Home ಕರಾವಳಿ Archive by category ಬೆಳ್ತಂಗಡಿ (Page 2)

ಸುಬ್ರಹ್ಮಣ್ಯ : ಚಲನಚಿತ್ರ ನಟ ಪ್ರಭುದೇವ್ ಕುಕ್ಕೆ ಸುಬ್ರಹ್ಮಣ್ಯ ಭೇಟಿ

ಚಲನಚಿತ್ರರಂಗದ ಖ್ಯಾತ ನಟ ಪ್ರಭುದೇವ ಕುಟುಂಬ ಸಮೇತ ಇಂದು ಶನಿವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವಳದಲ್ಲಿ ಮಹಾಭಿಷೇಕ ಪೂಜೆಯಲ್ಲಿ ಪಾಲ್ಗೊಂಡರು. ಪ್ರಭುದೇವ್ ಪತ್ನಿ ಹಾಗೂ ಕುಟುಂಬ ವರ್ಗದವರು ಮಹಾಭಿಷೇಕ ಪೂಜೆಯನ್ನು ನೆರವೇರಿಸಿ ಶ್ರೀ ದೇವರ ಮುಖ್ಯ ಅರ್ಚಕರಿಂದ ಪ್ರಸಾದ ಸ್ವೀಕರಿಸಿದರು. ತದನಂತರ ದೇವಳದ ಕಚೇರಿಯಲ್ಲಿ

ಕೊಕ್ಕಡ: ಮೂರು ತಾಲೂಕುಗಳನ್ನು ಬೆಸೆಯುವ ಕೋಡಂಗೇರಿ – ಉಪ್ಪಾರಹಳ್ಳ ಸೇತುವೆ, ಕಿಂಡಿ ಅಣೆಕಟ್ಟು ಲೋಕಾರ್ಪಣೆ

ಕೊಕ್ಕಡ: ಕೊಕ್ಕಡ ಮತ್ತು ಗೋಳಿತೊಟ್ಟು ಗ್ರಾಮದ 500ಕ್ಕೂ ಹೆಚ್ಚು ಮನೆಗಳ ನಿವಾಸಿಗಳ 40 ವರ್ಷಗಳ ಬೇಡಿಕೆಯ ರೂಪದಲ್ಲಿ ರೂ.3.35 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಕೋಡಂಗೇರಿ – ಉಪ್ಪಾರಹಳ್ಳ ಸೇತುವೆ ಹಾಗೂ ಕಿಂಡಿ ಅಣೆಕಟ್ಟನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಮಾ.8ರಂದು ಲೋಕಾರ್ಪಣೆ ಮಾಡಿದರು. ಈ ಸೇತುವೆ ಮತ್ತು ಅಣೆಕಟ್ಟಿನ ನಿರ್ಮಾಣದಿಂದ ರೈತರಿಗೆ ನೀರಾವರಿ ಹಾಗೂ ಜನ ಸಂಪರ್ಕ ಸುಗಮಗೊಳ್ಳಲಿದೆ.ಎಂದು ಹೇಳಿದರು. ಈ ವೇಳೆ ಶಾಸಕರನ್ನು ಸ್ಥಳೀಯರು

ಕೊಕ್ಕಡ: ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ 83 ಲಕ್ಷ ವೆಚ್ಚದ ಪುನರ್‌ವಸತಿ ಕೇಂದ್ರ: ಕೊಕ್ಕಡದಲ್ಲಿ ಭೂಮಿ ಪೂಜೆ

ಎಂಡೋಸಲ್ಫಾನ್ ಸಂತ್ರಸ್ತರ ಪುನರ್‌ವಸತಿ ಮತ್ತು ಭವಿಷ್ಯದ ಅನುಕೂಲಕ್ಕಾಗಿ ಎಂಆರ್‌ಪಿಎಲ್ (MRPL) ನಿಂದ 83 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಕಟ್ಟಡದ ಭೂಮಿ ಪೂಜೆ ಮಾ.8 ರಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ನೆರವೇರಿಸಿದರು. ಕೊಕ್ಕಡ ಗ್ರಾಮ ಪಂಚಾಯತಿ ಸಮೀಪ ಈ ಪುನರ್‌ವಸತಿ ಕೇಂದ್ರ ನಿರ್ಮಾಣವಾಗಲಿದ್ದು, ಎಂಡೋ ಸಂತ್ರಸ್ತರ ಆರೋಗ್ಯದ ಕಲ್ಯಾಣಕ್ಕಾಗಿ ಈ ಯೋಜನೆ ಕೈಗೊಳ್ಳಲಾಗಿದೆ. ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ ಅವರು ಮಾತನಾಡಿ,

ಸುಬ್ರಹ್ಮಣ್ಯ : ಕೆ.ಎಸ್.ಎಸ್. ಕಾಲೇಜಿನಲ್ಲಿ ರಕ್ತದಾನ ಶಿಬಿರ ಉದ್ಘಾಟನೆ

ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನಲ್ಲಿ ಸುಬ್ರಹ್ಮಣ್ಯ ರೋಟರಿ ಕ್ಲಬ್ ,ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಪುತ್ತೂರು ,ಕೆ ಎಸ್ ಎಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ವಿಭಾಗ ,ರೋವರ್ಸ್ ಅಂಡ್ ರೆಂಜರ್ಸ್ ಘಟಕ ,ಯೂತ್ ರೆಡ್ ಕ್ರಾಸ್ ಘಟಕ , ಹಿರಿಯ ವಿದ್ಯಾರ್ಥಿ ಸಂಘ ಹಾಗೂ ಆಂತರಿಕ ಗುಣಮಟ್ಟ ಕೋಶ ಗಳ ಜಂಟಿ ಆಶಯದಲ್ಲಿ ಮಂಗಳವಾರ ಕಾಲೇಜಿನ ಸಭಾಂಗಣದಲ್ಲಿ ರಕ್ತದಾನ ಶಿಬಿರ ನಡೆಯಿತು. ಪುತ್ತೂರು ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ನ

ನೆಲ್ಯಾಡಿ: ಗೇರುತೋಪಿಗೆ ಬೆಂಕಿ – ಐದಾರು ಎಕ್ರೆ ಜಾಗದಲ್ಲಿನ ಗೇರುಮರಗಳು ಬೆಂಕಿಗಾಹುತಿ – ಅಪಾರ ನಷ್ಟ

ನೆಲ್ಯಾಡಿ: ಗೇರುತೋಪಿಗೆ ಬೆಂಕಿಬಿದ್ದ ಪರಿಣಾಮ ಐದಾರು ಎಕ್ರೆ ಜಾಗದಲ್ಲಿದ್ದ ನೂರಾರು ಫಲಭರಿತ ಗೇರುಮರಗಳು ಬೆಂಕಿಗಾಹುತಿಯಾಗಿ ಅಪಾರ ನಷ್ಟ ಸಂಭವಿಸಿರುವ ಘಟನೆ ಗೋಳಿತ್ತೊಟ್ಟು ಸಮೀಪ ಶಾಂತಿಮಾರ್ ವ್ಯಾಪ್ತಿಯಲ್ಲಿ ಫೆ.24ರಂದು ಅಪರಾಹ್ನ ನಡೆದಿದೆ. ಗ್ರಾಮಸ್ಥರು ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ವಿದ್ಯುತ್ ಟ್ರಾನ್ಸ್‍ಫಾರ್ಮರ್‍ನಿಂದ ಹರಡಿದ ಬೆಂಕಿಯಿಂದಾಗಿ ಈ ಅನಾಹುತ ಸಂಭವಿಸಿದೆ ಎಂದು ಶಂಕಿಸಲಾಗಿದೆ.ಗೋಳಿತ್ತೊಟ್ಟು ಸಮೀಪ ಕೊಣಾಲು ಗ್ರಾಮದ

ನೆಲ್ಯಾಡಿ: ಪರಿಸರ ಜಾಗೃತಿಗೆ ಅರಣ್ಯ ಇಲಾಖೆ ಪಣ

ನೆಲ್ಯಾಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇರುತ್ತದೆ. ಅದರಲ್ಲೂ ಪ್ರತಿ ವರ್ಷ ಮಹಾ ಶಿವರಾತ್ರಿ ಆಚರಿಸಲು ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಲಕ್ಷಾಂತರ ಭಕ್ತರು ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸುತ್ತಾರೆ. ಪ್ರತಿ ವರ್ಷವೂ ನಡೆದುಕೊಂಡು ಬರುತ್ತಿರುವ ಪರಂಪರೆಯಾಗಿದೆ. ಆಗಮಿಸುವ ಪಾದಯಾತ್ರಿಗಳ ಅನುಕೂಲಕ್ಕಾಗಿ ಅರಣ್ಯ

ನೆಲ್ಯಾಡಿ: ದೋಂತಿಲ ಶ್ರೀ ಮಹಾವಿಷ್ಣು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನಕ್ಕೆ ಷಡಾಧಾರ, ಗರ್ಭನ್ಯಾಸಗಳ ಆಗಮನ-ಮೆರವಣಿಗೆ

ನೆಲ್ಯಾಡಿ:ಕೌಕ್ರಾಡಿ-ದೋಂತಿಲ ಶ್ರೀ ಮಹಾವಿಷ್ಣು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಜೀರ್ಣೋದ್ದಾರ ಪ್ರಯುಕ್ತ ಪ್ರತಿಷ್ಠಾಪನೆಯಾಗಲಿರುವ ಷಡಾಧಾರ ಮತ್ತು ಗರ್ಭನ್ಯಾಸಗಳನ್ನು ಮೆರವಣಿಗೆ ಮೂಲಕ ದೇವಸ್ಥಾನಕ್ಕೆ ತರಲಾಯಿತು. ಕಾರ್ಕಳದಿಂದ ಶಿಲ್ಪಿಗಳು ತಂದ ಷಡಾಧಾರ ಮತ್ತು ಗರ್ಭನ್ಯಾಸಗಳನ್ನು ನೆಲ್ಯಾಡಿ ಸಂತಜಾರ್ಜ್ ವಿದ್ಯಾಸಂಸ್ಥೆಯ ಮುಂಭಾಗದಲ್ಲಿರುವ ಶಿಲ್ಪಾ ಕಾಂಪ್ಲೆಕ್ಸ್ ಎದುರು ಸ್ವಾಗತಿಸಲಾಯಿತು. ಅಲ್ಲಿಂದ ವಾಹನಗಳ ಮೆರವಣಿಗೆ, ಚೆಂಡೆ ವಾದನದೊಂದಿಗೆ ರಾಷ್ಟ್ರೀಯ

ಸುಬ್ರಹ್ಮಣ್ಯ: ಕನ್ನಡ ಚಿತ್ರನಟ ದೇವರಾಜ್ ಕುಟುಂಬ ಸಮೇತ ಕುಕ್ಕೆ ಸುಬ್ರಹ್ಮಣ್ಯ ಭೇಟಿ

ಸುಬ್ರಹ್ಮಣ್ಯ : ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಟ ದೇವರಾಜ್ ,ಅವರ ಸುಪುತ್ರ ಪ್ರಜ್ವಲ್ ದೇವರಾಜ್ , ಹಾಗೂ ಕುಟುಂಬಸ್ಥರು ಇಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಮಾಡಿ ಪ್ರಸಾದ ಸ್ವೀಕರಿಸಿದರು. ಅವರನ್ನು ಶ್ರೀ ದೇವಳದ ಸಿಷ್ಟಾಚಾರ ಅಧಿಕಾರಿ ಜಯರಾಮ್ ರಾವ್ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಕಡಬ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಸುದೀರ್ ಕುಮಾರ್ ಶೆಟ್ಟಿ, ಸುಬ್ರಹ್ಮಣ್ಯದ ರಾಜಕೀಯ ಮುಖಂಡರಾದ ಗೋಪಾಲ

ಧರ್ಮಸ್ಥಳ ಗ್ರಾ.ಯೋ.ವತಿಯಿಂದ ‘ವಾತ್ಸಲ್ಯ’ ಮನೆ ಹಸ್ತಾಂತರ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್, ಮೂಡುಬಿದಿರೆ ವತಿಯಿಂದ ವಾಲ್ಪಾಡಿ ಗ್ರಾಮದ ಶ್ರೀಮತಿ ಬಿಜಿಲು ಎಂಬವರಿಗೆ ನಿರ್ಮಿಸಲಾದ ‘ವಾತ್ಸಲ್ಯ’ ಮನೆ ಹಸ್ತಾಂತರ ಕಾರ್ಯಕ್ರಮವು ನಡೆಯಿತು. ಯೋಜನೆಯ ಟ್ರಸ್ಟಿ,ಶಿರ್ತಾಡಿ ಶಿಮುಂಜೆಗುತ್ತು ಸಂಪತ್ ಸಾಮ್ರಾಜ್ಯ ಅವರು ದೀಪ ಬೆಳಗಿಸಿ ಉದ್ಘಾಟಿಸಿ ‘ ಸಮಾಜದಲ್ಲಿ ಹಿಂದುಳಿದವರಿಗೆ,ಅಶಕ್ತರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಹಾಗೂ

ಕೇಂದ್ರದ ಬಜೆಟ್ -ಕರ್ನಾಟಕಕ್ಕೆ ಮತ್ತೆ ಮೋಸ, ಮತ್ತೊಮ್ಮೆ ಕರ್ನಾಟಕಕ್ಕೆ ಮಲತಾಯಿ ಧೋರಣೆ : ರಕ್ಷಿತ್ ಶಿವರಾಂ

ಕೇಂದ್ರದ ಬಜೆಟ್ ಗಾತ್ರ 50.65 ಲಕ್ಷ ಕೋಟಿಯಲ್ಲಿ ಕರ್ನಾಟಕಕ್ಕೆ ಮತ್ತೆ ಮೋಸ, ಮತ್ತೊಮ್ಮೆ ಕರ್ನಾಟಕಕ್ಕೆ ಮಲತಾಯಿ ಧೋರಣೆ ಮಾಡಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹೇಳಿದರು. ಸಾಲಮಾಡಿಯಾದ್ರು ತುಪ್ಪ ತಿನ್ನು ಎನ್ನುವಹಾಗೆ ಒಟ್ಟು ಬಜೆಟ್ ನಲ್ಲಿ 24% ರಷ್ಟು ಸಾಲ 15.68 ಲಕ್ಷ ಕೋಟಿ ಸಾಲ ಮಾಡುತ್ತಿರುವ ಕೇಂದ್ರದ ಬಿಜೆಪಿ ಸರ್ಕಾರ. ಕೇಂದ್ರ ಸರ್ಕಾರದ ಒಟ್ಟು ಸ್ವೀಕೃತಿ 31.47 ಲಕ್ಷ ಮತ್ತು ಒಟ್ಟು ತೆರಿಗೆ