Home ಕರಾವಳಿ Archive by category ಪುತ್ತೂರು (Page 75)

ಕೆಎಸ್‌ಆರ್‌ಟಿಸಿ ಪುತ್ತೂರು ವಿಭಾಗ ಕಚೇರಿಯ ದಶಮಾನೋತ್ಸವ

ಪುತ್ತೂರು: ಕೆಎಸ್‌ಆರ್‌ಟಿಸಿ ಪುತ್ತೂರು ವಿಭಾಗದ ದಶಮಾನೋತ್ಸವ ಕಾರ್ಯಕ್ರಮವು ಮುಕ್ರಂಪಾಡಿಯ ವಿಭಾಗೀಯ ಕಚೇರಿಯ ಆವರಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ, ನಿವೃತ್ತ ನೌಕರರನ್ನು ಸನ್ಮಾನಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯೂ ಸೇರಿದಂತೆ ಈ ಭಾಗದಲ್ಲಿ ಉತ್ತರ ಕರ್ನಾಟಕ ಭಾಗದವರೇ ನಿಗಮದಲ್ಲಿ

ಪುತ್ತೂರಿನಲ್ಲಿ ಪಿಎಫ್‍ಐ ವತಿಯಿಂದ ಪ್ರತಿಭಟನೆ

ಪುತ್ತೂರು:ಅಸ್ಸಾಂನಲ್ಲಿ ಪ್ರತಿಭಟನಕಾರರ ಮೇಲೆ ದಾಳಿ ಹಾಗೂ ಹತ್ಯೆಯನ್ನು ಖಂಡಿಸಿ ಅಸ್ಸಾಂ ಸರಕಾರ ಹಾಗೂ ಪೊಲೀಸ್ ಕ್ರೌರ್ಯದ ವಿರುದ್ದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸೆ.28ರಂದು ಮಿನಿ ವಿಧಾನ ಸೌಧದ ಮುಂಭಾದ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಪಿಎಫ್‌ಐ ಪುತ್ತೂರು ಜಿಲ್ಲಾಧ್ಯಕ್ಷ ಜಾಬೀರ್ ಅರಿಯಡ್ಕ ಮಾತನಾಡಿ, ದೇಶದಲ್ಲಿ ಹಲವಾರು ಹೋರಾಟಗಳನ್ನು ಮಾಡಿರುವ ನಾವು ಆರ್‌ಎಸ್‌ಎಸ್ ವಿರುದ್ದ

ಪುತ್ತೂರಿನಲ್ಲಿ ಘನತ್ಯಾಜ್ಯ ವಿಲೇವಾರಿ ವಾಹನ ಹಸ್ತಾಂತರ

ಸ್ವಚ್ಛ ಭಾರತ ಮಿಷನ್ ಹಾಗೂ ಗ್ರಾ.ಪಂ.15 ನೇ ಹಣಕಾಸು ಯೋಜನೆಯಡಿ ತಾಲೂಕಿನ ಆರು ಗ್ರಾ.ಪಂ.ಗಳಿಗೆ ತಲಾ 7.80 ಲಕ್ಷ ರೂ. ವೆಚ್ಚದ ಘನ ತ್ಯಾಜ್ಯ ವಿಲೇವಾರಿ ವಾಹನ ಹಸ್ತಾಂತರ ಕಾರ್ಯಕ್ರಮ ಪುತ್ತೂರಿನ ಮಿನಿ ವಿಧಾನಸೌಧದ ಮುಂಭಾಗದಲ್ಲಿ ನಡೆಯಿತು. ಶಾಸಕ ಸಂಜೀವ ಮಠಂದೂರು ವಾಹನ ಹಸ್ತಾಂತರಿಸಿ ಮಾತನಾಡಿ, ಸ್ವಚ್ಛ ಭಾರತದಕಲ್ಪನೆ ಸಾಕಾರವಾಗಲು ಗ್ರಾಮ ಮಟ್ಟದಿಂದಲೇ ಜಾಗೃತಿಯ ಆವಶ್ಯವಿದೆ. ಹೀಗಾಗಿ ಗ್ರಾಮ ಪಂಚಾಯತ್‌ಗಳಲ್ಲಿ ಸ್ವಚ್ಛತೆಯ ನಿರ್ವಹಣೆ ದೃಷ್ಟಿಯಿಂದ ವಾಹನ

ದರೋಡೆ ಪ್ರಕರಣ – ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ಪೊಲೀಸರು

ಪುತ್ತೂರು: 26 ವರ್ಷಗಳ ಹಿಂದೆ ಸಾಲ್ಮರದಲ್ಲಿ ನಿವೃತ್ತ ತಹಸೀಲ್ದಾರ್ ಲಿಂಗಪ್ಪ ಗೌಡ ಅವರ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ಪೊಲೀಸರು ಕೇರಳದಲ್ಲಿ ಬಂಧಿಸಿದ್ದಾರೆ. ಕೇರಳದ ಎರ್ನಾಕುಲಂ ನಿವಾಸಿ ಜೊಡ್‌ಸನ್ ಎಂಬವರು ಆರೋಪಿ. ಜೊಡ್‌ಸನ್ ಅವರು 1995 ರಲ್ಲಿ ಪುತ್ತೂರು ಸಾಲ್ಮರದಲ್ಲಿ ನಿವೃತ್ತ ತಹಶೀಲ್ದಾರ್ ಲಿಂಗಪ್ಪ ಗೌಡ ಅವರ ಮನೆಗೆ ಹೋಗಿ ನೀರು ಕೇಳುವ ನೆಪದಲ್ಲಿ ಲಿಂಗಪ್ಪ

ಪುತ್ತೂರಿನಲ್ಲಿ ಅಕ್ರಮವಾಗಿ ದಾಸ್ತಾನಿಟ್ಟ ಮರದ ದಿಮ್ಮಿಗಳ ವಶ

ಪುತ್ತೂರು ತಾಲೂಕು ಅರಿಯಡ್ಕ ಗ್ರಾಮದ ಮಡ್ಯಂಗಳ ಎಂಬಲ್ಲಿ ಅರುಣ್ ಕುಮಾರ್ ಪಿ ರವರ ಮನೆಯಲ್ಲಿ ಅಕ್ರಮವಾಗಿ ಬೀಟೆ, ಸಾಗುವಾನಿ,ಹಲಸು ಹಾಗೂ ಇನ್ನಿತರ ಜಾತಿಯ ಸೈಜು ಮತ್ತು ದಿಮ್ಮಿಗಳನ್ನು ದಾಸ್ತಾನಿಟ್ಟ ಬಗ್ಗೆ ಬಂದ ಖಚಿತ ವರ್ತಮಾನದಂತೆ ಒಟ್ಟು 2.242 ಘನ ಮೀಟರ್ ಸೈಜುಗಳು ಮತ್ತು ಮೋಪನ್ನು ಹಾಗೂ ಅವುಗಳನ್ನು ಸಾಗಾಟ ಮಾಡಲು ಬಳಸಿದ ವಾಹನ ಜೀಪು ಸಂಖ್ಯೆ ಕೆಎ 31 ಎಮ್ 0446 ನ್ನು ಇಲಾಖಾ ಪರ ಅಮಾನತು ಪಡಿಸಿಕೊಳ್ಳಲಾಗಿದೆ. ಸೊತ್ತುಗಳ ಹಾಗೂ ವಾಹನ ಮೌಲ್ಯ 3 ಲಕ್ಷ […]

ಸೆ.27ರಿಂದ ಪುತ್ತೂರಿನ ಸೋಮವಾರ ಸಂತೆಗೆ ಚಾಲನೆ

ಪುತ್ತೂರು: ಕೋವಿಡ್ ಪ್ರಥಮ ಅಲೆಯಿಂದಾಗಿ ಒಂದು ವರ್ಷದ ಸ್ಥಗಿತಗೊಂಡು ಎ.26ಕ್ಕೆ ಪುನರಾರಂಭಗೊಂಡಿದ್ದರೂ, ಕೋವಿಡ್ 2ನೇ ಅಲೆಯಿಂದಾಗಿ ಮತ್ತೆ ಸ್ಥಗಿತಗೊಂಡಿದ್ದ ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ನಡೆಯುವ ಸೋಮವಾರ ಸಂತೆ ಇದೀಗ ಮತ್ತೆ ಜೀವ ಪಡೆದು ಕೊಂಡಿದೆ. ಜಿಲ್ಲೆಯಲ್ಲಿ ಕೋವಿಡ್ ಪ್ರಕರಣ ಕಡಿಮೆ ಮತ್ತು ವಾರಾಂತ್ಯದ ಕರ್ಫ್ಯೂ ತೆರವಾದ್ದರಿಂದ ಸೆ.27 ರಂದು ಕಿಲ್ಲೆ ಮೈದಾನದ ಸೋಮವಾರದ ಸಂತೆಗೆ ಚಾಲನೆ ಸಿಗಲಿದೆ. ಕೋವಿಡ್ ಸೋಂಕು ಆರಂಭ ಆದ ಸಂದರ್ಭ ಕೋವಿಡ್ ಲಾಕ್‌ಡೌನ್

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಧರಣಿ ಸತ್ಯಾಗ್ರಹ : ಸೆ.27ರಂದು ಭಾರತ್ ಬಂದ್‍ಗೆ ಕರೆ

10 ತಿಂಗಳಿಂದ ದೆಹಲಿಯ ಗಡಿಗಳಲ್ಲಿ ರೈತರು ಹೋರಾಟ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಇದಕ್ಕೆಕಾಳಜಿ ತೋರಿಸುತ್ತಿಲ್ಲ.ನಿರ್ಲಕ್ಷ್ಯ ತೋರುತ್ತಿದೆ. ಇದರಿಂದ ರೈತರ ಬಗ್ಗೆ ಒಂದು ಕೆಟ್ಟ ವಾತಾವರಣನಿರ್ಮಾಣವಾಗಿದೆ.ಇದರಿಂದ 600 ರಷ್ಟು ರೈತರು ತೀರಿಕೊಂಡಿದ್ದು, ಅವರಿಗೆ ಪರಿಹಾರ ಏನೂ ಕೊಟ್ಟಲ್ಲ. ರೈತರನ್ನು ಸಮಾಧಾನಪಡಿಸುವ ಪ್ರಯತ್ನ ಕೂಡಾ ಸರಕಾರ ಮಾಡಿಲ್ಲ. ಹಾಗಾಗಿ ಸಂಯುಕ್ತ ಕಿಸಾನ್ ಮೋರ್ಚಾ ಇಡೀ ದೇಶಾದ್ಯಂತ ಭಾರತ ಬಂದ್‍ಗೆ ಕರೆ ಕೊಟ್ಟದೆ. ಅದರ ಪ್ರಯುಕ್ತ ನಾವು

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿದ ಸರ್ಕಾರಿ ಬಸ್

ಕಡಬ: ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಳೆಗೆ ಬಿದ್ದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ ಸಮೀಪದ ಊರ್ನಡ್ಕ ಎಂಬಲ್ಲಿ ಗುರುವಾರ ಸಂಜೆ ಸಂಭವಿಸಿದೆ. ಚಳ್ಳಕೆರೆಯಿಂದ ಧರ್ಮಸ್ಥಳ ಮಾರ್ಗವಾಗಿ ಗುಂಡ್ಯ ಮೂಲಕ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಬಸ್ ಉದನೆ – ಎಂಜಿರ ಮಧ್ಯದ ಊರ್ನಡ್ಕ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ.

ಕುಮಾರಧಾರ ನದಿಯಲ್ಲಿ ಮೃತದೇಹ ಪತ್ತೆ

ಕಡಬ ಸೆಪ್ಟಂಬರ್ 22ರಂದು ಸ್ನಾನಕ್ಕೆಂದು ನದಿ ತೀರಕ್ಕೆ ತೆರಳಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹವು ಗುರುವಾರದಂದು ಪತ್ತೆಯಾಗಿದೆ. ನಾಪತ್ತೆಯಾದ ವ್ಯಕ್ತಿಯನ್ನು ಕಡಬ ತಾಲೂಕು ಕೊಯಿಲ ಗ್ರಾಮದ ಪರಂಗಾಜೆ ನಿವಾಸಿ ಚಂದಪ್ಪ ಗೌಡ(67) ಎಂದು ಗುರುತಿಸಲಾಗಿದೆ. ಇವರು ಮಂಗಳವಾರದಂದು ಮನೆ ಸಮೀಪ ಹರಿಯುತ್ತಿರುವ ಕುಮಾರಧಾರ ನದಿಗೆ ಸ್ನಾನಕ್ಕೆಂದು ಹೋದವರು ಕಾಣೆಯಾಗಿದ್ದರು. ಈ ಬಗ್ಗೆ ಮೃತರ ಪುತ್ರಿ ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇಂದು

ಪುತ್ತೂರಿನಲ್ಲಿ ಪೌರ ಕಾರ್ಮಿಕ ದಿನಾಚರಣೆ

ಪುತ್ತೂರು: ಪೌರ ಕಾರ್ಮಿಕರ ಜೊತೆಗೆ ನಾಗರಿಕರು ಸಹಕರಿಸಿದಾಗ ಮಾತ್ರ ಸ್ವಚ್ಚ ನಗರ ನಿರ್ಮಾಣ ಸಾಧ್ಯವಿದ್ದು, ನಮ್ಮ ಕಸವನ್ನು ನಾವೇ ನಿರ್ವಹಿಸುವಂತಹ ಮನೋಭಾವ ಪ್ರತಿಯೊಬ್ಬರಲ್ಲಿಯೂ ಬೆಳೆಯಬೇಕು ಎಂದು ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲ ಸೀತಾರಾಮ ಕೇವಳ ತಿಳಿಸಿದರು. ಅವರು ಪುತ್ತೂರಿನ ಪುರಭವನದಲ್ಲಿ ಗುರುವಾರ ನಡೆದ ಪೌರಕಾರ್ಮಿಕರ ದಿನಾಚರಣೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ಸ್ವಸ್ಥ ಸಮಾಜ ನಿರ್ಮಾಣದಲ್ಲಿ ನಾಗರಿಕ ಜವಾಬ್ದಾರಿ