ಮಲ್ಪೆ : 19ನೇ ಯ ಶತಮಾನದ ದಾರ್ಶನಿಕ, ಮಾನವತಾವಾದಿ, ಬ್ರಹ್ಮಶ್ರೀ ನಾರಾಯಣಗುರುಗಳು ನೀಡಿದ ಸಂದೇಶ ಒಂದು ಕಾಲ, ಜಾತಿ, ಮತ, ಧರ್ಮಕ್ಕೆ ಸೀಮಿತವಾಗದೆ, ಸಾರ್ವಕಾಲಿಕ ಸತ್ಯದೊಂದಿಗೆ ಸರ್ವಧರ್ಮಗಳ ತತ್ವವನ್ನು ಜಗತ್ತಿಗೆ ಸಾರಿದೆ ಎಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಉಡುಪಿ ಇಲ್ಲಿನ ಪ್ರಾಂಶುಪಾಲರಾದ ಡಾ| ಗಣನಾಥ
ಸ್ಯಾಕ್ಸೋಫೋನ್ ಚಕ್ರವರ್ತಿ, ಪದ್ಮಶ್ರೀ ಪುರಸ್ಕøತ ಡಾ.ಕದ್ರಿ ಗೋಪಾಲನಾಥ್ ಅವರ ಜನ್ಮದಿನದ ಅಂಗವಾಗಿ ಡಿಸೆಂಬರ್ 6ರಂದು ಬಂಟ್ವಾಳ ತಾಲೂಕಿನ ಸಜಿಪದಲ್ಲಿರುವ ಡಾ.ಕದ್ರಿ ಗೋಪಾಲನಾಥ್ರವರ ಸಮಾಧಿಯ ಜಾಗದಲ್ಲಿ ‘ಕದ್ರಿ ಸಂಗೀತ ಸೌರಭ-2021’ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಮಣಿಕಾಂತ್ ಕದ್ರಿ ಹೇಳಿದರು. ಅವರು ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ ನನ್ನ ತಂದೆಯವರಾದ ಡಾ.ಕದ್ರಿ ಗೋಪಾಲನಾಥ್ ಅವರ ಜನ್ಮದಿನವಾದ ಡಿಸೆಂಬರ್ 6ರಂದು ಬಂಟ್ವಾಳ ತಾಲೂಕಿನ
ಇತಿಹಾಸ ಪ್ರಸಿದ್ಧ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಳದಲ್ಲಿ ವಾರ್ಷಿಕ ದೀಪೋತ್ಸವ ಸಹಸ್ರಾರು ಭಕ್ತಾದಿಗಳ ಕೂಡುವಿಕೆಯಿಂದ ಬಹಳ ಅದ್ಧೂರಿಯಾಗಿ ನಡೆದು ಸಮಾಪನ ಗೊಂಡಿದೆ. ಪ್ರತೀ ವರ್ಷದಂತೆ ಈ ವರ್ಷವೂ ಕಾರ್ತಿಕ ಮಾಸದ ಕೊನೆಯ ಸೋಮವಾರ ನಡೆದ ಈ ದೀಪೋತ್ಸವದಲ್ಲಿ ಗ್ರಾಮ ಹಾಗೂ ಸ್ಥಳೀಯ ಗ್ರಾಮಗಳಿಂದ ಸಾವಿರಾರು ಭಕ್ತಾಧಿಗಳು ಆಗಮಿಸಿ ಸ್ವಯಂ ಪ್ರೇರಿತರಾಗಿ ಎಣ್ಣೆದೀಪ ಉರಿಸುವ ಮೂಲಕ ದೀಪೋತ್ಸವದಲ್ಲಿ ತಮ್ಮ ಅಳಿಲ ಸೇವೆ ಪೂರೈಸಿದ್ದಾರೆ. ಈ ಸಂದರ್ಭ
ಸಂಪೂರ್ಣ ಹದಗೆಟ್ಟಿರುವ ಕಾನಾ-ಕುಳಾಯಿ ರೈಲ್ವೇ ಮೇಲ್ಸೇತುವೆ ಅವ್ಯವಸ್ಥೆ ವಿರೋಧಿಸಿ ಕೂಡಲೇ ದುರಸ್ಥಿಗೆ ಒತ್ತಾಯಿಸಿ ಡಿವೈಎಫ್ಐ ಕಾನ-ಕುಳಾಯಿ ಘಟಕದ ವತಿಯಿಂದ ಕುಳಾಯಿಗುಡ್ಡೆ ರೈಲ್ವೇ ಬ್ರಿಡ್ಜ್ ಬಳಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಡಿವೈಎಫ್ಐ ಮುಖಂಡ ಮುನೀರ್ ಕಾಟಿಪಳ್ಳ ಅವರು, ರಸ್ತೆ ಕಾಮಗಾರಿಯಾದ ಪ್ರತೀ ವರ್ಷಕೂಡ ಮೊದಲ ಮಳೆಗೆ ರಸ್ತೆ ಗುಂಡಿ ಬಿದ್ದು, ಸಂಚರಿಸಲು ಆಗದ ಪರಿಸ್ಥಿತಿ ಬಂದೊದಗಿದೆ. ಇದಕ್ಕೆ ಅವೈಜ್ಞಾನಿಕ ಕಾಮಗಾರಿ
ನಗರದ ಬೋಂದೆಲ್ನಲ್ಲಿರುವ ಬಾಲಕರ ಬಾಲ ಮಂದಿರದಿಂದ ನ.26 ರ ರವಿವಾರ ಮುಂಜಾನೆ ಶ್ಯಾಮವೆಲ್ ಟೊಪ್ಪು (16) ಮತ್ತು ವಡಲಮನಿ ಚಿರಂಜೀವ (16) ಎಂಬವರು ನಾಪತ್ತೆಯಾಗಿರುವ ಬಗ್ಗೆ ಕಾವೂರು ಠಾಣೆಯಲ್ಲಿ ದೂರು ದಾಖಲಾಗಿದೆ. ಸ್ಯಾಮುವೆಲ್ 150 ಸೆಂ.ಮೀ ಎತ್ತರವಿದ್ದು, ಬಿಳಿ ಮೈಬಣ್ಣ, ಕೋಲುಮುಖ, ಸಾಧಾರಣ ಮೈಕಟ್ಟು ಹೊಂದಿದ್ದಾನೆ. ಎದುರಿನಲ್ಲಿ ಹಳದಿ ಬಣ್ಣದ ಪಟ್ಟಿ ಇರುವ ತಿಳಿನೀಲಿ ಬಣ್ಣದ ಟೀಶರ್ಟ್, ಕಪ್ಪು ಬಣ್ಣದ ಪ್ಯಾಂಟ್ ಧರಿಸಿದ್ದಾನೆ. ವಡಲಮನಿ ಚಿರಂಜೀವಿ 150 ಸೆಂ.ಮೀ
ನಗರದ ನಂತೂರು ಪದವು ಬಳಿ ಬೈಕ್ ಸವಾರನನ್ನು ತಡೆದು ನಿಲ್ಲಿಸಿ ಚಿನ್ನದ ಸರವನ್ನು ಸುಲಿಗೆಗೈದ ಮಂಗಳಮುಖಿಯನ್ನು ಕದ್ರಿ ಠಾಣೆಯ ಪೊಲೀಸರು ನ 29 ರ ಸೋಮವಾರ ಬಂಧಿಸಿದ್ದಾರೆ. ಮೂಲತಃ ಮೈಸೂರಿನ ಅಗ್ರಹಾರದ ಪ್ರಸ್ತುತ ಬೆಂಗಳೂರಿನ ನಿವಾಸಿ ಅಭಿಷೇಕ್ ಯಾನೆ ಗೊಂಬೆ ಯಾನೆ ಅನಾಮಿಕ (27) ಬಂಧಿತ ಆರೋಪಿಯಾಗಿದ್ದಾನೆ. ಗಣೇಶ್ ಶೆಟ್ಟಿ ಎಂಬವರು ಎರಡು ತಿಂಗಳ ಹಿಂದೆ ತನ್ನ ಬೈಕ್ನಲ್ಲಿ ನಂತೂರು ಪದವಿನಿಂದ ಬಿಎಸ್ಎನ್ಎಲ್ ಎಕ್ಸೇಂಜ್ ಬಳಿಯ ರಸ್ತೆಯಲ್ಲಿ ತೆರಳುತ್ತಿದ್ದಾಗ ಹಠಾತ್
ರಾಜ್ಯ ಮಹಿಳಾ ಕಾಂಗ್ರೆಸ್ ಗೆ ಹೊಸದಾಗಿ 17 ಮಂದಿ ಪದಾಧಿಕಾರಿಗಳನ್ನು ಸೇರ್ಪಡೆಗೊಳಿಸಲಾಗಿದೆ. ಈ ಸೇರ್ಪಡೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂರು ಮಹಿಳೆಯರು ಸ್ಥಾನ ಪಡೆದಿದ್ದಾರೆ. ಚಂದ್ರಕಲಾ ದೀಪಕ್ ರಾವ್ ಮತ್ತು ಮಲ್ಲಿಕಾ ಪಕ್ಕಳ ಹಾಗೂ ಸಾಯಿರಾ ಜುಬೇರ್ ಅವರು ಅವರು ರಾಜ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ.ಪುಷ್ಪ ಅಮರನಾಥ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೊಸ ತಳಿಯ ಒಮಿಕ್ರಾನ್ ಸೋಂಕಿನ ಬಗ್ಗೆ ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ಅದನ್ನು ತಡೆಗಟ್ಟಲು ಶೀಘ್ರದಲ್ಲಿ ಸೂಕ್ತ ಕ್ರಮವನ್ನು ಕೈಗೊಳ್ಳಬೇಕು ಎಂದು ಮಾಜಿ ಸಚಿವ ಶಾಸಕ ಯು.ಟಿ.ಖಾದರ್ ಒತ್ತಾಯಿಸಿದರು. ಅವರು ಮಂಗಳೂರು ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ವೈರಾಣುಗಳು ರೂಪಾಂತರಿಯಾಗಿ ಬದಲಾಗುತ್ತಾ ಇರುತ್ತದೆ. ಅದಕ್ಕೆ ಮುನ್ನೆಚ್ಚರಿಕೆಯಾಗಿ ರಾಜ್ಯ ಸರ್ಕಾರ ಎಲ್ಲಾ ತಯಾರಿಯನ್ನು ಮಾಡಿಕೊಳ್ಳಬೇಕು. ಜನರನ್ನು ಗೊಂದಲ ಸೃಷ್ಠಿಸುವ ಬದಲು
ಮೂಡುಬಿದಿರೆ: ಬೆಳ್ಳಿಹಬ್ಬ ಸಂಭ್ರಮದಲ್ಲಿರುವ ಭಾರತೀಯ ಜೈನ್ ಮಿಲನ್ ಮೂಡುಬಿದಿರೆ ಹಾಗೂ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಜಂಟಿ ಆಶ್ರಯದಲ್ಲಿ ’ಸಂಮಿಲನ್ ‘2021’ಕ್ರೀಡಾಕೂಟವು ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ಕ್ಯಾಂಪಸ್ನಲ್ಲಿ ನಡೆಯಿತು. ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ವೀರಸಾಗರ ಸಭಾಂಗಣದಲ್ಲಿ ಸಂಮಿಲನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜೈನ ಸಮುದಾಯದವರು ಇಂದು ಸುಶಿಕ್ಷಿತರಾಗಿ ಸ್ವಾಭಿಮಾನದ ಬದುಕು ಕಟ್ಟಿಕೊಳ್ಳುತ್ತಿದ್ದಾರೆ. ಶಿಕ್ಷಣ,
ಬೆಂಗಳೂರು, ನ.24: ಮಂಗಳೂರು ಸ್ಮಾರ್ಟ್ ಸಿಟಿ ಎಕ್ಸಿಕ್ಯುಟಿವ್ ಇಂಜಿನಿಯರ್ ಕೆ.ಎಸ್.ಲಿಂಗೇಗೌಡ ಸೇರಿದಂತೆ ರಾಜ್ಯದ 15 ಕಡೆಗಳಲ್ಲಿ ಏಕಕಾಲದಲ್ಲಿ ಭ್ರಷ್ಟ ಅಧಿಕಾರಿಗಳ ಮನೆ ಮತ್ತು ಕಚೇರಿಗಳಿಗೆ ಎಸಿಬಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದು ಕಡತ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆ ಎಕ್ಸಿಕ್ಯೂಟಿವ್ ಎಂಜಿನಿಯರ್ ಕೆ.ಎಸ್ ಲಿಂಗೇಗೌಡ, ಮಂಡ್ಯ ಹೆಚ್.ಎಲ್.ಬಿ.ಸಿ ಎಕ್ಸಿಕ್ಯೂಟಿವ್ ಎಂಜಿನಿಯರ್ ಶ್ರೀನಿವಾಸ್ ಕೆ, ದೊಡ್ಡಬಳ್ಳಾಪುರ

























