ಕಾಸರಗೋಡು : ಕಾಸರಗೋಡು ಲೋಕ ಸಭಾ ಕ್ಷೇತ್ರದಲ್ಲಿ ಒಂದು ತಿಂಗಳ ಹಿಂದೆಯೇ ಪ್ರಚರಣಾ ರಂಗಕ್ಕಿಳಿದ ಸಿಪಿಎಂ ಅಭ್ಯರ್ಥಿ ಯ ಬೆನ್ನಲ್ಲೇ ಇದೀಗ ಬಿಜೆಪಿ ಯ ಮಹಿಳಾ ಅಭ್ಯರ್ಥಿ ಎಂ ಎಲ್ ಅಶ್ವಿನಿಯ ಅನಿರೀಕ್ಷಿತ ಎಂಟ್ರಿ.ಅಭ್ಯರ್ಥಿ ಯಾರೆಂದು ಈ ತನಕ ಘೋಷಣೆ ಆಗದಿದ್ದರೂ ಯು ಡಿ ಎಫ್ ಅಭ್ಯರ್ಥಿ ನಾನೇ ಎಂಬ ಸ್ವಯಂ ಘೋಷಣೆಯೊಂದಿಗೆ ಸದ್ರಿ ಸಂಸದ ರಾಜ್ ಮೋಹನ್ ಉಣ್ಣಿತ್ತಾನ್ ಕೂಡಾ
ಮಂಜೇಶ್ವರದ ರಾಗಂ ಜಂಕ್ಷನಿನಲ್ಲಿ ರಾ.ಹೆದ್ದಾರಿ ದಾಟಲು ಸುರಕ್ಷಿತ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಅನಿರ್ಧಿಷ್ಟಾವಧಿ ಮುಷ್ಕರ ಏಳನೇ ದಿನಕ್ಕೆ ಕಾಲಿಟ್ಟಿದೆ. ಮಾಡು ಇಲ್ಲವೇ ಮಡಿ ಎಂಬ ಧ್ಯೇಯದಲ್ಲಿ ಸ್ಥಳೀಯರು ನಡೆಸುತ್ತಿರುವ ಹೋರಾಟಕ್ಕೆ ಭಾರೀ ಬೆಂಬಲ ವ್ಯಕ್ತವಾಗುತ್ತಿದೆ. ಲೋಕಸಭಾ ಚುನಾವಣೆಯನ್ನು ಬಹಿಷ್ಕರಿಸುವ ಭಿತ್ತಿ ಪತ್ರ ಎಲ್ಲೆಡೆ ರಾರಾಜಿಸುತ್ತಿರುವುದು ಹೆದ್ದಾರಿ ಪ್ರಾಧಿಕಾರಕ್ಕೆ ಬಿಸಿ ಮುಟ್ಟಿಸಿದೆ. ಹೆದ್ದಾರಿ ದಾಟಲು ಯಾವುದಾದರೂ ಪರ್ಯಾಯ ವ್ಯವಸ್ಥೆ
ಬೆಂಗಳೂರು: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ನೀಡುವ ‘ಗಡಿನಾಡ ಚೇತನ ರಾಜ್ಯ ಪ್ರಶಸ್ತಿ’ಗೆ ಕೇರಳದ ಕಾಸರಗೋಡಿನ ಸಾಹಿತಿ ರಾಧಾಕೃಷ್ಣ ಉಳಿಯತ್ತಡ್ಕ ಸೇರಿ ಮೂವರು ಆಯ್ಕೆಯಾಗಿದ್ದಾರೆ. ಭಾಲ್ಕಿ ಹಿರೇಮಠದ ಚನ್ನಬಸವ ಪಟ್ಟದೇವರು ಹೆಸರಿನಲ್ಲಿ ಸ್ಥಾಪಿಸಿರುವ ಪ್ರಶಸ್ತಿಗೆ ರಾಧಾಕೃಷ್ಣ, ‘ಜಯದೇವಿತಾಯಿ ಲಿಗಾಡೆ’ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಪ್ರಶಸ್ತಿಗೆ ಬೀದರ್ನ ಕನ್ನಡ ಪರ ಹೋರಾಟಗಾರ ಪಂಚಾಕ್ಷರಿ ಪುಣ್ಯಶೆಟ್ಟಿ ಹಾಗೂ ‘ಕಯ್ಯಾರ ಕಿಞ್ಞಣ್ಣ ರೈ’ ಅವರ
ಮಂಜೇಶ್ವರ: ಕನ್ನಡ ಮತ್ತು ತುಳು ಚಿತ್ರರಂಗದ ಪ್ರಖ್ಯಾತ ಪೋಷಕ ಮತ್ತು ಹಾಸ್ಯ ನಟರಾದ ಪ್ರಕಾಶ್ ಕೆ. ತೂಮಿನಾಡು ಅವರ ಮಾತೃಶ್ರೀಯವರಾದ ಗಿರಿಜಾ ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಮೃತರ ಅಂತಿಮ ವಿಧಿ ವಿಧಾನಗಳು ಮಂಗಳವಾರ ಬೆಳಿಗ್ಗೆ ೧೦ ಗಂಟೆಗೆ ತೂಮಿನಾಡು ಸ್ವಗೃಹದಲ್ಲಿ ನಡೆಯಲಿದೆ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.
ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠದ ಶ್ರೀ ಗಾಯತ್ರೀ ದೇವಿ ಹಾಗೂ ಭಗವಾನ್ ನಿತ್ಯಾನಂದ ಗುರುದೇವರ ಪ್ರತಿಷ್ಠಾ ವರ್ಧಂತಿ ಕಾರ್ಯಕ್ರಮವು ಕೊಂಡೆವೂರು ಮಠದ ಶ್ರೀ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ, ಶ್ರೀಕ್ಷೇತ್ರ ಕಟೀಲಿನ ಅನುವಂಶಿಕ ಪ್ರಧಾನ ಅರ್ಚಕರಾದ ಬ್ರಹ್ಮಶ್ರೀ ಕಮಲಾದೇವೀ ಪ್ರಸಾದ ಆಸ್ರಣ್ಣರವರ ಆಚಾರ್ಯತ್ವದಲ್ಲಿ ದಿ. 22.02.2024 ಗುರುವಾರದಂದು, ಚಂಡಿಕಾ ಹೋಮ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ಮಂಜೇಶ್ವರ : ಸಿಪಿಐ ಕಾಸರಗೋಡು ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಬಿ.ವಿ.ರಾಜನ್ ನಿಧನರಾದರು. ಮಂಜೇಶ್ವರ ಪಂಚಾಯತ್ನ ವತಿಯಿಂದ ನಡೆದ ಶುಚಿತ್ವ ಮಿಷನ್ನ ಸಭೆಯಲ್ಲಿ ಭಾಗವಹಿಸಿ ಮನೆಗೆ ಮರಳುತ್ತಿರುವ ಮಧ್ಯೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಮಂಜೇಶ್ವರದ ರಾಜಕೀಯ ವಲಯದಲ್ಲಿ ಬಿ.ವಿ.ರಾಜನ್ ವಿಶೇಷ ವ್ಯಕ್ತಿತ್ವದೊಂದಿಗೆ ಗುರುತಿಸಿದವರು. ಈ ಪ್ರದೇಶದಲ್ಲಿ ಸಿಪಿಐ ಚಳುವಳಿಯಲ್ಲಿ ದಿ.ಕಾಮ್ರೇಡ್ ಡಾ.ಸುಬ್ಬರಾವ್ ರವರ ಕಾಲಘಟ್ಟದಿಂದಲೇ ಮುಂಚೂಣಿಯಲ್ಲಿ
ಬೈಂದೂರು ತಾಲೂಕುಗುಡ್ಡೆ ಹೋಟೆಲ್ ಅಯ್ಯಪ್ಪ ಸ್ವಾಮಿ ಮಂದಿರದ ಗುರು ಸ್ವಾಮಿ ಕಾಮೇಶ್ ಹಾಗೂ ಭಕ್ತವೃಂದದವರು ಹೆಮ್ಮುಂಜೆಯಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಸಿಹಿ ತಿಂಡಿ ಹಂಚಿ ರೂಪಾಯಿ ಹತ್ತು ಸಾವಿರದ ನೂರನ್ನು ಶಾಲೆಯ ಕಂಪ್ಯೂಟರ್ ಕ್ಯಾಬಿನ್ ರಚನೆಗೆ ದೇಣಿಗೆಯಾಗಿ ನೀಡಿದರು. ಶಾಲೆಯ ಬಗ್ಗೆ ಇರುವ ಕಾಳಜಿ, ಅಭಿಮಾನ ಹಾಗೂ ಪ್ರೋತ್ಸಾಹವನ್ನು ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ,ಎಸ್.ಎಮ್. ಡಿ .ಸಿ.ಯ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ಊರಿನ ಜನತೆ ತಮ್ಮ
ಬದುಕು ಕಟ್ಟೋಣ ಗೆಳೆಯರ ಬಳಗ ಎಂಬ ಸಾಮಾಜಿಕ ಕಳಕಳಿಯ ಸಂಸ್ಥೆಯ ವತಿಯಿಂದ ಪ್ರಾಣಮ್ ಭಂಡಾರಿ ದಡ್ಡಗಡಿ ಇವರ ಸ್ಮರಣಾರ್ಥ ಕೆಎಸ್ ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ ಇವರ ಸಹಯೋಗದಲ್ಲಿ, ಶ್ರೀ ಅಯ್ಯಪ್ಪ ಭಜನಾ ಮಂದಿರ ಬಾಳಿಯೂರು ನಲ್ಲಿ ಅತ್ಯಾಪೂರ್ವ ಅರೋಗ್ಯ ತಪಾಸಣಾ ಶಿಬಿರವು ಯಶಸ್ವಿಯಾಗಿ ನಡೆಯಿತು. ವಿವಿಧ ಗಣ್ಯರ ಸಮ್ಮುಖದಲ್ಲಿ ದೀಪ ಪ್ರಜ್ವಲನೆಯೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡಿತು. ಸುಮಾರು 160ಕ್ಕಿಂತಲೂ ಅಧಿಕ ಜನರು ಈ ಅರೋಗ್ಯ ಶಿಬಿರದಲ್ಲಿ
ಗೆಳೆಯರ ಬಳಗದಿಂದ ದಡ್ಡಂಗಡಿ ಪ್ರಣಾಮ್ ಭಂಡಾರಿ ಸ್ಮರಣಾರ್ಥ ದೇರಳಕಟ್ಟೆಯ ಜಸ್ಟೀಸ್ ಕೆ.ಎಸ್ ಹೆಗ್ಡೆ ಚಾರಿಟೇಬಲ್ ಆಸ್ಪತ್ರೆಯ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಉಚಿತ ಕಣ್ಣಿನ ತಪಾಸಣೆಯು ಜ.28ರಂದು ಬಾಳಿಯೂರು ಅಯ್ಯಪ್ಪ ಭಜನಾ ಮಂದಿರದಲ್ಲಿ ನಡೆಯಲಿದೆ. ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಉಚಿತ ಕಣ್ಣಿನ ತಪಾಸಣೆಯು ಬೆಳಿಗ್ಗೆ 9.30 ರಿಂದ 1 ಗಂಟೆಯವರೆಗೆ ನಡೆಯಲಿದೆ, ತಜ್ಞ ವೈದ್ಯರಿಂದ ಕಣ್ಣಿನ ತಪಾಸಣೆ, ಆರೋಗ್ಯ ತಪಾಸಣೆ, ಗಂಟಲು, ಕಿವಿ,
ಕಾಸರಗೋಡು ಕರಂದಕ್ಕಾಡ್ ಶ್ರೀ ವೀರಹನುಮಾನ್ ಮಂದಿರದ ವಾರ್ಷಿಕ ಮಹಾಸಭೆ ಅಧ್ಯಕ್ಷರಾದ ಶ್ರೀ ಅವಿನಾಶ್ ಅವರ ಅಧ್ಯಕ್ಷತೆಯಲ್ಲಿ ಮಂದಿರ ಪರಿಸರದಲ್ಲಿ ನಡೆಯಿತು. ವಿವಿಧ ಚರ್ಚೆಗಳ ನಂತರ ಹೊಸ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಅವಿನಾಶ್ ಆಯ್ಕೆ ಯಾದರು, ಉಪಾಧ್ಯಕ್ಷ ಶ್ರೀ ರವಿ ಕರಂದಕ್ಕಾಡ್, ಕಾರ್ಯದರ್ಶಿ ಜಿತೇಶ್ ಕರಂದಕ್ಕಾಡ್, ಜತೆ ಕಾರ್ಯದರ್ಶಿ ಹರೀಶ್ ಪ್ರತೀಕ್, ಕೋಶಾಧಿಕಾರಿ ಜೀವನ್, ಮತ್ತು ಕಾರ್ಯಕಾರಿಣಿಸಮಿತಿ ಸದಸ್ಯರಾಗಿ ಮಾಧವ, ರಾಧಾಕೃಷ್ಣ, ಗಣೇಶ್,