ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರನ್ನು ಹನಿಟ್ರಾಪ್ಗೊಳಪಡಿಸಿದ ಪ್ರಕರಣಕ್ಕೆ ಸಂಬಂಧಿಸಿ ಮಹಿಳೆ ಸೇರಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿರುವುದಾಗಿ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ. ಮಂಗಳೂರಿನ ಕಮೀಷನರ್ ಕಚೇರಿಯಲ್ಲಿ ನಡೆದೆ ಸುದ್ದಿಗೋಷ್ಠಿಯಲ್ಲಿ ಅವರು, ಇನ್ಲ್ಯಾಂಡ್ಇಂಪಾಲ ಅಪಾರ್ಟ್ಮೆಂಟ್ನಲ್ಲಿ ವಾಸವಾಗಿದ್ದ ಮಹಿಳೆ
ಮಂಗಳೂರಿನ ಹೊರವಲಯದ ಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆಯ ಕಾಮಗಾರಿಯ ಹಿನ್ನಲೆ ಪಕ್ಕದಲ್ಲಿದ್ದ ಮೀನು ಮಾರುಕಟ್ಟೆಯ ಮೆಲ್ಚಾವಣಿಯನ್ನು ತೆಗದು ಮಾರುಕಟ್ಟೆಯನ್ನು ನೆಲಸಮ ಮಾಡಲು ಹೊರಟಿರುವುದು ಮೀನು ಮಾರಾಟ ಮಾಡುವ ಮಹಿಳೆಯರ ಆಕ್ರೋಶಕ್ಕೆ ಕಾರಣವಾಗಿದೆ. ಎಐಸಿಸಿ ಕಾರ್ಯದರ್ಶಿ ಐವನ್ ಡಿ’ಸೊಜಾರವರು 2 ವರ್ಷದ ಹಿಂದೆ ಎಂಎಲ್ಸಿಯಾಗಿದ್ದ ಸಂದರ್ಭ ಎನ್ಹೆಚ್ 66 ಬೈಕಂಪಾಡಿಯಲ್ಲಿ ಮೀನುಗಾರ ಮಹಿಳೆಯರಿಗೆ ಸಹಾಯವಾಗುವ ನಿಟ್ಟಿನಲ್ಲಿ ಅನುದಾನ ನೀಡಿ
ಅಪ್ರಾಪ್ತ ವಯಸ್ಸಿನ ಬಾಲಕಿ ಜತೆ ಮೊಬೈಲ್ ಮೂಲಕ ಅನುಚಿತವಾಗಿ ವರ್ತಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಮಕ್ಕಳ ಕಲ್ಯಾಣ ಸಮಿತಿ ಮೂಲಕ ನೀಡಲಾದ ದೂರಿನ ಮೇರೆಗೆ ಮಂಗಳೂರು ನಗರ ಠಾಣೆಯೊಂದರ ಸಿಬ್ಬಂದಿಯನ್ನು ಬಂಧಿಸಲಾಗಿದೆ. ಈ ಕುರಿತು ಮಂಗಳೂರಿನ ಕಮೀಷನರ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಮಾತನಾಡಿ, ನಗರದ ಪೊಲೀಸ್ ಠಾಣೆ ಪ್ರಕರಣವೊಂದಕ್ಕೆ ಸಂಬಂಧಿಸಿ ಪೋಷಕರ ಜತೆ ದೂರು ನೀಡಲು ಬಂದಿದ್ದ ಬಾಲಕಿಯಿಂದ ಮೊಬೈಲ್ ಸಂಖ್ಯೆಯನ್ನು
ಕಾಪು ಹೊಸ ಮಾರಿಯಮ್ಮ ದೇವಸ್ಥಾನದಲ್ಲಿ ವಾರ್ಷಿಕ ಆಟಿ ಮಾರಿ ಪೂಜೆಯು ಕೊವೀಡ್ ಸಮಸ್ಯೆಯಿಂದಾಗಿ ಸರಳವಾಗಿ ನಡೆದಿದೆ. ವಾರ್ಷಿಕವಾಗಿ ತುಳು ತಿಂಗಳುಗಳಾದ ಸುಗ್ಗಿ, ಜಾರ್ದೆ ಹಾಗೂ ಆಟಿ ಮಾರಿಪೂಜೆ ನಡೆಯುತ್ತಿದ್ದು, ಈ ಧಾರ್ಮಿಕ ಕಾರ್ಯಕ್ರಮಗಳಿಗೆ ಜಿಲ್ಲೆ ಹೊರಜಿಲ್ಲೆ, ಹೊರ ರಾಜ್ಯ, ದೇಶ ವಿದೇಶಗಳಿಂದಲೂ ಲಕ್ಷಾಂತರ ಭಕ್ತಾಧಿಗಳು ಆಗಮಿಸುತ್ತಿದ್ದು, ಆದರೆ ಈ ಬಾರಿ ಕೋವಿಡ್ ಸಮಸ್ಯೆಯಿಂದಾಗಿ ಸರ್ಕಾರದ ಸೂಚನೆಯಂತೆ ಸರಳವಾಗಿ ನಡೆಯುವುದರಿಂದ ಭಕ್ತಾಧಿಗಳ ಸಂಖ್ಯೆಯೂ ವಿರಳ
ಮಂಗಳೂರು:ಪತ್ರಕ ರ್ತರ ಗೃಹ ನಿರ್ಮಾಣ ಸಹಕಾರ ಸಂಘ ಮಂಗಳೂರು ಇದರ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಶ್ರೀನಿವಾಸ್ ನಾಯಕ್ ಇಂದಾಜೆ ಮತ್ತು ಉಪಾಧ್ಯಕ್ಷರಾಗಿ ಭಾಸ್ಕರ ರೈ ಕಟ್ಟ ಅವಿರೋಧವಾಗಿ ಆಯ್ಕೆಯಾದರು. ಮಂಗಳವಾರ ಸಂಘದ ಕಚೇರಿಯಲ್ಲಿ ನಡೆದ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಯ ಪ್ರಕ್ರೀಯೆಯನ್ನು ಸಹಕಾರ ಸಂಘದ ಹಿರಿಯ ನಿರೀಕ್ಷಕರಾದ ಶಿವಲಿಂಗಯ್ಯ.ಎಂ ಚುನಾವಣಾಧಿಕಾರಿಯಾಗಿ ನಡೆಸಿಕೊಟ್ಟರು.ಸಂಘದ ನಿರ್ದೇಶಕರಾದ ಕೇಶವ ಕುಂದರ್ ,ಪುಷ್ಪರಾಜ್ ಬಿ.ಎನ್,ಇಬ್ರಾಹಿಂ
ಮಂಗಳೂರು ನಗರ ಹೊರವಲಯದ ಪಣಂಬೂರು ಕುಳಾಯಿ ಬೀಚ್ನಲ್ಲಿ ಯುವಕರು ಗಾಂಜಾ ಸೇವನೆ ಮಾಡುತ್ತಿರುವ ದೃಶ್ಯ ಕ್ಯಾಮರದಲ್ಲಿ ಸೆರೆಯಾಗಿದೆ. ವೀಕೆಂಡ್ ಸಮಯದಲ್ಲಿ ಯುವಕರು ಗಾಂಜಾ ಸೇವನೆ ಮಾಡುತ್ತಾ ಮೋಜು ಮಸ್ತಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಇದರಿಂದ ಸಾರ್ವಜನಿಕರು ಭಯಭೀತರಾಗಿದ್ದಾರೆ. ಬೀಚ್ನಲ್ಲಿ ಯುವಕರ ಉಪಟಳದಿಂದ ಜನರ ಆತಂಕಕ್ಕೆ ಕಾರಣವಾಗಿದೆ. ಗಾಂಜಾ ಸೇವನೆ ಮಾಡಿದ ಬಳಿಕ ಯುವಕರು ಬೀಚ್ನಲ್ಲಿ ಮೋಜು ಮಸ್ತಿಯಲ್ಲಿ ತೊಡಗಿಕೊಂಡಿರುವುದೇ ಕಾರಣ. ಈ ಬಗ್ಗೆ ಪೆÇಲೀಸರು
ವಿವಿಧ ವಿಸ್ಮಯಗಳಿಗೆಆಕಾಶ ಸಾಕ್ಷಿಯಾಗುತ್ತದೆ. ಆಕಾಶದ ಬಗ್ಗೆ ಆಳವಾಗಿ ತಿಳಿಯುತ್ತಾ ಹೋದಂತೆ ಅವು ಸೃಷ್ಟಿಸುವ ಅದ್ಭುತಗಳನ್ನು ತಿಳಿದುಕೊಳ್ಳಬಹುದುಎಂದು ತಜ್ಞರಾದಪ್ರೊಫೆಸರ್ರಮೇಶ್ ಭಟ್ ಹೇಳಿದರು.ಅವರುಉಜಿರೆಯಎಸ್ಡಿಎಂಕಾಲೇಜಿನ ಭೌತಶಾಸ್ತ್ರ ವಿಭಾಗ ಆಯೋಜಿಸಿದ ವಂಡರ್ಆಫ್ ಸ್ಕೈಎಂಬ ವಿಷಯದವೆಬಿನಾರ್ಕಾರ್ಯಕ್ರಮದಲ್ಲಿ ಮಾತನಾಡಿದರು. ಆಕಾಶವು ನಮ್ಮದೃಷ್ಟಿಕೋನದಲ್ಲಿ ಭೂಮಿಯ ಮೇಲ್ಮೈಯ ಮೇಲೆ ಕಾಣುವ ವಾತಾವರಣ.ಸೂರ್ಯ, ಚಂದ್ರ ಮತ್ತು ನಕ್ಷತ್ರ ಮೊದಲಾದವುಗಳನ್ನು
ಮಂಗಳೂರಿನ ನಾರಾಯಣ ಗುರು ಪದವಿ ಕಾಲೇಜಿನಲ್ಲಿ ಜುಲೈ 25ರಿಂದ 31ರ ವರೆಗೆ ಬಿಕಾಂ ತರಗತಿಗೆ ದಾಖಲಾಗುವ ಎಲ್ಲಾ ವಿದ್ಯಾರ್ಥಿನಿಯರಿಗೆ ಸಂಪೂರ್ಣ ಉಚಿತ ಶಿಕ್ಷಣವನ್ನು ನೀಡುವುದಾಗಿ ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ.ನಗರದ ನಾರಾಯಣ ಗುರು ಪದವಿ ಕಾಲೇಜಿನಲ್ಲಿ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹವನ್ನು ನೀಡುತ್ತಿದ್ದು, ಅದರಂತೆ ಜುಲೈ 25ರಿಂದ ಜುಲೈ 31ರ ವರೆಗೆ ದಾಖಲಾತಿ ಮಾಡಿಕೊಳ್ಳುವ ವಿದ್ಯಾರ್ಥಿನಿಯರಿಗೆ ಪೂರ್ಣವಾಗಿ ಉಚಿತ ಶಿಕ್ಷಣ
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಾಜಿ ಸಚಿವೆ ಶಶಿಕಲಾ ಜೊಲ್ಲೆಯವ್ರು ಮೊಟ್ಟೆ ಹಗರಣದ ಕುರಿತು ಸೂಕ್ತ ತನಿಖೆ ಮಾಡಬೇಕೆಂದು ಆಗ್ರಹಿಸಿ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಮಂಗಳೂರಿನ ಮಲ್ಲಿಕಟ್ಟೆಯಲ್ಲಿ ಪ್ರತಿಭಟನೆ ನಡೆಸಿದರು. ಇದೇ ವೇಳೆ ಪ್ರತಿಭಟನಾಕಾರರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದರು. ರಾಜ್ಯ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಾಜಿ ಸಚಿವೆ ಶಶಿಕಲಾ ಜೊಲ್ಲೆ
ಫಲ್ಗುಣಿ ನದಿಗೆ ಅಡ್ಡಲಾಗಿ ಕಟ್ಟಿದ ಮರವೂರು ಸೇತುವೆಯ ಕುಸಿದ ಪಿಲ್ಲರ್ನ್ನು ಯಥಾಸ್ಥಿತಿಗೆ ತಂದು ಸೇತುವೆ ದುರಸ್ತಿ ಕೆಲಸ ಬಹುತೇಕ ಪೂರ್ತಿಯಾಗಿದೆ. ಜು.30ರಿಂದ ಲಘು ವಾಹನ ಸಂಚಾರಕ್ಕೆ ಮುಕ್ತಗೊಳಿಸುವ ನಿರೀಕ್ಷೆಯಿದೆ. ಪಿಡಬ್ಲ್ಯೂಡಿ ಇಲಾಖೆಯ ತಜ್ಞ ಇಂಜಿನಿಯರ್ಗಳ ಸಲಹೆಯಂತೆ ಸೇತುವೆಯ ಪಿಲ್ಲರ್ ಅನ್ನು ಹೈಡ್ರೋಲಿಕ್ ಜ್ಯಾಕ್ ಬಳಸಿ ಮೇಲಕ್ಕೆತ್ತಿ ಯಥಾಸ್ಥಿತಿಗೆ ತರಲಾಗಿತ್ತು. ಇದೀಗ ದುರಸ್ತಿ ಕೆಲಸ ಬಹುತೇಕ ಪೂರ್ಣಗೊಂಡಿದೆ.ಗುರುವಾರ ತಜ್ಞರ ಉಪಸ್ಥಿತಿಯಲ್ಲಿ


















