Home ಕರಾವಳಿ Archive by category ಮಂಗಳೂರು (Page 290)

ಮಾವಿನ ಎಲೆ 290..! 64% ಡಿಸ್ಕೌಂಟ್ ಆಗಿ 109..!

ಸಾಮಾನ್ಯವಾಗಿ ಮಾರುಕಟ್ಟೆಯಲ್ಲಿ ಮಾವಿನಹಣ್ಣಿಗೆ ಬೇಡಿಕೆ ಇರುತ್ತದೆ. ಆದರೆ ಈಗ ಕಾಲ ಬದಲಾಗಿ ಮಾವಿನ ಎಲೆಗೂ ಕೂಡ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಾಗಿದೆ. ಇದು ಆಚ್ಚರಿಯ ಸಂಗತಿಯಾದರೂ ನಂಬಲೇಬೇಕು ಹೌದು ಕಾಲಕ್ಕೆ ತಕ್ಕಂತೆ ಕೋಲ.! ಈಗ ಬದಲಾಗಿದೆ ಆನ್‍ಲೈನ್ ಶಾಪಿಂಗ್ ಆ್ಯಪ್ ಒಂದಾದ ಅಮೇಜಾನ್‍ನಲ್ಲಿ 21 ಮಾವಿನ ಎಲೆಗೆ 290 ರೂಪಾಯಿಯಾಗಿದ್ದು 64% ಡಿಸ್ಕೌಂಟ್ ಆಗಿ

ಪತ್ರಕರ್ತ ಡಾ.ಸಂದೀಪ್ ವಾಗ್ಲೆ ಅವರಿಗೆ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿ

ಸೌಹಾರ್ದತೆ ಮತ್ತು ಮಾನವೀಯ ಮೌಲ್ಯವನ್ನು ಪ್ರತಿ ಬಿಂಬಿಸುವ ವರದಿಗೆ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ನೀಡಲಾಗುವ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಕನ್ನಡ ಪ್ರಭ ದಿನಪತ್ರಿಕೆಯ ವರದಿಗಾರ ಡಾ.ಸಂದೀಪ್ ವಾಗ್ಲೆ ಆಯ್ಕೆಯಾಗಿದ್ದಾರೆ.ಕನ್ನಡ ಪ್ರಭ ದಿನ ಪತ್ರಿಕೆಯಲ್ಲಿ 2020, ನವಂಬರ್ 25ರಂದು ಪ್ರಕಟಗೊಂಡ ಸಂದೀಪ್ ವಾಗ್ಲೆ ಅವರ ವರದಿ‘ ಕೋಮು ಸೌಹಾರ್ದ ತೆಗೆ ಸಾಕ್ಷಿ-ಸೇತುವಾದ ಯಕ್ಷಗಾನ’ ಎಂಬ ವರದಿಗೆ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿಯು ರೂ.

ರಾಷ್ಟ್ರಪಕ್ಷಿಗೆ ಸ್ಕೂಟರ್ ಢಿಕ್ಕಿ: ದ್ವಿಚಕ್ರ ಸವಾರ ಮೃತ್ಯು

ತೆಂಕ ಎರ್ಮಾಳು ಗರೋಡಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನವಿಲೊಂದಕ್ಕೆ ಡಿಕ್ಕಿಯಾಗಿ ನಿಯಂತ್ರಣ ಕಳೆದುಕೊಂಡ ಸ್ಕೂಟರ್ ಸವಾರ ರಸ್ತೆಯಂಚಿನ ಬಾಂಡ್ ಕಲ್ಲೊಂದಕ್ಕೆ ಡಿಕ್ಕಿಯಾಗಿ ತಲೆಗೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಮೃತ ಯುವಕ ಬೆಳಪು ನಿವಾಸಿ ಪಡುಬಿದ್ರಿ ಮೊಬೈಲ್ ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ. ಅಬ್ದುಲ್ (25) ಎಂದು ಗುರುತಿಸಲಾಗಿದೆ. ಪಡುಬಿದ್ರಿ ಕಡೆಯಿಂದ ತನ್ನ ಸ್ಕೂಟರಲ್ಲಿ ಬರುತ್ತಿದ್ದ ಯುವಕನಿಗೆ ನವಿಲೊಂದು ಹಾರಿಕೊಂಡು ಬಂದು ಡಿಕ್ಕಿಯಾಗಿದೆ.

“ಯಾರಿಗೂ ಹೇಳ್ಬೇಡಿ” – ತನಿಖೆಗೆ ಸಚಿವರನ್ನ ಒತ್ತಾಯ: ಶಾಸಕ ವೇದವ್ಯಾಸ್ ಕಾಮತ್ ಹೇಳಿಕೆ

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಘನತೆಗೆ ಕುತ್ತು ತರಲು ರಾಜಕೀಯ ಪ್ರೇರಿತ ಹಿತಾಸಕ್ತಿಗಳು ರಾಜ್ಯಾಧ್ಯಕ್ಷರ ಧ್ವನಿ ಅನುಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ ಮತ್ತು ತನಿಖೆಗೆ ಗೃಹ‌ ಸಚಿವರನ್ನು ಒತ್ತಾಯಿಸುತ್ತೇನೆ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದ್ದಾರೆ. ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದ ವಿಚಾರಗಳ ಚರ್ಚೆಯಾದರೂ ಅದನ್ನು ಶಾಸಕರ ಬಳಿ ಮಾತನಾಡದೆ ಪಕ್ಷದ ಶಿಸ್ತಿಗೆ ಬದ್ಧವಾಗಿರುವ

ಬೆಂಕಿ ಅವಘಡ : ಎಸೆಸೆಲ್ಸಿ ವಿದ್ಯಾರ್ಥಿಗಳು ಸ್ಥಳಾಂತರ

ಎಸೆಸೆಲ್ಸಿ ಪರೀಕ್ಷೆ ನಡೆಯುತ್ತಿದ್ದ ಕೊಠಡಿಯ ಸಮೀಪವೆ ಇದ್ದ ಲ್ಯಾಬ್‍ನಲ್ಲಿ ಬೆಂಕಿ ಅವಘಡ ಸಂಭವಿಸಿ ಇಡೀ ಲ್ಯಾಬ್ ಹೊತ್ತಿ ಉರಿದ ಘಟನೆ ಬಬ್ಬುಕಟ್ಟೆಯ ಖಾಸಗಿ ಮಹಿಳಾ ಕಾಲೇಜಿನಲ್ಲಿ ನಡೆದಿದೆ. ಬೆಂಕಿ ಅವಘಡ ಸಂಭವಿಸಿದ ಲ್ಯಾಬ್ ಇದ್ದ ಕಟ್ಟಡದಲ್ಲಿ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಎಸೆಸೆಲ್ಸಿ ಪರೀಕ್ಷೆ ಬರೆಯುತ್ತಿದ್ದು, ಅವರನ್ನೆಲ್ಲಾ ಡ್ಯುಟಿಯಲ್ಲಿದ್ದ ಶಿಕ್ಷಕರು ಮತ್ತು ಸಿಬ್ಬಂದಿಗಳು ಸುರಕ್ಷಿತವಾಗಿ ಮತ್ತೊಂದು ಕಟ್ಟಡಕ್ಕೆ ಸ್ಥಳಾಂತರಿಸಿದ್ದಾರೆ. ಸರ್ವಿಸ್

ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಕ್ಕೆ ದ.ಕ ಜಿಲ್ಲಾಧಿಕಾರಿ ಭೇಟಿ

ಕೋವಿಡ್ ಭೀತಿ ಮಧ್ಯೆಯೂ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಮುಂದಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 179 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಮಂಗಳೂರಿನ ನಂತೂರಿನ ಪದವು ಹಾಗೂ ಕಪಿತಾನಿಯ ಶಾಲೆಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ|ಕೆ.ವಿ. ರಾಜೇಂದ್ರ ಅವರು ಭೇಟಿ ನೀಡಿ. ಪರಿಶೀಲನೆ ನಡೆಸಿದರು. ಕೊರೋನ ಮಾರ್ಗಸೂಚಿ ಅನ್ವಯ ಮುಂಜಾಗ್ರತಾ

ನಾಳೆ ಪಿಯುಸಿ ಫಲಿತಾಂಶ: ಎಷ್ಟು ಗಂಟೆಗೆ ..? ರಿಸಲ್ಟ್ ನೋಡುವುದು ಹೇಗೆ ಇಲ್ಲಿದೆ ಮಾಹಿತಿ..

ಯುಸಿ ವಿದ್ಯಾರ್ಥಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಫಲಿತಾಂಶವನ್ನು ನಾಳೆ ಅಂದರೆ ಜುಲೈ 20ರಂದು ಪ್ರಕಟಿಸಲಾಗುತ್ತಿದೆ. ಶಿಕ್ಷಣ ಇಲಾಖೆಯ ವೆಬ್ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗಲಿದ್ದು, ಸಂಜೆ 4.30 ಗಂಟೆಗೆ ಫಲಿತಾಂಶ ನೋಡಬಹುದಾಗಿದೆ. ಇದಾಗಲೇ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ತಿಳಿಸಿರುವಂತೆ ಎಸ್ಎಸ್ಎಲ್ಸಿ ಮತ್ತು ಪ್ರಥಮ ಪಿಯುಸಿ ಅಂಕಗಳು ಹಾಗೂ ಇಂಟರ್ನಲ್ ಅಸೆಸ್‍ಮೆಂಟ್ ಪರಿಗಣಿಸಿ ಫಲಿತಾಂಶ ನೀಡಲಾಗುತ್ತದೆ. ಈ ಕುರಿತು ಸುರೇಶ್ ಕುಮಾರ್

“ಯಾರಿಗೂ ಹೇಳ್ಬೇಡಿ” – ಸಚಿವ ಸ್ಥಾನ ಹೋದ್ರು ಪರವಾಗಿಲ್ಲ: ಸಚಿವ ಈಶ್ವರಪ್ಪ

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋ ವೈರಲ್ ಮತ್ತು ಅದರಲ್ಲಿ ಉಲ್ಲೇಖಿತ ಶೆಟ್ಟರ್, ಈಶ್ವರಪ್ಪ ಸೈಡ್ ಲೈನ್ ಬಗ್ಗೆ ಈಶ್ವರಪ್ಪ ಪ್ರತಿಕ್ರಿಯಿಸಿದ್ದಾರೆ. ಯಾರು ಆಡಿಯೋ ವೈರಲ್ ಮಾಡಿದ್ದಾರೆ ಎನ್ನುವ ಬಗ್ಗೆ ತನಿಖೆಯಾಗಲಿದೆ. ನಳಿನ್ ಕುಮಾರ್ ವಿರುದ್ಧ ವ್ಯವಸ್ಥಿತ ಸಂಚು ರೂಪಿಸಿ ಅವರನ್ನು ಬಲಿಪಶು ಮಾಡಲು ಹೊರಟಿದ್ದಾರೆ. ಯಾರೋ ಹುಚ್ಚರು ಆಡಿಯೋವನ್ನು ಸೃಷ್ಟಿ ಮಾಡಿದ್ದಾರೆ. ನಳಿನ್ ಕುಮಾರ್ ಕಟೀಲ್ ಆಡಿಯೋ ನನ್ನದಲ್ಲ ಎಂದು

ದ.ಕ ಜಿಲ್ಲಾಧಿಕಾರಿ ಕಚೇರಿಯ ಲಿಫ್ಟ್ ನಲ್ಲಿ ಬಾಕಿಯಾದ ಮಹಿಳೆ

ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿರುವ ಲಿಫ್ಟ್ ನಲ್ಲಿಮಹಿಳೆ ಜಾಂ ಆಗಿ ರಕ್ಷಣೆ ಮಾಡಿದ ಘಟನೆ ನಡೆದಿದೆ. ಇಂದು ಮುಂಜಾನೆ 8 ಗಂಟೆಯ ಸುಮಾರಿಗೆ ಮಹಿಳೆಯು ಲಿಫ್ಟ್ ಬಳಸುವಾಗ ದಿಢೀರ್‍ನೇ ಸ್ಥಗಿತಗೊಂಡಿತು. ತಕ್ಷಣವೇ ಸ್ಥಳಾಕ್ಕಾಗಮಿಸಿದ ಪಾಂಡೇಶ್ವರ ಆಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ, ಹ್ರೈಡೋಲಿಕ್ ಸಪರೇಟರ್ ಡಿವೈಸ್ ಅಳವಡಿಸಿ ಲಿಫ್ಟ್ ತೆಗೆದು ವೀಣಾರನ್ನು ರಕ್ಷಣೆ ಮಾಡಲಾಗಿದೆ.    

ವೈರಲ್ ಆಗ್ತಿರೋ ವಿಡಿಯೋ ನನ್ನದಲ್ಲ: ತನಿಖೆ ಬಳಿಕ ಸತ್ಯಾಸತ್ಯತೆ ಹೊರಬರಲಿದೆ- ನಳಿನ್ ಕುಮಾರ್ ಕಟೀಲ್

ನಾಯಕತ್ವ ಬದಲಾವಣೆ ಕುರಿತಂತೆ ವೈರಲ್ ಆಗಿರುವ ವಿಡಿಯೋಗೂ ನನಗೂ ಸಂಬಂಧವಿಲ್ಲ. ಮುಖ್ಯಮಂತ್ರಿಗಳಿಗೆ ಈ ಪತ್ರ ಬರೆಯುತ್ತೇನೆ ಹಾಗೂ ತನಿಖೆಗೆ ಆಗ್ರಹಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಆಡಿಯೋ ವೈರಲ್ ಕುರಿತಾಗಿ ಮಂಗಳೂರಲ್ಲಿ ಮಾತನಾಡಿದ್ರು. ತನಿಖೆಯ ಬಳಿಕ ಆಡಿಯೋದ ಸತ್ಯಾಸತ್ಯತೆ ಹೊರ ಬರಲಿದೆ. ನಾಯಕತ್ವದ ಬದಲಾವಣೆ ಕುರಿತು ನಮ್ಮಲ್ಲಿ ಯಾವುದೇ ಚರ್ಚೆಗಳಿಲ್ಲ.ನಮ್ಮ ಪಾರ್ಟಿಗೆ ಆತ್ಮ ಯಡಿಯೂರಪ್ಪ. ಅವರೇ ನಮ್ಮ ಸರ್ವ ಸಮ್ಮತದ