Home ಕರಾವಳಿ Archive by category ಮಂಗಳೂರು (Page 305)

Srinivas University signed MOU with IST

Shrinivas University, Pandeshwar, Mangaluru, signed a Memorandum of Understanding (MOU) with Indian Society for Training and Development, Mangalore, with an objective of training the students in various soft skill aspects. Training at the college level helps students to succeed in their career

ಜುಲೈ 26ರಂದು ಕದ್ರಿಯ ವೀರ ಯೋಧರ ಸ್ಮಾರಕದಲ್ಲಿ ಕಾರ್ಗಿಲ್ ವಿಜಯೋತ್ಸವ

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ನೇತ್ರಾವತಿ ವಲಯ ಮಂಗಳೂರು ಮತ್ತು ಶ್ರೀ ಪತಂಜಲಿ ಯೋಗ ಶಿಕ್ಷಣ ಫೌಂಡೇಶನ್ ವತಿಯಿಂದ ಜುಲೈ 26ರಂದು ಕಾರ್ಗಿಲ್ ವಿಜಯೋತ್ಸವ ನಗರದ ಕದ್ರಿಯ ಹುತಾತ್ಮ ಯೋಧರ ಸ್ಮಾರಕದಲ್ಲಿ ಜರುಗಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ದಯಾನಂದ ಕಟೀಲ್ ತಿಳಿಸಿದರು. ಅವರು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಜುಲೈ 26ರಂದು ಬೆಳಗ್ಗೆ 6:30ಕ್ಕೆ ಕಾರ್ಯಕ್ರಮ ಆರಂಭವಾಗಲಿದ್ದು, ಕಾರ್ಗಿಲ್ ಕದನದಲ್ಲಿ ಅಪ್ರತಿಮ ಧೈರ್ಯ, ಸಾಹಸ,

ರಾಷ್ಟ್ರಭಕ್ತ ನಾಗರಿಕ ವೇದಿಕೆ ಸುರತ್ಕಲ್‍ನಿಂದ ಜು.26ರಂದು ಕಾರ್ಗಿಲ್ ವಿಜಯೋತ್ಸವ

ರಾಷ್ಟ್ರಭಕ್ತ ನಾಗರಿಕ ವೇದಿಕೆ ಸುರತ್ಕಲ್ ವತಿಯಿಂದ ಜುಲೈ 26ರಂದು ಕಾರ್ಗಿಲ್ ವಿಜಯೋತ್ಸವವನ್ನು ಇಡ್ಯಾ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ವೇದಿಕೆಯ ಅಧ್ಯಕ್ಷರಾದ ಸತ್ಯಜಿತ್ ಸುರತ್ಕಲ್ ಹೇಳಿದರು. ಅವರು ಸುರತ್ಕಲ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಇಡ್ಯಾ ಶ್ರೀ ಮಹಾಲಿಂಗೇಶ್ವರದ ದೇವಸ್ಥಾನದ ಪ್ರಧಾನ ಅರ್ಚಕರು ಮತ್ತು ಅನುವಂಶಿಕ ಆಡಳಿತ ಮುಕ್ತೇಸರರಾದ ವೇದಮೂರ್ತಿ ಐ ರಮಾನಂದ ಭಟ್ ಅವರು ಉದ್ಘಾಟನೆ ಮಾಡಲಿದ್ದಾರೆ.

ಶ್ರೀನಿವಾಸ್ ವಿವಿಯಲ್ಲಿ ಕೋವಿಡ್ ಲಸಿಕಾ ಶಿಬಿರ

ಮಂಗಳೂರು: ನಗರದ ಶ್ರೀನಿವಾಸ್‌ ವಿಶ್ವವಿದ್ಯಾಲಯ, ಸಿಟಿ ಕ್ಯಾಂಪಸ್‌ ಪಾಂಡೇಶ್ವರದಲ್ಲಿ ದ.ಕ. ಜಿಲ್ಲಾ ಆರೋಗ್ಯ ಕೇಂದ್ರ, ಜೆಪ್ಪು ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದೊಂದಿಗೆ, ಕ್ಯಾಂಪಸ್‌ನ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಭೋದಕೇತರ ಸಿಬ್ಬಂದಿಗಳಿಗೆ ಕೋವಿಡ್‌ ಲಸಿಕೆ ನೀಡುವ ಶಿಬಿರ  ಜರಗಿತು. ಶ್ರೀನಿವಾಸ್‌ ವಿಶ್ವವಿದ್ಯಾಲಯದ ಕುಲಪತಿ ಡಾ. ಪಿ. ಎಸ್.‌ ಐತಾಳ್‌ ಕೋವಿಡ್‌ ವಾರಿಯರ್ಸ್‌ಗಳನ್ನು ಈ ಸಂದರ್ಭ ಅಭಿನಂದಿಸಿದರು.ಈ ಶಿಬಿರದಲ್ಲಿ ಒಟ್ಟು 700 ಮಂದಿಗೆ

ಶಕ್ತಿಯುತ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನ್: ಡಿ.ಕೆ.ಶಿವಕುಮಾರ್

ಮಂಗಳೂರು: ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನ್ ಸಂಸ್ಥೆಯನ್ನು ರಾಜ್ಯದಲ್ಲಿ ಶಕ್ತಿಯುತವಾಗಿ ಸಂಘಟಿಸಲಾಗುವುದು ಎಂದು ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ದ.ಕ.ಜಿಲ್ಲಾ ಪದಾಧಿಕಾರಿಗಳೊಂದಿಗೆ ಅನೌಪಚಾರಿಕ ಸಭೆ ನಡೆಸಿದ ಡಿ.ಕೆ.ಶಿವಕುಮಾರ್ ಅವರು, ಸಂಘಟನೆಯನ್ನು ಬಲಪಡಿಸುವ ಸಲುವಾಗಿಯೇ ಹಿರಿಯ ಮುಖಂಡ ಸಿ.ನಾರಾಯಣ ಸ್ವಾಮಿ ಅವರನ್ನು ಸಂಘಟನೆಯ ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಲಾಗಿದ್ದು, ಸಂಘಟನೆಯನ್ನು

ಕ್ಯಾಂಪ್ಕೋದಿಂದ ಹಲಸಿನ ಹಣ್ಣಿನ ಚಾಕಲೇಟ್

ಅಂತಾರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೋ ಇದೀಗ ಹಲಸಿನ ಹಣ್ಣು ಬಳಸಿ ಚಾಕಲೇಟ್ ಉತ್ಪಾದಿಸುವ ಹೊಸ ಪ್ರಯತ್ನಕ್ಕೆ ಕೈಹಾಕಿದೆ. ಜಾಕ್‍ಪ್ರಟ್ ಎಕ್ಲೇರ್ಸ್ ಹೆಸರಿನಲ್ಲಿ ಈ ಚಾಕಲೇಟ್ ಮಾರುಕಟ್ಟೆಗೆ ಪ್ರವೇಶಿಸುತ್ತಿದ್ದು, ಹಣ್ಣಿನಿಂದ ತಯಾರಿಸಿದ ಚಾಕಲೇಟ್ ಉತ್ಪನ್ನ ಭಾರತದಲ್ಲಿ ಇದೇ ಮೊದಲ ಬಾರಿಗೆ ಮಾರುಕಟ್ಟೆಗೆ ಹೊರಬರುತ್ತಿದ್ದು, ಈ ಸಾಧನೆ ತೋರಿದ ಭಾರತದ ಮೊದಲ ಸಂಸ್ಥೆಯೆಂದೂ ಕ್ಯಾಂಪ್ಕೋ ಗುರುತಿಸಿಕೊಂಡಿದೆ.

ಶ್ರೀನಿವಾಸ್‌ ಆಸ್ಪತ್ರೆಯಲ್ಲಿ Duodenal Ulcer Perforation with Severe Respritory Distress ನ ಯಶಸ್ವೀ ಶಸ್ತ್ರಚಿಕಿತ್ಸೆ

ಶ್ರೀನಿವಾಸ್‌ ಆಸತ್ರೆಯ ತುರ್ತು ನಿಗಾ ಘಟಕದ ಮುಂಭಾಗದಲ್ಲಿ ಒಂದು ಕಾರ್‌ ಬಂದು ನಿಂತಿತು. ತಾಯಿಯೊಬ್ಬಳು ತೀವ್ರವಾದ ಉಸಿರಾಟದ ತೊಂದರೆಯೊಂದಿಗೆ ಡ್ಯುವೋಡೆನಲ್ ಅಲ್ಸರ್ ರಂದ್ರದ (Duodenal Ulcer Perforation with Severe Respritory Distress) ಮಗುವನ್ನು ಕೈಯಲ್ಲಿ ಹಿಡಿದು ಅಳುತ್ತಾ ಕಾರಿನಿಂದ ಕೆಳಗಿಳಿದಳು. ತೀವ್ರವಾಗಿ ಅಸ್ವಸ್ಥವಾಗಿದ್ದ ಮಗುವಿನ ಹೊಟ್ಟೆ ಊದಿಕೊಂಡಿದ್ದು, ಉಸಿರಾಡಲು ಕಷ್ಟಪಡುತ್ತಿತ್ತು. ತಕ್ಷಣವೇ ಶ್ರೀನಿವಾಸ್‌ ಆಸ್ಪತ್ರೆಯ ವೈದ್ಯಕೀಯ

ರಾಜ್ಯದಲ್ಲಿ ಒಳ್ಳೆಯ ಸರ್ಕಾರ ಕೊಡುವುದಕ್ಕೆ ಆಗಿಲ್ಲ: ಡಿ.ಕೆ. ಶಿವಕುಮಾರ್

ಮಂಗಳೂರು: ಈ ರಾಜ್ಯದಲ್ಲಿ ಒಳ್ಳೆ ಸರ್ಕಾರ ಕೊಡುವುದಕ್ಕೆ ಆಗಿಲ್ಲ. ಹೀಗಾಗಿ ಮುಖ್ಯಮಂತ್ರಿ ಬದಲಾವಣೆ ಮಾಡುತ್ತಿದ್ದಾರೆ. ಡಬಲ್ ಇಂಜಿನ್ ಸರ್ಕಾರ ಇದ್ರು ಒಳ್ಳೆ ಆಡಳಿತ ಕೊಡಲು ಆಗಿಲ್ಲ. ಈ ಸರ್ಕಾರಕ್ಕೆ ಗೌರವ ಎಲ್ಲಿದೆ. ಅವರಲ್ಲಿ ಎಷ್ಟೇ ಮುಖ್ಯಮಂತ್ರಿ ಚೇಂಜ್ ಆದ್ರು ಅವರ ಪಕ್ಷದ ಬಗ್ಗೆ ಮಾತಾಡಲ್ಲ ಎಂದು ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಮಂಗಳೂರಿನಲ್ಲಿ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿಕೆ ನೀಡಿದರು. ಯಾವ ಅಧಿಕಾರಿಗಳು ಅವರ ಮಾತು

ಖಾಲಿಯಾಗುವ ಸಿಎಂ ಹುದ್ದೆಗೆ ದಲಿತ ನಾಯಕನನ್ನು ಆಯ್ಕೆ ಮಾಡಲಿ: ಸಿದ್ದರಾಮಯ್ಯ

ಬಿಜೆಪಿಯಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ನಡೆಯುತ್ತಿದೆ. ಬಿ.ಎಸ್.ಯಡಿಯೂರಪ್ಪ ಶೀಘ್ರ ರಾಜೀನಾಮೆ ನೀಡುವ ಸಾಧ್ಯತೆ ಇದ್ದು, ಬಿಜೆಪಿಯಲ್ಲಿ ಖಾಲಿಯಾಗುವ ಸಿಎಂ ಹುದ್ದೆಗೆ ದಲಿತ ನಾಯಕನನ್ನು ಆಯ್ಕೆ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರಿಗೆ ಸವಾಲು ಹಾಕಿದ್ದಾರೆ. ಅವರು ಮಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನಳಿನ್ ಕುಮಾರ್ ಕಟೀಲು ಇತ್ತೀಚೆಗೆ ಕಾಂಗ್ರೆಸ್ ದಲಿತ ಸಿಎಂ ಅಭ್ಯರ್ಥಿಯನ್ನು