Home ಕರಾವಳಿ Archive by category ಕಾಸರಗೋಡು (Page 5)

ಕಾಸರಗೋಡು: ಮಂಗಲ್ಪಾಡಿ-ಕೈಕಂಬ ಅಂಡರ್ ಪಾಸ್ ನಿರ್ಮಾಣಕ್ಕೆ ಅನುಮತಿ

ಕಾಸರಗೋಡು: ಮಂಗಲ್ಪಾಡಿ- ಕೈಕಂಬ 12*4 ಅಂಡರ್ ಪಾಸ್ ನಿರ್ಮಾಣಕ್ಕೆ ಅನುಮತಿ ದೊರೆತಿದೆ. ಕೇಂದ್ರ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಹಾಗೂ ಕೇಂದ್ರ ಸಚಿವ ವಿ. ಮುರಳಿಧರನ್ ಅವರಿಗೆ ಕೇರಳ ರಾಜ್ಯ ಬಿಜೆಪಿ ಅಧ್ಯಕ್ಷರಾದ ಕೆ. ಸುರೇಂದ್ರನ್, ಜಿಲ್ಲಾಧ್ಯಕ್ಷರಾದ ರವೀಶ್ ತಂತ್ರಿ ಕುಂಟಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಜಯ್ ಕುಮಾರ್ ರೈ ಅವರು ಭೇಟಿಯಾಗಿ ಮನವಿಯನ್ನು

ಮಂಗಲ್ಪಾಡಿ: ಮುಸ್ಲಿಂ ಲೀಗ್ ಆಡಳಿತ ವೈಫಲ್ಯ ಹಾಗೂ ದುರಾಡಳಿತದ ವಿರುದ್ಧ ಪ್ರತಿಭಟನೆ

ಮುಸ್ಲಿಂ ಲೀಗ್ ಆಡಳಿತ ವೈಫಲ್ಯ ಹಾಗೂ ದುರಾಡಳಿತದ ವಿರುದ್ಧ ಭಾರತೀಯ ಜನತಾ ಪಕ್ಷ ಮಂಗಲ್ಪಾಡಿ ಪಂಚಾಯತ್ ಸಮಿತಿ ನೇತೃತ್ವದಲ್ಲಿ ಮಂಗಲ್ಪಾಡಿ ಪಂಚಾಯತ್ ಕಚೇರಿಗೆ ಮೆರವಣಿಗೆ ನಡೆಸಿ ಪ್ರತಿಭಟನೆ ನಡೆಸಿದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಜಯ ಕುಮಾರ್ ರೈ ಅವರು ಪ್ರತಿಭಟನಾ ಮೆರವಣಿಗೆಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಮುಸ್ಲಿಂ ಲೀಗ್ ಆಡಳಿತದ ವೈಫಲ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದರು. ಪಂಚಾಯತು ಸಮಿತಿ ಅಧ್ಯಕ್ಷರಾದ ರಾಮಚಂದ್ರ ಬಲ್ಲಾಳ್

ಭಾವನೆಯ ಬಂಧದಿಂದ ಧರ್ಮ ಬೆಳೆಸೋಣ : ಕೊಂಡೆವೂರು ಶ್ರೀಗಳು

ದಿ.28.09.2023 ಗುರುವಾರ ಕೊಂಡೆವೂರು ಮಠದ ಶ್ರೀ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರ 20 ನೇ ಚಾತುರ್ಮಾಸ್ಯದ ಮಂಗಲೋತ್ಸವ ತದಂಗವಾಗಿ ನಡೆದ 48 ಗಂಟೆಗಳ ಅಖಂಡ ಭಜನೆಯ ಮಂಗಲ ಕಾರ್ಯಕ್ರಮಗಳು ವಿಜೃಂಭಣೆಯಿAದ ನಡೆದವು. ಸಂಜೆ ನಡೆದ ಧಾರ್ಮಿಕ ಸಭೆಯಲ್ಲಿ ಶ್ರೀಗಳವರು ಆಶೀರ್ವಚನಗೈಯುತ್ತಾ “ ಮಠದ ಬೆಳವಣಿಗೆಗೆ ಭಕ್ತಿ,ಜೊತೆಗೆ ಭಾವನೆಗಳ ಹೃದಯ ಬಂಧ ಕಾರಣ. ಹೆತ್ತ ಮಾತೆಯಿಂದ ಅನೇಕ ಸಜ್ಜನ ಬಂಧುಗಳ ಭಾವನಾತ್ಮಕ ಮತ್ತು ಸರ್ವ ರೀತಿಯ ನೆರವಿನಿಂದ ಅನೇಕ ಚಟುವಟಿಕೆಗಳು

ಕಾಸರಗೋಡು: ಅ.1ರಂದು ಶೌರ್ಯ ಜಾಗರಣ ರಥಯಾತ್ರೆ ಮತ್ತು ಬೈಕ್ ರ್‍ಯಾಲಿ

ವಿಶ್ವಹಿಂದೂ ಪರಿಷತ್ ಬಜರಂಗದಳ, ಮಾತೃಶಕ್ತಿ ಮತ್ತು ದುರ್ಗಾವಾಹಿನಿ , ಪ್ರೇರಣಾ ಜಿಲ್ಲಾ ಕಾರ್ಯಾಲಯ ಹೊಸಂಗಡಿ ಇವರ ಸಹಯೋಗದಲ್ಲಿ ಶೌರ್ಯ ಜಾಗರಣ ರಥಯಾತ್ರೆ ಮತ್ತು ಬೈಕ್ ರ್‍ಯಾಲಿಯು ಅಕ್ಟೋಬರ್ 1ರಂದು ಬೆಳಿಗ್ಗೆ 10.30 ಕ್ಕೆ ಮಂಜೇಶ್ವರದ ಶ್ರೀಮದ್ ಅನಂತೇಶ್ವರ ದೇವಸ್ಥಾನದಲ್ಲಿ ನಡೆಯಲಿದೆ. ಬೆಳಿಗ್ಗೆ ೮.೩೦ ರಿಂದ ವಿವಿದ ಭಜನಾ ತಂಡಗಳಿಂದ ಕುಣಿತ ಭಜನೆ ಮತ್ತು ನಂತರ ೧೦.೩೦ರಿಂz ನಡೆಯಲಿರುವ ಸಭಾಕಾರ್ಯಕ್ರಮವನ್ನು ಧಾರ್ಮಿಕ ಮುಂದಾಳು ರವೀಶ್ ತಂತ್ರಿ

ಮಂಜೇಶ್ವರ: ಆಟೋ ರಿಕ್ಷಾಗೆ ಶಾಲಾ ಬಸ್ಸು ಡಿಕ್ಕಿ : ಐದು ಮಂದಿ ದಾರುಣ ಸಾವು

ಮಂಜೇಶ್ವರ : ಬದಿಯಡ್ಕ ಪಳ್ಳತ್ತಡ್ಕದಲ್ಲಿ ಆಟೋ ರಿಕ್ಷಾವೊಂದಕ್ಕೆ ಶಾಲಾ ಬಸ್‌ಗೆ ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಆಟೋ ರಿಕ್ಷಾದಲ್ಲಿದ್ದ ಮೊಗ್ರಾಲ್ ಮೂಲದ ಐವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಮೊಗ್ರಾಲ್ ಪುತ್ತೂರು ಕಡವತ್ತ್ ನಿವಾಸಿಗಳಾದ ಆಟೋ ಚಾಲಕ ಅಬ್ದುಲ್ ರವೂಫ್, ಬೀಫಾತಿಮಾ, ನಬೀಸಾ, ಬೀಫಾತಿಮಾ ಮೊಗರ್ ಮತ್ತು ಉಮ್ಮಾಲಿಮಾ ಸಾವನ್ನಪ್ಪಿದ ದುರ್ದೈವಿಗಳು. ವಿದ್ಯಾರ್ಥಿಗಳನ್ನು ಇಳಿಸಿ ಹಿಂತಿರುಗುತ್ತಿದ್ದ ಶಾಲಾ ಬಸ್ ಅಪಘಾತಕ್ಕೀಡಾಗಿದೆ.ಮೂವರು

ಬಂದ್ಯೋಡ್ : ವೀರನಗರ ಜನನಿ ಆರ್ಟ್ಸ್ ಮತ್ತು ಸ್ಪೋರ್ಟ್ಸ್ ಕ್ಲಬ್ ವತಿಯಿಂದ ವಿವಿಧ ಆಟೋಟ ಸ್ಪರ್ಧೆ

ಬಂದ್ಯೋಡ್ ನ ಅಡ್ಕ ವೀರನಗರ ಜನನಿ ಆರ್ಟ್ಸ್ ಮತ್ತು ಸ್ಪೋರ್ಟ್ಸ್ ಕ್ಲಬ್ ವತಿಯಿಂದ 27ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಚತುರ್ಥಿ ಪ್ರಯುಕ್ತ ಆಟೋಟ ಸ್ಪರ್ಧೆಗಳು ನಡೆದವು. ಹಗ್ಗ ಜಗ್ಗಾಟ ದಲ್ಲಿ ಶಿವ ಶಕ್ತಿ ಶಿರಿಯ ಈ ತಂಡಕ್ಕೆ ಪ್ರಥಮ ಬಹುಮಾನ ಹಾಗೂ ಪಿ ಎಫ್ ಸಿ ಪರಂಕಿಲ ತಂಡಕ್ಕೆ ದ್ವಿತೀಯ ಬಹುಮಾನ ಪಡೆದುಕೊಂಡಿದ್ದಾರೆ ವೀರನಗರ ಅಡ್ಕ ಶ್ರೀ ಉಳ್ಳಾಲ್ತಿ ದೈವಸ್ಥಾನದ ವಠಾರದಲ್ಲಿ ಸ್ಪರ್ಧಾ ಕಾರ್ಯಕ್ರಮಗಳು ನಡೆದವು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಣಿ

ಉಪ್ಪಳ: ಮುಳಿಂಜ ಶಿವತೀರ್ಥಪದವಿನಲ್ಲಿ 44ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಂಪನ್ನ

ಉಪ್ಪಳ ಮುಳಿಂಜ ಶಿವತೀರ್ಥಪದವಿನ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಶ್ರೀ ಸಿದ್ದಿವಿನಾಯಕ ಸಾರ್ವಜನಿಕ ಸಂಸ್ಥೆಯ ಆಶ್ರಯದಲ್ಲಿ 44 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ನಡೆಯಿತು. ಕಾರ್ಯಕ್ರಮದ ಪ್ರಯುಕ್ತ ವಿದ್ಯಾರ್ಥಿಗಳಿಗಾಗಿ ಹಾಗೂ ಸಾರ್ವಜನಿಕರಿಗಾಗಿ ವಿವಿಧ ಆಟೋಟ ಸ್ಪರ್ಧೆ, ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಿತು. ವಿವಿಧ ವೈದಿಕ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಿತು. ಶ್ರೀ ಗಣೇಶನ ಭವ್ಯವಾದ ಶೋಭಾ ಯಾತ್ರೆಯು

ಮಂಜೇಶ್ವರ: ಕಸ ಎಸೆಯುವವರ ಪತ್ತೆಗೆ ಸಿಸಿ ಕ್ಯಾಮರಾ ಅಳವಡಿಕೆ

ಮಂಜೇಶ್ವರ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯಗಳನ್ನು ಎಸೆಯುತ್ತಿದ್ದು ಇದರಿಂದ ಜನತೆ ಸಾಂಕ್ರಾಮಿಕ ರೋಗದ ಭೀತಿಯನ್ನು ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲು ನಿರ್ಧರಿಸಿದ್ದಾರೆ. ಮಂಜೇಶ್ವರದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯ ಬಿಸಾಡುವವರ ವಿರುದ್ಧ ಹಲವು ರೀತಿಯ ವಿಭಿನ್ನವಾದ ರೀತಿಯಲ್ಲಿ ಕ್ರಮಗಳನ್ನು ಕೈಗೊಳ್ಳುತಿದ್ದರೂ ಯಾವುದೂ ಫಲಪ್ರದವಾಗುತ್ತಿರಲಿಲ್ಲ. ಈ ನಿಟ್ಟಿನಲ್ಲಿ ತ್ಯಾಜ್ಯ ಸಂಗ್ರಹವಾಗುತ್ತಿರುವ

ಕಾಸರಗೋಡು: ಹೊಸಂಗಡಿಯ ಪ್ರೇರಣಾ ಜಿಲ್ಲಾ ಕಾರ್ಯಾಲಯದಲ್ಲಿ ಶ್ರೀ ಅಶ್ವತ್ಥೋಪನಯನ, ವಿವಾಹೋತ್ಸವ, ಸಾಮೂಹಿಕ ಅಶ್ವತ್ಥನಾರಾಯಣ ಪೂಜೆ

ಕಾಸರಗೋಡಿನ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಸಮಿತಿ ಹಾಗೂ ಹೊಸಂಗಡಿಯ ಸಾರ್ವಜನಿಕ ಶ್ರೀ ಗಣೇಶೊತ್ಸವ ಸಮಿತಿ ಆಶ್ರಯದಲ್ಲಿ ಶ್ರೀ ಅಶ್ವತ್ಥೋಪನಯನ, ವಿವಾಹೋತ್ಸವ ಮತ್ತು ಸಾಮೂಹಿಕ ಅಶ್ವತ್ಥನಾರಾಯಣ ಪೂಜೆಯು ಹೊಸಂಗಡಿಯ ಪ್ರೇರಣಾ ಜಿಲ್ಲಾ ಕಾರ್ಯಾಲಯದಲ್ಲಿ ನಡೆಯಿತು. ಸಕಲ ದೇವತೆಗಳು ನೆಲೆಸಿರುವ ದೇವ ಸ್ವರೂಪದ ಮರವೆಂದೇ ಪೂಜಿಸಲ್ಪಡುವ ಸರ್ವ ದೋಷಗಳನ್ನೂ ಸಕಲ ರೋಗಗಳನ್ನೂ ನಿವಾರಣೆಗೊಳಿಸಬಲ್ಲ ಅತ್ಯಂತ ಪವಿತ್ರ ಅಶ್ವತ್ಥವೃಕ್ಷದ ಶ್ರೀ ಅಶ್ವತ್ಥೋಪನಯನ, ವಿವಾಹೋತ್ಸವ ಮತ್ತು

ಉಪ್ಪಳ: ಮುಳಿಂಜ ಶಿವತೀರ್ಥಪದವಿನಲ್ಲಿ 44ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

ಉಪ್ಪಳ ಮುಳಿಂಜ ಶಿವತೀರ್ಥಪದವಿನ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಶ್ರೀ ಸಿದ್ದಿವಿನಾಯಕ ಸಾರ್ವಜನಿಕ ಸಂಸ್ಥೆಯ ಆಶ್ರಯದಲ್ಲಿ ೪೪ ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ನಡೆಯುತ್ತಿದೆ. ಕಾರ್ಯಕ್ರಮದ ಪ್ರಯುಕ್ತ ವಿದ್ಯಾರ್ಥಿಗಳಿಗಾಗಿ ಹಾಗೂ ಸಾರ್ವಜನಿಕರಿಗಾಗಿ ವಿವಿಧ ಆಟೋಟ ಸ್ಪರ್ಧೆ, ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಿತು. ವಿವಿಧ ವೈದಿಕ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯುತ್ತಿದೆ.