Home ಕರಾವಳಿ Archive by category ಮಂಗಳೂರು (Page 293)

ದ.ಕ. ಜಿಲ್ಲಾಡಳಿತದಿಂದ 75ನೇ ಸ್ವಾತಂತ್ರ್ಯೋತ್ಸವ: ಸಚಿವ ಅಂಗಾರ ಅವರಿಂದ ತುಳುವಿನಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದೇಶ

ದ.ಕ.ಜಿಲ್ಲಾಡಳಿತದ ವತಿಯಿಂದ ನಗರದ ನೆಹರೂ ಮೈದಾನದಲ್ಲಿ 75ನೇ ಸ್ವಾತಂತ್ರ್ಯೋತ್ಸವ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಅವರು ಧ್ವಜಾರೋಹಣ ನೆರವೇರಿಸಿದರು. ಗೌರವ ವಂದನೆ ಸ್ವೀಕರಿಸಿದ ಬಳಿಕ ತುಳುವಿನಲ್ಲೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದೇಶ ನೀಡಿದ ಅವರು ನಮ್ಮ ದೇಶವಿಂದು ವಿಶ್ವದಲ್ಲೇ ಚಾರಿತ್ರಿಕ ಕಾಲಘಟ್ಟದಲ್ಲಿದೆ. ನಮಗೆ ಸಿಕ್ಕಿದ ಈ

ಕೋವಿಡ್-19 ನಿಯಂತ್ರಿಸಲು ಸಿಎಂ ನೀಡಿದ ನಿರ್ದೇಶನ ಕಟ್ಟುನಿಟ್ಟಾಗಿ ಪಾಲಿಸಿ:  ಜಿಲ್ಲಾಧಿಕಾರಿ

ಮಂಗಳೂರು: ರಾಜ್ಯದ ಮುಖ್ಯಮಂತ್ರಿಗಳು ನೀಡಿದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವ ಮೂಲಕ ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಹಾಗೂ ಅದರ ಪಾಸಿಟಿವಿಟಿಯನ್ನು ನಿಯಂತ್ರಿಸುವಂತೆ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರು ಅಧಿಕಾರಿಗಳಿಗೆ ತಾಕೀತು ಮಾಡಿದರು. ಅವರು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ವಿಡಿಯೋ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಈಗಾಗಲೇ

ಆಪಲ್ ಮೊಬೈಲ್ ಶೋರೂಂನಿಂದ ಕಳವು ಪ್ರಕರಣ: ಓರ್ವ ಆರೋಪಿ ಸೆರೆ, 40ಮೊಬೈಲ್ ವಶಕ್ಕೆ

 ಮಂಗಳೂರಿನ ಆಪಲ್ ಮೊಬೈಲ್ ಶೋರೂಂ ಒಂದರಲ್ಲಿ ಇತ್ತೀಚೆಗೆ ನಡೆದ ಕಳ್ಳತನ ಪ್ರಕರಣವನ್ನು ಬೇಧಿಸಿರುವ ಮಂಗಳೂರು ಪೊಲೀಸರು ಓರ್ವ ಆರೋಪಿ ಸಹಿತ ಕಳವಾದ 40 ಮೊಬೈಲ್‌ಗಳನ್ನು ಆರೋಪಿಯಿಂದ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಮಹಾರಾಷ್ಟ್ರ ಮೂಲದ ಆರೋಪಿಯನ್ನು ಮುಂಬೈನಲ್ಲಿ ಮಂಗಳೂರು ಪೊಲೀಸರು ಬಂಧಿಸಿದ್ದು, ಸುಮಾರು 41 ಲಕ್ಷ ರೂ. ವೌಲ್ಯದ ಕಳವಾದ ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕಮಾರ್ ಹೇಳಿದ್ದಾರೆ. ಈ ಕುರಿತು

‘ಸೌಹಾರ್ದ ಸಾಮೂಹಿಕ ವಿವಾಹ’ಕ್ಕೆ ಅರ್ಜಿ ಆಹ್ವಾನ

ಆರ್ಥಿಕವಾಗಿ ತೀರಾ ಹಿಂದುಳಿದಿರುವ ಹೆಣ್ಣು ಮಕ್ಕಳ ಮದುವೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಮಂಗಳೂರಿನ ಬಜ್ಪೆ ಝಕರಿಯಾ ಫೌಂಡೇಶನ್ ಹಮ್ಮಿಕೊಂಡಿದ್ದ, ಲಾಕ್ ಡೌನ್ ಕಾರಣದಿಂದ ಮುಂದೂಡಲಾದ ‘ಸೌಹಾರ್ದ ಸಾಮೂಹಿಕ ವಿವಾಹ ಸಮಾರಂಭ’ವು ಅಕ್ಟೋಬರ್ 16ರಂದು ಮಂಗಳೂರು ತಾಲೂಕಿನ ಗಂಜಿಮಠದಲ್ಲಿ ನಿರ್ಮಾಣವಾಗುತ್ತಿರುವ ನೂತನ ಸಭಾಂಗಣ ‘ಝರಾ ಆಡಿಟೋರಿಯಂ’ನಲ್ಲಿ ನಡೆಯಲಿದೆ. ಜಾತಿ, ಮತ, ಧರ್ಮಗಳ ಬೇಧವಿಲ್ಲದೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು

ಬೆಂಗ್ರೆ ಸಾಗರಮಾಲಾ ಯೋಜನಾ ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ, ಪ್ರತಿಭಟನಾ ನಿರತ ಮೀನುಗಾರರ ಸಮಸ್ಯೆ ಪರಿಹಾರಕ್ಕೆ ಯತ್ನ

ಮಂಗಳೂರಿನ‌ ಬೆಂಗ್ರೆ ಪ್ರದೇಶದಲ್ಲಿ ಸಾಗರ ಮಾಲಾ ಯೋಜನೆಯಡಿ ಕೋಸ್ಟಲ್ ಬರ್ತ್ ಕಾಮಗಾರಿ ಗ್ರಾಮಸ್ಥರ ವಿರೋಧದ ನಡುವೆ ನಡೆಯುತ್ತಿದೆ. ಈ ನಡುವೆ ಕೋಸ್ಟಲ್ ಬರ್ತ್ ಕಾಮಗಾರಿ‌ ತಮ್ಮ ನಾಡದೋಣಿಗಳ ತಂಗುದಾಣಗಳನ್ನು ಆಕ್ರಮಿಸುತ್ತದೆ, ಮೀನುಗಾರರ ಕೆಲವು ಮನೆಗಳನ್ನು ಪರಿಹಾರ ಇಲ್ಲದೆ ಒಕ್ಕಲೆಬ್ಬಿಸಲಾಗುತ್ತಿದೆ ಎಂದು ಆರೋಪಿಸಿ ಗ್ರಾಮದ ಸಾಂಪ್ರದಾಯಿಕ ಮೀನುಗಾರರು ತಮ್ಮ ದೋಣಿಗಳನ್ನು ಯೋಜ‌ನಾ ಪ್ರದೇಶದಲ್ಲಿ ಲಂಗರು ಹಾಕಿ ಮೂರು ತಿಂಗಳಿನಿಂದ “ಪಲ್ಗುಣಿ ಸಾಂಪ್ರದಾಯಿಕ

ಎಸ್.ಡಿ.ಎಂ.ನವಿದ್ಯಾರ್ಥಿಗಳಿಗೆ ಅಮೆರಿಕಾ ವಿ.ವಿ ಪಿ.ಎಚ್.ಡಿ ಫೆಲೋಷಿಪ್

ಉಜಿರೆ, ಆ.12: ಉಜಿರೆಯಎಸ್.ಡಿ.ಎಂ ಸ್ನಾತಕೋತ್ತರಕೇಂದ್ರದರಸಾಯನಶಾಸ್ತ್ರ ವಿಭಾಗದಇಬ್ಬರು ವಿದ್ಯಾರ್ಥಿಗಳು ಅಮೆರಿಕಾದಎರಡು ಪ್ರತಿಷ್ಠಿತ ವಿಶ್ವವಿದ್ಯಾನಿಲಯಗಳಲ್ಲಿ ಪಿ.ಎಚ್.ಡಿ ಸಂಶೋಧನಾಅಧ್ಯಯನ ಕೈಗೊಳ್ಳಲು ಫೆಲೋಷಿಪ್ ಪಡೆದಿದ್ದಾರೆ. ವಿಭಾಗದ 2017-19ನೇ ಸಾಲಿನಲ್ಲಿಆರ್ಗ್ಯಾನಿಕ್ ಕೆಮಿಸ್ಟ್ರಿ  ವಿಭಾಗದಲ್ಲಿಸ್ನಾತಕೋತ್ತರ ವ್ಯಾಸಂಗ ಪೂರೈಸಿದ್ದ ಗಿರೀಶ್‍ಗೌಡಆರ್ ಮತ್ತುಕೆಮಿಸ್ಟ್ರಿ ವಿಭಾಗದಲ್ಲಿಅಧ್ಯಯನನಿರತರಾಗಿದ್ದಸಾಧನಾ ಭಟ್‍ಫೆಲೋಷಿಪ್ ಆಯ್ಕೆ ಪ್ರಕ್ರಿಯೆಯ

ಸ್ಟ್ರೆಚರ್‌ನಲ್ಲಿ ಆರೋಪಿಯನ್ನು ಕೋರ್ಟ್‌ಗೆ ಹಾಜರು: ಪೊಲೀಸರ ಮೇಲೆ ನ್ಯಾಯಾಧೀಶರು ಗರಂ

ಮಂಗಳೂರು: ಕೊಲೆ, ದೊಂಬಿ ಪ್ರಕರಣದ ಆರೋಪಿಯನ್ನು ಸ್ಟ್ರೆಚರ್‌ನಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಇದನ್ನ ಗಂಭೀರವಾಗಿ ಪರಿಗಣಿಸಿದ ನ್ಯಾಯಾಧೀಶರು ಪೊಲೀಸರನ್ನು ತರಾಟೆಗೆ ತೆಗೆದುಕೊಂಡರು. ಅಡ್ಡೂರಿನ ಮಹಮ್ಮದ್ ಎಂಬಾತನ ಮೇಲೆ ಹಲವು ವರ್ಷಗಳ ಹಿಂದೆ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.   ಈ ಪ್ರಕರಣದಲ್ಲಿ ಅತನಿಗೆ ಕೋರ್ಟ್‌ಗೆ ಹಾಜರಾಗುವಂತೆ ವಾರಂಟ್ ಹೊರಡಿಸಲಾಗಿತ್ತು. ಆರೋಪಿ ಅಸೌಖ್ಯದಿಂದ ಹಾಸಿಗೆ ಹಿಡಿದಿದ್ದ. ಕುಟುಂಬ ವರ್ಗದಿಂದ

ಶ್ರೀನಿವಾಸ ವಿವಿ ವತಿಯಿಂದ ಕ್ಯಾಂಪಸ್ ಸಂದರ್ಶನ

ಕೋವಿಡ್‍ನ ಈ ಸಂಕಷ್ಟದ ಕಾಲದಲ್ಲಿ ಶ್ರೀನಿವಾಸ ವಿಶ್ವವಿದ್ಯಾಲಯವು ಕ್ಯಾಂಪಸ್ ಸಂದರ್ಶನಕ್ಕೆ ಅತ್ಯಂತ ಮಹತ್ವ ನೀಡಿದ್ದು, ಪ್ರಥಮ ವರ್ಷದಿಂದ ಅಂತಿಮ ವರ್ಷದ ವಿದಯಾರ್ಥಿಗಳಿಗೆ ಆನ್‍ಲೈನ್ ಮತ್ತು ಆಫ್ ಲೈನ್ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ವಿದ್ಯಾರ್ಥಿಗಳನ್ನು ಉದ್ಯೋಗಕ್ಕಾಗಿ ಸಿದ್ದರಾಗುವಂತೆ ತಯಾರು ಮಾಡಿ ಯಶಸ್ಸನ್ನು ಕಂಡಿದ್ದೇವೆ ಎಂದು ಕಾಲೇಜ್ ಆಫ್ ಕಂಪ್ಯೂಟರ್ ಸೈನ್ಸ್ ಆಂಡ್ ಇನ್ಫಾರ್ಮೇಶನ್ ಸೈನ್ಸ್ ತರಬೇತಿ ಹಾಗೂ ಪ್ಲೇಸ್ಮೆಂಟ್ ಅಧಿಕಾರಿ, ಪ್ರೊ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ವಾರವೂ ವೀಕೆಂಡ್ ಕರ್ಫ್ಯೂ

ಶುಕ್ರವಾರ ರಾತ್ರಿ 9ರಿಂದ ಸೋಮವಾರ ಬೆಳಗ್ಗೆ 5ರವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ಅಗತ್ಯ ವಸ್ತುಗಳ ಖರೀದಿಗೆ ಈ ಎರಡೂ ದಿನ ಮಧ್ಯಾಹ್ನ 2ರವರೆಗೆ ಅವಕಾಶ ಕಲ್ಪಿಸಲಾಗಿದೆ. ಕೇರಳದಲ್ಲಿ ಕೊರೋನ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖ ಕಾಣದ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕೆಯ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ವಾರ ವಿಧಿಸಿದಂತೆ ಈ ವಾರವೂ (ಆ.14,15) ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.