Home ಕರಾವಳಿ Archive by category ಮಂಗಳೂರು (Page 286)

ಖಾಸಗಿ ಬಸ್ಸುಗಳ ಪ್ರಯಾಣ ದರ ವಿಪರೀತ ಏರಿಕೆಯನ್ನು ಖಂಡಿಸಿ ಜಿಲ್ಲಾಡಳಿತದ ಏಕಪಕ್ಷೀಯ ನಿರ್ಧಾರವನ್ನು ವಿರೋಧಿಸಿ ಐಕ್ಯ ಹೋರಾಟಕ್ಕೆ ನಿರ್ಧಾರ

ಖಾಸಗಿ ಬಸ್ಸುಗಳ ಪ್ರಯಾಣ ದರದಲ್ಲಿ ವಿಪರೀತ ಏರಿಕೆಯನ್ನು ಹಾಗೂ ದ.ಕ. ಜಿಲ್ಲಾಡಳಿತದ ಏಕಪಕ್ಷೀಯ ನಿರ್ಧಾರವನ್ನು ಕಾಂಗ್ರೆಸ್, ಸಿಪಿಐ(ಎಂ), ಸಿಪಿಐ, ಜಾತ್ಯಾತೀತ ಜನತಾದಳ ಸೇರಿದಂತೆ ವಿದ್ಯಾರ್ಥಿ ಯುವಜನ ಮಹಿಳಾ ದಲಿತ ಸಂಘಟನೆಗಳ ಒಕ್ಕೂಟವು ಪ್ರಬಲವಾಗಿ ಖಂಡಿಸಿದ್ದು, ಸದ್ಯಕ್ಕೆ ದರ ಏರಿಕೆಯನ್ನು ತಡೆಹಿಡಿದು ಕೂಡಲೇ ಸಾರಿಗೆ ಪ್ರಾಧಿಕಾರದ ಸಭೆಯನ್ನು ಕರೆಯಬೇಕೆಂದು

ಮಲಬಾರ್ ಗೋಲ್ಡ್ & ಡೈಮಂಡ್ಸ್:9ನೇ ಆವೃತ್ತಿಯ ಬ್ರೈಡ್ಸ್ ಆಫ್ ಇಂಡಿಯಾ ಅಭಿಯಾನಕ್ಕೆ ಚಾಲನೆ

ಜಗತ್ತಿನ ಅತಿದೊಡ್ಡ ಚಿನ್ನ ಮತ್ತು ವಜ್ರಾಭರಣಗಳ ರಿಟೇಲ್ ಚೈನ್ ಮಾರಾಟದ ಸಂಸ್ಥೆಗಳಲ್ಲಿ ಒಂದಾಗಿರುವ ಮಲಬಾರ್ ಗೋಲ್ಡ್ & ಡೈಮಂಡ್ಸ್ ತನ್ನ 9ನೇ ಆವೃತ್ತಿಯ ಬ್ರೈಡ್ಸ್ ಆಫ್ ಇಂಡಿಯಾ ಅಭಿಯಾನಕ್ಕೆ ಚಾಲನೆ ನೀಡಿದೆ. ಈ ಬಾರಿ ವಿಶೇಷ ವಿವಾಹ ಗೀತೆಯಾಗಿ #MakeWayForTheBride  ಅನ್ನು ಪ್ರಸ್ತುತಪಡಿಸಿದ್ದು, ಆಧುನಿಕ ದಿನಮಾನಗಳ ಭಾರತೀಯ ವಿವಾಹ ಸಮಾರಂಭಗಳ ಹೆಗ್ಗುರುತಾಗಿರುವ ವಧುವಿನ ಅದ್ಧೂರಿ ಪ್ರವೇಶವನ್ನು ಚಿತ್ರಿಸಿದೆ. ಕಲಾತ್ಮಕವಾಗಿ ಚಿತ್ರೀಸಲಾದ 3 ನಿಮಿಷಗಳ ಈ

ದಸರಾವರೆಗೆ ಸಾರ್ವಜನಿಕ ಸೇರುವಿಕೆಗೆ ಅವಕಾಶವಿಲ್ಲ: ಜಿಲ್ಲಾಧಿಕಾರಿ ಡಾ. ರಾಜೇಂದ್ರಕೆ.ವಿ

ಮಂಗಳೂರು ಕೋವಿಡ್ 3ನೆ ಅಲೆಯ ಸಾಧ್ಯತೆಯ ಹಿನ್ನೆಲೆಯಲ್ಲಿ ಈಗಾಗಲೇ ಜಿಲ್ಲೆಯಲ್ಲಿ ಮುಂಬರುವ ದಸರಾ ಹಬ್ಬದವರೆಗೆ ಸಾರ್ವಜನಿಕರ ಸಾಮೂಹಿಕ ಭಾಗವಹಿಸುವಿಕೆಯೊಂದಿಗೆ ಹಬ್ಬ ಹರಿದಿನಗಳ ಆಚರಣೆಗೆ ಅವಕಾಶವಿರುವುದಿಲ್ಲ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಹೇಳಿದ್ದಾರೆ. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪ್ರೆಸ್‍ಕ್ಲಬ್‍ನಲ್ಲಿ ಆಯೋಜಿಸಲಾದ ಸಂವಾದ ಕಾರ್ಯಕ್ರಮದಲ್ಲಿ ಅವರು ಕೋವಿಡ್ 3ನೆ ಅಲೆಗೆ ಸಂಬಂಧಿಸಿ ದ.ಕ. ಜಿಲ್ಲಾಡಳಿತ ಕೈಗೊಂಡಿರುವ

ಹಳೆಯಂಗಡಿಯ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್‌ನಿಂದ ಆಟಿದ ನೆಂಪು ಕಾರ್ಯಕ್ರಮ

ಮಂಗಳೂರು :ಆಟಿ ತಿಂಗಳ ತಿಂಡಿ ತಿನಿಸುಗಳು ಆಹಾರ ಕ್ರಮಗಳು ತನ್ನದೇ ಆದ ವೈಶಿಷ್ಟ್ಯಗಳನ್ನು ಹೊಂದಿದೆ. ಈ ಸಮಯದಲ್ಲಿ ಪ್ರಕೃತಿ ದತ್ತವಾಗಿ ಸಿಗುವ ಆಹಾರಗಳು ಜೌಷಧಿಯ ಗುಣಗಳನ್ನು ಹೊಂದಿದೆ. ಅಮಾಸ್ಯೆ ದಿನದ ಹಾಳೆ ಮರದ ಕೆತ್ತೆ ಅತ್ಯಧಿಕ ರೋಗ ನಿರೋಧಕ ಶಕ್ತಿಯಿಂದ ಕೂಡಿದೆ.ಇದರ ಕಷಾಯ ಸೇವಿಸಿದರೆ ರೋಗ ರುಜಿನಗಳು ದೂರವಾಗುವುದು ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಂಗಳೂರು  ಇದರ ಸದಸ್ಯ ನಾಗೇಶ್ ಕುಲಾಲ್  ಅವರು ಅಭಿಪ್ರಾಯ ಪಟ್ಟರು. ಆ.1 ರಂದು ಶ್ರೀ ಸುಬ್ರಹ್ಮಣ್ಯ

ಖಾಸಗಿ ಬಸ್ ಪ್ರಯಾಣ ದರ ಏರಿಕೆ ತಡೆ ಹಿಡಿಯಿರಿ: ಜಾತ್ಯಾತೀತ ಮತ್ತು ಸಮಾನ ಮನಸ್ಕ ಸಂಘಟನೆಗಳಿಂದ ಆಗ್ರಹ

ಖಾಸಗೀ ಬಸ್ ಪ್ರಯಾಣ ದರದ ವಿಪರೀತ ಏರಿಕೆಯನ್ನು ಖಂಡಿಸಿ, ದ.ಕ.ಜಿಲ್ಲಾಡಳಿತದ ಏಕಪಕ್ಷೀಯ ನಿರ್ಧಾರವನ್ನು ವಿರೋಧಿಸಿ, ದಕ.ಜಿಲ್ಲೆಯ ಜಾತ್ಯಾತೀತ ಪಕ್ಷಗಳ ಹಾಗೂ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟದ ನೇತ್ರತ್ವದಲ್ಲಿ ದ.ಕ.ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಮನವಿಯನ್ನು ಅರ್ಪಿಸಲಾಯಿತು. ಸಾರಿಗೆ ಪ್ರಾಧಿಕಾರದ ಸಭೆಯನ್ನು ಕರೆಯದೆ ಏಕಾಏಕಿಯಾಗಿ ಬಸ್ ಪ್ರಯಾಣ ದರವನ್ನು ಏರಿಸಿದ್ದು ಸರ್ವಥಾ ಸರಿಯಲ್ಲ. ಕೊರೋನಾ ಸಂಕಷ್ಟದ ಕಾಲಘಟ್ಟದಲ್ಲಿ ಜಿಲ್ಲೆಯ ಲಕ್ಷಾಂತರ ಜನತೆ

ಹಿದಾಯ ಫೌಂಡೇಶನ್ ಗೆ ರಾಜೀನಾಮೆ ನೀಡಿದ ಟೀಂ ಬಿ-ಹ್ಯೂಮನ್ ಸಂಸ್ಥಾಪಕ

ಮಂಗಳೂರಿನ ಖ್ಯಾತ ಸಮಾಜ ಸೇವಾ ಸಂಸ್ಥೆಯಾದ ಟೀಂ ಬಿ-ಹ್ಯೂಮನ್ ಇದರ ಸಂಸ್ಥಾಪಕರಾದ ಆಸಿಫ್ ಡೀಲ್ಸ್ ರವರು ಹಿದಾಯ ಫೌಂಡೇಶನ್ ನ ಎಲ್ಲ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ. ಕಳೆದ 13 ವರ್ಷಗಳಿಂದ ಸಕ್ರಿಯವಾಗಿ ಹಿದಾಯ ಫೌಂಡೇಶನ್ ಸದಸ್ಯರಾಗಿದ್ದು ಪ್ರಸ್ತುತ ವೈಸ್ ಚೇರ್ಮನ್ ಹಾಗೂ ಟ್ರಸ್ಟಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇಷ್ಟು ವರ್ಷಗಳಿಂದ ಯಾವುದೇ ಪೂರ್ವಾಗ್ರಹವಿಲ್ಲದೆ ಎರಡೂ ಸಂಸ್ಥೆಗಳಲ್ಲಿ ಸಮಾನವಾಗಿ ತನ್ನನ್ನು ತಾನು ತೊಡಗಿಸಿಕೊಂಡು ಸೇವೆಗೈಯುತ್ತಿದ್ದುದು

ಸೂಪರ್ ಹಿಟ್ಸ್ 93.5 ರೆಡ್ ಎಫ್.ಎಂ : “ನಾನ್ ಸ್ಟಾಪ್ 8 ಹಾಡುಗಳ ಸರಮಾಲೆ”

 ಭಾರತದಲ್ಲಿ ಅತಿ ಹೆಚ್ಚು ಅವಾರ್ಡ್ ಗಳನ್ನು ಪಡೆದಿರುವ ಅತೀ ದೊಡ್ಡ ರೇಡಿಯೋ ನೆಟ್ವರ್ಕ್ ,93.5 ರೆಡ್ ಎಫ್ ಎಂ . ಮೈಸೂರು ಮಂಗಳೂರು, ಹುಬ್ಬಳ್ಳಿ-ಧಾರವಾಡ, ಹಾಗೂ ಕಲಬುರ್ಗಿ ನಗರಗಳಲ್ಲಿ ಪ್ರಸ್ತುತಪಡಿಸುತ್ತಿದೆ “ನಾನ್ ಸ್ಟಾಪ್ 8 ಹಾಡುಗಳ ಸರಮಾಲೆ”. ಕೇಳುಗರಿಗೆ ಅತಿ ಹೆಚ್ಚು sಸೂಪರ್ ಹಿಟ್ ಹಾಡುಗಳನ್ನು ದಿನ ಪೂರ್ತಿ ಪ್ರಸಾರ ಮಾಡುವ ಸಲುವಾಗಿ ಈ ವಿಭಿನ್ನ ಪ್ರಯೋಗಕ್ಕೆ ಮುಂದಾಗಿದೆ. ನಾನ್ ಸ್ಟಾಪ್ 8 ಹಾಡುಗಳನ್ನು (8 ಹಾಡುಗಳ ಸರಮಾಲೆಯಾಗಿ )

ಉಭಯ ಜಿಲ್ಲೆಗೆ ಸಿಎಂ ಬೊಮ್ಮಾಯಿ ಪ್ರವಾಸ

ಮಂಗಳೂರು: ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ಬಳಿಕ ಪ್ರಥಮ ಬಾರಿಗೆ ಕರಾವಳಿ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಆಗಸ್ಟ್ 12 ಮತ್ತು 13ರಂದು ಅವರು ದ.ಕ, ಉಡುಪಿ ಜಿಲ್ಲೆಗಳಲ್ಲಿ ಶಾಸಕರು, ಸಂಸದರು,ಅಧಿಕಾರಿಗಳೊಂದಿಗೆ ಕೋವಿಡ್ ನಿಯಂತ್ರಣ ಕುರಿತು ಪ್ರಗತಿ ಪರಿಶೀಲನೆ ಸಭೆಗಳನ್ನು ನಡೆಸಲಿದ್ದಾರೆ. ಸಿಎಂ ಗುರುವಾರ ಬೆಳಗ್ಗೆ 10.50ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ, 11.30ಕ್ಕೆ ದ.ಕ. ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ

“ಭಕ್ತಿಕಾವ್ಯವು ಸಾಮಾಜಿಕ ಚೇತನದ ಸ್ಪೂರ್ತಿ” ಡಾ.ಮಂಜುನಾಥ ಅಂಬಿಗ

ಶ್ರೀ ಧರ್ಮಸ್ಥಳ ಮಂಜುನಾಥೇಶ್ಡರ ಮಹಾವಿದ್ಯಾಲಯದ ಹಿಂದಿ ವಿಭಾಗ ಆಯೋಜಿಸಿದ್ದ ಅತಿಥಿ ಉಪನ್ಯಾಸ ಕಾರ್ಯಕ್ರಮದಲ್ಲಿ ಡಾ. ಮಂಜುನಾಥ ಅಂಬಿಗ [ಪ್ರೋ. ಮತ್ತು ಉಪನ್ಯಾಸಕರು ದಕ್ಷಣಬಾರತ ಸ್ನಾತಕೋತ್ತರ ಕೇಂದ್ರ ಹಿಂದಿ ಪ್ರಚಾರಸಭಾ ಮದ್ರಾಸ ಅವರು ಮದ್ಯಯುಗದ ಕಾವ್ಯಪರಂಪರೆ ಬಾರತೀಯ ಸಮಾಜಿಕ ಜೀವನಕ್ಕೆ ಚೇತನ ತುಂಬಿದ್ದಲ್ಲದೆ ಕಬೀರದಾಸರು, ಸೂರದಾಸರು ತುಲಸಿದಾಸರು ಬಿಹಾರಿಲಾಲರು ರಹೀಮರಾದಿಯಾಗಿ ತಮ್ಮ ತತ್ವಪದಗಳೊಂದಿಗೆ ಅಸಂಘಟಿತ ಗೊಂದಲ ಹಾಗು ಆಸುರಕ್ಷಿತ ಸಮಾಜವನ್ನ ಬೆಸೆಯುವ

ಕದ್ರಿ ಮಂಜುನಾಥೇಶ್ವರನ ದರ್ಶನ ಪಡೆದ ಸಚಿವ ಕೋಟಾ ಶ್ರೀನಿವಾಸ ಪೂಜಾರಿ

ಸಮಾಜ ಕಲ್ಯಾಣ-ಹಾಗೂ ಹಿಂದುಳಿದ ವರ್ಗಗಳ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಇಂದು ಇತಿಹಾಸ ಪ್ರಸಿದ್ಧ ಕದ್ರಿ ಮಂಜುನಾಥನೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಮಂಜುನಾಥೇಶ್ವರನ ದರ್ಶನ ಪಡೆದರು. ಸಚಿವರಾದ ಮೊದಲ ಬಳಿಕ ಮೊದಲ ಬಾರಿಗೆ ಭೇಟಿ ನೀಡಿದ ಸಚಿವರು ಸರಕಾರ ಜನರಿಗೆ ಉತ್ತಮ ಆಡಳಿತ ನೀಡಿ ಇಲಾಖೆಯ ಕಾರ್ಯಗಳು ಸುಸೂತ್ರವಾಗಿ ನಡೆಯಲಿ ಎಂದು ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಇನ್ನೂ ಸಚಿವರಿಗೆ ಕದ್ರಿ ಮಂಜುನಾಥ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಎ.ಜೆ