Home ಕರಾವಳಿ Archive by category ಮಂಗಳೂರು (Page 112)

MDMA ಹಾಗೂ ಪಿಸ್ತೂಲ್ ಹೊಂದಿದ ಕುಖ್ಯಾತ ಡ್ರಗ್ ಪೆಡ್ಲರ್‍ಗಳ ಸೆರೆ

ಮಂಗಳೂರು ನಗರದಾದ್ಯಂತ ಮಾದಕ ವಸ್ತುವಾದ ಎಂಡಿಎಂಎಯನ್ನು ಮಾರಾಟ ಮಾಡುತ್ತಿದ್ದ ಮೂವರು ಕುಖ್ಯಾತ ಡ್ರಗ್ ಪೆಡ್ಲರ್‍ಗಳನ್ನು ಸಿಸಿಬಿ ಪೊಲೀಸರ ಯಶಸ್ವಿ ಕಾರ್ಯಾಚರಣೆ ಮೂಲಕ ಬಂಧಿಸಲಾಗಿದೆ. ಸುಮಾರು 9ಲಕ್ಷದ ಮೌಲ್ಯದ ಎಂಡಿಎಂಎ ಡ್ರಗ್ಸ್ ಹಾಗೂ ಪಿಸ್ತೂಲ್ , ಡ್ರಾಗನ್ ಚೂರಿ ವಶಕ್ಕೆ ಪಡೆಯಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಹೇಳಿದ್ದಾರೆ.

ಭಜರಂಗದಳ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್

ಇತ್ತೀಚೆಗೆ ನಡೆದ ಎರಡು ನೈತಿಕ ಪೊಲೀಸ್‍ಗಿರಿ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮೂವರು ಹಿಂದೂಪರ ಸಂಘಟನೆ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್ ನೀಡಲಾಗಿದೆ. ಕಳೆದ ಒಂದು ವರ್ಷದಲ್ಲಿ 60 ಇಂತಹ ರೌಡಿ ಶೀಟರ್ ಗಳನ್ನು ಗಡಿಪಾರು ಮಾಡಲು ಕ್ರಮ ವಹಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮಗೆ ಆರೋಪಿಗಳು ಯಾವ ಸಂಘಟನೆ ಅನ್ನೋದು ನಮಗೆ ಬೇಡ. ನಿರಂತರ ಸಮಾಜ ವಿರೋಧಿ ಚಟುವಟಿಕೆಗಳನ್ನು

ಮಾದಕ ದ್ರವ್ಯ ಮಿಶ್ರಿತ ಚಾಕೊಲೇಟ್‌ಗಳ ಮಾರಾಟ

ನಗರದ ಕಾರ್ ಸ್ಟ್ರೀಟ್‌ನಲ್ಲಿರುವ ಮನೋಹರ್ ಶೇಠ್ ಮಾಲೀಕತ್ವದ ಅಂಗಡಿ ಮತ್ತು ಉತ್ತರ ಪ್ರದೇಶ ಮೂಲದ ಬೆಚನ್ ಸೋನಾರ್ ಅವರ ಮಾಲೀಕತ್ವದ ಫಳ್ನೀರ್‌ನಲ್ಲಿರುವ ಮತ್ತೊಂದು ಅಂಗಡಿಯಿಂದ ಚಾಕೊಲೇಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಡ್ರಗ್ಸ್ ಲೇಪಿತ ಚಾಕೊಲೇಟ್‌ಗಳ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಮಂಗಳೂರು ದಕ್ಷಿಣ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಮಾದಕ ದ್ರವ್ಯ ಮಿಶ್ರಿತ ಚಾಕೊಲೇಟ್‌ಗಳನ್ನು ‘ಬ್ಯಾಂಗ್’ ಚಾಕೊಲೇಟ್‌ಗಳ

CITU ಸದಸ್ಯರಾದ ಉಮೇಶ್ ಪೂಜಾರಿ ನಿಧನ

ನಿಟ್ಟೆ ಲೆಮಿನಾ ಫೌಂಡ್ರಿ ಸಂಸ್ಥೆಯ ಕಾರ್ಮಿಕರೂ,CITU ಸದಸ್ಯರಾದ ಉಮೇಶ್ ಪೂಜಾರಿಯವರು ತಾ.17-07-2023ರಂದು ರಾತ್ರಿ ಪಾಳಯದಲ್ಲಿ ಕಂಪೆನಿಯಲ್ಲಿ ದುಡಿಯುತ್ತಿದ್ದಾಗ,ಅವಘಡ ಸಂಭವಿಸಿದ್ದು,ಕೂಡಲೇ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಕೊಡಿಸಲಾಯಿತು. ಬಳಿಕ ಮನೆಗೆ ತೆರಳಿದ ಉಮೇಶ್ ರವರು ಮಂಗಳವಾರ ದಿನವಿಡೀ ಮನೆಯಲ್ಲಿ ವಿಶ್ರಾಂತಿ ಪಡೆದು ಬುಧವಾರ ಮತ್ತೆ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದು ಮನೆಗೆ ವಾಪಸಾಗುತ್ತಾರೆ.ಕಾಲಿಗೆ ಸಂಪೂರ್ಣವಾಗಿ ಬ್ಯಾಂಡೇಜ್ ಹಾಕಿದ್ದರಿಂದ

ಬಿಜೆಪಿ ಯುವ ಮೋರ್ಚ ವತಿಯಿಂದ ಸ್ಪೀಕರ್ ವಿರುದ್ಧ ಪ್ರತಿಭಟನೆ

ಕರ್ನಾಟಕ ರಾಜ್ಯ ಅಧಿವೇಶನದಲ್ಲಿ ಭಾರತೀಯ ಜನತಾ ಪಕ್ಷದ ಸದಸ್ಯರು ಸ್ಪೀಕರ್ ವಿರುದ್ಧ ಪ್ರತಿಭಟನೆ ನಡೆಸಿದರು ಎಂದು ಆರೋಪಹರಿಸಿ 10 ಮಂದಿ ಬಿಜೆಪಿ ಶಾಸಕರನ್ನು ಅಮಾನತು ಮಾಡಿರುವ ಕಾಂಗ್ರೆಸ್ ಪಕ್ಷದ ನಡವಳಿಕೆ ಹಾಗೂ ನಿಷ್ಪಕ್ಷಪಾತವಾಗಿ ನ್ಯಾಯ ನೀಡಬೇಕಾಗಿದ್ದ ಸ್ಪೀಕರ್ ವಿರುದ್ಧ ಬಿಜೆಪಿ ಯುವ ಮೋರ್ಚ ಸುರತ್ಕಲ್ ನಲ್ಲಿ ಪ್ರತಿಭಟನೆ ನಡೆಸಿತು. ಪ್ರತಿಭಟನೆಯಲ್ಲಿ ಮಂಗಳೂರು ಉತ್ತರಮಂಡಲ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಭರತ್ ರಾಜ್ ಕೃಷ್ಣಾಪುರ ರಾಜ್ಯ ಯುವ ಮೋರ್ಚಾ

ಬಿಗ್ ಸಿನೆಮಾಸ್ ನಲ್ಲಿ “ನಿಮ್ಮೆಲ್ಲರ ಆಶೀರ್ವಾದ” ಪ್ರೀಮಿಯರ್ ಶೋ

ಮಂಗಳೂರು: ವಿಭಿನ್ನ ಕಥೆ, ಹೊಸ ಕಲಾವಿದರನ್ನೊಳಗೊಂಡ “ನಿಮ್ಮೆಲ್ಲರ ಆಶೀರ್ವಾದ” ಕನ್ನಡ ಚಿತ್ರದ ಪ್ರೀಮಿಯರ್ ಶೋ ಗುರುವಾರ ಸಂಜೆ ನಗರದ ಬಿಗ್ ಸಿನೆಮಾಸ್ ನಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟನೆ ನೆರವೇರಿಸಿ ಮಾತಾಡಿದ ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಆರ್. ಜೈನ್ ಅವರು, “ನಿಮ್ಮೆಲ್ಲರ ಆಶೀರ್ವಾದ ಸಿನಿಮಾ ರೊಮ್ಯಾಂಟಿಕ್ ಕಾಮಿಡಿ ಆಗಿದ್ದು ನಾಯಕ ನಟ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಗಮನ ಸೆಳೆಯುತ್ತಾರೆ.

“ನಿಮ್ಮೆಲ್ಲರ ಆಶೀರ್ವಾದ” ಚಿತ್ರ ಇದೇ ಶುಕ್ರವಾರ ತೆರೆಗೆ!

ವರುಣ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಮೂಡಿಬಂದಿರುವ “ನಿಮ್ಮೆಲ್ಲರ ಆಶೀರ್ವಾದ” ಸಿನಿಮಾ ಇದೇ ಶುಕ್ರವಾರ ತೆರೆ ಕಾಣಲಿದೆ ಎಂದು ನಾಯಕ ನಟ ಪ್ರತೀಕ್ ಶೆಟ್ಟಿ ತಿಳಿಸಿದರು. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಇದು ಹೊಸಬರ ವಿಭಿನ್ನ ಪ್ರಯತ್ನವಾಗಿದ್ದು ಒಳ್ಳೆಯ ಕತೆ ಸಿನಿಮಾದ ಜೀವಾಳವಾಗಿದೆ. ಚಿತ್ರತಂಡದಲ್ಲಿ ಬಹುತೇಕ ಹೊಸ ಕಲಾವಿದರು, ತಂತ್ರಜ್ಞರು ಕೆಲಸ ಮಾಡಿದ್ದಾರೆ. ನೀವೆಲ್ಲರೂ ಆಶೀರ್ವಾದ ಮಾಡಿದರೆ ನಾವು ಇನ್ನಷ್ಟು ಹೊಸ

ಕೆಪಿಟಿ : ಪ್ರತಿನಿತ್ಯ ಪಾರಿವಾಳಗಳಿಗೆ ಆಹಾರ ಧಾನ್ಯ ನೀಡುತ್ತಿರುವ ಪಕ್ಷಿಪ್ರೇಮಿ ಗಣೇಶ್ ಪೂಜಾರಿ

ಕೊರೊನಾ ಸಂದರ್ಭದಲ್ಲಿ ಪಕ್ಷಿಗಳಿಗೆ ಆಹಾರ ಹಾಕುವುದನ್ನು ಆರಂಭಿಸಿದ ಮಂಗಳೂರು ಕೆಪಿಟಿ ಪೆಟ್ರೊಲು ಪಂಪ್‍ನ ಉದ್ಯೋಗಿ ಗಣೇಶ್ ಪೂಜಾರಿ ಅವರು ನಂತರ ಅದನ್ನು ನಿತ್ಯದ ಅಭ್ಯಾಸವನ್ನಾಗಿಸಿಕೊಂಡಿದ್ದು ಇದೀಗ ಪ್ರತಿನಿತ್ಯ ನೂರಾರು ಪಾರಿವಾಳಗಳಿಗೆ ಆಹಾರದಾತರಾಗಿದ್ದಾರೆ. ಪ್ರತಿನಿತ್ಯ ಪಾರಿವಾಳಗಳಿಗೆ ಆಹಾರ ಹಾಕಿ ಪೋಷಿಸುವ ಇವರ ಪಕ್ಷಿಪ್ರೇಮ ಇದೀಗ ಸಾರ್ವಜನಿಕ ವಲಯದಲ್ಲಿ ಪ್ರಶಂಸೆಗೆ ಪಾತ್ರವಾಗಿದೆ. ಕೊರೊನಾ ಸಂಕಷ್ಟದ ಕಾಲದಲ್ಲಿ ಅಂಗಡಿ-ಮುಗ್ಗಟ್ಟುಗಳು ಬಂದ್

ಸುರತ್ಕಲ್ :- ದೇಶವಿರೋಧಿ ದುಷ್ಟ ಶಕ್ತಿಗಳು ಬಿಲದಿಂದ ಹೊರಗೆ ಬರುತ್ತಿವೆ ಡಾ. ಭರತ್ ಶೆಟ್ಟಿ ವೈ

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಕೂಡಲೇ ಬಿಲದಲ್ಲಿ ಅಡಗಿ ಕುಳಿತಿದ್ದ ದುಷ್ಟ ಶಕ್ತಿಗಳು ಒಂದೊಂದಾಗಿ ಹೊರಗೆ ಬರುತ್ತಿವೆ . ಇದಕ್ಕೆ ಕಾಂಗ್ರೆಸ್ ಪಕ್ಷದ ಮೇಲೆ, ಹಾಗೂ ಅದರ ಆಡಳಿತದ ಮೇಲೆ ಯಾವುದೇ ಹೆದರಿಕೆ ಇಲ್ಲದಿರುವುದೇ ಕಾರಣ ಎಂದು ಡಾ. ಭರತ್ ಶೆಟ್ಟಿ ಹೇಳಿದ್ದಾರ ಬಿಜೆಪಿ ಅಧಿಕಾರದಲ್ಲಿದ್ದಾಗ ಉಗ್ರರ ಚಟುವಟಿಕೆಗಳನ್ನ ಸಂಪೂರ್ಣ ಮಟ್ಟ ಹಾಕಲಾಗಿತ್ತು. ಇದೀಗ ರಾಜಾರೋಷವಾಗಿ ಬಾಂಬುಗಳ ತಯಾರಿಕೆಗೆ ಬೇಕಾದ ವಸ್ತುಗಳನ್ನು ಖರೀದಿಸಲು ಬೆಂಗಳೂರಿನಲ್ಲಿ

ವೆಸ್ಟ್ ಕೋಸ್ಟ್ ಶೋ ರೂಮ್ ನಲ್ಲಿ ದ್ವಿಚಕ್ರ ವಾಹನ ಸವಾರರ ಕನಸು ನನಸಾಗಿಸುವ ಅವಕಾಶ

ಮಂಗಳೂರಿನ ವೆಸ್ಟ್ ಕೋಸ್ಟ್ ಶೋರೂಮ್ ನಲ್ಲಿ ಅಮೇರಿಕಾ ಮೂಲದ ಜನಪ್ರಿಯ ದ್ವಿಚಕ್ರ ವಾಹನ ತಯಾರಾಕರದ ಹಾರ್ಲೆ ಡೇವಿಡ್ಸನ್ ನ ಹೊಸ ಹಾರ್ಲೆ ಡೇವಿಡ್ಸನ್ *440, ಹಾರ್ಲೆ ಎವಿಡ್ ಮತ್ತು ಎಸ್ ಡೇವಿಡ್ಸನ್ ಬಿಡುಗಡೆಯಾಗಿದ್ದು ಭಾರತೀಯ ಮಾರುಕಟ್ಟೆಗೆ ಹೊಸ ಸಂಚಲನ ಸೃಷ್ಟಿಸಿದೆ. ಈಗಾಗಲೇ ಉತ್ತಮ ಸ್ಪಂದನೆ ಸಿಗುತ್ತಿದ್ದೂ,ಆಗಸ್ಟ್ 15 ರ ಬಳಿಕ ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಾರ್ಲೆ ಡೇವಿಡ್ಸನ್ ರಸ್ತೆಗಿಳಿಯಲಿದೆ. ಈಗಾಗಲೇ ಮುಂಗಡ ಬುಕಿಂಗ್ ತೆರೆದಿದ್ದು