Home ಕರಾವಳಿ Archive by category ಮಂಗಳೂರು (Page 304)

ದ.ಕ. ಜಿಲ್ಲೆಯಲ್ಲಿ ವಾಣಿಜ್ಯ ಚಟುವಟಿಕೆಗಳು ಚುರುಕು

ದ.ಕ. ಜಿಲ್ಲೆಯಲ್ಲಿ ಇಂದಿನಿಂದ ಅನ್‍ಲಾಕ್ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 7ರಿಂದ ಅಪರಾಹ್ನ 2ರವರೆಗೆ ಎಲ್ಲ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಜಿಲ್ಲಾಡಳಿತ ಅವಕಾಶ ನೀಡಿದ್ದು, ಅದರಂತೆ ಜಿಲ್ಲೆಯ ವಾಣಿಜ್ಯ ಚಟುವಟಿಕೆಗಳು ಸುಮಾರು ಎರಡು ತಿಂಗಳ ಬಳಿಕ ಪುನಾರಂಭಗೊಂಡಿದೆ. ಈ ನಡುವೆ ಬಸ್ ಗಳ ಓಡಾಟಕ್ಕೂ ಅವಕಾಶ ಕಲ್ಪಿಸಿದ್ದರಿಂದ ಸರಕಾರಿ ಬಸ್ ಗಳು ಬೆಳಗ್ಗೆಯಿಂದ

ಕೊರೋನಾದಿಂದ ಪತ್ರಕರ್ತರಿಗೆ ಸಂಕಷ್ಟ : ಶಾಸಕ ಡಾ.ವೈ ಭರತ್ ಶೆಟ್ಟಿ ಹೇಳಿಕೆ

ಸುರತ್ಕಲ್: “ಕೊರೋನಾ ಎರಡನೇ ಅಲೆಯ ಸಂದರ್ಭದಲ್ಲಿ ಇಡೀ ದೇಶವೇ ತಲ್ಲಣಗೊಂಡಿದ್ದು ಮಾಧ್ಯಮ ಮಿತ್ರರಿಗೆ ಹೆಚ್ಚಿನ ಸಮಸ್ಯೆ ಎದುರಾಗಿದೆ. ಹೀಗಾಗಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ವತಿಯಿಂದ ಪತ್ರಕರ್ತರ ಕ್ಷೇಮ ವಿಚಾರಿಸುವ ಕಾರ್ಯಕ್ರಮ ಕೈಗೊಂಡಿದ್ದೇವೆ. ಪ್ರತೀ ಹಂತದಲ್ಲೂ ನಿಲ್ಲುವ ಪತ್ರಕರ್ತರನ್ನು ಗುರುತಿಸುವ ಕೆಲಸ ಸಮಾಜ ಮಾಡಬೇಕು” ಎಂದು ಮಂಗಳೂರು ಉತ್ತರ ಕ್ಷೇತ್ರ ಶಾಸಕ ಡಾ.ಭರತ್ ಶೆಟ್ಟಿ ಹೇಳಿದರು. ಅವರು

ಕೋವಿಡ್ ಪ್ಯಾಕೇಜ್‌ಗೆ ಆಗ್ರಹಿಸಿ ಜನಾಗ್ರಹ ಆಂದೋಲನ

ಸಮಗ್ರ ಪ್ಯಾಕೇಜ್ ಮತ್ತು ತುರ್ತು ಕ್ರಮಗಳಿಗಾಗಿ ಒತ್ತಾಯಿಸಿ ಉಸ್ತುವಾರಿ ಮಂತ್ರಿ ಮತ್ತು ಶಾಸಕರುಗಳ ಕಛೇರಿ ಎದುರು ಖಾಲಿ ಚೀಲಗಳನ್ನು ಸುಟ್ಟು ಇಂದು ಜನಾಗ್ರಹ ಆಂದೋಲನವು ಹಮ್ಮಿಕೊಂಡಿದ್ದ ರಾಜ್ಯವ್ಯಾಪಿ ಪ್ರತಿಭಟನೆಯ ಭಾಗವಾಗಿ ಮಂಗಳೂರಿನ ದ.ಕ. ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಬಳಿ ಹಮ್ಮಿಕೊಂಡಿದ್ದ ಪ್ರತಿಭಟನೆಗೆ ಮಂಗಳೂರು ಪೋಲಿಸರು ಮೊದಲಿಗೆ ಅನುಮತಿ ನಿರಾಕರಿಸಿದರೂ, ಸಂಸದರು ಮತ್ತು ಶಾಸಕರನ್ನು ಜಿಲ್ಲಾಧಿಕಾರಿ ಕಚೇರಿಯಲ್ಲಿ ಭೇಟಿ ಮಾಡಿಸುವ ವ್ಯವಸ್ಥೆ

ಮೂರು ತಿಂಗಳ ಅವಧಿಯ ವಿದ್ಯುತ್ ಬಿಲ್ಲು, ನೀರಿನ ಬಿಲ್ಲು ಮನ್ನಾ ಮಾಡಬೇಕು- ಮುನೀರ್ ಕಾಟಿಪಳ್ಳ

 ಮಂಗಳೂರು: ಕ್ ಡೌನ್ ಅವಧಿಯಲ್ಲಿ ಜನ ಸಾಮಾನ್ಯರಿಗೆ ಅನ್ನ ಕೊಡಲಿಲ್ಲ, ಅಕ್ಕಿ ಕೊಡಲಿಲ್ಲ, ಬೇಳೆ ಕೊಡಲಿಲ್ಲ, ನಮ್ಮ ಮಕ್ಕಳ ಶಾಲಾ ಫೀಸು ಕೊಡಲಿಲ್ಲ, ಬ್ಯಾಂಕಿಗೆ ಕಟ್ಟಬೇಕಾದ ಸಾಲದ ಕಂತನ್ನು ಬಿಡದೆ ವಸೂಲಿ ಮಾಡಿದಿರಿ, ಈಗ ಕನಿಷ್ಟ ಈ ಮೂರು ತಿಂಗಳ ಅವಧಿಯ ವಿದ್ಯುತ್ ಬಿಲ್ , ನೀರಿನ ಬಿಲ್ಲನ್ನಾದರೂ ಮನ್ನ ಮಾಡಬೇಕೆಂದು ಡಿವೈಎಫ್ಐ ರಾಜ್ಯಾದ್ಯಕ್ಷರಾದ ಮುನೀರ್ ಕಾಟಿಪಳ್ಳ ನಿನ್ನೆ ಡಿವೈಎಫ್ಐ ರಾಜ್ಯಾದ್ಯಂತ ವಿದ್ಯುತ್ ದರ ಏರಿಕೆಯನ್ನು ವಿರೋಧಿಸಿ ಹಾಗೂ ಮೂರು ತಿಂಗಳ

ಮಂಗಳೂರಿನಲ್ಲಿ ವಾಹನಗಳ ತಪಾಸಣೆ : ನಿಷೇಧಿತ ಟಿಂಟ್ ತೆಗೆದ ಪೊಲೀಸರು

ಮಂಗಳೂರು ನಗರದಲ್ಲಿ ಕಳೆದ ಕೆಲವು ದಿನಗಳಿಂದ ಲಾಕ್‌ಡೌನ್ ವಿನಾಯಿತಿ ಅವಧಿಯಲ್ಲಿ ವಾಹನಗಳ ದಟ್ಟಣೆ ಕಂಡುಬರುತ್ತಿದ್ದ ಹಿನ್ನೆಲೆಯಲ್ಲಿ ಇಂದು ನಗರದಲ್ಲಿ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಪೊಲೀಸರು ದಿಢೀರ್ ತಪಾಸಣೆ ನಡೆಸಿದರು. ನಗರದಲ್ಲಿ ಮಧ್ಯಾಹ್ನ 2 ಗಂಟೆಯವರೆಗೆ ಲಾಕ್‌ಡೌನ್ ಅವಧಿಯನ್ನು ವಿಸ್ತರಿಸಲಾಗಿದ್ದು, ಈ ಸಮಯದಲ್ಲಿಯೂ ನಗರಾದ್ಯಂತ ವಾಹನಗಳ ಓಡಾಟ ಹೆಚ್ಚಾಗಿತ್ತು. ಇದರಿಂದಾಗಿ ಇಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಡಿಸಿಪಿ ಹರಿರಾಂ ಶಂಕರ್,

ಶಾಸಕ ಡಾ.ಭರತ್ ಶೆಟ್ಟಿಯವರ ನೇತೃತ್ವದಲ್ಲಿಕೋವಿಡ್ ಲಸಿಕೆ ಅಭಿಯಾನ

ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮಾಂತರ ಭಾಗದಲ್ಲಿರುವ ಆಟೋ ರಿಕ್ಷಾ, ಟ್ಯಾಕ್ಸಿ ಚಾಲಕರಿಗೆ ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರ ಆಶಯ ಮತ್ತು ನೇತೃತ್ವದಲ್ಲಿ ಅದೇ ಪ್ರದೇಶದಲ್ಲಿ ಕೋವಿಡ್ ಲಸಿಕಾ ಸೌಲಭ್ಯ ನೀಡುವ ಅಂಗವಾಗಿ ಗುರುಪುರ- ಕೈಕಂಬದ ಮಾತೃಭೂಮಿ ಸಭಾಂಗಣದಲ್ಲಿ ಮಂಗಳವಾರ ಲಸಿಕಾ ಅಭಿಯಾನ ನಡೆಯಿತು. ಈ ಸಂದರ್ಭದಲ್ಲಿ ಭಾಜಪಾ ಉತ್ತರ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸಂದೀಪ್ ಪಚ್ಚನಾಡಿ, ರಾಜೇಶ್ ಕೊಟ್ಟಾರಿ, ತಾಲೂಕು ಪಂಚಾಯತ್ ಮಾಜಿ

ಕೋವಿಡ್ ಲಸಿಕೆ ವ್ಯಾಪರೀಕರಣದ ವಸ್ತುವಾಗಬಾರದು: ಐವನ್ ಡಿಸೋಜ

ಕೋವಿಡ್ ಲಸಿಕೆಯನ್ನು ಎಲ್ಲರಿಗೂ ಉಚಿತವಾಗಿ ನೀಡಬೇಕು. ಲಸಿಕೆ ವ್ಯಾಪರೀಕರಣದ ವಸ್ತುವಾಗಬಾರದು. ಸರ್ಕಾರವೇ ಲಸಿಕೆಯನ್ನು ಭರಿಸಿ ಉಚಿತವಾಗಿ ಎಲ್ಲರಿಗೂ ಉಚಿತವಾಗಿ ನೀಡಬೇಕು ಎಂದು ಮಾಜಿ ಎಂಎಲ್‌ಸಿ ಐವನ್ ಡಿಸೋಜಾ ಆಗ್ರಹಿಸಿದರು.ಅವರು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ದೇಶದ 130 ಕೋಟಿ ಜನರಿಗೆ ಉಚಿತ ಲಸಿಕೆಯನ್ನು ನೀಡಬೇಕೆಂದು ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ. ಅದಕ್ಕಾಗಿಯೇ 35,000 ಕೋಟಿ ರೂಪಾಯಿ ತೆರಿಗೆಯ ಹಣವನ್ನು

ಜಪ್ಪಿನಮೊಗರು : ಮಗನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ತಂದೆ

ಜಪ್ಪಿನಮೊಗರು ಗ್ರಾಮದ ಕೊಪ್ಪರಿಗುತ್ತು ಎಂಬಲ್ಲಿ ಸಾಕು ದನಗಳನ್ನು ಹೊರಗಡೆ ಕಟ್ಟಿ ಹಾಕಿರುವ ವಿಚಾರಕ್ಕೆ ಸಂಬಂಧಿಸಿದಂತೆ ಜಗಳವಾಗಿ ತಂದೆಯೇ ತನ್ನ ಮಗನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎನ್ನುವ ಘಟನೆ ನಡೆದಿದೆ. ಕೊಪ್ಪರಿಗೆಗುತ್ತು ನಿವಾಸಿ ಆರೋಪಿ ವಿಶ್ವನಾಥ ಶೆಟ್ಟಿ (52) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಸ್ವಾಮೀತ್ ಶೆಟ್ಟಿ (25) ಸುಟ್ಟ ಗಾಯಗೊಂದಿಗೆ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಸಾಕುದನಗಳನ್ನು ಹೊರಗಡೆ ಕಟ್ಟಿಹಾಕಿದ್ದ ಬಗ್ಗೆ

ವಿ4 ಡಿಜಿಟಲ್ ಇನ್ಫೋಟೆಕ್ ಮತ್ತು ಡಿಜಿಟಲ್ನಲ್ಲಿ ಉಚಿತ ಲಸಿಕೆ ವಿತರಣೆ

ಮಂಗಳೂರಿನ ವಿ4 ಡಿಜಿಟಲ್ ಇನ್ಫೋಟೆಕ್ ಮತ್ತು ಡಿಜಿಟಲ್‌ನ ಕೇಬಲ್ ಆಪರೇಟರ್ ಹಾಗೂ ಸಿಬ್ಬಂದಿಗಳಿಗೆ ಉಚಿತವಾಗಿ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ನಗರದ ಯೆಯ್ಯಡಿಯಲ್ಲಿರುವ ವಿ4 ಡಿಜಿಟಲ್ ಇನ್ಫೋಟೆಕ್ ಮತ್ತು ಡಿಜಿಟಲ್‌ನಲ್ಲಿ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ವೈದ್ಯಾಧಿಕಾರಿ ಡಾ| ಸುಷ್ಮಾ ಜಾಸ್ಮಿನ್ ಅವರು ಚಾಲನೆ ನೀಡಿದ್ರು. ಇನ್ನು ದಕ್ಷಿಣ ಕನ್ನಡ ಜಿಲ್ಲಾಡಳಿತ , ಜಿಲ್ಲಾ ಆರೋಗ್ಯ ಇಲಾಖೆ , ಮಂಗಳೂರು ಮಹಾನಗರ ಪಾಲಿಕೆ ಸಹಕಾರದೊಂದಿಗೆ

Defeat Covid : Tips at your fingertips

By:  Subrat Saraf, Assistant professor, college o–f Hotel Management and Tourism During the past 12-15 months, the world has been experiencing a very tough time in view of the pandemic owing to the outbreak of Covid-19 disease. The disease has claimed the lives of many of our beloved ones while many have succeeded in the […]