Home ಕರಾವಳಿ Archive by category ಉಳ್ಳಾಳ (Page 4)

ಉಳ್ಳಾಲ: ಟಿಪ್ಪರ್‌ ಅಪಘಾತ -ಗಾಯಾಳು ಸ್ಕೂಟರ್‌ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

ಉಳ್ಳಾಲ: ಟಿಪ್ಪರ್‌ ಹಾಗೂ ಸ್ಕೂಟರ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಪಾವೂರು ಮಲಾರು ಅಕ್ಷರನಗರ ನಿವಾಸಿ ವಿಶ್ವನಾಥ್‌ ಆಚಾರ್ಯ ಎಂಬವರ ಪುತ್ರ ಗಣೇಶ್‌ ಆಚಾರ್ಯ ( 27) ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಫಸ್ಟ್‌ ನ್ಯುರೋ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯಲು ಸಹಕರಿಸಿದ

ಪಾವೂರಿನಲ್ಲಿ ಕಾಂಕ್ರೀಟ್ ರಸ್ತೆಯ ಉದ್ಘಾಟನೆ

ಉಳ್ಳಾಲ: ಮಂಗಳೂರು ನಗರದಲ್ಲಿರುವಂತಹ ಸೌಕರ್ಯಗಳನ್ನು ಕ್ಷೇತ್ರದ ಅತ್ಯಂತ ಹಿಂದುಳಿದ ಪ್ರದೇಶಕ್ಕೆ ಮಾಡಿಕೊಡುವುದೇ ನನ್ನ ಕಲ್ಪನೆ , ಅದರಂತೆ ಪಾವೂರು ಗ್ರಾಮದ ಚಿತ್ರಣ ಮುಂದಿನ 10 ವರ್ಷಗಳಲ್ಲೇ ಬದಲಾವಣೆಯಾಗಲಿದೆ ಎಂದು ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್ ಹೇಳಿದರು. ಪಾವೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೋಡಾರ್ ಸೈಟ್ ಹಾಗೂ ಒಂದನೇ ವಾರ್ಡಿಗೆ ಶಾಸಕರ ಅನುದಾನದಲ್ಲಿ ನಿರ್ಮಿಸಲಾದ ಕಾಂಕ್ರೀಟ್ ರಸ್ತೆಯನ್ನು ಉದ್ಘಾಟಿಸಿ ಮಾತನಾಡಿದರು.ಪೋಡಾರು ಭಾಗದಲ್ಲಿ ಹಿಂದೆ

ಉಳ್ಳಾಲ: ಭೂದಾಖಲೆಗಳ ನಿರ್ದೇಶಕರ ಕಚೇರಿ, ಉಳ್ಳಾಲ ತಾಲೂಕು ಸಹಾಯಕ ನಿರ್ದೇಶಕರ ಕಚೇರಿಗಳಿಗೆ ಲೋಕಾಯುಕ್ತ ದಾಳಿ

ಉಳ್ಳಾಲ: ಭ್ರಷ್ಟಾಚಾರ, ಕರ್ತವ್ಯಲೋಪ, ಕಡತ ವಿಲೇವಾರಿಯಲ್ಲಿ ಹಿನ್ನೆಡೆ ದೂರುಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ಮಂಗಳೂರು ಭೂದಾಖಲೆಗಳ ಉಪನಿರ್ದೇಶಕರ ಕಚೇರಿ,  ನಾಟೆಕಲ್‌ನಲ್ಲಿರುವ ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿ ಹಾಗೂ ಇಬ್ಬರು ಸರ್ವೇಯರ್‌ಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಕಡತಗಳನ್ನು ತನಿಖೆಗೆ ಪಡೆದುಕೊಂಡಿದ್ದಾರೆ. ಮಂಗಳೂರು ತಾಲೂಕು ಕಚೇರಿಯಲ್ಲಿರುವ ಭೂದಾಖಲೆಗಳ ಉಪನಿರ್ದೇಶಕರ ಕಚೇರಿ ಗೆ ಬೆಳಿಗ್ಗೆ ದಾಳಿ

ಧರ್ಮಜಾಗೃತಿಯಿಂದ ಹಿಂದುತ್ವಕ್ಕೆ ಶಕ್ತಿ ಕೊಡುವ ಕಾರ್ಯ ಆಗಬೇಕು:ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿಕೆ

ಉಳ್ಳಾಲ: ದೇವಸ್ಥಾನಗಳ ಮುಖಾಂತರ ಧರ್ಮಕೇಂದ್ರದ ಚಟುವಟಿಕೆಗಳು ಹಾಗೂ ಧರ್ಮಜಾಗೃತಿಯ ಮುಖೇನ ಹಿಂದುತ್ವಕ್ಕೆ ಶಕ್ತಿ ಕೊಡುವ ಕಾರ್ಯಗಳಾಗಬೇಕಿದೆ ಎಂದು ಸಂಸದ ಕ್ಯಾ.ಬೃಜೇಶ್ ಚೌಟ ಅಭಿಪ್ರಾಯಪಟ್ಟರು. ತಲಪಾಡಿ ದೇವಿಪುರದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಹಾಗೂ ತನ್ನ ಕುಟುಂಬದ ದೊಡ್ಡಮನೆಗೆ ನೂತನ ಸಂಸದರಾಗಿ ಆಯ್ಕೆಗೊಂಡು ಆಶೀರ್ವಾದ ಪಡೆಯಲು ಬಂದವರು ತಲಪಾಡಿ ದೇವಸ್ಥಾನದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಶೇ. 30% ಮುಸಲ್ಮಾನರಿದ್ದು,

ಮನೆಗೊಂದು ಗೇರುಗಿಡ ಯೋಜನೆ:ನಿಗಮದ ಮಮತಾ ಡಿ.ಎಸ್ ಗಟ್ಟಿ ಹೇಳಿಕೆ

ಉಳ್ಳಾಲ: ಖಾಲಿಯಿರುವ ಗುಡ್ಡಪ್ರದೇಶಗಳನ್ನು ಉಪಯೋಗಿಸಿ ಗೇರು ಬೆಳೆ ಬೆಳೆಸುವ ಕಾರ್ಯಕ್ಕೆ ಮುಂದಾಗಿರಿ. ಕ್ಯಾಷ್ಯೂ ಕಾರ್ಖಾನೆಗಳು ಅನೇಕ ಇದ್ದರೂ ದೇಶಕ್ಕೆ ವಿದೇಶಗಳಿಂದ ಗೋಡಂಬಿ ಆಮದು ಮಾಡಲಾಗುತ್ತಿದೆ. ಶೀಘ್ರವೇ ಮನೆಗೊಂದು ಗೇರುಗಿಡ ಯೋಜನೆಯನ್ನು ನಿಗಮದಿಂದ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಡಿ.ಎಸ್ ಗಟ್ಟಿ ಹೇಳಿದರು. ಅವರು ತೊಕ್ಕೊಟ್ಟುವಿನ ಸೇವಾಸೌಧದಲ್ಲಿರುವ ಉಳ್ಳಾಲ ಪ್ರೆಸ್ ಕ್ಲಬ್ ವತಿಯಿಂದ ಆಯೋಜಿಸಲಾದ ತಿಂಗಳ

ಮಂಗಳೂರು ಕಮ್ಯುನಿಟಿ ಸೆಂಟರ್ ಶುಭಾರಂಭ

ಉಳ್ಳಾಲ : ನಮ್ಮ ನಾಡ ಒಕ್ಕೂಟ ಇದರ ಆಶ್ರಯದಲ್ಲಿ ಮಂಗಳೂರು ಕಮ್ಯುನಿಟಿ ಸೆಂಟರ್ ತೊಕ್ಕೊಟ್ಟುವಿನ ಸ್ಮಾರ್ಟ್ ಸಿಟಿ ಕಟ್ಟಡದಲ್ಲಿ ಆರಂಭಗೊಂಡಿತು. ವಿಧಾನ ಸಭಾ ಸ್ವೀಕರ್ ಯು ಟಿ ಖಾದರ್ ಫರೀದ್ ಮಂಗಳೂರು ಕಮ್ಯುನಿಟಿ ಸೆಂಟರ್ ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು ಜನರಿಗೆ ಮೂಲಭೂತ ಸೌಕರ್ಯ ಗಳನ್ನು ಪಡೆಯಲು ಇಂತಹ ಸೇವೆ ಅವಶ್ಯಕತೆ ಇದೆ.ಶಿಕ್ಷಣ, ಉದ್ಯೋಗ ಮುಂತಾದ ಪ್ರಮುಖ ವಿಷಯಗಳ ಬಗ್ಗೆ ಮಾಹಿತಿ ಅಗತ್ಯ ಇರುತ್ತದೆ.ಇದನ್ನು ನಮ್ಮ ನಾಡ ಒಕ್ಕೂಟ ಉಚಿತ ವಾಗಿ

ಉಳ್ಳಾಲ: ಸಮುದ್ರಪಾಲಾಗುತ್ತಿದ್ದ ಮೂವರು ಮಹಿಳೆಯರ ರಕ್ಷಣೆ, ಓರ್ವ ಮಹಿಳೆ ಸಾವು

ಉಳ್ಳಾಲ: ಇಲ್ಲಿನ ಸಮುದ್ರತೀರಕ್ಕೆ ವಿಹಾರಕ್ಕೆ ಬಂದಿದ್ದ ಆಂದ್ರಪ್ರದೇಶ ಮೂಲದ ನಾಲ್ವರು ಮಹಿಳೆಯರಲ್ಲಿ ಒಬ್ಬಾಕೆ ಸಮುದ್ರಪಾಲಾಗಿದ್ದು, ಉಳಿದ ಮೂವರನ್ನು ಸ್ಥಳೀಯರು ರಕ್ಷಿಸಿದ್ದಾರೆ‌.ಆಂದ್ರಪ್ರದೇಶದ ಕೊಂಡಾಪುರದ ಸಿರಿಲಿಂಗಪಲ್ಲಿ ನಿವಾಸಿ ಪಿ.ಎಲ್ ಪ್ರಸನ್ನ ಎಂಬವರ ಪತ್ನಿ ಪರಿಮೀ ರತ್ನ ಕುಮಾರಿ (57) ಸಾವನ್ನಪ್ಪಿದವರು. ಉಳ್ಳಾಲ ಬೀಚ್ ಸಮುದ್ರದಲ್ಲಿ ವಿಹರಿಸುತ್ತಿದ್ದ ಸಂದರ್ಭ ಬೃಹತ್ ಗಾತ್ರದ ಅಲೆಯೊಂದು ಅಪ್ಪಳಿಸಿ ನಾಲ್ವರು ಮಹಿಳೆಯರನ್ನು ಎಳೆದೊಯ್ದಿತ್ತು.

ಉಳ್ಳಾಲ: ಗ್ಲೋಬಲ್ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ – ಹಣ್ಣು ಹಂಪಲು ಅಂಗಡಿಗಳು ಭಸ್ಮ

ಉಳ್ಳಾಲದ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲಾಪು ಬಳಿಯಿರುವ ಗ್ಲೋಬಲ್ ಮಾರುಕಟ್ಟೆಯಲ್ಲಿ ಬೆಂಕಿ ಅವಘಢ ಸಂಭವಿಸಿ 5 ದೊಡ್ಡ ಹಾಗೂ 20 ಸಣ್ಣ ಅಂಗಡಿಗಳು ಸಂಪೂರ್ಣ ಬೆಂಕಿಗೆ ಆಹುತಿಯಾಗಿ, ವ್ಯಾಪಾರಸ್ಥರಿಗೆ ಕೋಟ್ಯಂತರ ರೂ ನಷ್ಟ ಉಂಟಾಗಿದೆ. ಕಲ್ಲಾಪು ಗ್ಲೋಬಲ್ ಮಾರುಕಟ್ಟೆಯಲ್ಲಿನ ನವೀದ್ ಮಾಲೀಕತ್ವದ ಎಸ್.ಎನ್ ಫ್ರೂಟ್ಸ್ ಸುಹೈಲ್ ಎಂಬವರಿಗೆ ಸೇರಿದ ಕೆಎಫ್ ಕೆ, ಲತೀಫ್ ಎಂಬವರ ಕೆ.ಕೆ.ಫ್ರೂಟ್ಸ್, ಇಂಡಿಯನ್, ಸಲಾಂ ಅವರ ಬಿ.ಎಸ್.ಆರ್, ಝುಲ್ಫೀಕರ್ ಅವರ ಪಿಕೆಎಸ್, ನಾಸೀರ್

ನೇಪಾಳ ಮೂಲದ ಬಾಲಕಿ ಆತ್ಮಹತ್ಯೆ

ಉಳ್ಳಾಲ: ನೇಪಾಳ ಮೂಲದ ಅಪ್ರಾಪ್ತೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೊಕ್ಕೊಟ್ಟು,ಚೆಂಬುಗುಡ್ಡೆಯ ಬಾಡಿಗೆ ಮನೆಯಲ್ಲಿ ಇಂದು ಬೆಳಕಿಗೆ ಬಂದಿದೆ.ನೇಪಾಳ ಮೂಲದ ರಬೀನ ಬಿ.ಕೆ (16)ಮೃತ ಅಪ್ರಾಪ್ತೆ.ತೊಕ್ಕೊಟ್ಟು ವೃಂದಾವನ ಹೊಟೇಲಿನ ಪಕ್ಕದಲ್ಲಿ ಫಾಸ್ಟ್ ಫುಡ್ ಕಮ್ ಕ್ಯಾಂಟೀನ್ ನಡೆಸುತ್ತಿದ್ದ ನೇಪಾಳ ಮೂಲದ ರಾಮ್ ಶರಣ್ ಎಂಬವರು ತನ್ನ ಪತ್ನಿ ಮತ್ತು ನಾಲ್ಕು ಮಕ್ಕಳೊಂದಿಗೆ ತೊಕ್ಕೊಟ್ಟು, ಚೆಂಬುಗುಡ್ಡೆಯ ರೀಟಾ ಡಿ ಸೋಜ ಎಂಬವರ ಮನೆಯಲ್ಲಿ ಬಾಡಿಗೆಗೆ

ಉಳ್ಳಾಲ : ಶಿಕ್ಷಣ ಕಾಶಿಯಲ್ಲಿ ಉದ್ಯೋಗದ ವಿಚಾರಗಳೇ ಇಲ್ಲ- ದಿನಕರ್ ಉಳ್ಳಾಲ್

ಉಳ್ಳಾಲ: ನೈರುತ್ಯ ಕ್ಷೇತ್ರ ಶಿಕ್ಷಣ ಕಾಶಿಯಾಗಿಯೇ ಮುಂದುವರಿಯುತ್ತಿದೆ ಹೊರತು ಉದ್ಯೋಗ ನೀಡುವ ಯಾವುದೇ ಸಂಸ್ಥೆಗಳು ಇಲ್ಲಿ ಆರಂಭವಾಗುತ್ತಿಲ್ಲ. ಪದವೀಧರರಿಗೆ ನಿರುದ್ಯೋಗದ ಸಮಸ್ಯೆ ಜ್ವಲಂತ ಇದ್ದರೂ ವಿಧಾನಸಭೆಯಲ್ಲಿ ಚರ್ಚೆಗಳೇ ಆಗದೇ ಅನಾವಶ್ಯಕ ವಿಚಾರಗಳೇ ಮೇಳೈಸುತ್ತಿವೆ ಎಂದು ನೈರುತ್ಯ ಪದವೀಧರರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ದಿನಕರ್ ಉಳ್ಳಾಲ್ ಹೇಳಿದರು. ಕುತ್ತಾರು ಖಾಸಗಿ ಹೊಟೇಲಿನಲ್ಲಿ ಹಮ್ಮಿಕೊಂಡ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು ಹಣ, ಜಾತಿ,