Home ಕರಾವಳಿ Archive by category ಮಂಗಳೂರು (Page 232)

ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿಗೆ ಖಂಡನೆ : ಕಾಪುವಿನಲ್ಲಿ ಎಸ್‍ಡಿಪಿಐ ವತಿಯಿಂದ ಪ್ರತಿಭಟನೆ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಬೆಲೆ ಏರಿಕೆ ಹಾಗೂ ಜಿಎಸ್‍ಟಿ ನೀತಿಯ ವಿರುದ್ಧ ಕಾಪುಪೇಟೆಯಲ್ಲಿ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾದ ವತಿಯಿಂದ ಪ್ರತಿಭಟನಾ ಸಭೆ ನೆರವೇರಿತು. ಎಸ್ಡಿಪಿಐ ಕಾಪು ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಹನೀಫ್ ಮೂಳೂರು ಮಾತನಾಡಿ, ಕೇಂದ್ರದ ತೆರಿಗೆ ನೀತಿಯಿಂದ ಬಡವರು ತಿನ್ನುವ ಅನ್ನದ ಬಟ್ಟಲಿಗೆ ಟ್ಯಾಕ್ಸ್

ಸುಳ್ಯದ ಅರಮನೆ ಗಯಕ್ಕೆ ಬೇಕಾಗಿದೆ ತೂಗು ಸೇತುವೆ

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕು ಮರ್ಕಂಜ ಮತ್ತು ಅರಂತೋಡು ಗ್ರಾಮಕ್ಕೆ ಸಂಬಂಧಪಟ್ಟ ಅರಮನೆ ಗಯ ಎಂಬಲ್ಲಿ ತೂಗು ಸೇತುವೆ ಮುರಿದು ಹೋಗಿದ್ದು ಸಂಚಾರಕ್ಕೆ ತೊಡಕುಂಟಾಗಿ ಅಲ್ಲಿನ ಜನತೆ ಸಂಕಷ್ಟಪಡುತ್ತಿದ್ದಾರೆ. 30 ವರ್ಷಗಳಿಂದ ಶಾಸಕರಿಗೆ ಮತ್ತು ಜಿಲ್ಲಾಧಿಕಾರಿಗಳಿಗೆ ಒಂದು ಸೇತುವೆ ನಿರ್ಮಾಣ ಮಾಡಿಕೊಡಿ ಎಂದು ಎಷ್ಟು ಕೇಳಿದರು ಸ್ಪಂದನೆ ಇನ್ನೂ ಸಿಕ್ಕಿಲ್ಲ. ಮರ್ಕಂಜ ಮತ್ತು ಅರಂತೋಡು ಗ್ರಾಮಗಳ ನಡುವೆ ಹಂಚಿಹೋಗಿರುವ ಅರಮನೆಗಯದ ನಡುವೆ ಹರಿಯುವ ಹೊಳೆ ಈ ಊರಿನ

ಊರಿನ ಚಿತ್ರಣ ಬದಲಿಸುವ ಸೇತುವೆಗಳು….

ನದಿಗೆ ಅಡ್ಡಲಾಗಿ ಕಟ್ಟುವ ಸೇತುವೆಯೊಂದು ಹೇಗೆ ಊರೊಂದರ ಚಿತ್ರಣವನ್ನೇ ಬದಲಿಸುತ್ತದೆನ್ನುವುದನ್ನು ನಮಗೆ ಅನೇಕ ಬಾರಿ ಊಹಿಸಲೂ ಸಾಧ್ಯವಾಗುವುದಿಲ್ಲ.ಆ ಬದಲಾವಣೆಯಲ್ಲಿ ನಾವೂ ಬದಲಾಗಿ ಬಿಡುತ್ತೇವೆ. ಇಂತಹ ಬದಲಾವಣೆಗಳಾಗುತ್ತವೆ ಎಂದು ತಿಳಿದು ನಾವು ಥ್ರಿಲ್ ಆಗುತ್ತೇವೆ. ಆದರೆ ಬದಲಾವಣೆಗಳು ಘಟಿಸಿ ಊರಿನ ಚಿತ್ರಣ ಬದಲಾದ ಬಳಿಕ ನಮ್ಮೂರು ಹೀಗಿತ್ತು ಎನ್ನುವುದನ್ನು ನಾವು ಬಲು ಬೇಗ ಮರೆತುಬಿಡುತ್ತೇವೆ.ಹಿಂದಿನ ಚಿತ್ರಣಗಳು ಕಾಲಗರ್ಭದಲ್ಲಿ ಅಡಗುತ್ತಿದ್ದಂತೆಯೇ ನಮ್ಮ

ಬೆಳ್ತಂಗಡಿ: ಹಲ್ಲೆ ತಡೆಯಲು ಮುಂದಾದ ವ್ಯಕ್ತಿಯೇ ಸಾವು

ಬಾಲಕಿಯ ಮೇಲೆ ವ್ಯಕ್ತಿಯೊಬ್ಬರು ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ಯುವಕರ ತಂಡವೊಂದು ಹಲ್ಲೆ ನಡೆಸಿದ್ದು, ಈ ವೇಳೆ ಜಗಳ ತಡೆಯಲು ಬಂದ ವ್ಯಕ್ತಿಗೂ ಹಲ್ಲೆ ಮಾಡಿದ್ದು, ಗಂಭೀರ ಗಾಯಗೊಂಡ ಅವರು ಆಸ್ಪತ್ರೆಗೆ ದಾಖಲಿಸುವ ವೇಳೆ ಮೃತಪಟ್ಟ ಘಟನೆ ಬೆಳ್ತಂಗಡಿಯ ಪರಾರಿ ಶಾಂತಿನಗರದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಪರಾರಿ ಶಾಂತಿನಗರದ ನಿವಾಸಿ ಜಾರಪ್ಪ ನಾಯ್ಕ್ (55) ಅವರು ಯುವಕರ ತಂಡದಿಂದ ಹಲ್ಲೆಗೊಳಗಾಗಿ ಮೃತಪಟ್ಟವರು. ಜಾರಪ್ಪ ನಾಯ್ಕ್ ಅವರ

ಕಾಪು : ರಸ್ತೆ ಹೊಂಡಕ್ಕೆ ಬಿದ್ದು ವಿದ್ಯುತ್ ಕಂಬಕ್ಕೆ ಢಿಕ್ಕಿಯಾದ ಕಾರು

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೊಂಡ ಬಿದ್ದ ಪರಿಣಾಮ ಪದೇ ಪದೇ ಅಪಘಾತಗಳು ಸಂಭವಿಸುತ್ತಲೇ ಇದೆ. ಇಂದು ಹೊಂಡ ತಪ್ಪಿಸಲು ಹೋಗಿ ಕಾರೊಂದು ಡಿವೈಡರ್ ಏರಿ ನಿಂತ ಘಟನೆ ಕಾಪುವಿನಲ್ಲಿ ನಡೆದಿದೆ. ಕಾರೊಂದು ರಸ್ತೆಯ ಹೊಂಡಕ್ಕೆ ಬಿದ್ದು, ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ಕಾರು ಚಾಲಕಿ ಅಪಾಯದಿಂದ ಪಾರಾದ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ ಮೇಲಿದ್ದ ಹೊಂಡದಲ್ಲಿ ನೀರು ತುಂಬಿ ನಿಯಂತ್ರಣ ತಪ್ಪಿ ಕಾರು ಅಪಘಾತವಾಗಿದೆ.

ರೈಲ್ವೇ ಗೋಡೌನ್‍ನಿಂದ ಲಕ್ಷಾಂತರ ಬೆಲೆಯ ತಂತಿ ಕಳವು ,ತಂತಿ ಸಾಗಾಟ ನಡೆಸುತ್ತಿದ್ದ ಟೆಂಪೋ ಪಲ್ಟಿ

ಉಳ್ಳಾಲ: ರೈಲ್ವೇ ಇಲಾಖೆ ಗೋಡೌನ್ನಲ್ಲಿರಿಸಲಾದ ಲಕ್ಷಾಂತರ ಬೆಲೆಬಾಳುವ ವಿದ್ಯುತ್ ತಂತಿ ಕಳವು ನಡೆಸಿ ಪರಾರಿಯಾಗುತ್ತಿದ್ದ ಟೆಂಪೋವಾಹನ ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿ ಉರುಳಿಬಿದ್ದು ಇಬ್ಬರು ಮಹಿಳೆಯರು ಹಾಗೂ ಓರ್ವ ಯುವಕ ಗಾಯಗೊಂಡ ಘಟನೆ ನಡೆದಿದೆ. ಗಾಯಗೊಂಡವರನ್ನು ನಗರದ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ವಾಹನದಲ್ಲಿದ್ದ ಟೆಂಪೋ ಚಾಲಕನನ್ನು ಉಳ್ಳಾಲ ಪೊಲೀಸರು ವಶಕ್ಕೆ ಪಡೆದುಕೊಂಡು ರೈಲ್ವೇ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ ತಮಿಳುನಾಡು ಮೂಲದವರಾದ

ಮಂಗಳೂರು : ಸ್ಮಾರ್ಟ್‍ಸಿಟಿಯ ಹೊಂಡ ಮುಚ್ಚಿದ ಸಂಚಾರ ಪೊಲೀಸ್

ಸ್ಮಾರ್ಟ್‍ಸಿಟಿ ಯೋಜನೆಯಡಿ ನಗರದ ರಾವ್ & ರಾವ್ ಸರ್ಕಲ್‍ನಲ್ಲಿ ನಡೆದ ಕಾಮಗಾರಿಯ ಮಧ್ಯೆಯೂ ಕಾಣಿಸಿಕೊಂಡ ಹೊಂಡವನ್ನು ಕರ್ತವ್ಯ ನಿರತ ಸಂಚಾರ ಪೊಲೀಸ್ ಕಾನ್‍ಸ್ಟೇಬಲ್ ಶರಣಪ್ಪ ಸಾರ್ವಜನಿಕರ ಸಹಕಾರದಲ್ಲಿ ಕಲ್ಲು ಹಾಕಿ ಮುಚ್ಚಿ ಗಮನ ಸೆಳೆದಿದ್ದಾರೆ. ಕೆಲವು ಸಮಯದಿಂದ ಈ ಪ್ರಮುಖ ರಸ್ತೆಯಲ್ಲಿ ಹೊಂಡ ಉಂಟಾಗಿತ್ತು. ಇದರಿಂದ ವಾಹನ ಸವಾರರು, ಪಾದಚಾರಿಗಳು ಸಂಚರಿಸಲು ಸಾಕಷ್ಟು ತೊಂದರೆ ಎದುರಿಸುತ್ತಿದ್ದರು. ಇದನ್ನು ಗಮನಿಸಿದ ಶರಣಪ್ಪ

ಅತ್ಯುತ್ತಮ ತುಳು ಸಿನಿಮಾ ಪ್ರಶಸ್ತಿಗೆ ಭಾಜನವಾದ `ಜೀಟಿಗೆ’

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟಗೊಂಡಿದ್ದು, ತುಳುನಾಡಿನ ದೈವಾರಾಧನೆ ಮತ್ತು ಅದರ ಕಟ್ಟುಪಾಡುಗಳನ್ನು ಬಿಂಬಿಸುವ ಕಲಾತ್ಮಕ ಚಿತ್ರ `ಜೀಟಿಗೆ’ ಅತ್ಯುತ್ತಮ ತುಳು ಸಿನಿಮಾ ಪ್ರಶಸ್ತಿಗೆ ಭಾಜನವಾಗಿದೆ. ಮಲಯಾಳಂ ನಿರ್ದೇಶಕ ಜಯರಾಜ್ ಜತೆ ಪಳಗಿದ ಸಂತೋಷ್ ಮಾಡ ನಿರ್ದೇಶನದ ಚೊಚ್ಚಲ ಚಿತ್ರವನ್ನು ನಿರ್ಮಾಣ ಮಾಡಿರುವುದು ಅರುಣ್ ರೈ ತೋಡಾರ್. ಪರಂಪರಾಗತವಾಗಿ ದೈವದ ನರ್ತನ ಸೇವೆ ಮಾಡುತ್ತ ಬಂದಿರುವ ತನಿಯಪ್ಪ, ತನ್ನ ಮಗನಿಗೆ ಈ ಚಾಕರಿ ಬೇಡ ಎಂದು ವಿದ್ಯಾಭ್ಯಾಸ

ಮಸೂದ್ ಹತ್ಯೆ,ಕುಟುಂಬಸ್ಥರ ಜೊತೆ ನಿಂತ ವಿಪಕ್ಷ ಉಪ ನಾಯಕ ಶಾಸಕ ಯು.ಟಿ.ಖಾದರ್

ಸುಳ್ಯ ತಾಲೂಕಿನ ಕಳಂಜದಲ್ಲಿ ಮೊನ್ನೆ ರಾತ್ರಿ ದುಷ್ಕರ್ಮಿಗಳಿಂದ ತೀವ್ರ ಹಲ್ಲೆಗೊಳಗಾದ ಮಸೂದ್ ಎಂಬ ಯುವಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದು ಯು.ಟಿ.ಖಾದರ್ ತೀವ್ರ ಖಂಡನೆ ಹಾಗೂ ಸಂತಾಪ ವ್ಯಕ್ತಪಡಿಸಿದ್ದಾರೆ. ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತರ ಕುಟುಂಬಸ್ಥರು ಹಾಗೂ ಸ್ಥಳೀಯ ಮುಖಂಡರು ಜಿಲ್ಲಾಡಳಿತ ಪರಿಹಾರ ಘೋಷಿಸುವ ವರೆಗೂ ಮಯ್ಯತ್ (ಮೃತ ಶರೀರ) ನ್ನು ಪಡೆಯುವುದಿಲ್ಲ ಎಂಬುದಾಗಿ ಧರಣಿ ನಿರತರಾಗಿದ್ದು ಸ್ಥಳಕ್ಕೆ ಮಾಜಿ ಸಚಿವ ಶಾಸಕ

ಪ್ರೇಮಕಾಂತಿ ಎಜುಕೇಶನ್ ಚಾರಿಟೇಬಲ್ ಟ್ರಸ್ಟ್ ಸ್ಥಾಪಕಿ ಪ್ರೊ.ಪ್ರೇಮಲತಾ ಶೆಟ್ಟಿ ನಿಧನ

ಪ್ರೇಮಕಾಂತಿ ಎಜುಕೇಶನ್ ಚಾರಿಟೇಬಲ್ ಟ್ರಸ್ಟ್ಇ ದರ ಸ್ಥಾಪಕರಾದ ಪ್ರೊ.ಪ್ರೇಮಲತಾ ಶೆಟ್ಟಿ ಅಲ್ಪ ಕಾಲದ ಅಸೌಖ್ಯದಿಂದ ಗುರುವಾರ ತಾ.21-7-2022 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರಿಗೆ 91 ವರ್ಷ ಪ್ರಾಯವಾಗಿತ್ತು. ಸರಕಾರಿ ಕಾಲೇಜಿನ ಪ್ರಾಂಶುಪಾಲರಾಗಿ ಸುಮಾರು 40 ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಜೀವನ ಹಾಗೂ ಶಿಕ್ಷಣ ರಂಗದಲ್ಲಿ ಎಜುಕೇಶನ್ ಟ್ರಸ್ಟ್ ಸ್ಥಾಪಿಸಿ ಶೈಕ್ಷಣಿಕ ಕ್ಷೇತ್ರದಲ್ಲಿ ಸೇವೆಯನ್ನು ಮುಂದುವರಿಸಿಕೊಂಡು ಬಂದಿದ್ದರು.