ಮಂಗಳೂರು : ರಾಜಕೀಯ ಹಗೆತನ ಮುಂದಿಟ್ಟುಕೊಂಡು ಎಸ್ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ರಿಯಾಜ್ ಫರಂಗಿಪೇಟೆ ಅವರ ನಿವಾಸದ ಮೇಲೆ ಬಿಜೆಪಿ ಸರ್ಕಾರದ ಸೂಚನೆಯಂತೆ ರಾಷ್ಟ್ರೀಯ ತನಿಖಾ ದಳ ( NIA ) ದಾಳಿ ನಡೆಸಿರುವುದನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಎಸ್ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮಂಗಳೂರು ವಿಧಾನಸಭಾ ಕ್ಷೇತ್ರ ಸಮಿತಿಯ ನೇತೃತ್ವದಲ್ಲಿ
54ನೇ ಮುದರಂಗಡಿ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ವಿರುದ್ಧ ಕ್ರಿಮಿನಲ್ ಪ್ರಕರಣ ಇದ್ದರೂ, ಮಾಸಿಕ ಸಭೆಯನ್ನು ಕರೆದು ಏಕಾಏಕಿ ರದ್ದುಗೊಳಿಸಿದ ಬಗ್ಗೆ ಕೆಲ ಸದಸ್ಯರು ಆಕ್ಷೇಪ ವ್ಯಕ್ತ ಪಡಿಸಿದ್ದಾರೆ. ಶುಕ್ರವಾರ ಬೆಳಿಗ್ಗೆ ಗ್ರಾಮ ಪಂಚಾಯತಿಗೆ ಬಂದ ಕೆಲ ಸದಸ್ಯರು ಈ ಬಗ್ಗೆ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಮುತ್ತು ಅವರಲ್ಲಿ ಸಭೆ ರದ್ದು ಗೊಳಿಸಿದ ಬಗ್ಗೆ ಸೃಷ್ಟಿಕರಣ ಕೇಳಿದ್ದಾರೆ. ಈ ಬಗ್ಗೆ ಸ್ಪಷ್ಟನೆ ನೀಡಿದ ಅವರು, ಅಧ್ಯಕ್ಷ ಹಾಗೂ ಉಪಾಧ್ಯಕ್ಷರ
ಮಂಗಳೂರು,ಸೆ.09(ಕ.ವಾ):- ಮಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಜಯಾನಂದ ಅಂಚನ್ ಹಾಗೂ ಉಪ ಮೇಯರ್ ಆಗಿ ಪೂರ್ಣಿಮಾ ಆಯ್ಕೆಯಾಗಿದ್ದಾರೆ.ಸೆ.9ರ ಶುಕ್ರವಾರ ಮಂಗಳೂರು ಮಹಾನಗರ ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ 23ನೇ ಅವಧಿಯ ಚುನಾವಣೆ ನಡೆಯಿತು.ಚುನಾವಣಾಧಿಕಾರಿಯಾಗಿ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ಡಾ.ಜಿ.ಸಿ ಪ್ರಕಾಶ್ ಚುನಾವಣೆಯ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ನಂತರ ನೂತನ ಮೇಯರ್ ಹಾಗೂ ಉಪ ಮೇಯರ್ ಗಳ ಹೆಸರನ್ನು ಘೋಷಿಸಿದರು. ಶಾಸಕರಾದ ಭರತ್
ವಿಶ್ವ ಫಿಸಿಯೋಥೆರಪಿ ದಿನಾಚರಣೆ ಅಂಗವಾಗಿ ಸಂತ ಅಲೋಷಿಯಸ್ ಗೊನ್ಝಾಗ ಶಾಲೆಯಲ್ಲಿ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಫಿಸಿಯೋಥೆರಪಿ ವಿಭಾಗ, ಮಂಗಳೂರು ರೌಂಡ್ ಟೇಬಲ್ 115 ಹಾಗೂ ಮಂಗಳೂರು ಲೇಡೀಸ್ ಸರ್ಕಲ್ 82 ಇವರ ಸಹಯೋಗದಿಂದ 1 ರಿಂದ 10 ತರಗತಿಯ ಮಕ್ಕಳಿಗಾಗಿ ಆರೋಗ್ಯ ಅಭಿಯಾನ ಕಾರ್ಯಕ್ರಮ ಇತ್ತೀಚೆಗೆ ಹಮ್ಮಿಕೊಳ್ಳಲಾಯಿತು. ಮಂಗಳೂರಿನ ಪ್ರತಿಷ್ಠಿತ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ ರಿಂಕು ರೋಷನ್ ಮಾತನಾಡಿ ಉತ್ತಮ ಆಹಾರ ಸೇವನೆ,
ಮೂಡುಬಿದಿರೆ: ನೀಟ್ ಪರೀಕ್ಷೆಯಲ್ಲಿ ಆಳ್ವಾಸ್ ಪಿಯು ಕಾಲೇಜಿನ ಮನೋಜ್ ಎನ್ 690 ಅಂಕ ಪಡೆಯುವ ಮೂಲಕ ಕೆಟಗರಿ ವಿಭಾಗದಲ್ಲಿ ರಾಷ್ಟ್ರಮಟ್ಟದಲ್ಲಿ 54ನೇ ರ್ಯಾಂಕ್ ಗಳಿಸಿದ್ದಾರೆ. ರಾಹುಲ್ ಜಿ.ಪಾಟೀಲ್ 39ನೇ ರ್ಯಾಂಕ್ ಹಾಗೂ ನರಸೇಗೌಡ ಬಿ.ಎಂ 85ನೇ ರ್ಯಾಂಕ್ ಗಳಿಸಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳಲ್ಲಿ 600 ಕ್ಕಿಂತ ಅಧಿಕ ಅಂಕಗಳನ್ನ 31
ಮಂಗಳೂರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ(ರಿ.) ಉರ್ವಸ್ಟೋರ್, ಮಂಗಳೂರು ಮತ್ತು ಯೆನೆಪೋಯ ವಿಶ್ವವಿದ್ಯಾನಿಲಯ ಮೆಡಿಕಲ್ ಕಾಲೇಜು, ದೇರಳಕಟ್ಟೆ ಇವರ ಸಂಯುಕ್ತ ಸಹಯೋಗದಲ್ಲಿ ಮಂಗಳೂರಿನ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ವನಿತಾಂಗಂಣದಲ್ಲಿ ಸೆ.11ರಂದು ಪೂರ್ವಾಹ್ನ 9ರಿಂದ ಅಪರಾಹ್ನ 3ರ ರವೆರೆಗೆ ಉಚಿತಾ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ. ಶಿಬಿರದಲ್ಲಿ ರಕ್ತದೊತ್ತಡ ಪರೀಕ್ಷೆ ಹಾಗೂ ರಕ್ತದ ವಿಂಗಡನೆ, ಮಧುಮೇಹ, ಹಿಮೋಗ್ಲೋಬಿನ್ ಪರೀಕ್ಷೆ, ಸ್ತ್ರೀಯರ ಮಾಮೊಗ್ರಾಫಿ,
ಮಂಗಳೂರು : ಹಳೇಬಂದರು ಸಗಟು ಮಾರುಕಟ್ಟೆಯ ಪೋರ್ಟ್ ರಸ್ತೆಯ ಮಧ್ಯೆ ಹಾದು ಹೋಗಿ ನದಿ ಸೇರುವ ರಾಜ ಕಾಲುವೆಯನ್ನು ಒತ್ತುವರಿ ಮಾಡಿ ಬಂದರು ಇಲಾಖೆ ಕಟ್ಟಡ ನಿರ್ಮಾಣ ಮಾಡಿ ರಾಜ ಕಾಲುವೆಯನ್ನು ತಿರುಗಿಸಿರುವುದರಿಂದ ರಾಜ ಕಾಲುವೆಯಲ್ಲಿ ಹರಿದು ಹೋಗುವ ತ್ಯಾಜ್ಯ ನೀರು ಉಕ್ಕಿ ಹೊರಗೆ ಗೋದಾಮುಗಳಿಗೆ ನುಗ್ಗಿ ಅಕ್ಕಿ ಧಾನ್ಯ, ಮೆಣಸು ಇತ್ಯಾದಿ ಸರಕುಗಳು ಹಾನಿಯಾಗಿ ಲಕ್ಷಾಂತರ ರೂಪಾಯಿ ನಷ್ಟ ಆಗಿದೆ. ಅಲ್ಲದೆ ಕೊಳಚೆ ನೀರು ರಸ್ತೆಯಲ್ಲೇ ನಿಂತು ಪರಿಸರದಲ್ಲಿ ದುರ್ನಾತ
ಮಂಗಳೂರಿನ ನವಭಾರತ್ ವೃತ್ತದ ಓಷಿಯನ್ ಪರ್ಲ್ನಲ್ಲಿ ಮುಳಿಯ ಜ್ಯುವೆಲ್ಸ್ ನಿಂದ ಚಿನ್ನ ಮತ್ತು ವಜ್ರಾಭರಣಗಳ ಪ್ರದರ್ಶನ ಮತ್ತು ಮಾರಾಟಕ್ಕೆ ಚಾಲನೆ ಸಿಕ್ಕಿತ್ತು. ಸೆ.8ರಿಂದ ಸೆ.11ರ ವರೆಗೆ ಚಿನ್ನ -ವಜ್ರಾಭರಣಗಳ ಪ್ರದರ್ಶನ ಮತ್ತು ಮಾರಾಟ ನಡೆಯಲಿದ್ದು, ಮುಳಿಯ ಚಿನ್ನಾಭರಣ ಮತ್ತು ಕಿಸ್ನ ಡೈಮಂಡ್ ಆಭರಣಗಳ ಪ್ರದರ್ಶನ ಮತ್ತು ಮಾರಾಟದ ಎಕ್ಸಿಬಿಶನ್ನ್ನು ಏರ್ಪಡಿಸಿದ್ದಾರೆ. ಎಪ್ಪತ್ತೆಂಟು ವರ್ಷಗಳ ಪರಂಪರೆ ಮತ್ತು ನಂಬಿಕೆಯ ಮುಳಿಯ ಜ್ಯುವೆಲ್ಸ್ ನಿಂದ
ಮಂಗಳೂರಿನ ಶಕ್ತಿನಗರದ ಸಾನಿಧ್ಯ ವಸತಿಯುತ ಶಾಲೆಯಲ್ಲಿ ಓಣಂ ಹಬ್ಬವನ್ನು ಸಂಭ್ರಮ, ಸಡಗರಿಂದ ಆಚರಿಸಲಾಯಿತು.ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ವೈದ್ಯಾಧಿಕಾರಿ ಗೌತಮ್ ಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಎಮ್.ಎಸ್. ಡಿಎಸ್ಎಮ್ ಕಿಶನ್ ಕುಮಾರ್, ಲಯನ್ 317 ಡಿ ಡಿಸ್ಟ್ರಿಕ್ ಸತೀಶನ್ ಡಿ, ಯುಎಸ್ಎಯ ಟೆಥರ್ಪಿಯ ಚೀಪ್ ಪ್ರೊಡಕ್ಟಿವಿಟಿ ಅಫೀಸರ್ ಮ್ಯಾಥ್ಯೂ ಟೇಲರ್ ಸಲಹಾ ಸಮಿತಿಯ ಜ್ಯೋತಿಕಾ ಆಳ್ವಾ ಅವರು
ಸ್ವಾತಂತ್ರ್ಯ ಹೋರಾಟಗಾರ ವಿನಾಯಕ ದಾಮೋದರ ಸಾವರ್ಕರ್ ಅವರ ಪುತ್ಥಳಿ ನಿರ್ಮಾಣಕ್ಕೆ ಮೂಡುಬಿದಿರೆಯ ರಿಂಗ್ ರೋಡ್ ಪ್ರೀತಮ್ ಗಾರ್ಡನ್ ಬಳಿ, ಅಥವಾ ರಿಂಗ್ ರೋಡ್ ಒಂಟಿಕಟ್ಟೆ/ಅಲಂಗಾರ್ ಜಂಕ್ಷನ್ ನಲ್ಲಿ ಅವಕಾಶ ಮಾಡಿಕೊಡಬೇಕೆಂದು ಮೂಡುಬಿದಿರೆ ತಾಲೂಕು ಹಿಂದು ಜಾಗರಣಾ ವೇದಿಕೆಯು ಮೂಡುಬಿದಿರೆ ಪುರಸಭೆಯ ಅಧ್ಯಕ್ಷ ಪ್ರಸಾದ್ ಕುಮಾರ್ ಅವರಿಗೆ ಮನವಿ ಪತ್ರವನ್ನು ಸಲ್ಲಿಸಿದರು. ಈ ಸಂಧರ್ಭದಲ್ಲಿ ಹಿಂದು ಜಾಗರಣ ವೇದಿಕೆಯ ಜಿಲ್ಲಾ ಸಹ ಸಂಯೋಜಕ್ ಸಮಿತ್ ರಾಜ್ ದರೆಗುಡ್ಡೆ,




























