Home ಕರಾವಳಿ Archive by category ಪುತ್ತೂರು (Page 74)

ಕಾಶ್ಮೀರದಲ್ಲಿ ಹಿಂದೂಗಳ ಹತ್ಯೆ ಖಂಡಿಸಿ ಪುತ್ತೂರಿನಲ್ಲಿ ಬಜರಂಗದಳ, ವಿಶ್ವ ಹಿಂದೂ ಪರಿಷತ್

ಕಾಶ್ಮೀರದಲ್ಲಿ ಹಿಂದೂಗಳ ಹತ್ಯೆಯನ್ನು ಖಂಡಿಸಿ ಬಜರಂಗದಳ ಪುತ್ತೂರು ಜಿಲ್ಲಾ ವತಿಯಿಂದ ಪ್ರತಿಭಟನಾ ಸಭೆ ಮಿನಿ ವಿಧಾನ ಸೌಧದ ಬಳಿ ಇರುವ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ಸಹಸಂಯೋಜಕ ಮುರಳೀಕೃಷ್ಣ ಹಸಂತಡ್ಕ ಮಾತನಾಡಿ, ದೇಶದ ಮೂಲ ನಿವಾಸಿಗಳಾದ ಕಾಶ್ಮೀರಿ ಪಂಡಿತರ ಮೇಲೆ ಪಾಕಿಸ್ತಾನಿ

ಪುತ್ತೂರಿನಲ್ಲಿ ಆಂಬುಲೆನ್ಸ್ ಲೋಕಾರ್ಪಣೆ

ಬಜರಂಗದಳ ಪುತ್ತೂರು ಪ್ರಖಂಡ ಮಾಜಿ ಸಂಚಾಲಕರಾಗಿದ್ಧ ದಿ.ನಿತಿನ್ ನಿಡ್ಪಳ್ಳಿ ಇವರ ಸ್ಮರಣಾರ್ಥ ವಿಶ್ವ ಹಿಂದೂ ಪರಿಷತ್ ಬಜರಂಗದಳ ಶ್ರೀ ದುರ್ಗಾ ಶಾಖೆ ಕೆಯ್ಯೂರು ವತಿಯಿಂದ ಅಂಬುಲೆನ್ಸ್ ಲೊಕಾರ್ಪಣೆ ಇಂದು ಕೆಯ್ಯೂರು ಶ್ರೀ ಮಹಿಷಮರ್ದಿನಿ ದುರ್ಗಾಪರಮೇಶ್ವರಿ ದೇವಾಲಯದಲ್ಲಿ ನಡೆಯಿತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ವಿಶ್ವ ಹಿಂದೂ ಪರಿಷತ್ ಪುತ್ತೂರು ಪ್ರಖಂಡ ಅಧ್ಯಕ್ಷರಾದ ಜನಾರ್ಧನ ಬೆಟ್ಟ ಇವರು ಪ್ರಾಸ್ತಾವಿಕ ಭಾಷಣ ಮಾಡಿದರು, ಬಜರಂಗದಳ ಪ್ರಾಂತ ಸಹ ಸಂಯೋಜಕ್

ಸಂಬಳ ಸಿಗದೆ ಪರದಾಡುತ್ತಿರುವ ಕೆ ಎಸ್ ಆರ್ ಟಿ ಸಿ ನೌಕರರು : ಬಿಎಂಎಸ್ ಸಂಘಟನೆಯಿಂದ ಧರಣಿಗೆ ನಿರ್ಧಾರ

ಪುತ್ತೂರು:ಕೆ ಎಸ್ ಆರ್ ಟಿ ಸಿ ಮಜ್ದೂರ್ ಸಂಘದ ಪುತ್ತೂರು ವಿಭಾಗವು 2004ರಿಂದ ಸಾರಿಗೆ ಸಂಸ್ಥೆಯ ಉಳಿಯುವಿಗಾಗಿ ಹಲವಾರು ಕಾನೂನಾತ್ಮಕ ಹೋರಾಟಗಳನ್ನು ಮಾಡಿಕೊಂಡು ಬಂದಿದೆ. ಸಂಸ್ಥೆಯ ವಿರುದ್ದ ಯಾವುದೇ ಮುಷ್ಕರವನ್ನು ಸಂಘವು ಮಾಡಿಲ್ಲ. ಕಾನೂನು ಸಮ್ಮತ ವಿಚಾರದಲ್ಲಿ ಕಾರ್ಮಿಕರಿಗೆ ಈಗ ಆಗಿರುವ ಅನ್ಯಾಯವನ್ನು ವಿರೋಧಿಸಿ ಅ. 21ರಿಂದ ಕೆಎಸ್‍ಆರ್‍ಟಿಸಿ ಪುತ್ತೂರು ವಿಭಾಗ ಕಚೇರಿಯ ಮುಂದೆ ಸಂಘದ ಸದಸ್ಯರು ಕಪ್ಪುಪಟ್ಟಿ ಧರಿಸಿ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು

ಪುತ್ತೂರಿನ ಕೊಡಂಗೆಯಲ್ಲಿ ಅಣಬೆ ಪದಾರ್ಥ ಸೇವಿಸಿ ಒಂದೇ ಕುಟುಂಬದ 10 ಮಂದಿ ಅಸ್ವಸ್ಥ-ಆಸ್ಪತ್ರೆಗೆ ದಾಖಲು

ಮನೆಯಲ್ಲಿ ತಯಾರಿಸಿದ ಅಣಬೆ ಪದಾರ್ಥ ಸೇವಿಸಿ ಒಂದೇ ಕುಟುಂಬದ ಹತ್ತು ಮಂದಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಪಡ್ನೂರು ಗ್ರಾಮದ ಕೊಡಂಗೆ ಎಂಬಲ್ಲಿ ನಡೆದಿದೆ. ಪಡ್ನೂರು ಕೊಡಂಗೆ ಸಾಂತಪ್ಪರವರ ಪುತ್ರ ರಾಘವ ರವರ ಮನೆಯಲ್ಲಿ ಈ ಘಟನೆ ನಡೆದಿದ್ದು ರಾಘವ, ಅವರ ತಾಯಿ ಹೊನ್ನಮ್ಮ, ಪತ್ನಿ ಲತಾ, ಪುತ್ರಿ ತೃಷಾ, ಸಹೋದರಿ ಬೇಬಿ, ಬಾವಂದಿರಾದ ದೇವಪ್ಪ, ಕೇಶವ, ರಾಘವರವರ ಸಹೋದರಿಯರ ಮಕ್ಕಳಾದ ಸುದೇಶ್, ಧನುಷ್ ಹಾಗೂ ಅರ್ಚನಾ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅ. 8ರಂದು ಸುಜ್ಞಾನ ದೀಪಿಕೆ’ ಧಾರ್ಮಿಕ ಶಿಕ್ಷಣ ಯೋಜನೆ ಉದ್ಘಾಟನೆ

ಪುತ್ತೂರು: ದೇವಾಲಯವೊಂದರಲ್ಲಿ ವಿನೂತನ ಪ್ರಯೋಗವಾಗಿ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧಾರ್ಮಿಕ ಶಿಕ್ಷಣವನ್ನು ಮತ್ತು ಮಕ್ಕಳಲ್ಲಿ ಧಾರ್ಮಿಕ ಪ್ರಜ್ಞೆಯನ್ನು ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿರುವ ‘ಸುಜ್ಞಾನ ದೀಪಿಕೆ’ ಧಾರ್ಮಿಕ ಶಿಕ್ಷಣ ಯೋಜನೆಯು ಅ. 8ರಂದು ಬೆಳಗ್ಗೆ 1೦ಕ್ಕೆ ಉದ್ಘಾಟನೆಗೊಳ್ಳಲಿದೆ ಎಂದು ಶ್ರೀ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಹೇಳಿದರು. ಅವರು ಶ್ರೀ ದೇವಾಲಯದ ಆಡಳಿತ

ಕಡಬ ತಹಶಿಲ್ದಾರ್ ಕಛೇರಿಯಲ್ಲಿ ಗಾಂಧಿ ಜಯಂತಿ ಆಚರಣೆ

ಕಡಬ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಆಶ್ರಯದಲ್ಲಿ ರಾಷ್ಟ್ರಪಿತ ಮಹಾತ್ಮಗಾಂಧೀಜಿಯವರ ಜಯಂತಿ ಆಚರಣೆ ಕಡಬ ತಹಶಿಲ್ದಾರ್ ಕಛೇರಿಯಲ್ಲಿ ನಡೆಯಿತು. ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಕಡಬ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಅಧ್ಯಕ್ಷ ತಹಶಿಲ್ದಾರ್ ಅನಂತಶಂಕರ್ ಮಾತನಾಡಿ ಗಾಂಧೀಜಿವರು ತತ್ವಾದರ್ಶ ಜೀವನ ಮೌಲ್ಯಗಳನ್ನು ರೂಢಿಸಿಕೊಳ್ಳುವಲ್ಲಿ ಇಂದಿನ ಯುವಜನತೆ ಹಿಂದೆ ಬೀಳುತ್ತಿದೆ. ಸಮಗ್ರಭಾರತವನ್ನು ಸದೃಢವಾಗಿ ಕಟ್ಟುವಲ್ಲಿ ಯವಜನರ ಪಾತ್ರ

ಪೊಲೀಸ್ ಸಿಬ್ಬಂದಿ ಸಿದ್ಧಾರ್ಥ್ ಹೃದಯಾಘಾತದಿಂದ ನಿಧನ

ಪುತ್ತೂರು: ನೆಹರುನಗರ ರಕ್ತೇಶ್ವರಿ ನಿವಾಸಿ ಊರ್ವ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿದ್ದಾರ್ಥ್ ಅವರು ಅ.1 ರಾತ್ರಿ ಹೃದಯಘಾತದಿಂದ ನಿಧನರಾಗಿದ್ದಾರೆ. 2002 ನೇ ಬ್ಯಾಚಿನವರಾದ ಇವರು ಮಂಗಳೂರು ಉರ್ವ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಭರದಿಂದ ಸಾಗುತ್ತಿದೆ ಮುದೆಲ್ ಕಿರು ಚಿತ್ರದ ಚಿತ್ರೀಕರಣ

ಖ್ಯಾತ ತುಳು ಚಿತ್ರ ನಟ ರವಿ ರಾಮಕುಂಜ ನಿರ್ದೆಶನದ, ಸಂತೋಷ್ ಕುಮಾರ್ ಶೆಟ್ಟಿ ಛಾಯಾಗ್ರಹಣದ ಮುದೆಲ್ ” ಕಿರು ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಕಡಬ ತಾಲೂಕಿನ ಸುತ್ತಮುತ್ತಲಿನ ಪ್ರದೇಶದಲ್ಲಿ ಚಿತ್ರೀಕರಣ ನಡೆಯುತ್ತಿದೆ. ಕೂಲ್ ಕುಸಲ್ ಕ್ರಿಯೇಷನ್ ನ ಮೊದಲ ಕಿರು ಚಿತ್ರ ಇದಾಗಿದೆ. ರಮಾ ಬಿ.ಸಿ ರೋಡ್ ಸಂಭಾಷಣೆ ಸಹಕಾರದ ಖ್ಯಾತ ರಂಗಭೂಮಿ ಕಲಾವಿದ ತುಳು ಹಾಗೂ ಕನ್ನಡ ಚಿತ್ರ ನಟ ರವಿರಾಮಕುಂಜ ನಿರ್ದೆಶನ ಹಾಗೂ ಅಭಿನಯದ ಚಿತ್ರವಾಗಿದೆ. ತನ್ನ ಬರವಣಿಗೆಯ

ಪುತ್ತೂರು : ದೇವಸ್ಥಾನ ಸಹಿತ ಪ್ರಾರ್ಥನಾ ಮಂದಿರಗಳ ದ್ವಂಸ ಖಂಡಿಸಿ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಪಂಜಿನ ಮೆರವಣಿಗೆ

ಪುತ್ತೂರು; ಸರ್ವ ಧರ್ಮಿಯರ ಧಾರ್ಮಿಕ ಭಾವನೆಗಳಿಗೆ ದಕ್ಕೆಯನ್ನುಂಟುಮಾಡಿ ಕತ್ತಲ್ಲಿರುವ ಸರಕಾರಕ್ಕೆ ಬೆಳಕು ತೋರಿಸುವ ನಿಟ್ಟಿನಲ್ಲಿ ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಪಂಜಿನ ಆಗ್ರಹ ನಗರದ ಅಮರ್ ಜವಾನ್ ಸ್ಮಾರಕದ ಬಳಿ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ ಮಾತನಾಡಿ, ಹಿಂದುತ್ವದ ಆಧಾರದಲ್ಲಿ ಆಡಳಿತಕ್ಕೆ ಬಂದ ಬಿಜೆಪಿ ಸರಕಾರ ದೇವಸ್ಥಾನಗಳನ್ನು ಕೆಡವುವ ಮೂಲಕ ಹಿಂದೂಗಳ ಭಾವನೆಗಳಿಗೆ ಧಕ್ಕೆ ತರುತ್ತಿದ್ದು,

ಕಂಪ್ಯೂಟರ್ ವಿಜ್ಞಾನಿ ಕೆ.ಪಿ.ರಾವ್ ಅವರಿಗೆ ಡಾ. ಶಿವರಾಮ ಕಾರಂತರ ಬಾಲವನ ಪ್ರಶಸ್ತಿ

ಡಾ. ಶಿವರಾಮ ಕಾರಂತರ ಬಾಲವನ ಪ್ರಶಸ್ತಿಗೆ ಕಂಪ್ಯೂಟರ್ ವಿಜ್ಞಾನಿ ಕೆ.ಪಿ.ರಾವ್ ಕೀಲಿಮಣೆ ವಿನ್ಯಾಸ ತಜ್ಞ ಕಿನ್ನಿಕಂಬಳ ಪದ್ಮನಾಭ ರಾವ್(ಕೆ.ಪಿ.ರಾವ್) ಅವರನ್ನು ಆಯ್ಕೆ ಮಾಡಲಾಗಿದೆ. ಅ. 10 ಪುತ್ತೂರಿನ ಡಾ. ಶಿವರಾಮ ಕಾರಂತ ಬಾಲವನದಲ್ಲಿ ನಡೆಯಲಿರುವ ಕಾಂತರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಲಾಗುವುದು ಎಂದು ಪುತ್ತೂರು ಉಪವಿಭಾಗಾಧಿಕಾರಿ ಡಾ. ಯತೀಶ್ ಉಳ್ಳಾಲ್ ತಿಳಿಸಿದ್ದಾರೆ. ಅವರು ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ