Home ಕರಾವಳಿ Archive by category ಮಂಗಳೂರು (Page 161)

ಸಂವೇದನೆಗಳು ಮತ್ತು ಸಂಘರ್ಷಗಳ ನಡುವೆ ನಿರಾಳವಾಗಿ  ಬದುಕಿದವರು ಸಾರಾ ಅಬೂಬಕ್ಕರ್ : ಮುದ್ದು ಮೂಡುಬೆಳ್ಳೆ

‘ಲೇಖಕಿ ಸಾರಾ ಅಬೂಬಕ್ಕರ್ ಅವರು ತನ್ನ ಧರ್ಮಕ್ಕೆ ನಿಷ್ಠರಾಗಿದ್ದರು ಮತ್ತು ಬೇರೆ ಧರ್ಮಗಳ ಜೊತೆಗೂ ಒಳ್ಳೆಯ ಒಡನಾಟ ಇಟ್ಟು ಕೊಂಡಿದ್ದರು. ಮುಸ್ಲಿಂ ಸಮುದಾಯದ ಆಚಾರಗಳು ಮತ್ತು ಆಚರಣೆಯ ಸಂಧಿಗ್ಧತೆಗಳ ತುಂಬಾ ಅಧ್ಯಯನ ಮಾಡಿ ತಮ್ಮ ಕಾದಂಬರಿಗಳಲ್ಲಿ ಕಣ್ಣಿಗೆ ಕಟ್ಟುವಂತೆ ಬರೆಯುತ್ತಿದ್ದರು. ಸ್ತ್ರೀವಾದಿಯಾಗಿದ್ದ ಸಾರಾ ಅವರು ಮಾನವತಾವಾದಿಯೂ ಆಗಿದ್ದರು.

ಪೊಲೀಸರ ಕೊಲೆ ಯತ್ನ-ಐವರು ಅಪಹರಣಕಾರರು ಸಿನಿಮೀಯ ಮಾದರಿಯಲ್ಲಿ ಸೆರೆ

ಮಂಗಳೂರಿನಲ್ಲಿ ಸಿನಿಮಾ ರೀತಿಯಲ್ಲಿ ನಡೆದ ಕಿಡ್ನಾಪ್ ಪ್ರಕರಣವೊಂದನ್ನು ಪೊಲೀಸರೂ ಅದೇ ಸ್ಟೈಲ್ ನಲ್ಲಿ ಭೇದಿಸಿದ್ದಾರೆ.ಹಣಕ್ಕಾಗಿ ಇಬ್ಬರನ್ನು ಕಿಡ್ನಾಪ್ ಮಾಡಿ ಡೀಲ್ ಕುದುರಿಸಿದ್ದ ಅಪಹರಣಕಾರರು ದಾರಿ ಮಧ್ಯೆಯೇ ಪೊಲೀಸ್ ಬಲೆಗೆ ಬಿದ್ದಿದ್ದಾರೆ.ಗೋಲ್ಡ್ ಬಿಸ್ಕೇಟ್ ಹಾಗೂ ಹಣ ದೋಚಲು ಯತ್ನಿಸಿದ ಖದೀಮರು ಇದೀಗ ಜೈಲು ಕಂಬಿ ಎಣಿಸಿತ್ತಿದ್ದಾರೆ. ಹಣಕ್ಕಾಗಿ ಜನ ಏನು ಬೇಕಾದ್ರು ಮಾಡ್ತಾರೆ ಅನ್ನೋದು ಆಗ್ಗಾಗ್ಗೆ ಸಾಬೀತಾಗುತ್ತಿದೆ. ಮಂಗಳೂರಿನಲ್ಲಿ ಇದೇ ರೀತಿ ಹಣದ ಆಸೆಗೆ

ಗಣರಾಜ್ಯೋತ್ಸವ ಪರೇಡ್‌: ನೌಕಾಪಡೆ ತಂಡಕ್ಕೆ ಮಂಗಳೂರಿನ ದಿಶಾ ಅಮೃತ್‌ ನೇತೃತ್ವ

 ಭಾರತೀಯ ನೌಕಾಪಡೆಯ ಲೆಫ್ಟಿನೆಂಟ್‌ ಕಮಾಂಡರ್‌ ಮಂಗಳೂರಿನ ದಿಶಾ ಅಮೃತ್‌ ಅವರು ಹೊಸದಿಲ್ಲಿಯ ಕರ್ತವ್ಯಪಥದಲ್ಲಿ ಜ. 26ರಂದು ನಡೆಯಲಿರುವ ಗಣರಾಜ್ಯೋತ್ಸವ ಪರೇಡ್‌ ನಲ್ಲಿ ನೌಕಾಪಡೆಯ ತುಕಡಿಯನ್ನು ಮುನ್ನಡೆಸುವರು. ಈ ತುಕಡಿಯಲ್ಲಿ ನೌಕಾಪಡೆಯ 144 ಯುವ ಯೋಧರು ಮತ್ತು “ನಾರಿಶಕ್ತಿ’ ಸ್ತಬ್ಧಚಿತ್ರ ಇರಲಿದೆ. ಇದರಲ್ಲಿ ಮೂವರು ಮಹಿಳಾ ಅಧಿಕಾರಿಗಳು ಮತ್ತು ಐವರು ಪುರುಷ ಅಗ್ನಿವೀರರು ಭಾಗಿಯಾ ಗುವರು. ಅಮೃತಾ ಅವರ ಜತೆಗೆ ಸಬ್‌ ಲೆ| ವಲ್ಲಿ ಮೀನಾ ಎಸ್‌. ಸಹ ಇರುವರು.

ರಾಜ್ಯವನ್ನು ಚೋರ ಗುರು ಶಿಷ್ಯರು ಆಳುತ್ತಿದ್ದಾರೆ : ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಸುರತ್ಕಲ್: “ರಾಜ್ಯದಲ್ಲಿ ಬಿಜೆಪಿ ಸರಕಾರ ಮೈ ಭಿ ಖಾವೂಂಗಾ ತುಮ್ಕೋ ಭಿ ಖಿಲಾವೂಂಗಾ ಎಂಬ ಸ್ಲೋಗನ್ ಅಡಿಯಲ್ಲಿ ಕಾರ್ಯಾಚರಿಸುತ್ತಿದೆ. ಕಂಟ್ರಾಕ್ಟರ್ ಅಸೋಷಿಯೇಷನ್ ಶಾಸಕರು 40% ಕಮಿಷನ್ ತಗೊಳ್ಳೋದನ್ನು ಒಪ್ಪಿಕೊಂಡಿದೆ. ಇವರದ್ದು ಬರೀ ಸುಳ್ಳುಗಳ ಸರಕಾರ, ಚೋರ ಗುರು ಚಾಂಡಾಲ ಶಿಷ್ಯರು ಕೇಂದ್ರ ಮತ್ತು ರಾಜ್ಯ ಸರಕಾರವನ್ನು ಆಳ್ತಾ ಇದ್ದಾರೆ. ನರೇಂದ್ರ ಮೋದಿ ಅವರಿಂದ ಹಿಡಿದು ತಳಮಟ್ಟದ ನಾಯಕರವರೆಗೆ ಎಲ್ಲರೂ ಭ್ರಷ್ಟಾಚಾರದಲ್ಲಿ ತೊಡಗಿಕೊಂಡಿದ್ದಾರೆ”

ಮಂಗಳೂರಿನಲ್ಲಿ ಹೊಚ್ಚ ಹೊಸ ಶೋರೂಂ ಆಗಿ ಕಂಗೊಳಿಸುತ್ತಿರುವ ಜೋಸ್ ಆಲುಕ್ಕಾಸ್

ಮಂಗಳೂರಿನ ಕೆ.ಎಸ್. ರಾವ್ ರಸ್ತೆಯಲ್ಲಿರುವ ಹೆಸರಾಂತ ಜ್ಯುವೆಲ್ಲರಿ ಗ್ರೂಪ್ ಜೋಸ್ ಆಲುಕ್ಕಾಸ್ ಚಿನ್ನಾಭರಣ ಮಳಿಗೆ ನವೀಕೃತಗೊಂಡಿದ್ದು, ಹೊಚ್ಚ ಹೊಸ ಶೋರೂಂನ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಜೋಸ್ ಆಲುಕ್ಕಾಸ್ ಬ್ರ್ಯಾಂಡ್ ಕಳೆದ 58 ವರ್ಷಗಳಿಂದ ನಂಬಿಕೆ ಮತ್ತು ಪರಿಶುದ್ಧತೆಗೆ ಸಮನಾರ್ಥಕವಾಗಿದೆ. ವಿಶಿಷ್ಠವಾದ ಕಾರ್ಯಾಚರಣೆ ವ್ಯವಸ್ಥೆ ಮತ್ತು ದೂರದೃಷ್ಟಿಯೊಂದಿಗೆ ಈ ಬ್ರ್ಯಾಂಡ್ ಆಭರಣ ವ್ಯಾಪಾರ ಕ್ಷೇತ್ರದಲ್ಲಿ ಬಲವಾದ ಪರಂಪರೆಯನ್ನು ಸ್ಥಾಪಿಸಿದೆ. ಇದೀಗ ಮಂಗಳೂರು

2022ನೇ ಸಾಲಿನ ಬಸ್ತಿ ವಾಮನ ಶೆಣೈ ವಿಶ್ವ ಕೊಂಕಣಿ ಸೇವಾ ಪುರಸ್ಕಾರ ಪ್ರಕಟ

ಮಂಗಳೂರಿನ ವಿಶ್ವ ಕೊಂಕಣಿ ಕೇಂದ್ರವು ಕೊಡಮಾಡುವ ಅಖಿಲ ಭಾರತ ಮಟ್ಟದ ಸಮಾಜ ಸೇವಾ ಪ್ರಶಸ್ತಿ ಬಸ್ತಿ ವಾಮನ ಶೆಣೈ ವಿಶ್ವ ಕೊಂಕಣಿ ಸೇವಾ ಪುರಸ್ಕಾರ 2022 ಪುರುಷ ಮತ್ತು ಮಹಿಳಾ ಈ ಎರಡು ವಿಭಾಗಗಳಲ್ಲಿ ಪ್ರಕಟವಾಗಿವೆ.ಸಾರ್ವಜನಿಕ ಕ್ಷೇತ್ರದಲ್ಲಿ ವಿಶೇಷ ಸೇವೆಗೈಯುವ ಕೊಂಕಣಿ ಭಾಷಿಕರನ್ನು ಗುರುತಿಸಿ ಗೌರವಿಸುವ ಈ ಪುರಸ್ಕಾರವನ್ನು 2014ರಲ್ಲಿ ವಿಶ್ವ ಕೊಂಕಣಿ ಕೇಂದ್ರದ ಸಂಸ್ಥಾಪಕ ಬಸ್ತಿ ವಾಮನ ಶೆಣೈಯವರ 80ನೇ ಜನ್ಮದಿನದಂದು ದಾನಿ ಟಿ.ವಿ. ಮೋಹನದಾಸ ಪೈ

ಅದ್ಯಪಾಡಿ ಬೀಬಿಲಚ್ಚಿಲ್‍ನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ: ಫೆ.2ರಿಂದ ಹೊರೆಕಾಣಿಕೆ ಮೆರವಣಿಗೆ

ಮಂಗಳೂರಿನ ಅದ್ಯಪಾಡಿ ಬೀಬಿಲಚ್ಚಿಲ್‍ನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಫೆಬ್ರವರಿಯಲ್ಲಿ ಬ್ರಹ್ಮಕಲಶೋತ್ಸವ ನಡೆಯಲಿದ್ದು, ಆ ಪ್ರಯುಕ್ತ ಫೆಬ್ರವರಿ 2ರಂದು ಮಧ್ಯಾಹ್ನ 12 ಗಂಟೆಗೆ ಮಂಗಳೂರಿನ ನಗರದ ಶರವು ದೇವಸ್ಥಾನದಿಂದ ಹೊಣೆಕಾಣಿಕೆ ಹೊರಡಲಿದೆ. ಮಂಜೇಶ್ವರ, ತಲಪಾಡಿ, ತೊಕ್ಕೊಟ್ಟು, ಕುತಾರ್, ಕೊಣಾಜೆ ಮುಡಿಪು ಜಪ್ಪಿನಮೊಗರು ಪಂಪವೆಲ್ ಬಿಕರ್ನಕಟ್ಟೆ, ಕುಲಶೇಖರ, ವಾಮಂಜೂರು, ಗುರುಪುರ ಕೈಕಂಬ ಬೀಬಿಲಚ್ಚಿಲ್ ಬೆಳಿಗ್ಗೆ 10ಗಂಟೆಗೆ ಮಂಜೇಶ್ವರ

ವ್ಯಕ್ತಿತ್ವ ನಿರ್ಮಾಣದಿಂದಷ್ಟೇ ದೇಶ ನಿರ್ಮಾಣ ಸಾಧ್ಯ: ಕ್ಯಾಪ್ಟನ್ ಗಣೇಶ್ ಕಾರ್ಣಿಕ್

ಮಂಗಳೂರು: ಒಳ್ಳೆಯ ವಿಚಾರಗಳೊಂದಿಗೆ ನಮ್ಮನ್ನು ನಾವು ಜೋಡಿಸಿಕೊಳ್ಳುವುದು ಮತ್ತು ವ್ಯಕ್ತಿತ್ವನಿರ್ಮಾಣದಿಂದ ಮಾತ್ರ ದೇಶ ನಿರ್ಮಾಣ ಸಾಧ್ಯ, ಎಂದು ವಿಧಾನ ಪರಿಷತ್‌ನ ಮಾಜಿ ಸದಸ್ಯ ಕ್ಯಾಪ್ಟನ್‌ಗಣೇಶ್‌ ಕಾರ್ಣಿಕ್‌ ಅಭಿಪ್ರಾಯಪಟ್ಟರು. ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಶುಕ್ರವಾರ 2022 -23ನೇ ಸಾಲಿನ ಕಾಲೇಜಿನವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರಜ್ಞಾವಂತ ಜನರೇ ಪ್ರಜಾಪ್ರಭುತ್ವದ ಬೇರುಗಳು.ಆದರೆ ಸ್ವಾತಂತ್ರ್ಯ

ಹಂತಕರಿಂದ ಹತ್ಯೆಗೀಡಾದ ಜಲೀಲ್ ಕುಟುಂಬಕ್ಕೆ 1 ಲಕ್ಷ ರೂ. ಚೆಕ್ ವಿತರಿಸಿದ ಶಾಸಕ ಪ್ರಿಯಾಂಕ್ ಖರ್ಗೆ

ಸುರತ್ಕಲ್: ಇತ್ತೀಚೆಗೆ ಹಂತಕರಿಂದ ಅಮಾನುಷವಾಗಿ ಹತ್ಯೆಗೀಡಾದ ಜಲೀಲ್ ಮನೆಗೆ ಭೇಟಿ ನೀಡಿದ ಕಾಂಗ್ರೆಸ್ ಮುಖಂಡ ಪ್ರಿಯಾಂಕ್ ಮಾಜಿ ಶಾಸಕ ಬಿ.ಎ. ಮೊಯಿದೀನ್ ಬಾವಾ ಅವರು ವೈಯಕ್ತಿಕ ನೆಲೆಯಲ್ಲಿ ಕೊಡಮಾಡಿದ 1 ಲಕ್ಷ ರೂ. ಮೊತ್ತದ ಚೆಕ್ ಅನ್ನು ಹಸ್ತಾಂತರಿಸಿ ಸಾಂತ್ವಾನ ನುಡಿದರು. ಜಲೀಲ್ ಹತ್ಯೆಯ ಬಗ್ಗೆ ಪ್ರಿಯಾಂಕ್‍ಗೆ ಕೂಲಂಕಷ ವಿವರಣೆ ನೀಡಿದ ಮೊಯ್ದೀನ್ ಬಾವಾ ಹತ್ಯೆ ಆರೋಪಿಗಳು ಮೂರೇ ತಿಂಗಳಲ್ಲಿ ಜಾಮೀನು ಪಡೆದು ಹೊರಬಂದಿದ್ದಾರೆ. ಇದಕ್ಕೆ ಬಿಜೆಪಿ ಸರ್ಕಾರವೇ

ವೀರರಾಣಿ ಅಬ್ಬಕ್ಕ ಪ್ರಶಸ್ತಿ : ಶ್ರೀಮತಿ ಭವಾನಿ, ಡಾ.ಪಾರ್ವತಿ ಜಿ. ಐತಾಳ್ ಆಯ್ಕೆ

ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿಯು ನೀಡುವ 2022-23ನೇ ಸಾಲಿನ ವೀರರಾಣಿ ಅಬ್ಬಕ್ಕ ಪ್ರಶಸ್ತಿಗೆ ಕುಂದಾಪುರದ ಭಂಡಾರ್‍ಕಾರ್ಸ್ ಕಾಲೇಜಿನ ನಿವೃತ್ತ ಪ್ರಾಧ್ಯಾಪಕಿ ಡಾ. ಪಾರ್ವತಿ ಜಿ. ಐತಾಳ್ ಮತ್ತು ವೀರರಾಣಿ ಅಬ್ಬಕ್ಕ ಪುರಸ್ಕಾರಕ್ಕೆ ತುಳು ಪಾಡ್ದನದ ಮೇರು ಪ್ರತಿಭೆ ಶ್ರೀಮತಿ ಭವಾನಿ ಇವರನ್ನು ಆಯ್ಕೆ ಮಾಡಲಾಗಿದೆ ಎಂದು ಸಮಿತಿಯ ಗೌರವಾಧ್ಯಕ್ಷರಾದ ಮಾಜಿ ಶಾಸಕ ಜಯರಾಂ ಶೆಟ್ಟಿ ಹೇಳಿದರು.ಅವರು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ