ದೇಶೆದೆಲ್ಲೆಡೆ ಚೌತಿ ಹಬ್ಬದ ವಿಗ್ರಹ ತಯಾರಿ ಈಗಾಗಲೇ ಆರಂಭಗೊಂಡಿದೆ. ಈ ನಡುವೆ ಗಣೇಶನ ಮೂರ್ತಿಗೆ ಫೈನಲ್ ಟಚ್ ಕೊಡಲಾಗುತ್ತಿದೆ. ಇನ್ನು ಮಂಗಳೂರಿನಲ್ಲೂ ಗಣೇಶ ಹಬ್ಬದ ಪ್ರಯುಕ್ತ ಪೂರ್ವತಯಾರಿ ಜೋರಾಗಿದ್ದು, ಕಳೆದ 92 ವರ್ಷದಿಂದ ಪಾರಂಪರಿಕವಾಗಿ ಗಣೇಶ ವಿಗ್ರಹ ತಯಾರಿ ಮಾಡುತ್ತಿರೋ ಸಹೋದರರ ಕೆಲಸ ಎಲ್ಲರ ಗಮನಸೆಳೆದಿದೆ. ಹಾಗಾದ್ರೆ ಇದು ಎಲ್ಲಿ ಅಂತೀರಾ ಇಲ್ಲಿದೆ.
ತುಳುನಾಡಿನಲ್ಲಿ ಆಷಾಢ ಮಾಸದಲ್ಲಿ ಆಟಿ ಕಳೆಂಜ ವೇಷ ಹಾಕುವ ಸಂಪ್ರದಾಯ ಈಗಲೂ ರೂಢಿಯಲ್ಲಿದೆ. ಆಟಿ ಕಳೆಂಜದ ವೇಷ ಹಾಕಿ ಮನೆ ಮನೆಗೆ ಹೋಗುವುದರಿಂದ ಮನೆಯನ್ನು ಸೇರಿಕೊಂಡಿರುವ ಮಾರಿ ಓಡಿ ಹೋಗುತ್ತದೆ ಎಂಬ ನಂಬಿಕೆ ಇದೆ. ಇಂತಹದೊಂದು ಸಾಂಪ್ರದಾಯಿಕ ಪದ್ಧತಿ ಮಂಗಳೂರಿನ ಸುಂಕದಕಟ್ಟೆಯ ಪರಿಸರದಲ್ಲಿ ರಾಮಸೇನಾ ನೇತೃತ್ವದಲ್ಲಿ ನಡೆಯಿತು. ತುಳುನಾಡು ಹಲವಾರು ಜನಪದ ಆಚರಣೆಗಳಿಗೆ ಪ್ರಸಿದ್ಧಿಯನ್ನು ಪಡೆದಿದೆ. ಅಂತಹ ಆಚರಣೆಗಳಲ್ಲಿ ಆಟಿ ಕಳೆಂಜವೂ ಒಂದು. ಆಷಾಢ ಮಾಸದಲ್ಲಿ
ಜಿಲ್ಲೆಯಾದ್ಯಂತ ಆಗಸ್ಟ್ 14 ರಂದು ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದ್ದು, ಕಕ್ಷಿದಾರರಿಗೆ ರಾಜಿ ಮೂಲಕ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಇದೊಂದು ಸುವರ್ಣಾವಕಾಶವಾಗಿರುತ್ತದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪೃಥ್ವಿರಾಜ್ ವರ್ಣೇಕರ್ ತಿಳಿಸಿದರು. ಅವರು ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದರು. ಲೋಕ ಅದಾಲತ್ನಲ್ಲಿ ರಾಜಿ ಮೂಲಕ ಪರಿಹರಿಸಲಾದ ಪ್ರಕರಣಗಳಲ್ಲಿ ಮೇಲ್ಮನವಿಗೆ
ಮಂಗಳೂರು: ಇಲ್ಲಿನ ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿ ಬಾಕಿ ಉಳಿದಿರುವ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಆಗಸ್ಟ್ 11 ರಿಂದ ಮುಂದುವರಿಸುವಂತೆ ವಿಶ್ವವಿದ್ಯಾಲಯದ ಕುಲಸಚಿವರಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಸೂಚಿಸಿದರು. ಅವರು ಆ.5ರ ಗುರುವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ 2021ರ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳ ಮುಂದುವರಿಕೆ ಸಂಬಂಧ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ
Srinivas University College of Engineering and Technology has organized international conference on Emerging trends in Nano science and Nanotechnology on 06th and 07th of August 2021. Dr Seeram Ramakrishna – FREng Director, National University Singapore. He is the top most scientists in the field of Nanotechnology and he has published more 1000 research papers in […]
ಶ್ರೀನಿವಾಸ್ ವಿಶ್ವವಿದ್ಯಾಲಯದ ಕಾಲೇಜ್ ಆಫ್ ಎಂಜಿನಿಯರಿಂಗ್ಆಂಡ್ ಟೆಕ್ನಾಲಜಿಯು ನ್ಯಾನೋ ವಿಜ್ಞಾನ ಮತ್ತು ನ್ಯಾನೋ ತಂತ್ರಜ್ಞಾನ ಎಂಬ ವಿಷಯದ ಕುರಿತು ಆಗಸ್ಟ್ 6 ಮತ್ತು 7ರಂದು ಅಂತರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಿದೆ.ಸಿಂಗಾಪುರದನ್ಯಾಶನಲ್ ಯೂನಿವರ್ಸಿಟಿಯ ಫ್ರೆಂಗ್ ನಿರ್ದೇಶಕ ಡಾ ಸೀರಾಮ್ ರಾಮಕೃಷ್ಣ ಹಾಗೂ ಕೇರಳದ ಮಹಾತ್ಮಾಗಾಂಧಿ ವಿಶ್ವವಿದ್ಯಾನಿಲಯದ ಕುಲಪತಿ ಡಾ. ಸಾಬು ಥಾಮಸ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು. ಶ್ರೀನಿವಾಸ್ ವಿವಿಯ
ವಿಶ್ವ ಸ್ತನ್ಯ ಸಪ್ತಾಹ ಆಚರಣೆಯ ಪ್ರಯುಕ್ತ ಮಂಗಳೂರಿನ ಎಸ್.ಸಿ.ಎಸ್. ಸಮೂಹ ಸಂಸ್ಥೆಗಳ ಅಂಗವಾದ ಕರ್ನಾಟಕ ಆಯುರ್ವೇದ ಮೆಡಿಕಲ್ ಕಾಲೇಜಿನ ಕೌಮಾರಭೃತ್ಯ ವಿಭಾಗದಿಂದ ವೆಬಿನಾರ್ನ್ನು ಆಯೊಜಿಸಲಾಗಿತ್ತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಯೆನೆಪೊಯ ಆಯುರ್ವೇದ ಮೆಡಿಕಲ್ ಕಾಲೇಜು ಆಸ್ಪತ್ರೆಯ ಮುಖ್ಯ ಅಧೀಕ್ಷಕರು ಹಾಗೂ ಕೌಮಾರಭೃತ್ಯ ವಿಭಾಗದ ಮುಖ್ಯಸ್ಥರಾದ ಡಾ|| ಲಕ್ಷ್ಮೀಶ ಉಪಾಧ್ಯರು ಮಾತನಾಡಿ “ಮಾತುರೇವ ಪಿಬೇತ್ ಸ್ತನ್ಯಂ” (ಅಮ್ಮನ ಹಾಲನ್ನೆ ಮಗುವಿಗೆ
ಮಂಗಳೂರು: ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತ ಕಾಲಕಾಲಕ್ಕೆ ಎಲ್ಲಾ ಅವಶ್ಯಕ ಕ್ರಮಗಳನ್ನು ಕೈಗೊಳ್ಳುತ್ತಿದೆ. ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ನಿಬರ್ಂಧಗಳನ್ನು ವಿಧಿಸಿದ ನಂತರವೂ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಏರಿಕೆ ಆಗುತ್ತಿದೆ. ನೆರೆಯ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗಿದ್ದು, ನೆರೆಯ ರಾಜ್ಯ / ಜಿಲ್ಲೆಗಳಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಯಾಣಿಕರ
ಮಂಗಳೂರು: ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ನಿಯಂತ್ರಿಸಲು ಸಂಬಂಧಿಸಿದ ಅಧಿಕಾರಿಗಳು, ಸಿಬ್ಬಂದಿ ಹಾಗೂ ಜನಪ್ರತಿನಿಧಿಗಳು ಅಗತ್ಯ ಕ್ರಮಗಳನ್ನು ವಹಿಸುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ. ಕೆ.ವಿ ಅವರು ತಿಳಿಸಿದರು.ಕೋವಿಡ್ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಅವರು ಆಗಸ್ಟ್ 04ರ ಬುಧವಾರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಜಿಲ್ಲೆಯ ಗ್ರಾಮ ಪಂಚಾಯತ್ಗಳ ಅಧ್ಯಕ್ಷರು, ಉಪಾಧ್ಯಕ್ಷರು, ತಾಲೂಕು ಆರೋಗ್ಯಾಧಿಕಾರಿಗಳು, ಪಂಚಾಯತ್
ಉಳ್ಳಾಲದ ಮಾಜಿ ಶಾಸಕ ಬಿ.ಎಂ. ಇದಿನಬ್ಬ ಅವರ ಪುತ್ರನ ಮನೆಗೆ ಇಂದು ನಸುಕಿನಲ್ಲಿ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಬೆಳ್ಳಂಬೆಳಗ್ಗೆ ಬೆಂಗಳೂರಿನಿಂದ ಆಗಮಿಸಿದ ಅಧಿಕಾರಿಗಳು ಮನೆಗೆ ಬಂದು ತನಿಖೆ ಆರಂಭಿಸಿದ್ದಾರೆ. ನಾಲ್ಕು ಕಾರುಗಳಲ್ಲಿ 25 ಮಂದಿಯಿದ್ದ ತಂಡ ಉಳ್ಳಾಲದ ಮಾಸ್ತಿಕಟ್ಟೆಗೆ ಆಗಮಿಸಿದೆ. ಎನ್ಐಎ ಜೊತೆಗೆ ಮಂಗಳೂರಿನ ಸ್ಥಳೀಯ ಪೊಲೀಸರು ಕೂಡ ಭದ್ರತೆ ಒದಗಿಸಿದ್ದಾರೆ. ಹತ್ತು ವರ್ಷಗಳ ಹಿಂದೆ ಇದಿನಬ್ಬ ಅವರ ಮೊಮ್ಮಗಳು ಕೇರಳದಲ್ಲಿ ನಾಪತ್ತೆಯಾಗಿದ್ದು


















