ಮಂಗಳೂರು ಕ್ಯಾಮ್ ಫಿಲ್ಮ್ ಅರ್ಪಿಸುವ ಪ್ರೆಸ್ಟನ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ತಯಾರಾದ ಹೆನ್ರಿ ಡಿಸಿಲ್ವ ನಿರ್ಮಿಸಿದ ಹ್ಯಾರಿ ಫೆರ್ನಾಂಡಿಸ್ ನಿರ್ದೇಶಿಸಿದ ನಶೀಬಾಚೊ ಖೆಳ್ ಕೊಂಕಣಿ ಚಲನಚಿತ್ರವು ಈಗ ನಸೀಬ್ ಏರೆಗುಂಡ ಏರೆಗಿಜ್ಜಿ ಹೆಸರಿನಲ್ಲಿ ತುಳು ಸಿನಿಮಾ ಆಗಿ ಡಬ್ಬಿಂಗ್ ಆಗಿದೆ. ಈ ತುಳು ಸಿನಿಮಾ ಸೆಪ್ಟಂಬರ್ 8ರಂದು ವಿ4 ಸ್ಟ್ರೀಮ್ ಬಿಡುಗಡೆಗೊಳ್ಳಲಿದೆ.
ದ. ಕ , ಉಡುಪಿ ಜಿಲ್ಲೆಗಳಲ್ಲಿ ಸತತವಾಗಿ ವಾರಾಂತ್ಯ ಲಾಕ್ಡೌನ್ ಮುಂದುವರಿಸುತ್ತಿರುವುದರಿಂದ ಜನ ಸಾಮಾನ್ಯ ರಿಗೂ ಕೆಲ ವರ್ಗದ ವ್ಯಾಪಾರಿಗಳಿಗೂ ತೀವ್ರ ತೊಂದರೆ ಯಾಗಿದ್ದು ಅವೈಜ್ಞಾನಿಕ ಮತ್ತು ತಾರ ತಮ್ಯ ಗಳಿಂದ ಕೂಡಿದ ಈ ನಿರ್ಧಾರವನ್ನು ಪ್ರತಿಭಟಿಸಿ ಅಂಗಡಿ ತೆರೆದು ವ್ಯವಹಾರ ನಡೆಸಲು ಕರಾವಳಿ ಜಿಲ್ಲೆಗಳ ಜವಳಿ, ಪಾದರಕ್ಷೆ, ಫ್ಯಾನ್ಸಿ ಮುಂತಾದ ಅಂಗಡಿಗಳ ಮಾಲೀಕರು ನಿನ್ನೆ ನಡೆದ ಸಂಘದ ವಿಶೇಷ ಮಹಾ ಸಭೆಯಲ್ಲಿ ಒಮ್ಮತದ ನಿರ್ಣಯ ಕೈಗೊಂಡರು. ಪ್ರತೀ ಅಂಗಡಿಯವರು
ಕೇಂದ್ರ ಸರ್ಕಾರದ ಬೆಲೆ ಏರಿಕೆಯಿಂದ ಜನತೆ ತತ್ತರಿಸಿ ಹೋಗಿದ್ದಾರೆ. ಮುಂದಿನ ದಿನಗಳಲ್ಲಿ ಕೊರೋನಾದಿಂದ ಮೃತಪಡಲ್ಲ, ಬಡತನದಿಂದ ಮೃತಪಡುವ ಸಾಧ್ಯತೆ ಇದೆ ಎಂದು ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮಮತಾ ಗಟ್ಟಿ ಹೇಳಿದ್ರು. ಈ ಕುರಿತು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಚ್ಚೇದಿನ್ ತರುವುದಾಗಿ ಹೇಳಿ ಕಾಂಗ್ರೆಸ್ನ ದೋಷಗಳನ್ನು ಹೇಳಿ ಭಾವನಾತ್ಮಕವಾಗಿ ಜನರನ್ನು ಸೆಳೆದು ಮತಗಳಿಸಿ ಉನ್ನತ ಅಧಿಕಾರಕ್ಕೇರಿದ್ದರೂ ಜನರ
ಕಾರ್ಮಿಕ ಇಲಾಖೆಯ ಕಲ್ಯಾಣ ನಿಧಿಯಡಿ ರಾಜ್ಯದಲ್ಲಿ 8೦೦೦ ಕೋಟಿ ರೂ. ಸಂಗ್ರಹವಿದೆ. ಅದರಡಿ ಕಾರ್ಮಿಕರಿಗೆ ಆಹಾರ ಪೊಟ್ಟಣ ವಿತರಿಸಲಾಗುತ್ತಿದೆ. ಬಂಟ್ವಾಳದ ನರಿಕೊಂಬು ಗ್ರಾಮದಲ್ಲಿ ವಿತರಣೆಗೆ ಬಂದ ಆಹಾರ ಪೊಟ್ಟಣ ಅಲ್ಲಿನ ಕಿರಾಣಿ ಅಗಂಡಿಯೊಂದರಲ್ಲಿ ಮಾರಾಟಕ್ಕೆ ಇಡಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಆರೋಪಿಸಿದ್ದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಲವು ಕಡೆಗಳಲ್ಲಿ ಇಂತಹ ಆಹಾರ ಪೊಟ್ಟಣಗಳನ್ನು ಬಿಜೆಪಿ ಪಕ್ಷದ ಮನೆಗಳಲ್ಲಿ
ಬಿಜೆಪಿಯ ಜನಪ್ರತಿನಿಧಿಗಳು ಸರಕಾರದಿಂದ ಜನಸಾಮಾನ್ಯರಿಗೆ ಸಿಗಬೇಕಾದ ಹಕ್ಕನ್ನೂ ರಾಜಕೀಯಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಕೆಲವು ಕಾಂಗ್ರೆಸ್ ಕಾರ್ಪೊರೇಟರ್ಗಳು, ಗ್ರಾ.ಪಂ. ಸದಸ್ಯರಿರುವ ಪ್ರದೇಶಗಳಲ್ಲಿ ಲಸಿಕೆ ಶಿಬಿರ ಆಯೋಜನೆ ಮಾಡಿ ಬಳಿಕ ಅದನ್ನು ರದ್ದು, ತಾರತಮ್ಯ ಮಾಡಲಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಆರೋಪ ಮಾಡಿದ್ದಾರೆ. ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಸಿಕೆ ಹಂಚಿಕೆ,
ಕೋವಿಡ್ -19 ಸೋಂಕಿನಿಂದ ಗುಣಮುಖರಾದ ಬಳಿಕ ಕಾಣಿಸಿಕೊಳ್ಳುವ ಸಮಸ್ಯೆಗಳಿಗೆ ಚಿಕಿತ್ಸೆ ನೀಡಲು ಸೆ.6 ರಂದು ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಪೋಸ್ಟ್ ಕೋವಿಡ್ ಫಿಸಿಯೋಥೆರಪಿ ಕ್ಯಾಂಪ್ ನಡೆಯಲಿದೆ. ಕೋವಿಡ್ -19 ಸೋಂಕು ತಗುಲಿ ಚೇತರಿಸಿದವರಲ್ಲಿ ಶೇಕಡಾ 87% ವ್ಯಕ್ತಿಗಳಲ್ಲಿ ಆಯಾಸ, ಉಸಿರಾಟದ ತೊಂದರೆ, ಕೀಲು ನೋವು, ಎದೆ ನೋವು ಮತ್ತು ಜೀವನದ ಗುಣಮಟ್ಟವನ್ನು ಕಡಿಮೆ ಮಾಡುವುದು ಸೇರಿದಂತೆ ಉಳಿದಿರುವ ಲಕ್ಷಣಗಳನ್ನು ಹೊಂದಿದೆ. ಇದರಿಂದ ಸ್ನಾಯು ಕಾರ್ಯದಲ್ಲಿ ಸಮಸ್ಯೆ,
ಕೊಟ್ಟಾರ ಶ್ರೀ ವಿದ್ಯಾ ಸರಸ್ವತಿ ಕ್ಷೇತ್ರದಲ್ಲಿ ದಿನಾಂಕ 30-08-2021ರ ಶ್ರೀಕೃಷ್ಣ ಜನ್ಮಾಷ್ಟಮಿಯಂದು ಬೆಳಿಗ್ಗೆ ಪಂಚಾಮೃತ ಅಭಿಷೇಕ, ಶ್ರೀಕೃಷ್ಣ ಅಷ್ಟೋತ್ತರ ಶತನಾಮಾವಳಿ, ನೆರವೇರಿ ಮಧ್ಯಾಹ್ನ 12-30 ಕ್ಕೆ ಅಲಂಕಾರ ಪೂಜೆ ರಾತ್ರಿ 07-30 ಕ್ಕೆ ಮಹಾಪೂಜೆ ನೆರವೇರಿ ಮಧ್ಯರಾತ್ರಿ 12: 30ರ ಚಂದ್ರೋದಯದ ಶ್ರೀಕೃಷ್ಣ ಜನ್ಮ ಸಮಯದಲ್ಲಿ 21 ಬಗೆಯ ಮಿಠಾಯಿ 21 ಬಗೆಯ ಹಣ್ಣು ಹಂಪಲು ಶ್ರೀಕೃಷ್ಣ ದೇವರಿಗೆ ಸಮರ್ಪಣೆ ಮಾಡಲಾಯಿತು. ಮಾರನೇ ದಿವಸ ಮೊಸರುಕುಡಿಕೆ ಯಂದು ಸಾಯಂಕಾಲ
CPIM ಪಕ್ಷದ ಹಿರಿಯ ಸದಸ್ಯರೂ, ಬಜಾಲ್ ಜಲ್ಲಿಗುಡ್ಡ ಪ್ರದೇಶದ ನಿವಾಸಿಗಳಾದ ಮೋನಪ್ಪ ಬಂಗೇರರವರು(78 ವರ್ಷ) ದೀರ್ಘಕಾಲದ ಅಸೌಖ್ಯದಿಂದಾಗಿ ಬಜಾಲ್ ಜಲ್ಲಿಗುಡ್ಡೆಯಲ್ಲಿರುವ ತಮ್ಮ ಸ್ವಗ್ರಹದಲ್ಲಿ ನಿಧನ ಹೊಂದಿದರು. ಎಳೆಯ ಪ್ರಾಯದಲ್ಲೇ ಎಡಪಂಥೀಯ ವಿಚಾರಧಾರೆಗೆ ಆಕರ್ಷಿತರಾದ ಮೋನಪ್ಪ ಬಂಗೇರರವರು ತಮ್ಮ ಯೌವನದಲ್ಲಿ ಹಂಚು ಕಾರ್ಮಿಕರಾಗಿ ಹಂಚು ಕಾರ್ಮಿಕರ ಅನೇಕ ಹೋರಾಟಗಳಲ್ಲಿ ಸಕ್ರೀಯ ಪಾತ್ರ ವಹಿಸಿದ್ದರು. ಸ್ಥಳೀಯ ಸಂಘ ಸಂಸ್ಥೆಗಳಾದ ಪಕ್ಕಲಡ್ಕ ಯುವಕ ಮಂಡಲ ಹಾಗೂ ಜನತಾ
ಪ್ರತಿಯೊಂದು ವಿಶೇಷ ಹಬ್ಬದ ಸಂದರ್ಭದಲ್ಲಿ ಆಯಾ ಹಬ್ಬದ ಮಹತ್ವಕ್ಕೆ ಸಂಬಂಧಿಸಿದ ಫೆಸ್ಟಿವ್ ವೇರ್ ಮೂಲಕ ಫ್ಯಾಶನ್ ಪ್ರಿಯರನ್ನು ಆಕರ್ಷಿಸುತ್ತಿದೆ ಬೆಂಗಳೂರಿನ ಜಿಯಾನಿ ಡಿಸೈನರ್ಸ್ ಸಂಸ್ಥೆ.ಈ ಬಾರಿಯ ಶ್ರೀ ಕೃಷ್ಣಾಷ್ಟಮಿಗೆ ಯಶೋಧೆ ಕೃಷ್ಣ ಪರಿಕಲ್ಪನೆಯ ಧಿರಿಸಿನ ಫೋಟೋ ಶೂಟ್ ಮೂಲಕ ಜಿಯಾನಿ ಡಿಸೈನರ್ ಸಂಸ್ಥೆ ಫ್ಯಾಷನ್ ಪ್ರಿಯರ ಗಮನ ಸೆಳೆಯಿತು . ಜನಪ್ರಿಯ ಮೊಡೇಲ್ ಪ್ರಿಯಾ ಕುಮಾರ್ ಅವರು ಯಶೋಧೆಯಾಗಿ ಆಕರ್ಷಕ ಫೆಸ್ಟಿವ್ ವೇರ್ ನಲ್ಲಿ ಮಿಂಚಿದರು. ಯಶೋಧೆ ಪುಟ್ಟ
ಮಂಗಳೂರಿನ ಆಕೃತಿ ಆಶಯ ಪಬ್ಲಿಕೇಶನ್ಸ್ ಪ್ರಕಟಿಸಿರುವ ಲೇಖನಗಳ ಸಂಕಲನ ‘ಬದುಕು ಭಾರವಲ್ಲ’ ಕೃತಿಯನ್ನು ನಗರದ ಪ್ರೆಸ್ಕ್ಲಬ್ನಲ್ಲಿ ಇಂದು ಜಾನಪದ ವಿದ್ವಾಂಸ ಹಾಗೂ ಕರ್ನಾಟಕ ಜಾನಪದ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಡಾ.ಕೆ.ಚಿನ್ನಪ್ಪ ಗೌಡ ಬಿಡುಗಡೆಗೊಳಿಸಿದರು. ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಹರೀಶ್ ಕುಮಾರ್ ಕುಡ್ತಡ್ಕ ಅವರ ಚೊಚ್ಚಲ ಸಾಹಿತ್ಯ ಕೃತಿ ಇದಾಗಿದ್ದು, ಬದುಕು ಬಹಳ ತೂಕದ್ದಾಗಿದ್ದು,


















