Home ಕರಾವಳಿ Archive by category ಮಂಗಳೂರು (Page 185)

ಕೇವಲ 30 ರೂಪಾಯಿಗೆ ಕೊಲೆ

ಮಂಗಳೂರು: ಹಣತೆ ವ್ಯಾಪಾರಕ್ಕಾಗಿ ಮಂಗಳೂರು ನಗರಕ್ಕೆ ಬಂದಿದ್ದ ತಮಿಳುನಾಡಿನ ಸೇಲಂ ನಿವಾಸಿ ಮಾಯವೇಳ್ ಪೆರಿಯಸಾಮಿ (52) ಎಂಬವರನ್ನು ಹಣದಾಸೆಗೆ ಕೊಲೆಗೈದ ಪ್ರಕರಣ ತಡವಾಗಿ ಬಂದಿದ್ದು, ಈ ಸಂಬಂಧ ಆರೋಪಿ ಹೂವಿನ ಹಡಗಲಿ ನಿವಾಸಿ ರವಿ ಯಾನೆ ವಕೀಲ್ ನಾಯ್ಕ್ (42) ಎಂಬಾತನನ್ನು ಬಂದರು ಪೊಲೀಸರು ಬಂಧಿಸಿದ್ದಾರೆ.ಕೊಲೆಯಾದ ಮಾಯವೇಳ್ ಪೆರಿಯಸಾಮಿ ಅವರ ಮೃತ ದೇಹದ ಅವಶೇಷಗಳಾದ

ಮಂಗಳೂರು; KSRTC ಬಸ್ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್

ಮಂಗಳೂರು ನಗರದ ಬಿಜೈಯಲ್ಲಿರುವ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್ ವೊಂದು ಆತಂಕ ಸೃಷ್ಟಿಸಿದ ಪ್ರಸಂಗ ಇಂದು ನಡೆದಿದೆ. ಬಸ್ ನಿಲ್ದಾಣದ ಅನುಮಾನಾಸ್ಪದ ಬ್ಯಾಗ್ ವಿಚಾರ ತಿಳಿಯುತ್ತಲೇ ಸ್ಥಳಕ್ಕಾಗಮಿಸಿದ ಬಾಂಬ್ ಸ್ಕ್ಯಾಡ್ , ಶ್ವಾನದಳ ಅದನ್ನು ಪರಿಶೀಲನೆ ನಡೆಸಿತು. ಈ ನಡುವೆ ಬ್ಯಾಗ್ ವಾರಸುದಾರ ಪತ್ತೆಯಾಗಿದ್ದು, ಅದು ಬಸ್ ಪ್ರಯಾಣಿಕನೊಬ್ಬನಿಗೆ ಸೇರಿದ್ದೆಂದು ತಿಳಿದುಬಂತು. ಇದರೊಂದಿಗೆ ಬಸ್ ನಿಲ್ದಾಣದಲ್ಲಿದ್ದವರು ನಿರಾಳರಾದರು.

ನಿಟ್ಟೆ ಡಾ. ಶಂಕರ್ ಅಡ್ಯಂತಾಯ ಸ್ಮಾರಕ ಪದವಿಪೂರ್ವ ಕಾಲೇಜು : ವಾರ್ಷಿಕ ಕ್ರೀಡಾಕೂಟ

ಕ್ರೀಡೆ ಮನುಷ್ಯನ ಸರ್ವತೋಮುಖ ಅಭಿವೃದ್ಧಿಯಲ್ಲಿ ಮುಖ್ಯ ಪಾತ್ರವನ್ನು ವಹಿಸುತ್ತದೆ. ಸ್ಪರ್ಧಾತ್ಮಕ ಮನೋಭಾವ, ನಾಯಕತ್ವದ ಗುಣ, ಹೊಂದಾಣಿಕೆ, ಒಂದು ತಂಡವಾಗಿ ದುಡಿಯುವುದು ಇವೇ ಮೊದಲಾದ ಗುಣಗಳನ್ನು ಬಾಲ್ಯದಲ್ಲೇ ಕ್ರೀಡಾ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಬೆಳೆಸಬಲ್ಲದು. ಅಲ್ಲದೆ ಆರೋಗ್ಯದ ಸ್ಥಿರತೆ ಹಾಗೂ ಏಕಾಗ್ರತೆ ವೃದ್ಧಿಗೂ ಕ್ರೀಡೆ ಪರಿಣಾಮಕಾರಿಯಾಗಬಲ್ಲದು ಎಂದು ಕ್ರೀಡಾ ಸಾಧಕ ವಿದ್ಯಾರ್ಥಿಗಳಿಗೆ ವಿದ್ಯಾಸಂಸ್ಥೆ ಸದಾ ಬೆಂಗಾವಲಾಗಿ ಪ್ರೋತ್ಸಾಹಿಸುತ್ತದೆ ಎಂದು

ಕುಕ್ಕರ್ ಸ್ಫೋಟ ಮೈಸೂರು, ಮಂಗಳೂರಿನಲ್ಲಿ ನಾಲ್ವರು ವಶಕ್ಕೆ

ನಗರದ ನಾಗುರಿಯಲ್ಲಿ ರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸಾಗಿಸುತ್ತಿದ್ದಾಗ ನಡೆದ ಸ್ಪೋಟದಲ್ಲಿ ಗಾಯಗೊಂಡು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿ ಶಾರೀಕ್ ಎಂಬುದನ್ನು ಆತನ ಕುಟುಂಬದವರು ಖಚಿತ ಪಡಿಸಿದ್ದಾರೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ ನೀಡಿದರು. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ನಿವಾಸಿ ಮುಹಮ್ಮದ್ ಶಾರಿಕ್(24) ಆರೋಪಿಯಾಗಿದ್ದಾನೆ. ಈತ 2020ರಲ್ಲಿ ಮಂಗಳೂರು ನಗರದಲ್ಲಿ ಕಂಡುಬಂದ ಪ್ರಚೋದನಕಾರಿ ಗೋಡೆ ಬರಹ ಪ್ರಕರಣದ

ಹೆಜಮಾಡಿಯಲ್ಲಿ ಟೋಲ್ ಹೆಚ್ಚಿಸುವ ದುಸ್ಸಾಹಸ ಮಾಡಬೇಡಿ : ವಿನಯ ಕುಮಾರ್ ಸೊರಕೆ

ಸುರತ್ಕಲ್ ಅಕ್ರಮ ಟೋಲ್ ಗೇಟ್ ಮುಚ್ಚುವುದು ಸರಿಯಾದ ಕ್ರಮ. ಇದು ಜನತೆ ನಡೆಸಿದ ಅವಿರತ ಹೋರಾಟದ ಫಲ. ಆದರೆ ವಿಲೀನದ ಹೆಸರಿನಲ್ಲಿ ಹೆಜಮಾಡಿಯಲ್ಲಿ ಸುಂಕ ಹೆಚ್ಚಿಸುವ ದುಸ್ಸಾಹಸ ಮಾಡಿದರೆ ಹೋರಾಟ ಹೊಸ ತಿರುವು ಪಡೆದುಕೊಳ್ಳಲಿದೆ. ಎರಡೂ ಜಿಲ್ಲೆಯ ಜನರನ್ನು ಸಂಘಟಿಸಿ ಬಿಜೆಪಿಯ ದುರಾಡಳಿತವನ್ನು ಕೊನೆಗೊಳಿಸಲಾಗುವುದು ಎಂದು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದರು. ಅವರು ಟೋಲ್ ತೆರವಿಗೆ ಒತ್ತಾಯಿಸಿ ನಡೆಯುತ್ತಿರುವ ಅನಿರ್ಧಿಷ್ಟಾವಧಿ ಧರಣಿಯ ಇಪ್ಪತ್ತ ಮೂರನೇ ದಿನದ

ಬಾಂಬ್ ಬ್ಲಾಸ್ಟ್ ಭಾರತೀಯ ಜನತಾ ಪಕ್ಷದ ಚುನಾವಣಾ ತಂತ್ರ : ಹಿಂದೂ ಮಹಾಸಭಾ ವ್ಯಂಗ್ಯ

2023 ರ ವಿಧಾನಸಭಾ ಚುನಾವಣೆಯಲ್ಲಿ ಸೋಲುವ ಬೀದಿಗೆ ಬೆದರಿದ ಭಾರತೀಯ ಜನತಾ ಪಕ್ಷದ ಹತಾಶೆಯ ನಡೆಯೇ ಈ ಬಾಂಬ್ ಬ್ಲಾಸ್ಟ್ ಪ್ರಕರಣ…ಅತಂಕವಾದ ಅಳಿಸಿ ..ದೇಶ ಉಳಿಸಿ ಎಂಬ ಹಿಂದೂ ಮಹಾಸಭಾ ಘೋಷ ವಾಕ್ಯವನ್ನು ಷಡ್ಯಂತ್ರದಿಂದ ತನ್ನದಾಗಿಸಿಕೊಂಡಂತಹ ಭಾರತೀಯ ಜನತಾ ಪಕ್ಷ ,ಕನಿಷ್ಠ ಪಕ್ಷ, ಆ ವಾಕ್ಯದ ಮೌಲ್ಯವನ್ನು ತಿಳಿದುಕೊಂಡಿದ್ದರೆ, ಇವತ್ತು ಈ ಘಟನೆ ಸಂಭವಿಸುತ್ತಿರಲಿಲ್ಲ. ಆಡಳಿತದಲ್ಲಿರುವ ಸರಕಾರ ದ ವೈಫಲ್ಯವೆ ಈ ಘಟನೆಗೆ ಕಾರಣ.ಭಾರತೀಯ ಜನತಾ ಪಕ್ಷದ ಹಿಂದೂ ವಿರೋಧಿ

ಶಾರೀಕ್ ಮನೆ ಮೇಲೆ ಪೊಲೀಸರು ದಾಳಿ

ಮಂಗಳೂರಿನ ನಾಗುರಿಯ ಕಂಕನಾಡಿ ಪೊಲೀಸ್ ಠಾಣೆ ಬಳಿ ಆಟೋದಲ್ಲಿ ಸಂಭವಿಸಿದ ಸ್ಟೋಟ ಪ್ರಕರಣಕ್ಕೆ ಸಂಭಧಿಸಿದಂತೆ ಪಟ್ಟಣದ ಸೊಪ್ಪುಗುಡ್ಡೆಯಲ್ಲಿರುವ ಶಾರೀಕ್ ಮನೆ ಮೇಲೆ ಬೆಳ್ಳಂ ಬೆಳಗ್ಗೆ ಪೊಲೀಸರು ದಾಳಿ ಮಾಡಿದ್ದಾರೆ.ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣದಲ್ಲಿ ಶಾರಿಕ್ ಆರೋಪಿಯಾಗಿರಬಹುದು ಎಂಬ ಕಾರಣಕ್ಕಾಗಿ ಒಟ್ಟು ಮೂರು ತಂಡಗಳಾಗಿ ಪೊಲೀಸರು ದಾಳಿ ನಡೆಸಿದ್ದಾರೆ.ತೀರ್ಥಹಳ್ಳಿ, ಮಾಳೂರು ಹಾಗೂ ಆಗುಂಬೆ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಗಳು ದಾಳಿಯಲ್ಲಿ

ಬೀಬಿಲಚ್ಚಿಲ್‍ನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಫೆ.2ರಿಂದ 6ರ ವರೆಗೆ ಬ್ರಹ್ಮಕಲಶೋತ್ಸವ, ನಾಗಮಂಡಲೋತ್ಸವ ಆಮಂತ್ರಣ ಪತ್ರಿಕೆ ಅನಾವರಣ, ನಿಧಿ ಸಂಗ್ರಹ, ಸಮಾಲೋಚನಾ ಸಭೆ

ಮಂಗಳೂರಿನ ಅದ್ಯಪಾಡಿ ಬೀಬಿಲಚ್ಚಿಲ್‍ನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದದ ಜೀರ್ಣೋದ್ಧಾರ ಕಾಮಗಾರಿ ಹಾಗೂ ಮುಂದಿನ ಫೆಬ್ರವರಿ 2ರಿಂದ 6ರ ವರೆಗೆ ಬ್ರಹ್ಮ ಕಲಶೋತ್ಸವ ಹಾಗೂ ನಾಗಬ್ರಹ್ಮಮಂಡಲೋತ್ಸವದ ಸಮಾಲೋಚನಾ ಸಭೆಯು ನಡೆಯಿತು. ಶ್ರೀ ಕ್ಷೇತ್ರದಲ್ಲಿ ಸಾಮೂಹಿಕ ಪ್ರಾರ್ಥನೆ, ದೀಪಪ್ರಜ್ವಲನೆ, ಬ್ರಹ್ಮ ಕಲಶ ಬ್ರಹ್ಮ ನಾಗಮಂಡಲ ಆಮಂತ್ರಣ ಪತ್ರಿಕೆ ಅನಾವರಣ ನಿಧಿ ಸಂಗ್ರಹ ಮುಂದಿನ ಕಾರ್ಯಕ್ರಮದ ಬಗ್ಗೆ ಸಮಾಲೋಚನೆ ಸಭೆ ಶ್ರೀ ಮಂಜುನಾಥ ಭಂಡಾರಿ ಮೂಡುಶೆಡ್ಡೆಯವರ

ದ.ಕ. ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕ ವತಿಯಿಂದ ಪ್ರತಿಭಟನೆ

ದ.ಕ. ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕ ವತಿಯಿಂದ ಕಾರ್ಮಿಕ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ವಿರುದ್ದ ಕದ್ರಿ ಕೆಪಿಟಿ ಬಳಿಯಲ್ಲಿರುವ ಸಹಾಯಕ ಕಾರ್ಮಿಕ ಆಯುಕ್ತರ ಕಚೇರಿ ಎದುರುಗಡೆ ಪ್ರತಿಭಟನೆ ನಡೆಸಿದರು.

ಖಿನ್ನತೆ-ಕಾರಣ ಮತ್ತು ಪರಿಹಾರ ಕುರಿತಾಗಿ ವಿಚಾರ ಸಂಕಿರಣ

ಸಮಾಜದ ಹಿರಿಯ ನಾಗರಿಕರ ಸೇವೆಗಾಗಿ ಕೆಲಸ ಮಾಡುತ್ತಿರುವ ಸೇವಾಭಾರತಿ ಪ್ರಕಲ್ಪ್ಪವಾದ`ಅನಂತ ಸೌಖ್ಯ”ದ ವತಿಯಿಂದಖಿನ್ನತೆ-ಕಾರಣ ಮತ್ತು ಪರಿಹಾರ ಎಂಬ ವಿಷಯದ ಕುರಿತು ಸಂವಾದ ಕಾರ್ಯಕ್ರಮ ವಿ.ಟಿ.ರಸ್ತೆಯ ಚೇತನಾ ಶಾಲಾ ವಠಾರದಲ್ಲಿ ಜರಗಿತು. ಕಾರ್ಯಕ್ರಮವನ್ನು ಡಾ.ಸತೀಶ್‍ರಾವ್, ಪ್ರೊಫೆಸರ್, ಮನಃಶಾಸ್ತ್ರ ವಿಭಾಗ, ಕೆ.ಎಸ್.ಹೆಗ್ಡೆ ಮೆಡಿಕಲ್ ಅಕಾಡೆಮಿ, ದೇರಳಕಟ್ಟೆ, ಮಂಗಳೂರು ಇವರು, ಉದ್ಘಾಟಿಸಿದರು. ಉಪನ್ಯಾಸ ಹಾಗೂ ಸಂವಾದ ಕಾರ್ಯಕ್ರಮವನ್ನು ಡಾ.ಅರುಣ