ಬಂಟ್ವಾಳ: ತಾಲೂಕು ವ್ಯಾಪ್ತಿಯಲ್ಲಿ ಬುಧವಾರ ರಾತ್ರಿಯಿಡಿ ಭಾರಿ ಮಳೆ ಸುರಿದಿದ್ದು ನದಿ ತೀರದ ತಗ್ಗು ಪ್ರದೇಶಗಳು ನೆರೆ ನೀರಿನಿಂದ ಜಲಾವೃತಗೊಂಡಿದೆ. ನೇತ್ರಾವತಿ ನದಿಯಲ್ಲಿ ಗುರುವಾರ ಬೆಳಗ್ಗಿನ ವೇಳೆ ನೀರಿನ ಮಟ್ಟ7.8 ಮೀಟರ್ ದಾಖಲಾಗಿದ್ದು ಅಪಾಯದ ಮಟ್ಟವನ್ನು ಮೀರುವ ರೀತಿ ನದಿಯಲ್ಲಿ ನೀರು ಹರಿದು ಬರುತ್ತಿದ್ದು ಜನರಲ್ಲಿ ಆತಂಕ ಮನೆಮಾಡಿತ್ತು. ಪಾಣೆಮಂಗಳೂರು
ಬಂಟ್ವಾಳ: ರೋಟರಿಕ್ಲಬ್ ಬಂಟ್ವಾಳ ಬಿ.ಸಿ.ರೋಡಿಗೆ ಸಮೀಪದ ಗೂಡಿನಬಳಿಯಲ್ಲಿರುವ ಕ್ಲಬ್ನ ಕಟ್ಟಡದಲ್ಲಿ ಸುಮಾರು ೮೫ ಲಕ್ಷ ರೂ. ವೆಚ್ಚದಲ್ಲಿ ಅನುಷ್ಠಾನಕ್ಕೆ ತಂದಿರುವ ರಕ್ತನಿಧಿ ಸೆಂಟರ್ ಲೋಕಾರ್ಪಣೆ ಗೊಂಡಿತು.ಬಂಟ್ವಾಳ ತಾಲೂಕಿನ ಬಹು ಕಾಲದ ಬೇಡಿಕೆಯೊಂದು ಈಡೇರಿದೆ. ರೋಟರಿ ಜಿಲ್ಲಾ ೩೧೮೧ ರ ಗವರ್ನರ್ ಎಚ್. ಆರ್.ಕೇಶವ ಅವರು ಉದ್ಘಾಟಿಸಿ, ಬಂಟ್ವಾಳ ರೋಟರಿ ಕ್ಲಬ್ನ ಸೇವಾ ಕಾರ್ಯವನ್ನು ಶ್ಲಾಘಿಸಿದರು. ಈ ಕ್ಲಬ್ನ ಸದಸ್ಯರ ಸಾಮರ್ಥ ಹಾಗೂ ಬದ್ದತೆ ಅಭಿನಂದನೀಯ ಎಂದರು.
ಬಂಟ್ವಾಳ: ರಕ್ತದಾನ ಮಾಡುವುದರಿಂದ ನಮ್ಮ ಉಸಿರು ನಿಂತರೂ ಮತ್ತೊಬ್ಬರ ದೇಹದಲ್ಲಿ ನಿರಂತರವಾಗಿ ನಮ್ಮ ರಕ್ತ ಹರಿದಾಡುತ್ತಿರುತ್ತದೆ. ಹೆಚ್ಚು ಹೆಚ್ಚು ಜನರು ರಕ್ತ ನೀಡಿದಾಗ ರಕ್ತದ ಕೊರತೆ ಬಗೆ ಹರಿಯಲಿದೆ. ರಕ್ತದಾನಕ್ಕಿಂತ ದೊಡ್ಡ ದಾನವಿಲ್ಲ, ರಕ್ತ ಅನೇಕ ಜನರಿಗೆ ಅಗತ್ಯವಿದೆ ಎಂದು ಇಂಡಿಯನ್ ರೆಡ್ಕ್ರಾಸ್ ಸೊಸೈಟಿ ಇದರ ದ.ಕ. ಜಿಲ್ಲಾ ಕೋಶಾಧಿಕಾರಿ ಕೆ. ಮೋಹನ್ ಶೆಟ್ಟಿ ಹೇಳಿದರು. ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಇದರ ಆಶ್ರಯದಲ್ಲಿ ಇಂಡಿಯನ್ ರೆಡ್ ಕ್ರಾಸ್
ಬಂಟ್ವಾಳ: ಕರ್ನಾಟಕದಲ್ಲಿ ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಮಾಡಿದ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ ಹಾಗೂ ರಾಷ್ಡ್ರೀಯ ಹೆದ್ದಾರಿ ತಡೆ ಬಿಜೆಪಿ ಬಂಟ್ವಾಳ ಮಂಡಲದ ವತಿಯಿಂದ ಬಿ.ಸಿ.ರೋಡಿನಲ್ಲಿ ನಡೆಯಿತು. ಶಾಸಕ ರಾಜೇಶ್ ನಾಯ್ಕ್ ಪ್ರತಿಭಟಮಕಾರರನ್ನು ಉದ್ದೇಶಿಸಿ ಮಾತನಾಡಿ ದೇಶದ ಆರ್ಥಿಕ ವ್ಯವಸ್ಥೆಯಲ್ಲಿ ಹಿಂದಿನ ಸರಕಾರದ ಅವಧಿಯಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿತ್ತು. ಈಗ ನಾಲ್ಕನೇ ಸ್ಥಾನಕ್ಕೆ ಹಿಂದೆ ಸರಿದಿದೆ. ಕಾಂಗ್ರೆಸ್ ಸರಕಾರ ಗ್ಯಾರಂಟಿ ನೆಪದಲ್ಲಿ
ಬಂಟ್ವಾಳ: ಸ್ಮಾರ್ಟ್ ಗೈಸ್ ಕೈಕಂಬ, ಅಂಬೇಡ್ಕರ್ ಯುವವೇದಿಕೆ ಬಂಟ್ವಾಳ ಆಶ್ರಯದಲ್ಲಿ ದ.ಕ.ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಸಹಭಾಗಿತ್ವದಲ್ಲಿ ಸಮಾಜಮುಖಿ, ಮಾನವತಾವಾದಿ ದಿ.ರಾಜ ಪಲ್ಲಮಜಲು ಅವರು ನಿಧನ ಹೊಂದಿ 3ನೇ ವರ್ಷದ ಸ್ಮರಣಾರ್ಥ, ನುಡಿನಮನ, ಪ್ರತಿಭಾ ಪುರಸ್ಕಾರ ಮತ್ತು ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ ಎಸ್.ಜಿ.ಕೆ. ಟ್ರೋಫಿ 2024 ಕಾರ್ಯಕ್ರಮಗಳು ಜೂನ್ 15ರಂದು ಸಂಜೆ ಬಂಟ್ವಾಳ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಲಿದೆ. ಈ ವಿಷಯವನ್ನು ಸಂಘಟಕ,
ಬಂಟ್ವಾಳ: ದ.ಕ. ಜಿಲ್ಲಾ ಗ್ಯಾರೇಜು ಮಾಲಕರ ಸಂಘ ಬಂಟ್ವಾಳ ವಲಯ ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ಪ್ರಥಮ ಮಾಸಿಕ ಸಭೆ ಸಂಘದ ನೂತನ ಅಧ್ಯಕ್ಷ ಸುಧೀರ್ ಪೂಜಾರಿ ಅಧ್ಯಕ್ಷತೆಯಲ್ಲಿ ಬಿ.ಸಿ.ರೋಡಿನ ಗಾಣದಪಡ್ಪುವಿನಲ್ಲಿರುವ ಆಟೋಲೈನ್ಸ್ ಗ್ಯಾರೇಜಿನಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ದ.ಕ. ಜಿಲ್ಲಾ ಗ್ಯಾರೇಜು ಮಾಲಕರ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷ ಜನಾರ್ದನ ಅತ್ತಾವರ ಅವರು ಮಾತನಾಡಿ ಸದಸ್ಯರ ಸಹಕಾರವಿದ್ದಾಗ ಸಂಘಟನೆ
ಬಂಟ್ವಾಳ: ವಾಮದಪದವು ಸಮೀಪದ ಆಲದಪದವು ಎಂಬಲ್ಲಿ ನೂರುಲ್ ಇಸ್ಲಾಂ ಮದ್ರಸ ಹಾಗೂ ಅಲ್-ಮಸ್ಜಿದುಲ್ ಬದ್ರಿಯಾ ಇದರ ನೂತನ ಮದ್ರಸ ಕಟ್ಟಡ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು. ಕೃಷ್ಣಾಪುರ ಬದ್ರಿಯಾ ಜುಮಾ ಮಸ್ಜಿದ್ ಮುಸ್ಲಿಂ ಜಮಾಅತ್ ಖಾಝಿ ಹಾಜಿ ಇ ಕೆ ಇಬ್ರಾಹಿಂ ಮುಸ್ಲಿಯಾರ್ ನೂತನ ಮದ್ರಸ ಕಟ್ಟಡ ಲೋಕಾರ್ಪಣೆಗೊಳಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಸೀದಿ ಹಾಗೂ ಮದ್ರಸ ಆಡಳಿತ ಸಮಿತಿ ಅಧ್ಯಕ್ಷ ಹಂಝ ಬಸ್ತಿಕೋಡಿ ಪ್ರಾಸ್ತವಿಕವಾಗಿ ಮಾತನಾಡಿ ಸ್ಥಳೀಯ ಮದ್ರಸ
ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಡಿವೈಡರ್ ಗೆ ಬಿದ್ದ ಘಟನೆ ರಾ.ಹೆ.75ರ ತುಂಬೆ ಸಮೀಪದ ಕಡೆಗೋಳಿಯಲ್ಲಿ ನಡೆದಿದೆ. ಮಂಗಳೂರಿನಿಂದ ಗ್ಯಾಸ್ ತುಂಬಿಕೊಂಡು ಹೋಗುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿದ್ದು, ಯಾವುದೇ ಲಿಕೇಜ್ ಇಲ್ಲದೇ ಇರುವುದರಿಂದ ಹೆಚ್ಚಿನ ಹಾನಿ ಉಂಟಾಗಿಲ್ಲ. ಬಂಟ್ವಾಳ ಅಗ್ನಿಶಾಮಕ ದಳದವರು, ಸಂಚಾರ ಪೆÇಲೀಸರು, ಸ್ಥಳೀಯ ವಾಹನಗಳ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿದ್ದಾರೆ.
ಬಂಟ್ವಾಳ: ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರೈಸುತ್ತಿದ್ದು ಮುಂದೆ ನಡೆಯುವ ವಿಧಾನ ಪರಿಷತ್ ಚುನಾವಣೆ ಸರಕಾರದ ಬಗ್ಗೆ ಜನಾಭಿಪ್ರಾಯ ತಿಳಿಸುವ ಚುನಾವಣೆಯಾಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ವ್ಯಾಖ್ಯಾನಿಸಿದರು. ಅವರು ಬಿ.ಸಿ.ರೋಡಿನಲ್ಲಿರುವ ಬಿಜೆಪಿ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾಂಗ್ರೆಸ್ನ ಚುನಾವಣೆಯ ಮೌಲ್ಯಮಾಪನವನ್ನು ಮಾಡಲಿದ್ದು
ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದ ಸೂರಿಕುಮೇರು ಬೊರಿಮಾರ್ ಸೈಂಟ್ ಜೋಸೆಫ್ ಧರ್ಮಕೇಂದ್ರಕ್ಕೆ 26 ನೇ ನೂತನ ಧರ್ಮಗುರು ಆಗಿ ವಂದನೀಯ ನವೀನ್ ಪ್ರಕಾಶ್ ಡಿಸೋಜರವರು ಬಿಷಪ್ ಪ್ರತಿನಿಧಿಯಾಗಿ ಆಗಮಿಸಿದ ವಿಟ್ಲ ವಲಯದ ಶ್ರೇಷ್ಟ ಗುರು ಅತೀ ವಂದನೀಯ ಐವನ್ ಮೈಕಲ್ ರೊಡ್ರಿಗಸ್ ರವರಿಂದ ಅಧಿಕಾರ ಸ್ವೀಕರಿಸಿದರು. ಕಿನ್ನಿಗೋಳಿ ಧರ್ಮಕೇಂದ್ರದಲ್ಲಿ ಹುಟ್ಟಿ ಬೆಳೆದ ಇವರು 2005 ನೇ ವರ್ಷದಲ್ಲಿ ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್



























