಪರಿವಾರ ಪ್ರೇರಿತ ಗೂಂಡಾಗಿರಿ ವಿರುದ್ಧ ಡಿವೈಎಫ್‍ಐ ಪ್ರತಿಭಟನೆ

ಉಳ್ಳಾಲ: ತುಳುನಾಡಿನ ಯುವಕರ ತಲೆಗೆ ಕೋಮು ವಿಷ ಬೀಜ ಬಿತ್ತಿಸಿ ಹೆಣವಾಗಿಸಲಾಗುತ್ತಿದೆ. ಧಾರ್ಮಿಕ ಪೆÇಲೀಸ್ ಗಿರಿ ನಿರಂತರವಾಗಿ ನಡೆದರೂ ಪೊಲೀಸ್ರು ಆರ್ ಎಸ್ ಎಸ್ ಏಜೆಂಟರುಗಳಾಗಿ ವರ್ತಿಸುತ್ತಿದ್ದಾರೆ ಎಂದು ಡಿವೈಎಫ್‍ಐ ಜಿಲ್ಲಾಧ್ಯಕ್ಷ ಬಿ.ಕೆ ಇಮ್ತಿಯಾಝ್ ಹೇಳಿದರು. ಅವರು ಡಿವೈಎಫ್ ಐ ಉಳ್ಳಾಲ ವಲಯ ಸಮಿತಿ ತೊಕ್ಕೊಟ್ಟು ಬಸ್ ನಿಲ್ದಾಣದ ಬಳಿ ಶುಕ್ರವಾರ

ಹೋಮದ ಹೊಗೆಯ ಲಾಭ ಗಳಿಸಿ ಮನೆ ಕಳವು ನಡೆಸಿದ ಕಳ್ಳ ಕೋಟೆಕಾರಿನಲ್ಲಿ ಗೃಹಪ್ರವೇಶದ ದಿನವೇ ನಡೆದ ಘಟನೆ

ಉಳ್ಳಾಲ: ಗೃಹಪ್ರವೇಶದ ಮನೆಯಲ್ಲಿ ಪೂಜಾ ಸಂದರ್ಭದಲ್ಲೇ ಎಲ್ಲರ ಮುಂದೆ ಕಳವು ನಡೆಸಿದ ಕಳ್ಳನೋರ್ವ, ಅದೇ ರಾತ್ರಿ ನೆರೆಮನೆಯಿಂದಲೂ ಲಕ್ಷಾಂತರ ಮೌಲ್ಯದ ನಗನಗದು ದೋಚಿದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆಕಾರು ಬಳಿ ನಡೆದಿದೆ. ಡಿ.10 ರಂದು ರಾತ್ರಿ ಸ್ಮಿತಾ-ದಾಮೋದರ್ ದಂಪತಿ ಕೋಟೆಕಾರು ಪಟ್ಟಣ ಪಂ. ವ್ಯಾಪ್ತಿಯ ಅಡ್ಕ ಬೈಲು ಎಂಬಲ್ಲಿ ತಾವು ನಿರ್ಮಸಿದ ನೂತನ ಮನೆಯಲ್ಲಿ ವಾಸ್ತು ಹೋಮ ನೆರವೇರಿಸಿದ್ದರು.ವಾಸ್ತು ಹೋಮ ನಡೆಯುತ್ತಿರುವಾಗಲೇ ಎಲ್ಲರ ಸಮ್ಮುಖದಲ್ಲೇ

ದೇರಳಕಟ್ಟೆ ಫ್ಲಾಟ್‍ನಲ್ಲಿ ತಪ್ಪಿದ ಭಾರೀ ಅಗ್ನಿ ಅವಘಢ

ಉಳ್ಳಾಲ: ದೇರಳಕಟ್ಟೆ ಎರಡು ಆಸ್ಪತ್ರೆಗಳ ನಡುವೆ ಇರುವ ಫ್ಲಾಟ್ ಒಂದರಲ್ಲಿ ಅಗ್ನಿ ಅವಘಢ ಸಂಭವಿಸಿದ್ದು, ಫ್ಲಾಟ್ ನ ಮೆನೇಜರ್ ಸಮಯಪ್ರಜ್ಞೆಯಿಂದ 100ಕ್ಕೂ ಅಧಿಕ ಮಂದಿಯಿರುವ 13 ಮಹಡಿಗಳ ಫ್ಲಾಟ್‍ನಲ್ಲಿ ಅಗ್ನಿ ದುರಂತ ತಪ್ಪಿದೆ. ದೇರಳಕಟ್ಟೆ ಕ್ಷೇಮ ಆಸ್ಪತ್ರೆ ಬಳಿಯಿರುವ ಫ್ಲಾಮ ನೆಸ್ಟ್ ಫ್ಲಾಟ್‍ನಲ್ಲಿ ಅಗ್ನಿ ಅವಘಢ ಸಂಭವಿಸಿರುವುದು.ಫ್ಲಾಟ್‍ನ 202ರ ರೂಮಿನಲ್ಲಿ ದಂತ ವೈದ್ಯಕೀಯ ಕಲಿಯುವ ಇಬ್ಬರು ವಿದ್ಯಾರ್ಥಿನಿಯರಿದ್ದು, ಡಿ.20 ರ

ಮಂಗಳೂರು ವಿವಿ ಪದವಿ ಫಲಿತಾಂಶ ವಿಳಂಬ : ರಾಜೀನಾಮೆ ಮುಂದಾದ ಕುಲಸಚಿವರು

ಉಳ್ಳಾಲ: ಮಂಗಳೂರು ವಿ.ವಿ ವ್ಯಾಪ್ತಿಯ ಪದವಿ ಫಲಿತಾಂಶ ವಿಳಂಬ ಖಂಡಿಸಿ ಕೊಣಾಜೆ ಮಂಗಳೂರು ವಿ.ವಿ ಆಡಳಿತ ಕಚೇರಿಗೆ ಎಬಿವಿಪಿ ಕಾರ್ಯಕರ್ತರು ಮುತ್ತಿಗೆ ಹಾಕಿರುವ ಘಟನೆ ಇಂದು ನಡೆದಿದೆ. ಈ ನಡುವೆ ಆಡಳಿತ ಕಚೇರಿಯಲ್ಲಿ ನಡೆಯುತ್ತಿದ್ದ ಸಿಂಡಿಕೇಟ್ ಸಭೆಗೆ ಎಬಿವಿಪಿ ಕಾರ್ಯಕರ್ತರು ನುಗ್ಗಲು ಯತ್ನಿಸಿದಾಗ ಪೊಲೀಸ್ರು ತಡೆಹಿಡಿದಿದ್ದಾರೆ. ಎಬಿವಿಪಿ ಮಂಗಳೂರು ವಿಭಾಗ ಸಂಚಾಲಕ ಹರ್ಷಿತ್ ಕೊಯ್ಲ ,ಮಾತನಾಡಿ ಮಂಗಳೂರು ವಿಶ್ವವಿದ್ಯಾಲಯದ ಪದವಿ ಮತ್ತು ಸ್ನಾತಕೋತ್ತರ

ಕೇರಳ ರಾಜ್ಯ ಕಬ್ಬಡಿ ತಂಡದ ಮಾಜಿ ನಾಯಕ ಸುನಿಲ್ ಕುಮಾರ್ ನಿಧನ

ಉಳ್ಳಾಲ: ಕೇರಳ ರಾಜ್ಯ ಅಮೆಚೂರು ಕಬ್ಬಡ್ಡಿ ತಂಡದ ಮಾಜಿ ನಾಯಕ ಹಾಗೂ ರಾಷ್ಟ್ರೀಯ ತಂಡದ ಮಾಜಿ ಕಬ್ಬಡ್ಡಿ ಪಟು ಮಂಜೇಶ್ವರ ನಿವಾಸಿ ಸುನಿಲ್ ಕುಮಾರ್ (53) ಇಂದು ಸ್ವಗೃಹದಲ್ಲಿ ನಿಧನಹೊಂದಿದರು.ಅತೀವ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದ ಇವರು , ಗ್ಯಾಂಗ್ರೀನ್ ಗೆ ಒಳಗಾಗಿ ಹಲವು ತಿಂಗಳಿನಿಂದ ಅಸೌಖ್ಯಕ್ಕೊಳಗಾಗಿದ್ದರು. ಕೇರಳದಲ್ಲಿ ಹಿಂದೆ ಇದ್ದಂತಹ ಅಬಕಾರಿ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಆನಂತರ ಉದ್ಯಮ ನಡೆಸುತ್ತಿದ್ದರು. ಕಬ್ಬಡ್ಡಿ ಕೇರಳ ರಾಜ್ಯ

ಅಸೈಗೋಳಿ:ಮೆಡಿಕಲ್ ರೆಪ್ ಆತ್ಮಹತ್ಯೆ

ಉಳ್ಳಾಲ: ಯುವಕನೋರ್ವ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಸೈಗೋಳಿ ಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ.ಅಸೈಗೋಳಿ ನಿವಾಸಿ ಜಯರಾಮ್ ಶೆಟ್ಟಿ ಎಂಬವರ ಪುತ್ರ ಅಭಿಲಾಷ್(35) ಆತ್ಮಹತ್ಯೆಗೆ ಶರಣಾದವರು. ಬೆಳಿಗ್ಗೆ ಎಂದಿನಂತೆ ವಾಕಿಂಗ್ ಗೆ ತೆರಳಿದ್ದ ಅಭಿಲಾಷ್ , ವಾಪಸ್ಸಾಗಿ ಮನೆಯಲ್ಲೆ ಇದ್ದರು. ತಾಯಿ ಮದುವೆಗೆಂದು ತೆರಳಿದ್ದ ಸಂದರ್ಭ, ತಂದೆ ಮನೆಯ ಹೊರಗೆ ಕುಳಿತಿದ್ದ ಸಂದರ್ಭ ಅಭಿಲಾಷ್ ಮನೆಯ ಕೋಣೆಯೊಳಗೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ

ಬೈಕ್ ಅಪಘಾತದಲ್ಲಿ ವೈದ್ಯ ವಿದ್ಯಾರ್ಥಿ ಮೃತ್ಯು

ಉಳ್ಳಾಲ: ಬೈಕ್ ಅಪಘಾತದಲ್ಲಿ ವೈದ್ಯ ವಿದ್ಯಾರ್ಥಿ ಸಾವನ್ನಪ್ಪಿ , ಸಹಸವಾರ ಗಾಯಗೊಂಡ ಘಟನೆ ಕುತ್ತಾರು ಸಮೀಪದ ಮದಕ ಕ್ವಾಟ್ರಗುತ್ತು ಬಳಿ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ. ಬೆಂಗಳೂರು ಯಶವಂತಪುರ ನಿವಾಸಿ ನಿಶಾಂತ್ ( 22) ಮೃತರು. ಸಹಸವಾರ ಬೀದರ್ ನಿವಾಸಿ ಶಕೀಬ್ ಗಾಯಗೊಂಡಿದ್ದಾರೆ. ದೇರಳಕಟ್ಟೆಯ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಪೂರೈಸಿ ದ್ವಿತೀಯ ವರ್ಷದ ಇಂಟರ್ನ್‍ಶಿಪ್ ನಡೆಸುತ್ತಿದ್ದರು. ಕುತ್ತಾರು ಸಿಲಿಕೋನಿಯಾ ಫ್ಲ್ಯಾಟ್ ನಲ್ಲಿ

ಹರೇಕಳದಲ್ಲಿ ಸ್ವರಾಜ್ ಶೆಟ್ಟಿ ಅಭಿನಯದ ಸಿನಿಮಾಕ್ಕೆ ಮುಹೂರ್ತ

ಉಳ್ಳಾಲ:  ಕಾಂತಾರ ಚಿತ್ರದಲ್ಲಿ ನಟಿಸಿರುವ ಅನೇಕ ಕಲಾವಿದರುಗಳನ್ನು ಒಳಗೊಂಡು , ಪ್ರಮುಖ ಗುರುವ ಪಾತ್ರ ಮಾಡಿದ್ದ ಸ್ವರಾಜ್ ಶೆಟ್ಟಿ ನಾಯಕನಟನಾಗಿ ನಟಿಸಲಿರುವ , ಮ್ಯಾಕ್ಸ್ ಕ್ರಿಯೇಷನ್ಸ್ ಸಂಸ್ಥೆ ನಿರ್ಮಿಸುತ್ತಿರುವ ಇನ್ನೇನು ಹೆಸರು ಇಡಲಿರುವ ‘ಪ್ರೊಡಕ್ಷನ್ ನಂ–೧ ಕನ್ನಡ ಚಲನಚಿತ್ರದ ಮುಹೂರ್ತ ಹರೇಕಳದ ಅರ್ಧನಾರೀಶ್ವರ ದೇವಸ್ಥಾನದಲ್ಲಿ   ಭಾನುವಾರ  ನಡೆಯಿತು. ಹಿರಿಯ ರಂಗಕರ್ಮಿ ವಿಜಯಕುಮಾರ್ ಕೊಡಿಯಾಲ್ ಬೈಲ್ ಕ್ಲಾಪ್

ತಲಪಾಡಿಯಲ್ಲಿ ಸರಣಿ ಕಳ್ಳತನ : ಪೊಲೀಸರ ವಿರುದ್ಧ ಸಾರ್ವಜನಿಕರು ಗರಂ

ರಾಷ್ಟ್ರೀಯ ಹೆದ್ದಾರಿ ಬಳಿಯ ಆರು ಅಂಗಡಿಗಳಿಗೆ ನುಗ್ಗಿದ ಕಳ್ಳರು ಸರಣಿ ಕಳವು ನಡೆಸಿ ಸಾವಿರಾರು ರೂ. ಬೆಲೆಬಾಳುವ ಸೊತ್ತುಗಳನ್ನು ಕಳವು ನಡೆಸಿರುವ ಘಟನೆ ಗಡಿಭಾಗ ತಲಪಾಡಿಯಲ್ಲಿ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಅಶ್ರಫ್, ಕುಲದೀಪ್, ಶ್ರೀಧರ್ ಹಾಗೂ ಮಹಮ್ಮದ್ , ಶಂಕರ್ ಎಂಬವರಿಗೆ ಸೇರಿದ ಅಂಗಡಿಗಳಿಂದ ಸಾವಿರಾರು ರೂ. ಬೆಲೆಬಾಳುವ ವಸ್ತುಗಳು ಹಾಗೂ ಕ್ಯಾಷ್ ಡ್ರಾವರಿನಲ್ಲಿದ್ದ ನಗದು ಹಾಗೂ ಇನ್ನೋರ್ವ ಅಶ್ರಫ್ ಎಂಬವರಿಗೆ ಸೇರಿದ ಝೆರಾಕ್ಸ್ ಅಂಗಡಿಯಿಂದ ನಗದು,

ಕೋಟೆಕಾರು ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ: ದಂಪತಿ ಸಹಿತ ನಾಲ್ವರ ಬಂಧನ

ಉಳ್ಳಾಲ : ಕೋಟೆಕಾರು ಬೀರಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿಯ ಬಾಡಿಗೆ ಮನೆಯೊಂದರಲ್ಲಿ ಯುವತಿಯರನ್ನ ಇಟ್ಟು ವೇಶ್ಯಾವಾಟಿಕೆ ನಡೆಸುತ್ತಿದ್ದು,ಮಾಂಸ ಧಂದೆಯ ಅಡ್ಡೆಗೆ ಉಳ್ಳಾಲ ಪೊಲೀಸ್ರು ದಾಳಿ ನಡೆಸಿ ದಂಪತಿ ಸಹಿತ ನಾಲ್ವರನ್ನ ಬಂಧಿಸಿದ್ದಾರೆ. ಬೀರಿ ಬಾಡಿಗೆ ಮನೆ ನಿವಾಸಿ ಮೊಹಮ್ಮದ್ ಇಕ್ಬಾಲ್, ಆತನ ಪತ್ನಿ ಅಲಿಮಮ್ಮ, ಉಳ್ಳಾಲ ನಿವಾಸಿ ಶರ್ಫುದ್ದೀನ್,ಇರ್ಶಾದ್ ಅಡ್ಯನಡ್ಕ ಅವರನ್ನು ಉಳ್ಳಾಲ ಪೊಲೀಸ್ರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.