Home ಕರಾವಳಿ Archive by category ಮಂಗಳೂರು (Page 296)

ಶ್ರೀನಿವಾಸ್ ವಿವಿಯಲ್ಲಿ ಕೋವಿಡ್ ಲಸಿಕಾ ಶಿಬಿರ

ಮಂಗಳೂರು: ನಗರದ ಶ್ರೀನಿವಾಸ್‌ ವಿಶ್ವವಿದ್ಯಾಲಯ, ಸಿಟಿ ಕ್ಯಾಂಪಸ್‌ ಪಾಂಡೇಶ್ವರದಲ್ಲಿ ದ.ಕ. ಜಿಲ್ಲಾ ಆರೋಗ್ಯ ಕೇಂದ್ರ, ಜೆಪ್ಪು ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದೊಂದಿಗೆ, ಕ್ಯಾಂಪಸ್‌ನ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಭೋದಕೇತರ ಸಿಬ್ಬಂದಿಗಳಿಗೆ ಕೋವಿಡ್‌ ಲಸಿಕೆ ನೀಡುವ ಶಿಬಿರ  ಜರಗಿತು. ಶ್ರೀನಿವಾಸ್‌ ವಿಶ್ವವಿದ್ಯಾಲಯದ ಕುಲಪತಿ ಡಾ. ಪಿ. ಎಸ್.‌ ಐತಾಳ್‌

ಶಕ್ತಿಯುತ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನ್: ಡಿ.ಕೆ.ಶಿವಕುಮಾರ್

ಮಂಗಳೂರು: ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನ್ ಸಂಸ್ಥೆಯನ್ನು ರಾಜ್ಯದಲ್ಲಿ ಶಕ್ತಿಯುತವಾಗಿ ಸಂಘಟಿಸಲಾಗುವುದು ಎಂದು ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ದ.ಕ.ಜಿಲ್ಲಾ ಪದಾಧಿಕಾರಿಗಳೊಂದಿಗೆ ಅನೌಪಚಾರಿಕ ಸಭೆ ನಡೆಸಿದ ಡಿ.ಕೆ.ಶಿವಕುಮಾರ್ ಅವರು, ಸಂಘಟನೆಯನ್ನು ಬಲಪಡಿಸುವ ಸಲುವಾಗಿಯೇ ಹಿರಿಯ ಮುಖಂಡ ಸಿ.ನಾರಾಯಣ ಸ್ವಾಮಿ ಅವರನ್ನು ಸಂಘಟನೆಯ ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಲಾಗಿದ್ದು, ಸಂಘಟನೆಯನ್ನು

ಕ್ಯಾಂಪ್ಕೋದಿಂದ ಹಲಸಿನ ಹಣ್ಣಿನ ಚಾಕಲೇಟ್

ಅಂತಾರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೋ ಇದೀಗ ಹಲಸಿನ ಹಣ್ಣು ಬಳಸಿ ಚಾಕಲೇಟ್ ಉತ್ಪಾದಿಸುವ ಹೊಸ ಪ್ರಯತ್ನಕ್ಕೆ ಕೈಹಾಕಿದೆ. ಜಾಕ್‍ಪ್ರಟ್ ಎಕ್ಲೇರ್ಸ್ ಹೆಸರಿನಲ್ಲಿ ಈ ಚಾಕಲೇಟ್ ಮಾರುಕಟ್ಟೆಗೆ ಪ್ರವೇಶಿಸುತ್ತಿದ್ದು, ಹಣ್ಣಿನಿಂದ ತಯಾರಿಸಿದ ಚಾಕಲೇಟ್ ಉತ್ಪನ್ನ ಭಾರತದಲ್ಲಿ ಇದೇ ಮೊದಲ ಬಾರಿಗೆ ಮಾರುಕಟ್ಟೆಗೆ ಹೊರಬರುತ್ತಿದ್ದು, ಈ ಸಾಧನೆ ತೋರಿದ ಭಾರತದ ಮೊದಲ ಸಂಸ್ಥೆಯೆಂದೂ ಕ್ಯಾಂಪ್ಕೋ ಗುರುತಿಸಿಕೊಂಡಿದೆ.

ಶ್ರೀನಿವಾಸ್‌ ಆಸ್ಪತ್ರೆಯಲ್ಲಿ Duodenal Ulcer Perforation with Severe Respritory Distress ನ ಯಶಸ್ವೀ ಶಸ್ತ್ರಚಿಕಿತ್ಸೆ

ಶ್ರೀನಿವಾಸ್‌ ಆಸತ್ರೆಯ ತುರ್ತು ನಿಗಾ ಘಟಕದ ಮುಂಭಾಗದಲ್ಲಿ ಒಂದು ಕಾರ್‌ ಬಂದು ನಿಂತಿತು. ತಾಯಿಯೊಬ್ಬಳು ತೀವ್ರವಾದ ಉಸಿರಾಟದ ತೊಂದರೆಯೊಂದಿಗೆ ಡ್ಯುವೋಡೆನಲ್ ಅಲ್ಸರ್ ರಂದ್ರದ (Duodenal Ulcer Perforation with Severe Respritory Distress) ಮಗುವನ್ನು ಕೈಯಲ್ಲಿ ಹಿಡಿದು ಅಳುತ್ತಾ ಕಾರಿನಿಂದ ಕೆಳಗಿಳಿದಳು. ತೀವ್ರವಾಗಿ ಅಸ್ವಸ್ಥವಾಗಿದ್ದ ಮಗುವಿನ ಹೊಟ್ಟೆ ಊದಿಕೊಂಡಿದ್ದು, ಉಸಿರಾಡಲು ಕಷ್ಟಪಡುತ್ತಿತ್ತು. ತಕ್ಷಣವೇ ಶ್ರೀನಿವಾಸ್‌ ಆಸ್ಪತ್ರೆಯ ವೈದ್ಯಕೀಯ

ರಾಜ್ಯದಲ್ಲಿ ಒಳ್ಳೆಯ ಸರ್ಕಾರ ಕೊಡುವುದಕ್ಕೆ ಆಗಿಲ್ಲ: ಡಿ.ಕೆ. ಶಿವಕುಮಾರ್

ಮಂಗಳೂರು: ಈ ರಾಜ್ಯದಲ್ಲಿ ಒಳ್ಳೆ ಸರ್ಕಾರ ಕೊಡುವುದಕ್ಕೆ ಆಗಿಲ್ಲ. ಹೀಗಾಗಿ ಮುಖ್ಯಮಂತ್ರಿ ಬದಲಾವಣೆ ಮಾಡುತ್ತಿದ್ದಾರೆ. ಡಬಲ್ ಇಂಜಿನ್ ಸರ್ಕಾರ ಇದ್ರು ಒಳ್ಳೆ ಆಡಳಿತ ಕೊಡಲು ಆಗಿಲ್ಲ. ಈ ಸರ್ಕಾರಕ್ಕೆ ಗೌರವ ಎಲ್ಲಿದೆ. ಅವರಲ್ಲಿ ಎಷ್ಟೇ ಮುಖ್ಯಮಂತ್ರಿ ಚೇಂಜ್ ಆದ್ರು ಅವರ ಪಕ್ಷದ ಬಗ್ಗೆ ಮಾತಾಡಲ್ಲ ಎಂದು ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಮಂಗಳೂರಿನಲ್ಲಿ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿಕೆ ನೀಡಿದರು. ಯಾವ ಅಧಿಕಾರಿಗಳು ಅವರ ಮಾತು

ಖಾಲಿಯಾಗುವ ಸಿಎಂ ಹುದ್ದೆಗೆ ದಲಿತ ನಾಯಕನನ್ನು ಆಯ್ಕೆ ಮಾಡಲಿ: ಸಿದ್ದರಾಮಯ್ಯ

ಬಿಜೆಪಿಯಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ನಡೆಯುತ್ತಿದೆ. ಬಿ.ಎಸ್.ಯಡಿಯೂರಪ್ಪ ಶೀಘ್ರ ರಾಜೀನಾಮೆ ನೀಡುವ ಸಾಧ್ಯತೆ ಇದ್ದು, ಬಿಜೆಪಿಯಲ್ಲಿ ಖಾಲಿಯಾಗುವ ಸಿಎಂ ಹುದ್ದೆಗೆ ದಲಿತ ನಾಯಕನನ್ನು ಆಯ್ಕೆ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರಿಗೆ ಸವಾಲು ಹಾಕಿದ್ದಾರೆ. ಅವರು ಮಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನಳಿನ್ ಕುಮಾರ್ ಕಟೀಲು ಇತ್ತೀಚೆಗೆ ಕಾಂಗ್ರೆಸ್ ದಲಿತ ಸಿಎಂ ಅಭ್ಯರ್ಥಿಯನ್ನು

ಆಸ್ಕರ್ ಫೆರ್ನಾಂಡಿಸ್‌ರವರ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್

ಅನಾರೋಗ್ಯದಿಂದ ಮಂಗಳೂರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಕೇಂದ್ರದ ಮಾಜಿ ಸಚಿವ, ರಾಜ್ಯಸಭೆ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರನ್ನು ಆರೋಗ್ಯವನ್ನು ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್  ವಿಚಾರಿಸಿದರು. ಸಂಜೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಂಗಳೂರಿಗೆ ಆಗಮಿಸಿದ ಇವರಿಬ್ಬರು ಆಸ್ಕರ್ ಫೆರ್ನಾಂಡಿಸ್ ದಾಖಲಾಗಿದ್ದ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಆಸ್ಕರ್ ಅವರ

ವಿದ್ಯಾರ್ಥಿಗಳಿಗೆ ಬಸ್ ಪಾಸ್ ಸೌಲಭ್ಯ ಒದಗಿಸಲು ಆಗ್ರಹ : ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ

ಸರ್ಕಾರಿ ಹಾಸ್ಟೆಲ್‍ಗಳಲ್ಲಿ ಈ ಕೂಡಲೇ ವಿದ್ಯಾರ್ಥಿಗಳಿಗೆ ವಸತಿ ವ್ಯವಸ್ಥೆ ಮತ್ತು ವಿದ್ಯಾರ್ಥಿಗಳಿಗೆ ಬಸ್ ಪಾಸ್ ಸೌಲಭ್ಯ ಒದಗಿಸಬೇಕೆಂದು ಆಗ್ರಹಿಸಿ, ಮಂಗಳೂರಲ್ಲಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ನಗರದ ಮಿನಿವಿಧಾನಸೌಧ ಮುಂಭಾಗದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಇನ್ನು ರಾಜ್ಯದ ಅನೇಕ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಹಾಸ್ಟೆಲ್‍ಗಳಿಗೆ ಅವಲಂಬಿತರಾಗಿರುವುದರಿಂದ ರಾಜ್ಯದ ಹಿಂದುಳಿದ ವರ್ಗ, ಸಮಾಜ ಕಲ್ಯಾಣ ಮತ್ತು

ಬಸ್ ಚಲಾಯಿಸುವಾಗಲೇ ಕುಸಿದ ಚಾಲಕ : ತಪ್ಪಿದ ದುರಂತ

ಕಿಕ್ಕಿರಿದು ತುಂಬಿದ್ದ ಬಸ್ ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ ಬಸ್ ಚಾಲಕನಿಗೆ ರಕ್ತ ಒತ್ತಡ ಕಡಿಮೆಯಾದ ಪರಿಣಾಮ ಸ್ಟೇರಿಂಗ್ ಮೇಲ್ಗಡೆಯೇ ಉರುಳಿ ಬಿದ್ದ ಘಟನೆ ನಗರ ಹೊರವಲಯದ ಅಡ್ಯಾರ್ ನಲ್ಲಿ ನಡೆದಿದ್ದು ಪ್ರಯಾಣಿಕರು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಪುತ್ತೂರಿನಿಂದ ಮಂಗಳೂರಿನ ಸ್ಟೇಟ್ ಬ್ಯಾಂಕಿಗೆ ಬರುತ್ತಿದ್ದ ಸೇಫ್ ವೇ ಟ್ರಾವೆಲ್ಸ್ ಹೆಸರಿನ ಖಾಸಗಿ ಬಸ್ ಅಡ್ಯಾರ್ ಸಮೀಪಿಸುತ್ತಿದ್ದಂತೆ ಚಾಲಕನಿಗೆ ಕಣ್ಣು ಮಂಜಾಗಿದ್ದು ತಕ್ಷಣ ಬಸ್