Home ಕರಾವಳಿ Archive by category ಉಳ್ಳಾಳ (Page 36)

ಕಡಲ್ಕೊರೆತ ಶಾಶ್ವತ ತಡೆಗೆ ಸೀವಿಯರ್ ಬ್ರೇಕರ್ ಟೆಕ್ನಾಲಜಿ ಅಳವಡಿಕೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ

ಉಳ್ಳಾಲ: ಕಡಲ್ಕೊರೆತ ಶಾಶ್ವತ ತಡೆಗಾಗಿ ಸೀವಿಯರ್ ಬ್ರೇಕರ್ ಟೆಕ್ನಾಲಜಿ ಅಳವಡಿಸುವ ಯೋಜನೆ ರೂಪಿಸಲಾಗಿದೆ. ಉಳ್ಳಾಲದ ಬಟ್ಟಪ್ಪಾಡಿಯಲ್ಲಿ ಹೊಸ ವಿಧಾನದ ಶಾಶ್ವತ ತಡೆಯನ್ನು ನಿರ್ಮಿಸಲು ಅನುಮತಿಯನ್ನು ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.ಅವರು ಕಡಲ್ಕೊರೆತಕ್ಕೀಡಾದ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಉಚ್ಚಿಲ ಬಟ್ಟಪ್ಪಾಡಿ ಪ್ರದೇಶಕ್ಕೆ

ಉಳ್ಳಾಲದಲ್ಲಿ ಹಾನಿಗೊಳಗಾದ ಪ್ರದೇಶ ವೀಕ್ಷಿಸಿದ ಕಂದಾಯ ಸಚಿವರು : ಮಳೆಯಿಂದ ಸಂಪೂರ್ಣ ಹಾನಿಯಾದ ಮನೆಗೆ 5 ಲಕ್ಷ ರೂ. ಪರಿಹಾರ

ಉಳ್ಳಾಲ: ರಾಜ್ಯದ ಏಳು ಜಿಲ್ಲೆಗಳಲ್ಲಿ ತೀವ್ರ ಮಳೆಯಾಗಿದ್ದು, ಇಲ್ಲಿ ಸಂಪೂರ್ಣ ಹಾನಿಗೀಡಾದ ಮನೆಯವರಿಗೆ ತಕ್ಷಣ ರೂ. 5 ಲಕ್ಷ ಪರಿಹಾರ ನೀಡುವಂತೆ ಏಳು ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಸೂಚನೆಯನ್ನು ನೀಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ. ಅವರು ಕಡಲ್ಕೊರೆತಕ್ಕೀಡಾದ ಉಳ್ಳಾಲ ತಾಲೂಕಿನ ಉಚ್ಚಿಲ, ಬಟ್ಟಂಪಾಡಿ, ಸೀಗ್ರೌಂಡ್ ಹಾಗೂ ಮೊಗವೀರಪಟ್ನ ಪ್ರದೇಶಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಬಂದರು ಹಾಗೂ ಮೀನುಗಾರಿಕಾ ಸಚಿವರುಗಳ ಜೊತೆಗೆ ಭೇಟಿ

ದೇರಳಕಟ್ಟೆಯ ಕಾನೆಕೆರೆ ಗುಡ್ಡ ಕುಸಿತ : ಹಾನಿಗೊಳಗಾದ ಪ್ರದೇಶಕ್ಕೆ ಶಾಸಕ ಯು.ಟಿ. ಖಾದರ್ ಭೇಟಿ

ಉಳ್ಳಾಲ: ಮಳೆಯಿಂದ ಹಾನಿಗೀಡಾದ ಬೆಳ್ಮ ಗ್ರಾ.ಪಂ ವ್ಯಾಪ್ತಿಯ ವಿವಿಧ ಪ್ರದೇಶಗಳಿಗೆ ಶಾಸಕ ಯು.ಟಿ ಖಾದರ್ ಭೇಟಿ ನೀಡಿ ತುರ್ತು ಪರಿಹಾರ ಕಂಡುಕೊಳ್ಳುವ ಭರವಸೆ ನೀಡಿದರು.ಬೋರುಗುಡ್ಡೆ ಎರಡು ಮನೆಗಳ ಮೇಲೆ ಗುಡ್ಡೆ ಜರಿತವಾಗಿ ಹಾನಿ, ರೆಂಜಾಡಿಯ ಪಾಲೆದಡಿ ಮಸೀದಿ ಬಳಿ ಹಾನಿ, ಕೊಳಕೆಬೈಲ್ ಗುಡ್ಡ ಜರಿತ ಹಾಗೂ ಕಾನಕೆರೆ ಬಳಿ ಪೆಟ್ರೋಲ್ ಪಂಪ್ ಹಿಂಭಾಗದ ಒಂದು ಭಾಗ ಜರಿತ ಉಂಟಾಗಿದೆ. ಇವೆಲ್ಲವನ್ನು ಸ್ಥಳೀಯ ಜನಪ್ರತಿನಿಧಿಗಳ ಜೊತೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ. ಈ

ಕಡಲ್ಕೊರೆತಕ್ಕೆ ಬಟ್ಟಪ್ಪಾಡಿ ತತ್ತರ : ತೈಲ ಸೋರಿಕೆ ಭೀತಿಯೊಂದಿಗೆ ಅಲೆಗಳ ಹೊಡೆತ

ಉಳ್ಳಾಲ: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಉಚ್ಚಿಲ ಬಟ್ಟಪ್ಪಾಡಿ ಪರಿಸರದಲ್ಲಿ ಕಡಲ್ಕೊರೆತ ತೀವ್ರಗೊಂಡು ವ್ಯಾಪಕ ಹಾನಿಯುಂಟು ಮಾಡಿದೆ.  ಒಂದು ರೆಸಾರ್ಟ್‌ ಸಂಪೂರ್ಣ ಸಮುದ್ರಪಾಲಾಗುವ ಹಂತದಲ್ಲಿದೆ. ಮೂರು ಮನೆಗಳಿಗೆ ಸಮುದ್ರದ ಅಲೆಗಳು ಅಪ್ಪಳಿಸಲು ಆರಂಭಿಸಿದೆ. 1 ಕಿ.ಮೀ ಉದ್ದದ ರಸ್ತೆ ಸಂಪೂರ್ಣ ಕೊಚ್ಚಿ ಹೋಗಿರುವುದರಿಂದ 20 ಮನೆಮಂದಿಗೆ ಮುಖ್ಯ ರಸ್ತೆಯ ಸಂಪರ್ಕ ಕಡಿತವಾಗಿದೆ. ಸಿರಿಯಾ ಹಡಗು ಮುಳುಗಡೆಯೂ ಇದೇ

ಮಹಾಕಾಳಿ ದೇವಿ ಅಪಮಾನಗೈದ ನಿರ್ದೇಶಕಿಯನ್ನು ಬಂಧಿಸಿ : ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ದಿನೇಶ್ ರೈ

ಉಳ್ಳಾಲ: ದೇವಿ ಮಹಾಂಕಾಳಿಯನ್ನು ಅವಹೇಳನಕಾರಿಯಾಗಿ , ಹಿಂದೂಗಳ ಧಾರ್ಮಿಕ ಭಾವನಗಳಿಗೆ ಧಕ್ಕೆ ತರುವ ರೂಪದಲ್ಲಿ ಚಿತ್ರಿಸಿರುವ ಡಾಕ್ಯುಮೆಂಟರಿ ನಿರ್ದೇಶಕಿ ಲೀನಾ ಮಣಿ ಮೇಕಳೈ ವಿರುದ್ಧ ಸರಕಾರ ಶೀಘ್ರವೇ ಪ್ರಕರಣ ದಾಖಲಿಸಿ ಕಾನೂನು ಕ್ರಮಕೈಗೊಳ್ಳಬೇಕು ಎಂದು ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ದಿನೇಶ್ ರೈ ಒತ್ತಾಯಿಸಿದ್ದಾರೆ. ದುಷ್ಟರನ್ನು ಸಂಹರಿಸುವ ದೇವಿ ಮಹಾಕಾಳಿ. ಹಿಂದೂಗಳು ಬಹಳಷ್ಟು ನಂಬುವ ದೇವಿಗೆ ಅವಹೇಳ ನಡೆಸಿರುವುದು ಸಮಸ್ತ ಹಿಂದೂ ಸಮಾಜಕ್ಕೆ

ದೇರಳಕಟ್ಟೆಯ ಕಣಚೂರು ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ : ನಿಸ್ವಾರ್ಥ ಸಾಧಕ ವೈದ್ಯರಿಗೆ ಸನ್ಮಾನ ಕಾರ್ಯಕ್ರಮ

ದೇರಳಕಟ್ಟೆಯ ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ವೈದ್ಯರ ದಿನಾಚರಣೆ ಅಚ ವೈದ್ಯರ ದಿನಾಚರಣೆ ಪ್ರಯುಕ್ತ ನಿಸ್ವಾರ್ಥ ಸಾಧಕ ವೈದ್ಯ ಡಾ. ಗೋಪಾಲ್ ಅವರಿಗೆ ಸನ್ಮಾನಿಸಲಾಯಿತು. ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಚೇರ್ ಮೆನ್ ಯು.ಕೆ. ಮೋನು ಸನ್ಮಾನಿಸಿ ಮಾತನಾಡಿ, ಸನಾತನ ಧರ್ಮದಲ್ಲಿ ಅನೇಕ ಮಹಾತ್ಮರನ್ನು ಇನ್ನಿತರ ಧರ್ಮದಲ್ಲೂ ಅವರ ಜನ್ಮ ದಿನದ ಮೂಲಕ ಭಾರತೀಯರಾದ ನಾವು ಕೊಂಡಾಡುತ್ತಿದ್ದು ಸೇವಾ ವೃತ್ತಿ

ಉಳ್ಳಾಲ: ಎಸ್‍ಡಿಪಿಐ ಪಕ್ಷದ ಕಚೇರಿ, ಮಾಹಿತಿ ಸೇವಾ ಕೇಂದ್ರ ಉದ್ಘಾಟನೆ

ಉಳ್ಳಾಲ. ಎಸ್ ಡಿಪಿಐ ಉಳ್ಳಾಲ ನಗರ ಸಮಿತಿ ವತಿಯಿಂದ ಸ್ಥಳಾಂತರಿತ ಪಕ್ಷದ ಕಚೇರಿ ಮತ್ತು ಮಾಹಿತಿ ಸೇವಾ ಕೇಂದ್ರ ಉದ್ಘಾಟನೆಗೊಂಡಿತು.ಉಳ್ಳಾಲ ಸೈಯ್ಯದ್ ಮದನಿ ದರ್ಗಾ ಸಮಿತಿ ಅಧ್ಯಕ್ಷ ಅಬ್ದುಲ್ ರಶೀದ್ ಹಾಜಿ ನೂತನ ಸೇವಾ ಕೇಂದ್ರವನ್ನು ಉದ್ಘಾಟಿಸಿದರು.ಎಸ್ ಡಿಪಿಐ ದ.ಕ ಪ್ರ.ಕಾರ್ಯದರ್ಶಿ ಅನ್ವರ್ ಸಾದಾತ್ ಬಜತ್ತೂರು ಎಸ್ ಡಿಪಿಐ ಉಳ್ಳಾಲ ನಗರ ಸಮಿತಿ ಕಚೇರಿಯನ್ನು ಉದ್ಘಾಟಿಸಿದರು.ಎಸ್ ಡಿಪಿಐ ರಾಜ್ಯ ಪ್ರ.ಕಾರ್ಯದರ್ಶಿ ಬಿ.ಆರ್ ಭಾಸ್ಕರ್ ಪ್ರಸಾದ್ ದಿಕ್ಸೂಚಿ

ಅಕ್ಷರ ಸಂತನ ಮನೆಗೆ ವೃಕ್ಷಮಾತೆ ಭೇಟಿ

ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರ ಮನೆಗೆ ಪದ್ಮಶ್ರೀ ಪುರಸ್ಕೃತೆ ವೃಕ್ಷಮಾತೆ ತುಳಸೀ ಗೌಡ ಅವರು ಹರೇಕಳದ ನ್ಯೂಪಡ್ಪು ಮನೆಯಲ್ಲಿ ಭೇಟಿ ನೀಡಿದರು. ಇಂದು ಬೆಳಗ್ಗೆ ಭೇಟಿ ನೀಡಿದ ತುಳಸಿ ಗೌಡ ಅವರು ಹಾಜಬ್ಬರ ಜೊತೆ ಉಪಹಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಹರೇಕಳ ಗ್ರಾಮಸ್ಥರಿಂದ ತುಳಸಿ ಗೌಡ ಅವರನ್ನು ಅಭಿನಂದಿಸಲಾಯಿತು.

ಭಗತ್ ಸಿಂಗ್ ಸೇವಾ ಪ್ರತಿಷ್ಠಾನದಿಂದ ಗೂಡುದೀಪ ಸಂಗಮ

ಉಳ್ಳಾಲ: ಭಗತ್ ಸಿಂಗ್ ಸೇವಾ ಪ್ರತಿಷ್ಠಾನ ನಡೆಸುವ 13 ನೇ ವರ್ಷದ ಗೂಡುದೀಪ ಸಂಗಮ ದೀಪಾವಳಿ ಸಂಭ್ರಮ ಗೂಡುದೀಪ ಸ್ಪರ್ಧೆಯು ನ. 11 ರಂದು ಸಂಜೆ 5.30 ಕ್ಕೆ ಕುತ್ತಾರು ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ನಡೆಯಲಿದೆ ಎಂದು ತೊಕ್ಕೊಟ್ಟು ಭಗತ್ ಸಿಂಗ್ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಜೀವನ್ ಕುಮಾರ್ ತೊಕ್ಕೊಟ್ಟು ಹೇಳಿದರು ತೊಕ್ಕೊಟ್ಟು ಬ್ರಹ್ಮಶ್ರೀ ಬಿಲ್ಲವ ವೇದಿಕೆ ಕಚೇರಿಯಲ್ಲಿ ನಡೆಸಿದ ಸುದ್ಧಿಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದರು. ಸಾಂಪ್ರದಾಯಿಕ ವಿಭಾಗ,

ಕೊಣಾಜೆಯಲ್ಲಿ ಅಟಲ್ ಟಿಂಕರಿಂಗ್ ಲ್ಯಾಬ್ ಉದ್ಘಾಟನೆ

ಕೊಣಾಜೆ: ಕೊಣಾಜೆ ಅಡ್ಕರೆ ಪಡ್ಪು ವಿನ ಜಮಿಯ್ಯುತುಲ್ ಫಲಾಹ್ ಸಂಸ್ಥೆಯಗ್ರೀನ್ ವೀವ್ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜಿನಲ್ಲಿ ಕೇಂದ್ರ ಸರ್ಕಾರದ ಯೋಜನೆಯಾದ ‘ಅಟಲ್ ಟಿಂಕೆರಿಂಗ್ ಲ್ಯಾಬ್’ ನ್ನು ಉದ್ಘಾಟನೆ ಕಾರ್ಯಕ್ರಮ ನಡೆಯಿತು. ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ‘ಅಟಲ್ ಟಿಂಕೆರಿಂಗ್ ಲ್ಯಾಬ್ ನ್ನು ಉದ್ಘಾಟಿಸಿದರು.ನಂತರ ಮಾತನಾಡಿದ ಅವರು ಶೈಕ್ಷಣಿಕವಾದ ಓದಿನೊಂದಿಗೆ ನಮ್ಮ ಸಾಮಾನ್ಯ ಜ್ಞಾನವನ್ನು ವಿಸ್ತರಿಸುವ ಹಾಗೂ ಪ್ರಾಯೋಗಿಕ