Home ಕರಾವಳಿ Archive by category ಮಂಗಳೂರು (Page 113)

ಚಪ್ಪಲಿ ಕಳೆದುಕೊಂಡ ಯುವಕನಿಂದ 112ಕ್ಕೆ ಕರೆ

ನಗರದ ಸಭಾಂಗಣದಲ್ಲಿ ಯುವಕನೊಬ್ಬ ಹೊರಗೆ ಬಿಟ್ಟಿದ್ದ ಚಪ್ಪಲಿ ನಾಪತ್ತೆಯಾಗಿದ್ದು ಇದಕ್ಕಾಗಿ 112 ನಂಬರಿಗೆ ಕರೆ ಮಾಡಿ ಪೊಲೀಸರನ್ನು ಕರೆಸಿಯಿಸಿದ ಘಟನೆ ನಡೆದಿದೆ. ಶರವು ದೇವಸ್ಥಾನದ ಸಮೀಪದ ಸಭಾಂಗಣಕ್ಕೆ ಆಗಮಿಸಿದ್ದ ಯುವಕ ಚಪ್ಪಲಿಯನ್ನು ಹೊರಗೆ ಬಿಟ್ಟಿದ್ದು ವಾಪಾಸ್ ಬಂದಾಗ ಚಪ್ಪಲಿ ಇಲ್ಲದಿರುವುದನ್ನು ಕಂಡು 112 ನಂಬರಿಗೆ ಕರೆ ಮಾಡಿ ದೂರು ದಾಖಲಿಸಿದ್ದಾನೆ. ಈ

ಬೈಕ್ ಸ್ಕಿಡ್ ಆಗಿ ಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

ಮಂಗಳೂರಿನ ಅಡ್ಯಾರ್ ಬಳಿಯ ಸಹ್ಯಾದ್ರಿ ಕಾಲೇಜು ಮುಂಭಾಗದಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದು ಸವಾರ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.ವಳಚ್ಚಿಲ್ ಶ್ರೀನಿವಾಸ್ ಇಂಜಿನಿಯರಿಂಗ್ ಕಾಲೇಜ್ ವಿದ್ಯಾರ್ಥಿ, ಕೇರಳ ಮೂಲದ ಮಹಮ್ಮದ್ ನಶತ್ (21) ಮೃತ ವಿದ್ಯಾರ್ಥಿ.ಯುವಕ ಪಡೀಲ್ ಕಡೆಯಿಂದ ವಳಚ್ಚಿಲ್ ಕಾಲೇಜು ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದಾಗ, ಸ್ಕಿಡ್ ಆಗಿದ್ದು ಡಿವೈಡರ್ ಬಡಿದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ತೀವ್ರ ಗಾಯಗೊಂಡು

ಐಕಳ ಹರೀಶ್ ಶೆಟ್ಟಿ ಮನೆಯಲ್ಲಿ ಕಳವು ಪ್ರಕರಣ : ಇನ್ನೋರ್ವ ಆರೋಪಿಯ ಸೆರೆ

ಮಂಗಳೂರು :ನಗರದ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಐಕಳದಲ್ಲಿ ನಡೆದ ಮನೆ ಕಳ್ಳತನ ಪ್ರಕರಣದಲ್ಲಿ ಭಾಗಿಯಾದ ಇನ್ನೋರ್ವ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿರುತ್ತಾರೆ. ದಿನಾಂಕ: 15-01-2023 ರಂದು ಸಂಜೆ 18-30 ಗಂಟೆಯಿಂದ ದಿನಾಂಕ: 16-01-2023 ರಂದು ಬೆಳಿಗ್ಗೆ 09:00 ಗಂಟೆಯ ಮಧ್ಯಾವಧಿಯಲ್ಲಿ ಮಂಗಳೂರು ತಾಲೂಕು ತಾಳಿಪ್ಪಾಡಿ ಗ್ರಾಮದ ಗುತ್ತಕಾಡು ಎಂಬಲ್ಲಿರುವ ಐಕಳ ಹರೀಶ್ ಶೆಟ್ಟಿ ಎಂಬವರ ಚಂದ್ರಿಕಾ ಎಂಬ ಹೆಸರಿನ ಮನೆಯ ಎದುರಿನ ಬಾಗಿಲಿನ

ಸುಂಕದಕಟ್ಟೆ : ಕಾರ್ಪೊರೇಟರ್ ವಿರುದ್ಧ ಕಠಿಣ ಕ್ರಮಕೈಗೊಳ್ಳಲು DYFI ಒತ್ತಾಯ

ಉರ್ವಸ್ಟೋರ್ ಸುಂಕದಕಟ್ಟೆಯ ನಾಗರಿಕರು ಕುಡಿಯುವ ನೀರಿನ ಸಮಸ್ಯೆಯನ್ನು ಧೀರ್ಘ ಕಾಲದಿಂದ ಅನುಭವಿಸುತ್ತಿದ್ದು, ಅದನ್ನು ಪರಿಹರಿಸಬೇಕಾದ ಸ್ಥಳೀಯ ಕಾರ್ಪೊರೇಟರ್ ತನ್ನ ಜವಾಬ್ದಾರಿಯನ್ನು ಮರೆತು ನಾಗರಿಕರ ಮೇಲೆಯೇ ಎಗರಾಡಿ ಅಸಂಬದ್ಧ ಮಾತುಗಳನ್ನಾಡಿದ್ದು,ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯ ನಾಗರಿಕರು DYFI ನೇತೃತ್ವದಲ್ಲಿ ಮನಪಾ ಮೇಯರ್ ಆಯುಕ್ತರಿಗೆ ಮನವಿ ಸಲ್ಲಿಸಿದರು. ಉರ್ವಸ್ಟೋರ್ ಸುಂಕದಕಟ್ಟೆ ಪ್ರದೇಶದಲ್ಲಿ ತಲೆದೋರಿದ ಕುಡಿಯುವ ನೀರಿನ ಸಮಸ್ಯೆ

ಕೂಳೂರು ರಾ.ಹೆ. ಅವ್ಯವಸ್ಥೆ ಖಂಡಿಸಿ ನಾಗರಿಕ ಹಿತರಕ್ಷಣಾ ಸಮಿತಿಯಿಂದ ಪ್ರತಿಭಟನೆ

ನಾಗರಿಕ ಹಿತರಕ್ಷಣಾ ಸಮಿತಿ ಕೂಳೂರು ಇದರ ವತಿಯಿಂದ ಹೊಂಡ ಗುಂಡಿ ತಕ್ಷಣ ಮುಚ್ಚಿ ಹಾಗೂ 2 ವರ್ಷದಿಂದ ಅರ್ಧಕ್ಕೆ ನಿಂತಿರುವ ಕೂಳೂರು ಹೊಸ ಸೇತುವೆ ಕಾಮಗಾರಿ ಶೀಘ್ರದಲ್ಲಿ ಪೂರ್ಣಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ಈ ಬಗ್ಗೆ ನಾಗರೀಕ ಹಿತರಕ್ಷಣಾ ಸಮಿತಿಯ ಕೂಳೂರಿನ ಅಧ್ಯಕ್ಷರಾದ ವಿಜಿ ಗುರುಚಂದ್ರ ಹೆಗ್ಡೆ ಅವರು ಮಾತನಾಡಿ, ಎನ್‍ಹೆಚ್ 66ಲ್ಲಿ ಅವೈಜ್ಞಾನಿ ಕಾಮಗಾರಿ ಹಾಗೂ ಕೂಳೂರು ಹೊಸ ಸೇತುವೆ ಕಾಮಗಾರಿಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.

ಕುಂಪಲ : ನವ ವಧು ವರರ ರಂಗ ರುಕ್ಮಿಣಿ ಸಮಾಗಮ ಕಾರ್ಯಕ್ರಮ

ಕುಂಪಲ ಶ್ರೀ ಬಾಲಕೃಷ್ಣ ಮಂದಿರದ ವತಿಯಿಂದ ನವ ವಧು ವರರ ರಂಗ ರುಕ್ಮಿಣಿ ಸಮಾಗಮ ಕಾರ್ಯಕ್ರಮ ನಡೆಯಿತು. ಉದ್ಯಮಿ ಕಂಪಾರ್ಟ್ ಇನ್ ಮಾಲಕ ಚಂದ್ರಹಾಸ ಶೆಟ್ಟಿ ಕಾರ್ಯಕ್ರಮಕ್ಕೆ ದೀಪಬೆಳಗಿಸಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಜೀವನವನ್ನು ರೂಪಿಸಲು ನಮಗೆ ಸಂಸ್ಕಾರ ಬಹಳ ಮುಖ್ಯ, ಇದನ್ನು ಅರಿತಾಗ ಮಾತ್ರ ನಮ್ಮ ಜೀವನ ಸುಂದರವಾಗುತ್ತದೆ, ಈ ನಿಟ್ಟಿನಲ್ಲಿ ರಂಗ ರುಕ್ಮಿಣಿ ಕಾರ್ಯಕ್ರಮ ಶ್ಲಾಘನೀಯ. ಹೊಸ ಬಾಳಿನಲ್ಲಿ ಸದಾ ಕಾಲ ನಗುವಿನೊಂದಿಗೆ ಬದುಕಿ ಎಂದು ಹಾರೈಸಿದರು.

ತೋಕೂರು ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಯಕ್ಷಾರ್ಚನೆ

ಹಳೆಯಂಗಡಿ: ಯಕ್ಷನಾಟ್ಯದಿಂದಲೂ ದೇವರ ಸೇವೆ ಮಾಡಿದಲ್ಲಿ ಮಕ್ಕಳಿಗೆ ಶಿಕ್ಷಣದ ಜೊತೆಗೆ ಯಕ್ಷಗಾನ ಸಹಿತ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ರೂಡಿಸಿಕೊಂಡರೆ ಜೀವನದಲ್ಲಿ ಸಂಸ್ಕಾರ ಸಂಸ್ಕೃತಿ ಸಾಧ್ಯ ಎಂದು ಕಟೀಲು ಕ್ಷೇತ್ರದ ಅರ್ಚಕ ಶ್ರೀ ಹರಿ ನಾರಾಯಣ ಆಸ್ರಣ್ಣ ಹೇಳಿದರು. ಅವರು ಹಳೆಯಂಗಡಿ ಸಮೀಪದ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಯಕ್ಷಾರ್ಚನೆ ಕಾರ್ಯಕ್ರಮದ ದೀಪ ಪ್ರಜ್ವಲನಗೊಳಿಸಿ ಆಶೀರ್ವಚನ ನೀಡಿದರು. ಯಕ್ಷಾರ್ಚನೆಯ ಬಾಲ ಪ್ರತಿಭೆಗಳಾದ ದಿಯಾ, ದಿಶಾ

ಕಾಂಗ್ರೆಸ್ ಯಾವತ್ತೂ ದ್ವೇಷ ರಾಜಕೀಯ ಮಾಡಿಲ್ಲ : ಮಾಜಿ ಸಚಿವ ರಮಾನಾಥ್ ರೈ

ಜಿಲ್ಲೆಯಲ್ಲಿ ಒಂದು ವರ್ಗದ ಹತ್ಯೆ ಆಗಿದೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದು ಎರಡು ತಿಂಗಳು ಆಗಿದೆ ಅಷ್ಟೇ. ಈ ಹತ್ಯೆಯಲ್ಲಿ ಭಾಗಿಯಾಗಿದವರು ಒಬ್ಬರು ಕೂಡಾ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಲ್ಲ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು. ಅವರು ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಿಲ್ಲ. ಕಾಂಗ್ರೆಸ್ ಪಕ್ಷ ಆಡಳಿತಕ್ಕೆ

ಅದ್ಯಪಾಡಿ : ಪುಣ್ಯ ಕ್ಷೇತ್ರ ಬೀಬಿಲಚ್ಚಿಲ್‍ನ ಭಕ್ತಿ ಗೀತೆಗಳ ಲೋಕಾರ್ಪಣೆ

ಹಚ್ಚ ಹಸಿರಿನಲ್ಲಿ ಕಂಗೊಳಿಸುತ್ತಿರುವ ಪ್ರಸಿದ್ಧ ಪುಣ್ಯ ಕ್ಷೇತ್ರವಾಗಿರುವ ಅದ್ಯಪಾಡಿಯ ಬೀಬಿಲಚ್ಚಿಲ್ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ಪುಣ್ಯ ಕ್ಷೇತ್ರ ಬೀಬಿಲಚ್ಚಿಲ್ ಎಂಬ 5 ಭಕ್ತಿ ಗೀತೆಗಳ ಲೋಕಾರ್ಪಣೆ ಕಾರ್ಯಕ್ರಮವು ಶ್ರೀ ಕ್ಷೇತ್ರದಲ್ಲಿ ನಡೆಯಿತು. ಬೀಬಿಲಚ್ಚಿಲ್ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದ ಬಗೆಗೆ ತುಳು ಭಕ್ತಿ ಗೀತೆಯು ಬಿಡುಗಡೆಗೊಂಡಿತು. ಶ್ರೀ ಕ್ಷೇತ್ರ ಕಟೀಲಿನ ಅನುವಂಶಿಕ ಅರ್ಚಕರಾದ ವೇದಮೂರ್ತಿ ಶ್ರೀ ಕೆ ಲಕ್ಷ್ಮೀ ನಾರಾಯಣ ಅಸ್ರಣ್ಣರು

ಜುಲೈ 18ರಂದು : ಕೂಳೂರು ರಾ.ಹೆ. ಅವ್ಯವಸ್ಥೆ ಖಂಡಿಸಿ ನಾಗರಿಕ ಹಿತರಕ್ಷಣಾ ಸಮಿತಿಯಿಂದ ಪ್ರತಿಭಟನೆ

ಕೂಳೂರು ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆಯನ್ನು ಖಂಡಿಸಿ ನಾಗರಿಕ ಹಿತರಕ್ಷಣಾ ಸಮಿತಿಯ ವತಿಯಿಂದ ಜುಲೈ 18ರಂದು ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ. ಈ ಬಗ್ಗೆ ನಾಗರೀಕ ಹಿತರಕ್ಷಣಾ ಸಮಿತಿಯ ಕೂಳೂರಿನ ಅಧ್ಯಕ್ಷರಾದ ವಿಜಿ ಗುರುಚಂದ್ರ ಹೆಗ್ಡೆ ಅವರು ಮಾತನಾಡಿ, ಎನ್‍ಹೆಚ್ 66ಲ್ಲಿ ಅವೈಜ್ಞಾನಿ ಕಾಮಗಾರಿಯಿಂದ ರಸ್ತೆ ಹೊಂಡ-ಗುಂಡಿಗಳಿಂದ ತುಂಬಿ ಹೋಗಿದೆ. ಇದರಿಂದ ಸ್ಥಳೀಯರ ನಾಗರಿಕೆರಿಗೆ, ವ್ಯಾಪಾರಸ್ತರಿಗೆ, ವಾಹನ ಚಾಲಕರಿಗೆ ಅಂಬ್ಯುಲೆನ್ಸ್,