Home ಕರಾವಳಿ Archive by category ಮಂಗಳೂರು (Page 139)

 ಬೀಡಿ ಕಾರ್ಮಿಕರ ಬೇಡಿಕೆ ಈಡೇರಿಕೆಗಾಗಿ ಪ್ರತಿಭಟನಾ ಪ್ರದರ್ಶನ

ಬೀಡಿ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ದೇಶಾದ್ಯಂತ ಪ್ರತಿಭಟನೆಯ ಭಾಗವಾಗಿ ಇಂದು (27-03-2023) ಬಿಸಿ ರೋಡ್ ನಲ್ಲಿರುವ ಬಂಟ್ವಾಳ ತಾಲೂಕು ಕಚೇರಿಯೆದುರು ಬೀಡಿ ಕಾರ್ಮಿಕರು CITU ನೇತೃತ್ವದಲ್ಲಿ ಪ್ರತಿಭಟನಾ ಪ್ರದರ್ಶನ ನಡೆಸಿದರು. ಕೇಂದ್ರ ಹಾಗೂ ರಾಜ್ಯ ಸರಕಾರಗಳ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಆಕ್ರೋಶಭರಿತ ಘೋಷಣೆಗಳನ್ನು ಕೂಗಿದರು. ಬಳಿಕ

ಅಡ್ಯಾರ್ : ಐಸ್ ಕ್ರೀಮ್ ದಾಸ್ತಾನು ಕೇಂದ್ರದಲ್ಲಿ ಬೆಂಕಿ ಅವಘಡ

ಅಡ್ಯಾರ್ ನಲ್ಲಿರುವ ಐಸ್ ಕ್ರೀಮ್ ದಾಸ್ತಾನು ಕೇಂದ್ರವೊಂದರಲ್ಲಿ ಸೋಮವಾರ ತಡರಾತ್ರಿ ಬೆಂಕಿ ಅವಘಡ ಸಂಭವಿಸಿದ್ದು, ಅಪಾರ ನಾಶನಷ್ಟ ಸಂಭವಿಸಿರುವುದಾಗಿ ವರದಿಯಾಗಿದೆ. ಅಡ್ಯಾರ್ ನಲ್ಲಿರುವ ಪೋಲಾರ್ ಐಸ್ ಕ್ರೀಂ ಸ್ವಾಕಿಸ್ಟ್ ಎಂಬ ನಂದಿನಿ ಐಸ್ ಕ್ರೀಂ ದಾಸ್ತಾನು ಕೇಂದ್ರದಲ್ಲಿ ಸೋಮವಾರ ತಡರಾತ್ರಿ 2 ಗಂಟೆ ಸುಮಾರಿಗೆ ಬೆಂಕಿ ಈ ಅವಘಡ ಸಂಭವಿಸಿದೆ. ಈ ವೇಳೆ ದಾಸ್ತಾನು ಕೇಂದ್ರದ ಪಕ್ಕದಲ್ಲಿ ನಿಲ್ಲಿಸಲಾಗಿದ್ದ ಲಾರಿ ಸಹಿತ ಎರಡು ವಾಹನಗಳು ‌ಬೆಂಕಿಗೆ ಆಹುತಿಯಾಗಿವೆ ಎಂದು

Mangalore : ಮುಷ್ಕರ ಕೈಬಿಟ್ಟು ಕೆಲಸಕ್ಕೆ ಹಾಜರಾದ ಸ್ವಚ್ಛತಾ ಕಾರ್ಮಿಕರು

ಕಳೆದ ಕೆಲವು ದಿನಗಳಿಂದ ಮುಷ್ಕರ ಹೂಡಿದ್ದ ಸ್ವಚ್ಛತಾ ಕಾರ್ಮಿಕರು ಇಂದಿನಿಂದ ಕೆಲಸಕ್ಕೆ ಹಾಜರಾಗಿದ್ದು, ಎಲ್ಲಾ ಸ್ವಚ್ಚತಾ ಕಾರ್ಮಿಕರಿಗೆ ಶಾಸಕ ವೇದವ್ಯಾಸ ಕಾಮತ್ ಅವರು ಧನ್ಯವಾದ ಸಲ್ಲಿಸಿದ್ದಾರೆ. ಸಾರ್ವಜನಿಕರಿಗೆ ಸಹಕಾರವಾಗುವಂತೆ ಶಾಸಕರ ಕಚೇರಿಯಲ್ಲಿ ವಾರ್ ರೂಂ ತೆರೆಯಲಾಗಿದ್ದು ಮುಂದಿನ 2-3 ದಿನಗಳ ಕಾಲ ವಾರ್ ರೂಂ ಕಾರ್ಯಾಚರಿಸಲಿದೆ ಎಂದು ಶಾಸಕ ವೇದವ್ಯಾಸ ಕಾಮತ್ ತಿಳಿಸಿದ್ದಾರೆ.

ರಂಗ್ ದೇ ಬರ್ಸಾ ಹೋಲಿ ಸಂಭ್ರಮ: ಭಜರಂಗದಳ ಕಾರ್ಯಕರ್ತರಿಂದ ದಾಂಧಲೆ

ನಗರ ಮರೋಳಿಯಲ್ಲಿ ರಂಗ್ ದೇ ಬರ್ಸಾ ಹೋಲಿ ಸಂಭ್ರಮದ ಪಾರ್ಟಿಗೆ ಬಜರಂಗದಳ ಕಾರ್ಯಕರ್ತರು ದಾಳಿ ಮಾಡಿದ ಘಟನೆ ನಡೆದಿದೆ. ಹೋಳಿ ಆಚರಣೆಯಲ್ಲಿ ಬಣ್ಣ ಎರಚಿಕೊಂಡು ಯುವಕ ಯುವತಿಯರು ಸಂಭ್ರಮಿಸುತ್ತಿದ್ದರು. ಅನ್ಯಧರ್ಮದ ಯುವಕರ ಜೊತೆ ಹೋಳಿ ಆಚರಣೆ ಎಂದು ಆರೋಪಿಸಿ ಭಜರಂಗದಳ ಕಾರ್ಯಕರ್ತರು ದಾಳಿ ನಡೆಸಿ ಬ್ಯಾನರ್ ಹರಿದು ಹಾಕಿ ವಸ್ತುಗಳನ್ನು ಪುಡಿಗೈದಿದ್ದಾರೆ. ಈ ವೇಳೆ ಬಜರಂಗದಳ ಕಾರ್ಯಕರ್ತರು ಮತ್ತು ಆಯೋಜಕರ ನಡುವೆ ಮಾತಿನ ಚಕಮಕಿ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆ

ಮಂಗಳೂರು : ಮನಪಾ ಮಾಜಿ ಸದಸ್ಯೆ ಮೀರಾ ಅಶೋಕ್ ನಿಧನ

ಮಂಗಳೂರು ಮಹಾನಗರಪಾಲಿಕೆ ತಿರುವೈಲ್ ವಾರ್ಡಿನ ಮಾಜಿ ಸದಸ್ಯರುವಾಮಂಜೂರಿನ ಸದಾಶಿವ ನಗರ ಬಡಾವಣೆಯ ನಿವಾಸಿ ಶ್ರೀಮತಿ ಮೀರಾ ಅಶೋಕ್ ರವರು ಅಲ್ಪಕಾಲದ ಅನಾರೋಗ್ಯದಿಂದಾಗಿ ಇದೆ ಮಾರ್ಚ್ ತಿಂಗಳ 19ನೇ ತಾರೀಖಿನಭಾನುವಾರದಂದು ನಗರದ ಕೆ .ಎಂ .ಸಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು .ಮಂಗಳೂರು ಮಹಾನಗರಪಾಲಿಕೆಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದು ಮಾತರವಲ್ಲದೆವಿವಿಧ ಸಂಘಸಂಸ್ಥೆಗಳ ಲ್ಲಿ ಮುಖ್ಯ ಹುದ್ದೆಯನ್ನು ಅಲಂಕರಿಸಿಕೊಂಡು ಸದಾ ಚಟುವಟಿಕೆಯಿಂದ ಜನರನ್ನು ಸಂಘಟಿಸಿಕೊಂಡು

 ಕೈಲಾಶ್ ವಸತಿ ಸಮುಚ್ಚಯ ಗುಣನಾಥನ ಮೋಕ್ ಅಪ್ ಫ್ಲ್ಯಾಟ್‌ಗೆ ಅಭೂತಪೂರ್ವ ಸ್ಪಂದನೆ

ಭಾರ್ಗವಿ ಬಿಲ್ಡರ್ಸ್ ಅವರಿಂದ ಕೊಟ್ಟಾರದ ಮಾಲೆಮಾರ್ ಬಳಿ ನಿರ್ಮಾಣಗೊಳ್ಳುತ್ತಿರುವ ಅತ್ಯಾಧುನಿಕ ‘ಕೈಲಾಶ್’ ವಸತಿ ಸಮುಚ್ಚಯದಲ್ಲಿ ಗುಣನಾಥ-ಶಿಲ್ಪಾ ದಂಪತಿಯ ಮೋಕ್‌ಅಪ್ ಫ್ಲ್ಯಾಟ್ ಉದ್ಘಾಟನೆಯ ಬಳಿಕ ಜನರಿಂದ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗುತ್ತಿದೆ. ಈ ಸಮುಚ್ಚಯದಲ್ಲಿ ಶೇ.75ರಷ್ಟು ಫ್ಲ್ಯಾಟ್‌ಗಳು ಬುಕ್ಕಿಂಗ್ ಆಗಿವೆ. ಬುಕ್ಕಿಂಗ್ ಮಾಡಿದವರುತಮ್ಮ ಸ್ನೇಹಿತರು, ಪರಿಚಯಸ್ಥರನ್ನು ಇಲ್ಲಿ ಫ್ಲ್ಯಾಟ್ ಬುಕ್ ಮಾಡಲು ಪ್ರೇರೇಪಿಸುತ್ತಿದ್ದಾರೆ. ಇನ್ನು ಕೆಲವೇ

ಮಂಗಳೂರು: ಮೆ. ಕೆ ಕಮಲಾಕ್ಷ ಪೈ ಆಂಡ್ ಸನ್ಸ್ ಸಂಸ್ಥೆಯ ಮಾಲಕ ನಿಧನ

ಕೆ ಕಮಲಾಕ್ಷ ಪೈ (91 ವ) ನಗರದ ಮಣ್ಣಗುಡ್ಡೆಯಲ್ಲಿರುವ ತಮ್ಮ ನಿವಾಸದಲ್ಲಿ ಅಲ್ಪಕಾಲದ ಅಸೌಖ್ಯದಿಂದ ಶನಿವಾರ (ಮಾ 25)ನಿಧನ ಹೊಂದಿದರು. ಎಳವೆಯಿಂದಲೇ ವ್ಯವಹಾರಿಕವಾಗಿ ತಮ್ಮನ್ನು ತೊಡಗಿಸಿಕೊಂಡಿದ್ದ ಅವರು ಏಳುವರೆ ದಶಕಗಳ ಕಾಲ ತಮ್ಮ ವ್ಯವಹಾರ ಸಂಸ್ಥೆಯನ್ನು ಮುನ್ನಡೆಸಿಕೊಂಡು ಬಂದಿದ್ದರು. ಅವರು ನಾಲ್ವರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಕುಂಪಲ: ಯುವಕ ಆತ್ಮಹತ್ಯೆ : ಊರಲ್ಲಿ ಹೆಚ್ಚಾದ ಅಕಾಲಿಕ ಸಾವುಗಳು

ಉಳ್ಳಾಲ: ಮೊಬೈಲ್ ಷೋರೂಂ ನಲ್ಲಿ ಕೆಲಸಕ್ಕಿದ್ದ ಕುಂಪಲ ಮೂರು ಕಟ್ಟೆ ನಿವಾಸಿ ಅಕ್ಷಯ್ (25) ಎಂಬವರು ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ತಾಯಿ ಬೀಡಿ ಬ್ರಾಂಚಿಗೆ ತೆರಳಿದ್ದ ವೇಳೆ ಮನೆಯ ಕಿಟಕಿಗೆ ಬೈರಾಸಿನಿಂದ ನೇಣು ಬಿಗಿದು ಆತ್ಮ ಹತ್ಯೆಗೈದ ಮಾಡಿಕೊಂಡಿದ್ದಾರೆ‌. ತೊಕ್ಕೊಟ್ಟಿನ ಅನು ಮೊಬೈಲ್ ಸೆಂಟರಲ್ಲಿ ಕೆಲಸಕ್ಕಿದ್ದು ಕಳೆದ 20 ದಿವಸಗಳಿಂದ ಕೆಲಸಕ್ಕೆ ತೆರಳದೆ ಮನೆಯಲ್ಲೇ ಉಳಿದಿದ್ದರು.ಮೊಬೈಲ್ ಶಾಪ್

ಬೀದಿಬದಿ ವ್ಯಾಪಾರಿಗಳ ಮೇಲೆ ಪೊಲೀಸ್ ದೌರ್ಜನ್ಯ: ಸಂಘದಿಂದ ಪೊಲೀಸ್ ಠಾಣೆಗೆ ಮುತ್ತಿಗೆ

ಮಂಗಳೂರು: ಬೀದಿಬದಿ ವ್ಯಾಪಾರ ಮಾಡುತ್ತಿದ್ದ ಇಬ್ಬರ ಮೇಲೆ ಬಂದರ್ ಪೊಲೀಸರು ದೌರ್ಜನ್ಯ ಎಸಗಿ ವಶಕ್ಕೆ ಪಡೆದು, ಬಳಿಕ ಬಿಡುಗಡೆ ಗೊಳಿಸಿರುವ ಘಟನೆ ಶನಿವಾರ ವರದಿಯಾಗಿದೆ. ಮೈದಾನ್ ಬಳಿಯ ಬೀದಿ ಬದಿಯಲ್ಲಿ ವ್ಯಾಪಾರ ಮಾಡುತ್ತಿದ್ದ ಅಬ್ದುಲ್ ಖಾಲಿದ್ ಮತ್ತು ಮುಹಮ್ಮದ್ ರಿಯಾಜ್ ಎಂಬವರನ್ನು ಅವರ ತಳ್ಳಿ ಗಾಡಿಯ ಸಹಿತ ಬಂದರ್ ಪೊಲೀಸರು ಬಂಧಿಸಿದ್ದರು. ಬಂಧಿತರು ಮಹಾ ನಗರಪಾಲಿಕೆಯ ಪಟ್ಟಣ ವ್ಯಾಪಾರ ಸಮಿತಿಯಿಂದ ಅನುಮೋದಿಸಲ್ಪಟ್ಟ ಬೀದಿಬದಿ ವ್ಯಾಪಾರಿಗಳಾಗಿದ್ದರು. ಘಟನೆಯ

ನಾಳೆ (ಮಾ.26) ಇವಿಎಮ್ ಪ್ರೆಸೆಂಟ್ಸ್ ರಂಗ್ ದ ಬರ್ಸ ಸೀಸನ್-6 : ಮಂಗಳೂರಿನ ಜನತೆ ಸಂಭ್ರಮಿಸುವ ಹೋಲಿ ಹಬ್ಬ

ಕ್ಲಬ್ ಮಂತ್ರ ವತಿಯಿಂದ ಮಂಗಳೂರಿನಲ್ಲಿ ಅತಿ ದೊಡ್ಡ ಹೋಲಿ ಹಬ್ಬವನ್ನು ಮಂಗಳೂರಿನ ಜನತೆಗಾಗಿ ನಾಳೆ ಆಯೋಜನೆ ಮಾಡಿದ್ದಾರೆ. ಇವಿಎಮ್ ಪ್ರೆಸೆಂಟ್ಸ್ ರಂಗ್ ದ ಬರ್ಸ ಸೀಸನ್-6 ನಗರದ ಮರೋಳಿಯ ಸೂರ್ಯವುಡ್ಸ್‍ನಲ್ಲಿ ಅದ್ಧೂರಿಯ ಕಾರ್ಯಕ್ರಮ ನಡೆಯಲಿದೆ.ಮಂಗಳೂರಿನ ಜನತೆ ಬಣ್ಣದ ಓಕುಳಿಯಲ್ಲಿ ಸಂಭ್ರಮಿಸಲು ಇದೊಂದು ಅದ್ಭುತ ಅವಕಾಶ. ಇದೇ ಮಾರ್ಚ್ 26ರಂದು ಅಂದ್ರೆ ನಾಳೆ ಕ್ಲಬ್ ಮಂತ್ರ ವತಿಯಿಂದ ಇವಿಎಮ್ ಪ್ರೆಸೆಂಟ್ಸ್ ರಂಗ್ ದ ಬರ್ಸ ಸೀಸನ್-6ನ್ನು ಆಯೋಜನೆ