ದಕ್ಷಿಣ ಕನ್ನಡ ಹಾಲು ಒಕ್ಕೂಟ ಹೈನುಗಾರಿಕೆಯಲ್ಲಿ ತೊಡಗಿರುವ ರೈತರಿಗೆ 2 ರೂಪಾಯಿ 5 ಪೈಸೆ ಪ್ರೋತ್ಸಾಹಧನವನ್ನು ನೀಡುವುದಾಗಿ ಒಕ್ಕೂಟದ ಅಧ್ಯಕ್ಷರಾದ ಕೆ.ಪಿ. ಸುಚರಿತ ಶೆಟ್ಟಿ ತಿಳಿಸಿದ್ದಾರೆ. ಅವರು ಕುಲಶೇಖರದ ಹಾಲು ಒಕ್ಕೂಟದ ಆಡಳಿತ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದರು. ಅಕ್ಟೋಬರ್ 11ರಂದು ನಡೆಯಲಿರುವ ವಿಶೇಷ ಸಭೆಯಲ್ಲಿ ರೈತರಿಗೆ
ರಾಷ್ಟ್ರೀಯ ಹೆದ್ದಾರಿ 66ರ ನಾಯ್ಕನಕಟ್ಟೆ ಸರ್ಕಲ್ ಬಳಿ ನೂತನವಾಗಿ ಗೋಲ್ಡ್ ಮೊಬೈಲ್ ಮತ್ತು ಎಸ್ಎಲ್ವಿ ಟ್ರೇಡರ್ಸ್ ಮಳಿಗೆ ಶುಭಾರಂಭಗೊಂಡಿತು. ಇಲ್ಲಿ ಎಲ್ಲಾ ತರಹದ ಕಂಪನಿ ಮೊಬೈಲಗಳು ಹಾಗೂ ವಿವಿಧ ಕಂಪನಿಯ ಮೊಬೈಲ್ ರೀಚಾರ್ಜ್ಗಳು ಸಿಮ್ ಕಾರ್ಡ್ಗಳು, ಗ್ರಾಹಕರಿಗೆ ಪಾನ್ ಕಾರ್ಡ್, ಲ್ಯಾಂಡ್ ಲಿಂಕ್ಸ್, ವಿವಿಧ ಕಂಪನಿಯ ಮೋಟಾರ್ ಸೈಕಲ್ಗಳು, ಮಿನಿ ಎಟಿಎಂ ಇನ್ನಿತರ ಎಲ್ಲಾ ಗ್ರಾಹಕರಿಗೆ ಬೇಕಾಗುವ ಸೌಲಭ್ಯಗಳು ಸಿಗುತ್ತದೆ
ಮಂಗಳೂರು ಪಾಂಡೇಶ್ವರ ನಿವಾಸಿ 7 ವರ್ಷದ ಬಾಲಕ ಮೈಮೇಲೆ ಗೇಟು ಬಿದ್ದು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಬಗ್ಗೆ ಮಾಹಿತಿ ಲಭ್ಯವಾಗಿದೆ. ಸವಾದ್ ಎಂಬವರ 7 ವರ್ಷ ಪ್ರಾಯದ ಹಮ್ದಾನ್ ಎಂಬ ಮುದ್ದಾದ ಮಗು ಮೃತ ದುರ್ದೈವಿ. ಹಮ್ದಾನ್ ನಿನ್ನೆ ಆಟವಾಡುವಾಗ ಮೈಮೇಲೆ ಗೇಟು ಬಿದ್ದಿತ್ತು. ತಕ್ಷಣ ಚಿಕಿತ್ಸೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
“ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಿಂದ ಕೇವಲ ಕೆಲಸ ಮಾಡಿಸಲು ಇರುವುದಲ್ಲ. ವಿದ್ಯಾರ್ಥಿ ದೆಸೆಯಿಂದಲೇ ಮಕ್ಕಳು ಸಾಮಾಜಿಕವಾಗಿ ತಾವು ಹೇಗೆ ಬದುಕಬೇಕು, ಜೀವನದಲ್ಲಿ ಎದುರಾಗಬಹುದಾದ ಸವಾಲುಗಳನ್ನು ಮೆಟ್ಟಿ ನಿಲ್ಲುವುದು, ಆತ್ಮವಿಶ್ವಾಸ ಬೆಳೆಸಿಕೊಳ್ಳುವುದು, ಸಹಬಾಳ್ವೆಯ ಮಹತ್ವ ಮೊದಲಾದವುಗಳನ್ನು ತಿಳಿಸಿಕೊಡುತ್ತದೆ. ಒಟ್ಟಿನಲ್ಲಿ ವಿದ್ಯಾರ್ಥಿಯ ವ್ಯಕ್ತಿತ್ವದ ಸರ್ವತೋಮುಖ ಅಭಿವೃದ್ಧಿಗೆ ಎನ್ಎಸ್ಎಸ್ ದಾರಿದೀಪವಾಗಬಲ್ಲ ಜೀವನ
ಮಂಗಳೂರಿನ ರಥಬೀದಿಯ ಶ್ರೀ ವೆಂಕಟರಮಣ ದೇವಸ್ಥಾನದ 100ನೇ ವರ್ಷದ ಶಾರದಾ ಮಹೋತ್ಸವದಲ್ಲಿ ಪೂಜಿಸಲ್ಪಟ್ಟ ಶ್ರೀ ಶಾರದಾ ಮಾತೆಯ ವಿಸರ್ಜನಾ ಶೋಭಯಾತ್ರೆ ಗುರುವಾರ ರಾತ್ರಿ ಶ್ರದ್ಧಾಭಕ್ತಿಯಿಂದ ನೆರವೇರಿತು. ಸರಸ್ವತಿ ಕಲಾ ಮಂಟಪದಲ್ಲಿ ಬೆಳಗ್ಗಿನಿಂದ ಸೇವಾರೂಪದಲ್ಲಿ ಪ್ರತೀ ವರ್ಷದಂತೆ ಶಾರದಾ ಹುಲಿವೇಷಧಾರಿಗಳಿಂದ ಹುಲಿವೇಷ ಕುಣಿತ ನಡೆಯಿತು. ರಾತ್ರಿ ಮಹಾಮಂಗಳಾರತಿ ಆಗಿ ಶ್ರೀ ವೆಂಕಟರಮಣ ದೇವರ ಪ್ರದಕ್ಷಿಣೆ ನಡೆಯಿತು. ಬಳಿಕ ಶ್ರೀ ಶಾರದಾ ಮಾತೆಯ ವಿಸರ್ಜನಾ ಶೋಭಯಾತ್ರೆಯೂ
ಪ್ರಸಿದ್ಧ ವೈದ್ಯ ಡಾ. ಸುರೇಶ್ ಸುರತ್ಕಲ್ ಅಲ್ಪಕಾಲದ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ತಜ್ಞ ವೈದ್ಯರಾಗಿ ಜಿಲ್ಲೆಯಲ್ಲಿಯೇ ಪ್ರಸಿದ್ಧ ರಾಗಿದ್ದರು. ಕೋವಿಡ್ ಸಂದರ್ಭದಲ್ಲಿಯೂ ಜೀವನದ ಹಂಗು ತೊರೆದು ಅನೇಕ ಮಂದಿಗೆ ಚಿಕಿತ್ಸೆ ನೀಡಿ ಮಾದರಿಯಾಗಿದ್ದರು. ಅವರು ಸುರತ್ಕಲ್ನಲ್ಲಿ ತನ್ನ ತಾಯಿಯ ಹೆಸರಿನಲ್ಲಿ ಆರಂಭಿಸಿದ್ದ ಸುಸಜ್ಜಿತ ಪುಷ್ಪಾ ಕ್ಲಿನಿಕ್ ಮತ್ತು ಡಯಾಗ್ನೋಸಿಸ್ ಸೆಂಟರ್ ಆರಂಭಿಸಿ ಸುಮಾರು 5 ದಶಕಗಳಿಂದ ಅದನ್ನು
ಮಂಗಳೂರಿನ ಪ್ರಸಿದ್ಧ ಪ್ರವಾಸಿ ತಾಣಗಳಲ್ಲೊಂದಾದ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಹಾವೊಂದಕ್ಕೆ ಇರುವೆಗಳ ಹಿಂಡು ಕಾಟ ಕೊಟ್ಟಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದಕ್ಕೆ ಸ್ವತಃ ಪಿಲಿಕುಳದ ನಿರ್ದೇಶಕರೇ ಸ್ಪಷ್ಟನೆ ನೀಡಿದ್ದು, ‘ಇರುವೆಯ ಕಿರುಕುಳಕ್ಕೊಳಗಾಗಿದ್ದ ಹಾವು ಸುರಕ್ಷಿತವಾಗಿದೆ’ ಎಂದು ಮಾಹಿತಿ ನೀಡಿದ್ದಾರೆ. ಪಿಲಿಕುಳ ಜೈವಿಕ ಉದ್ಯಾನವನದ ನಿರ್ದೇಶಕ ಜಯಪ್ರಕಾಶ್ ಭಂಡಾರಿ, ಮಾತನಾಡಿ ವಿಡಿಯೋ ವೈರಲ್ ಆಗಿರುವ ಬಗ್ಗೆ
ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಉಳ್ಳಾಲ ತಾಲೂಕಿನ ತೊಕ್ಕೊಟ್ಟು ಓವರ್ ಬ್ರಿಡ್ಜ್ ಜಂಕ್ಷನ್ನಿಂದ ಕುಂಪಲ ಬೈಪಾಸ್ ತನಕ ಸರ್ವಿಸ್ ರಸ್ತೆಯನ್ನು ವಿಸ್ತರಿಸಬೇಕು. ಹಾಗೂ ಕಾಪಿಕಾಡ್ ಬಳಿ ಇರುವ ಅವೈಜ್ಞಾನಿಕ ಯೂಟರ್ನ್ ಓಪನ್ ರಸ್ತೆಯನ್ನು ಮುಚ್ಚಬೇಕು ಎಂದು ಆಗ್ರಹಿಸಿ ತೊಕ್ಕೊಟ್ಟು ಹೆದ್ದಾರಿ ಸುರಕ್ಷತಾ ಹೋರಾಟ ಸಮಿತಿ ಜಿಲ್ಲಾಡಳಿತÀ ಹಾಗೂ ಹೆದ್ದಾರಿ ಇಲಾಖೆಗೆ ಮನವಿ ಮಾಡಿದೆ. ಮನವಿ ಹಿನ್ನಲೆಯಲ್ಲಿ ಸ್ಥಳ ಪರಿಶೀಲನೆ ಮಾಡಿದ ರಾಷ್ಟ್ರೀಯ ಹೆದ್ದಾರಿ ಪ್ರಾದಿಕಾರದ
ಮಂಗಳೂರಿನ ಪಿಲಿಕುಳ ನಿಸರ್ಗಧಾಮದಲ್ಲಿ ಹಾವೊಂದರ ಕೋಣೆ ತುಂಬಾ ಕಚ್ಚುವ ಇರುವೆಗಳು ಸೃಷ್ಠಿಯಾಗಿದ್ದು ಇದರಿಂದ ಹಾವು ನರಕ ಅನುಭವಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಪಿಲಿಕುಳ ನಿಸರ್ಗಧಾಮದಲ್ಲಿರುವ ಹಾವೊಂದು ಇರುವೆಗಳು ಕಚ್ಚಿ ನೋವನ್ನು ಅನುಭವಿಸುತ್ತಿರುವ ದೃಶ್ಯವನ್ನು ಪಿಲಿಕುಳಕ್ಕೆ ಭೇಟಿ ಕೊಟ್ಟ ಪ್ರವಾಸಿಗರು ವಿಡಿಯೋ ಮಾಡಿದ್ದು, ಸಾಮಾಜಿಕ ಜಾಲ ತಾಣದಲ್ಲಿ ಹರಿಯಬಿಟ್ಟಿದ್ದಾರೆ. ಪಿಲಿಕುಳದಲ್ಲಿ ಪ್ರವಾಸಿಗರ ವೀಕ್ಷಣೆಗೆ
ಮಂಗಳೂರಿನ ತುಳು ಪರಿಷತ್ ,ಮಯೂರಿ ಫೌಂಡೇಷನ್ ಮತ್ತು ಕರ್ನಾಟಕ ಥಿಯಾಲಾಜಿಕಲ್ ಕಾಲೇಜು, ಕರಾವಳಿ ಲೇಖಕಿಯರ-ವಾಚಕಿಯರ ಸಂಘ ಹಾಗೂ ಸಾಮರಸ್ಯ ಮಂಗಳೂರು ಇವರ ಸಹಭಾಗಿತ್ವದಲ್ಲಿ ದಸರಾ ಬಹು ಭಾಷಾ ಕವಿಗೋಷ್ಠಿ ಮಂಗಳೂರಿನ ಬಲ್ಮಠದ ಸಹೋದಯದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಮಯೂರಿ ಫೌಂಡೇಶನ್ನ ಅಧ್ಯಕ್ಷರು ಹಾಗೂ ಹಿರಿಯ ಕವಿ ಜಯ.ಕೆ.ಶೆಟ್ಟಿ ಅವರು ಉದ್ಘಾಟಿಸಿ ಮಾತನಾಡಿ, ದಸರಾ ಹಿನ್ನೆಲೆಯಲ್ಲಿ ತುಳುನಾಡಿನ ಎಲ್ಲಾ ಭಾಷಿಗರು ಒಂದೇ ವೇದಿಕೆಗೆ ಬರುವ ಮುಲಕ ತುಳುನಾಡಿನ




























