Home ಕರಾವಳಿ Archive by category ಮಂಗಳೂರು (Page 269)

ಮಂಗಳೂರಿನ ಶ್ರೀನಿವಾಸ ತಾಂತ್ರಿಕ ಮಹಾವಿದ್ಯಾಲಯ : ವಿಟಿಯು ಪರೀಕ್ಷೆಯಲ್ಲಿ ಶೇ.100ರ ಫಲಿತಾಂಶ

ಮಂಗಳೂರಿನ ಶ್ರೀನಿವಾಸ ತಾಂತ್ರಿಕ ಮಹಾವಿದ್ಯಾಯ ವಿಟಿಯು ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ ಮತ್ತು ನಮ್ಮ ಸಂಸ್ಥೆಯಲ್ಲಿ ಕಲಿತ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಕಂಪೆನಿಗಳಲ್ಲಿ ಅತ್ಯುತ್ತಮ ಉದ್ಯೋಗಾವಕಾಶ ಲಭಿಸಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ. ಶ್ರೀನಿವಾಸ ಮಯ್ಯ ಡಿ. ತಿಳಿಸಿದರು. ಅವರು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ,

ಟೀಮ್ ಬಿ- ಹ್ಯೂಮನ್ ಮಂಗಳೂರು : ಉಚಿತ ಕೋವಿಡ್ ಲಸಿಕಾ ಶಿಬಿರ

ಟೀಮ್ ಬಿ-ಹ್ಯೂಮನ್(ರಿ) ಮಂಗಳೂರು ಇದರ ವತಿಯಿಂದ ಇಂಡಿಯನ್ ರೆಡ್ ಕ್ರಾಸ್ ಸೋಸೈಟಿ ಹಾಗೂ ಟೀಂ ಮೇಕ್-ಎ-ಚೇಂಜ್ ಇದರ ಸಹಭಾಗಿತ್ವದಲ್ಲಿ ಉಚಿತ ಕೋರೋನ ಲಸಿಕಾ ಶಿಬಿರವು ಬಲ್ಮಠದ ಬಿಷಪ್ ಜತ್ತನ ಸಭಾಂಗಣದಲ್ಲಿ ಯಶಸ್ವಿಯಾಗಿ ನೆರವೇರಿತು. ಇದು ಟೀಂ ಬಿ-ಹ್ಯೂಮನ್ ತಂಡವು ಆಯೋಜಿಸಿದ ಆರನೇ ಲಸಿಕಾ ಶಿಬಿರವಾಗಿತ್ತು. ಅತ್ಯಂತ ವ್ಯವಸ್ಥಿತವಾಗಿ ಸಂಘಟಿಸಿದಂತಹ ಈ ಲಸಿಕಾ ಶಿಬಿರದಲ್ಲಿ ಸುಮಾರು 272 ಜನಸಾಮಾನ್ಯರು,ಹೋಟೆಲ್ ಕಾರ್ಮಿಕರು, ಕಟ್ಟಡ ನಿರ್ಮಾಣ ಕಾರ್ಮಿಕರು ಹಾಗೂ ವಿಶೇಷ

ಶ್ರೀ ನವದುರ್ಗಾ ಪ್ರಸಾದ್ ಬಸ್ ಸಂಸ್ಥೆಯ ಸ್ಥಾಪಕ ಬಾಲಕೃಷ್ಣ ರೈ (74) ನಿಧನ

ಕರಾವಳಿ ಜಿಲ್ಲೆಯಲ್ಲಿ ಬಹುಪ್ರಸಿದ್ಧಿ ಪಡೆದಿರುವ ಶ್ರೀ ನವದುರ್ಗಾ ಪ್ರಸಾದ್ ಬಸ್ ಸಂಸ್ಥೆಯ ಸ್ಥಾಪಕ ಕನಕಪ್ಪಾಡಿ ಬಿ . ಬಾಲಕೃಷ್ಣ ರೈ ಕದ್ರಿ ಕಂಬ್ಲ ಅವರು ಇಂದು ನಿಧನರಾದರು . ಬಾಲಕೃಷ್ಣ ರೈ ಅವರು ಕನಕಪ್ಪಾಡಿ ಶ್ರೀ ಮಹಾವಿಷ್ಣು ದೇವಸ್ಥಾನದ ಆಡಳಿತ ಮೊಕ್ತೇಸರರಾಗಿಯೂ‌ ಸೇವೆ ಸಲ್ಲಿಸಿದ್ದರು .ಕೆನರಾ ಬಸ್ ಮಾಲಕರ ಸಂಘದ ಉಪಾಧ್ಯಕ್ಷರಾಗಿಯೂ ಅವರು ಕಾರ್ಯನಿರ್ವಹಿಸಿದ್ದರು . ಮೃತರುಪತ್ನಿ , ಮೂವರು ಹೆಣ್ಣು ಮಕ್ಕಳು ಹಾಗೂ ಬಂಧು ಮಿತ್ರರನ್ನು ಅಗಲಿರುತ್ತಾರೆ . #

ಪಾಲಿಕೆಯ ಘನ ತ್ಯಾಜ್ಯ ನಿರ್ವಹಣೆಯ ಪ್ರಸ್ತಾವನೆಗೆ ಖಂಡನೆ

ಮಂಗಳೂರು ದಕ್ಷಿಣದ ಮಾಜಿ ಶಾಸಕರಾದ ಜೆ. ಆರ್. ಲೋಬೊ, ಪಾಲಿಕೆಯ ಸದಸ್ಯರು ಹಾಗೂ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು ಇಂದು ನಗರದ ಸ್ವಚ್ಛತೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವು ಕಡೆಗಳಲ್ಲಿ ತ್ಯಾಜ್ಯ ನಿರ್ವಹಣೆಯಲ್ಲಿ ಬಹಳಷ್ಟು ಅನುಭವ ಇರುವ ಶ್ರೀ ರಾಮಕೃಷ್ಣ ಮಠದ ಸ್ವಾಮಿ ಜಿತಾಕಮನಂದಜಿ ಹಾಗೂ ಶ್ರೀ ಏಕಗಮ್ಯನಂದ ಸ್ವಾಮೀಜಿ ಯವರನ್ನು ಭೇಟಿ ಮಾಡಿ ಅವರೊಡನೆ ಸಮಾಲೋಚನೆ ನಡೆಸಿದರು. ಮಂಗಳೂರು ಮಹಾನಗರ ಪಾಲಿಕೆಯ ಘನ ತ್ಯಾಜ್ಯ ನಿರ್ವಹಣೆಯ ಬಗ್ಗೆ ಸಮಾಲೋಚನೆ ನಡೆಸಿ

ಆದ್ಯಪಾಡಿ ಪರಿಸರದಲ್ಲಿ ’ಸುರಕ್ಷತಾ ಜಾಗೃತಿ’ ಕಾರ್ಯಕ್ರಮ

ಮಂಗಳೂರು: ವಿಮಾನ ನಿಲ್ದಾಣ ವ್ಯಾಪ್ತಿಯ ಅದ್ಯಪಾಡಿ ಸುತ್ತಮುತ್ತಲಿನ ಪರಿಸರದಲ್ಲಿ ಸಿಐಎಸ್‌ಎಫ್ ಏರ್ ಪೋರ್ಟ್ ಘಟಕದ ವತಿಯಿಂದ, ಬಜ್ಪೆ ಪೊಲೀಸ್ ಠಾಣಾ ಸಹಯೋಗದೊಂದಿಗೆ ’ಸುರಕ್ಷತಾ ಜಾಗೃತಿ’ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಸ್ಥಳೀಯ ನಾಗರಿಕರಲ್ಲಿ ಅನುಮಾನಾಸ್ಪದ ವ್ಯಕ್ತಿ ಅಥವಾ ವಸ್ತು, ಡ್ರೋನ್ ಬಳಕೆ ಕಂಡು ಬಂದಲ್ಲಿ ತಕ್ಷಣವೇ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಯಿತು. ಈ ಸಂದರ್ಭ ಸಿಐಎಸ್‌ಎಫ್ ಡೆಪ್ಯುಟಿ ಕಮಾಂಡೆಂಟ್ ಕೃಷ್ಣ ಪ್ರಕಾಶ್, ಬಜ್ಪೆ

ಇತರರ ಕಷ್ಟವನ್ನು ತನ್ನದೇ ಕಷ್ಟವೆಂದು ಭಾವಿಸಿಕೊಂಡು ಸಹಾಯ ಮಾಡುವ ಗುಣವಿರಬೇಕು:ಶ್ರೀ ಐಕಳ ಹರೀಶ್ ಶೆಟ್ಟಿ

 ಮಂಗಳೂರು :ನೆರೆಮನೆಯವರ ಅಥವಾ ಇತರರ ಕಷ್ಟಗಳನ್ನು ನೋಡಿ  ಏನಾದರೂ ಸಹಾಯ ಮಾಡಲು ಪ್ರಯತ್ನಿಸಬೇಕು. ನೋಡಿಯೂ ನೋಡದಂತೆ ನನಗೇಕೆ ಬೇಕು ಬೇಡದ ಕೆಲಸವೆಂದು ಸುಮ್ಮನಿರಬಾರದು. ಇತರರ ಕಷ್ಟವನ್ನು ತನ್ನದೇ ಕಷ್ಟವೆಂದು ಸ್ವೀಕರಿಸಿ ಸಾಧ್ಯವಾದ ಸಹಾಯವನ್ನು ಮಾಡಲು ಪ್ರಯತ್ನಿಸಬೇಕು.ಅದುವೇ  ಬದುಕಿನ ಸಾರ್ಥಕತೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ    ಐಕಳ ಹರೀಶ್ ಶೆಟ್ಟಿಯವರು  ಹೇಳಿದರು.      ಬಂಟ್ವಾಳ ತಾಲೂಕಿನ ಇರಾ ಗ್ರಾಮದ ಬಾಳೆಪುಣಿ ಸಮೀಪದ ಯರ್ಮಾಜೆ 

ಮಂಗಳೂರಿನ ಜೈಲ್ ರೋಡ್ ಬಳಿ ಮಹಿಳೆಯರಿಗೆ ತಲ್ವಾರ್ ನಿಂದ ಹಲ್ಲೆ

ಮಂಗಳೂರಿನ ಜೈಲ್ ರೋಡ್ ಬಳಿಯ ಇರುವ ಡಯಟ್ ಸಂಸ್ಥೆಯ ಒಳಗೆ ನುಗ್ಗಿದ ದುಷ್ಕರ್ಮಿಯೋರ್ವ ಮೂವರು ಮಹಿಳೆಯರಿಗೆ ತಲ್ವಾರ್ ನಿಂದ ಹಲ್ಲೆ ನಡೆಸಿ ಘಟನೆ ನಡೆದಿದೆ. ಹಲ್ಲೆಗೊಳಗಾದವರನ್ನು ರೀನ, ಗುಣವತಿ, ನಿರ್ಮಲ ಎಂದು ಗುರುತಿಸಲಾಗಿದ್ದು, ಅವರನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆಪೊಲೀಸ್ ಆಯುಕ್ತರಾದ ಎನ್. ಶಶಿಕುಮಾರ್ ಹಾಗೂ ಹಿರಿಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಪೊಲೀಸ್ ಕಮೀಷನರ್ ಎನ್ ಶಶಿಕುಮಾರ್

ದೇಶವನ್ನಾಳುವ ಸರಕಾರದ ನೀತಿಗಳನ್ನು ಹಿಮ್ಮೆಟ್ಟಿಸದೆ ಜನತೆಯ ಬದುಕನ್ನು ರಕ್ಷಿಸಲು ಅಸಾಧ್ಯ – ಮುನೀರ್ ಕಾಟಿಪಳ್ಳ

ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರದ ನೀತಿಗಳಿಂದ ಜ‌ನಸಾಮಾನ್ಯರು ಘನತೆಯಿಂದ ಬದುಕುವ ಹಕ್ಕನ್ನೇ ಕಳೆದುಕೊಳ್ಳುತ್ತಿದ್ದಾರೆ. ಮನಮೋಹನ್ ಸಿಂಗ್ ಸರಕಾರದ ಅವಧಿಯಲ್ಲಿ ಬಿಜೆಪಿ ಪ್ರಬಲವಾಗಿ ವಿರೋಧಿಸಿದ್ದ ಖಾಸಗೀಕರಣ, ವ್ಯಾಪಾರೀಕರಣದ ನೀತಿಗಳನ್ನು ಈಗ ರಭಸವಾಗಿ ಜಾರಿಗೆ ತರುವ ಮೂಲಕ ಶಿಕ್ಷಣ, ಆರೋಗ್ಯ, ಉದ್ಯೋಗ ಜನಸಾಮಾನ್ಯರಿಗೆ ನಿಲುಕದಂತಾಗಿದೆ. ದೇಶದ ಸಂಪತ್ತು ಬಹುರಾಷ್ಟ್ರೀಯ ಕಂಪೆನಿಗಳ ಪಾಲಾಗುತ್ತಿವೆ. ಬಿಜೆಪಿ ಸರಕಾರದ ವಿರುದ್ಧ ರೂಪುಗೊಳ್ಳುತ್ತಿರುವ

ಸಿಎಯಲ್ಲಿ ಪ್ರಥಮ ರ್‍ಯಾಂಕ್ ವಿಜೇತೆ ರುತ್ ಡಿಸಿಲ್ವ ಗೆ ಸಾರ್ವಜನಿಕ ಅಭಿನಂದನೆ

 ಸಿಎ ಪರೀಕ್ಷೆಯಲ್ಲಿ ದೇಶಕ್ಕೆ ಪ್ರಥಮ ರ್‍ಯಾಂಕ್  ಪಡೆದ ಮಂಗಳೂರಿನ ರುತ್ ಕ್ಲೇರ್ ಡಿಸಿಲ್ವಾ ಅವರಿಗೆ V4 ಸ್ಟುಡಿಯೋದಲ್ಲಿ ನಡೆದ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮದಲ್ಲಿ ದ.ಕ.ಜಿಲ್ಲೆಯ ವಿವಿಧ ಸಂಘ ಸಂಸ್ಥೆಯ ವತಿಯಿಂದ ಸನ್ಮಾನ ನೀಡಿ ಗೌರವಿಸಲಾಯಿತು.   ಮಂಗಳೂರಿನ ಯೆಯ್ಯಾಡಿಯಲ್ಲಿರುವ ವಿ4 ನ್ಯೂಸ್ ಸ್ಟುಡಿಯೋದಲ್ಲಿ ಹಮ್ಮಿಕೊಂಡಿದ್ದ ಸಾರ್ವಜನಿಕ ಅಭಿನಂದನಾ ಸಮಾರಂಭದಲ್ಲಿ ಹಲವಾರು ಸಂಘ ಸಂಸ್ಥೆಗಳು, ರಾಜಕೀಯ ಮುಖಂಡರು  ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ರು. 

ವಿದ್ಯುತ್ ದೀಪ, ರಸ್ತೆ ಸಂಪರ್ಕ ಸರಿ ಪಡಿಸಲು ಆಗ್ರಹ

ಕಸ್ಬಾ ಬೆಂಗ್ರೆಯ ಸಾಂಪ್ರದಾಯಿಕ, ನಾಡದೋಣಿಗಳು ತಂಗುವ ತೀರದಲ್ಲಿ ವಿದ್ಯುತ್ ಬೆಳಕಿನ ವ್ಯವಸ್ಥೆ ಇಲ್ಲದೆ, ಸರಿಯಾದ ರಸ್ತೆ ಸಂಪರ್ಕ ಇಲ್ಲದೆ ಮೀನುಗಾರರು ವೃತ್ತಿ ನಿರ್ವಹಿಸಲು ಸಮಸ್ಯೆಗಳು ಉಂಟಾಗಿದ್ದು, ಅದ್ಯತೆಯಿಂದ ವಿದ್ಯುತ್ ಬೆಳಕು, ರಸ್ತೆ ಸಂಪರ್ಕ ಒದಗಿಸುವಂತೆ ಒತ್ತಾಯಿಸಲಾಯಿತು. ನಿಯೋಗದಲ್ಲಿ ಪಲ್ಗುಣಿ‌ ನಾಡದೋಣಿ ಮೀನುಗಾರರ ಸಂಘದ ಗೌರವಾಧ್ಯಕ್ಷ ಮುನೀರ್ ಕಾಟಿಪಳ್ಳ, ಅಧ್ಯಕ್ಷರಾದ ಅಬ್ದುಲ್ ತಯ್ಯೂಬ್,ಸರ್ಫರಾಝ್,ಸಾವಲ್, ಫಹಾಝ್,ಮುದಸ್ಸಿರ್,ಇಮ್ತಿಯಾಝ್,