Home ಕರಾವಳಿ Archive by category ಬೆಳ್ತಂಗಡಿ (Page 4)

ಕೊಲ್ಪೆ: ಕಾರು ಡಿಕ್ಕಿ ಲಾರಿ ಚಾಲಕರಿಬ್ಬರಿಗೆ ಗಂಭೀರ ಗಾಯ

ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ 75ರ ಬೆಂಗಳೂರು- ಮಂಗಳೂರು ನಡುವೆ ನೆಲ್ಯಾಡಿ ಸಮೀಪದ ಕೋಲ್ಪೆಯಲ್ಲಿ ಎಂಬಲ್ಲಿ ಲಾರಿ ನಿಲ್ಲಿಸಿ ಚಹಾ ಕುಡಿದು ಲಾರಿಯ ಕಡೆಗೆ ನಡೆದುಕೊಂಡು ಬರುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿಯಾದ ಪರಿಣಾಮ ಸಕಲೇಶಪುರ ಮೂಲದ ಲಾರಿ ಚಾಲಕರಿಬ್ಬರು ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಜು.8ರಂದು

ಉಳ್ಳಾಲ:ಮನೆಯ ಗಾಡ್ರೆಜ್‌ನೊಳಗಿದ್ದ ಚಿನ್ನಾಭರಣ ಕಳವು ಪ್ರಕರಣ-ಇಬ್ಬರು ಅಪ್ರಾಪ್ತರು ಸೇರಿದಂತೆ ಐವರ ಬಂಧನ

ಮಂಗಳೂರು: ನಗರದ ಉಳ್ಳಾಲ ಠಾಣಾ ವ್ಯಾಪ್ತಿಯ ಧರ್ಮನಗರದಲ್ಲಿ ಮನೆಯೊಂದರ ಗಾಡ್ರೆಜ್‌ನೊಳಗಿದ್ದ 15 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಬಾಲಕರು ಸೇರಿದಂತೆ ಐವರನ್ನು ಬಂಧಿಸಿದ್ದಾರೆ. ಬೆಳ್ತಂಗಡಿ ನಿವಾಸಿಗಳಾದ ಶ್ರೇಯಸ್, ತೌಸೀಫ್ ಹಾಗೂ ಉರ್ವ ನಿವಾಸಿ ಪೃಥ್ವಿರಾಜ್ ಬಂಧಿತ ಮೂವರು ಆರೋಪಿಗಳು. ಧರ್ಮನಗರ ನಿವಾಸಿ ಶ್ರೀಧರ್ ಎಂಬವರ ಮನೆಯಲ್ಲಿ ಜೂನ್ 8ರ ಬೆಳಗ್ಗೆ 8ರಿಂದ ಜೂ.16ರ ಮಧ್ಯಾಹ್ನ 12ರ ನಡುವೆ ನಡುವೆ 15

ಬೆಳ್ತಂಗಡಿ ತಾಲೂಕು ಕಚೇರಿಗೆ ಶಾಸಕ ಹರೀಶ್ ಪೂಂಜಾ ದಿಢೀರ್ ದಾಳಿ

ಬೆಳ್ತಂಗಡಿ ತಾಲೂಕು ಕಚೇರಿಗೆ ಶಾಸಕ ಹರೀಶ್ ಪೂಂಜಾ ದಿಢೀರ್ ಭೇಟಿ ನೀಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ತಾಲೂಕು ಕಚೇರಿ ಅಧಿಕಾರಿಗಳು ಕಡತ ವಿಲೇವಾರಿ ಮಾಡಲು ಜನರನ್ನು ಸತಾಯಿಸುತ್ತಿದ್ದರು. ಆದ್ದರಿಂದ ಶಾಸಕರು ಕಚೇರಿ ದಿಢೀರ್ ಅಂತಾ ಭೇಟಿ ನೀಡಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ತಾಲೂಕು ಕಚೇರಿಗೆ ಆಗಮಿಸಿದ ಶಾಸಕ ಹರೀಶ್ ಪೂಂಜಾ, ಜನರ ಸಮಸ್ಯೆ ಆಲಿಸಿದ ಬಳಿಕ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಸೇರಿದಂತೆ ಇತರೆ ಅಧಿಕಾರಿಗಳನ್ನ ತರಾಟೆಗೆ

ಅಕ್ರಮ ಗಣಿಗಾರಿಕೆಗೂ ನನಗೆ ಯಾವುದೇ ಸಂಬಂಧವಿಲ್ಲ ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿಧರ್ ಶೆಟ್ಟಿ ಹೇಳಿಕೆ

ಬೆಳ್ತಂಗಡಿಯಲ್ಲಿ ನಡೆದ ಅಕ್ರಮ ಗಣಿಗಾರಿಕೆಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿಧರ ಶೆಟ್ಟಿ ಹೇಳಿದರು. ಅವರು ಬೆಳ್ತಂಗಡಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ನಾನು ಆ ದಿನ ಕಲೆಂಜದಲ್ಲಿ ಇದ್ದು ನಮ್ಮ ಮನೆಗೆ ಪೊಲೀಸರು ಬಂದಾಗಲೇ ವಿಷಯ ತಿಳಿದಿದ್ದು ಕೂಡಲೇ ಪೊಲೀಸರಿಗೆ ಹಾಗೂ ತಹಶೀಲ್ದಾರರಿಗೆ ವಿಷಯ ಮನದಟ್ಟು ಮಾಡಿದ್ದೇನೆ. ಆದರೂ ಕೂಡ ರಾಜಕೀಯ ಒತ್ತಡದಿಂದ ನನ್ನ ಮೇಲೆ ಸುಳ್ಳು ದೂರು ದಾಖಲು ಮಾಡಲಾಗಿದೆ. ಇದಕ್ಕೆಲ್ಲ

ಬೆಳ್ತಂಗಡಿಯಲ್ಲಿ ಬಿಜೆಪಿ ಯುವ ಮೋರ್ಚಾದಿಂದ ಪ್ರತಿಭಟನೆ ರಾಹುಲ್ ಗಾಂಧಿಯವರಿಂದ ಹಿಂದೂ ಸಮಾಜಕ್ಕೆ ಅಪಮಾನ

ಲೋಕ ಸಭೆಯಲ್ಲಿ ರಾಹುಲ್ ಗಾಂಧಿ ಏನು ಮಾತಾಡಬೇಕು ಅದನ್ನು ಮಾತನಾಡದೆ ಸಮಸ್ತ ಹಿಂದೂ ಸಮಾಜವನ್ನು ಅಪಮಾನ ಮಾಡಿದ್ದಾರೆ ಎಂದು ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದರು. ಅವರು ಬೆಳ್ತಂಗಡಿಯಲ್ಲಿ ರಾಜ್ಯ ಸರ್ಕಾರದ ಬೆಲೆ ಏರಿಕೆ ಬಗ್ಗೆ ನಡೆದ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿ, ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗಿದೆ ಹಾಲಿನ ದರ ಏರಿಕೆಯಾಗಿದ್ದು, ಬಡವರ ಮಕ್ಕಳ ಹೊಟ್ಟೆಗೆ ಹೊಡೆದಿದ್ದಾರೆ, ಇಡೀ ಕಾಂಗ್ರೆಸ್ ಪಕ್ಷದ ಶಾಸಕರು ಕಮಿಷನ್

ಬಿಜೆಪಿ ರಾಜ್ಯ ಕಾರ್ಯಕಾರಣಿಗೆ ಸದಸ್ಯರಾಗಿ ಕಡಬದ ಬಿಜೆಪಿ ಮುಖಂಡ ಕೃಷ್ಣ ಶೆಟ್ಟಿ ನೇಮಕ

ಬಿಜೆಪಿ ರಾಜ್ಯ ಕಾರ್ಯಕಾರಣಿಗೆ ಸದಸ್ಯರಾಗಿ ಕಡಬದ ಬಿಜೆಪಿ ಮುಖಂಡ ಕೃಷ್ಣ ಶೆಟ್ಟಿ ಅವರನ್ನು ಕರ್ನಾಟಕ ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯರನ್ನಾಗಿ ನೇಮಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪ್ರಶಿಕ್ಷಣ ಪ್ರಕೋಷ್ಟದ ಸಂಚಾಲಕರಾಗಿದ್ದ ಇವರು ಈ ಹಿಂದೆ ವಿಧಾನ ಸಭಾ ಚುನಾವಣಾ ಸಂದರ್ಭದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಚುನಾವಣಾ ಪ್ರಭಾರಿಯಾಗಿ ಕರ್ತವ್ಯ

ಶಿಬಾಜೆ, ವಿದ್ಯುತ್ ಸ್ಪರ್ಶಿಸಿ ಯುವತಿ ಸಾವು

ಬೆಳ್ತಂಗಡಿ: ಶಿಬಾಜೆ ಗ್ರಾಮದ ಬರ್ಗುಳದಲ್ಲಿ ವಿದ್ಯುತ್ ಶಾಕ್‌ಗೆ ಯುವತಿ ಸಾವನ್ನಪ್ಪಿದ್ದು ಮೆಸ್ಕಾಂ ಇಲಾಖೆಯ ನಿರ್ಲಕ್ಷ÷್ಯವೇ ಕಾರಣ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.ಕಳೆದ ಕೆಲವು ಸಮಯಗಳಿಂದ ತಂತಿ ಸರಿಪಡಿಸುವಂತೆ ಸಂಬAಧ ಪಟ್ಟ ಮೆಸ್ಕಾಂ ಇಲಾಖೆಯ ಸಿಬ್ಬಂದಿಗಳಿಗೆ ಮನೆಯವರು ತಿಳಿಸಿದರೂ ಅವರು ನಿರ್ಲಕ್ಷಿ÷್ಸಸಿದ್ದಾರೆ. ಅದ್ದರಿಂದ ಇವತ್ತು ಅಮಾಯಕ ಯುವತಿ ಬಲಿಯಾಗಿದ್ದಾಳೆ. ಈ ದುರಂತಕ್ಕೆ ಮೆಸ್ಕಾಂ ಇಲಾಖೆಯೇ ಕಾರಣ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಬೇಕು

ಶಿಬಾಜೆ, ಮೆಸ್ಕಾಂ ಇಲಾಖೆಯ ನಿರ್ಲಕ್ಷ್ಯಕ್ಕೆ ಯುವತಿ ಬಲಿ

ಬೆಳ್ತಂಗಡಿ: ಶಿಬಾಜೆ ಗ್ರಾಮದ ಬರ್ಗುಳದಲ್ಲಿ ವಿದ್ಯುತ್ ಶಾಕ್ ಗೆ ಯುವತಿ ಸಾವನ್ನಪ್ಪಿದ್ದು ಮೆಸ್ಕಾಂ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಕಳೆದ ಕೆಲವು ಸಮಯಗಳಿಂದ ತಂತಿ ಸರಿಪಡಿಸುವಂತೆ ಸಂಬಂಧ ಪಟ್ಟ ಮೆಸ್ಕಾಂ ಇಲಾಖೆಯ ಸಿಬ್ಬಂದಿಗಳಿಗೆ ಮನೆಯವರು ತಿಳಿಸಿದರೂ ಅವರು ನಿರ್ಲಕ್ಷಿಸಿದ್ದಾರೆ. ಅದ್ದರಿಂದ ಇವತ್ತು ಅಮಾಯಕ ಯುವತಿ ಬಲಿಯಾಗಿದ್ದಾಳೆ. ಈ ದುರಂತಕ್ಕೆ ಮೆಸ್ಕಾಂ ಇಲಾಖೆಯೇ ಕಾರಣ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಬೇಕು

ಬೆಳ್ತಂಗಡಿ ದಂಪತಿಗೆ ಬಂದ ಅನಾಮಧೇಯ ಕರೆ

ಪಾಕಿಸ್ತಾನದ ಪೋನ್ ಕರೆಯಿಂದ ಕಂಗಾಲಾದ ಬೆಳ್ತಂಗಡಿಯ ದಂಪತಿ ಇದೀಗ ಪೋಲಿಸ್ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಪಟ್ರಮೇ ಗ್ರಾಮದ ದಂಪತಿಗಳಿಗೆ ಪೋನ್ ಮಾಡಿ ನಿಮ್ಮ ಮಗ ರೇಪ್ ಕೇಸಿನಲ್ಲಿ ಸಿಕ್ಕಿ ಹಾಕಿ ಕೊಂಡಿದ್ದಾನೆ ನೀವು ಏನಾದರೂ ಮಾತು ಕಥೆ ಮಾಡಿ ಮುಗಿಸಿ ಎಂದು ಹೇಳಿದಾಗ ತಾಯಿಯು ಗಾಬರಿಗೊಂಡು ತನ್ನ ಗಂಡನಿಗೆ ಮೊಬೈಲ್ ಕೊಟ್ಟು ಮಾತನಾಡಿದಾಗ ಮಗನ ಕೈಯಲ್ಲಿ ಪೋನ್ ಕೊಡಿ ಎಂದಾಗ ಅತ್ತ ಕಡೆಯಿಂದ ಅಳುವ ಶಬ್ದ ಕೇಳಿಸಿತು ಆಗ ಗಾಬರಿಗೊಂಡ ದಂಪತಿಗಳು

ಶಾಸಕ ಹರೀಶ್ ಪೂಂಜಾರನ್ನು ಬಂಧಿಸದಂತೆ ಸರ್ಕಾರಕ್ಕೆ ತಾಕೀತು ಮಾಡಿದ ಉಚ್ಚ ನ್ಯಾಯಾಲಯ

ಸುಳ್ಳು ಕೇಸ್ ದಾಖಲಿಸಿ ಉದ್ದೇಶಪೂರ್ವಕವಾಗಿ ದ.ಕ. ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿಯವರ ಬಂಧನ ನಡೆದಿದೆ. ಆತ ಅಮಾಯಕ ಎಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಶಾಸಕ ಹರೀಶ್ ಪೂಂಜಾ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ನಡೆದ ಘಟನೆಗಳ ಬಗ್ಗೆ ಅವರ ಮೇಲೆ ಬೆಳ್ತಂಗಡಿ ಠಾಣೆಯಲ್ಲಿ ದಾಖಲಾಗಿದ್ದ ಮೊಕದ್ದಮೆ ವಿಚಾರವಾಗಿ ಜೂ೦೭ ರಂದು ಪ್ರಕರಣವನ್ನು ಕೈಗೆತ್ತಿಕೊಂಡ ಹೈಕೋರ್ಟ್ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್