Home ಕರಾವಳಿ Archive by category ಮಂಗಳೂರು (Page 308)

ಉಳ್ಳಾಲ ವಿಧಾನಸಭಾ ಕ್ಷೇತ್ರದ NSUI ಅಧ್ಯಕ್ಷರಾಗಿ ಅಹ್ನಾಫ್ ಅಹ್ಮದ್ ನೇಮಕ

ಮಂಗಳೂರು (ಉಳ್ಳಾಲ) ವಿಧಾನಸಭಾ ಕ್ಷೇತ್ರದ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (NSUI) ಅಧ್ಯಕ್ಷರಾಗಿ ಅಹ್ನಾಫ್ ಅಹ್ಮದ್(ಡೀಲ್ಸ್) ಇವರು ನೇಮಕವಾಗಿದ್ದಾರೆ. ಇವರು ದಕ್ಷಿಣ ಕನ್ನಡ ಜಿಲ್ಲಾ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾಗಿದ್ದು ಮಂಗಳೂರಿನ SDM ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಬಿಎ ವ್ಯಾಸಂಗ ಮಾಡುತ್ತಿದ್ದಾರೆ. ಪ್ರೌಢಶಾಲೆಯಿಂದಲೇ ತನ್ನ

ಉರ್ವ ಮಾರುಕಟ್ಟೆ ಸಂಕೀರ್ಣ : ವೇದವ್ಯಾಸ್ ಕಾಮತ್ ಭೇಟಿ ನೀಡಿ ಪರಿಶೀಲನೆ

ಮಂಗಳೂರು ಮಹಾನಗರ ಪಾಲಿಕೆಯ ಉರ್ವ ಮಾರುಕಟ್ಟೆ ಸಂಕೀರ್ಣಕ್ಕೆ ಇಂದು ಶಾಸಕ ವೇದವ್ಯಾಸ್ ಕಾಮತ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಹಾನಗರ ಪಾಲಿಕೆಯ ಮೇಯರ್ ಶ್ರೀ ಪ್ರೇಮಾನಂದ ಶೆಟ್ಟಿ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ರವಿಶಂಕರ್ ಮಿಜಾರ್, ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಾದಅಕ್ಷಯ್ ಶ್ರೀಧರ್ , ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ಗಣೇಶ್ ಕುಲಾಲ್, ಸಂಧ್ಯಾ ಮೋಹನ್ ಆಚಾರ್, ಜಗದೀಶ್ ಶೆಟ್ಟಿ ಬೋಳೂರು, ಪಾಲಿಕೆ ನಾಮನಿರ್ದೇಶಿತ

ಮಾವಿನ ಎಲೆ 290..! 64% ಡಿಸ್ಕೌಂಟ್ ಆಗಿ 109..!

ಸಾಮಾನ್ಯವಾಗಿ ಮಾರುಕಟ್ಟೆಯಲ್ಲಿ ಮಾವಿನಹಣ್ಣಿಗೆ ಬೇಡಿಕೆ ಇರುತ್ತದೆ. ಆದರೆ ಈಗ ಕಾಲ ಬದಲಾಗಿ ಮಾವಿನ ಎಲೆಗೂ ಕೂಡ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಾಗಿದೆ. ಇದು ಆಚ್ಚರಿಯ ಸಂಗತಿಯಾದರೂ ನಂಬಲೇಬೇಕು ಹೌದು ಕಾಲಕ್ಕೆ ತಕ್ಕಂತೆ ಕೋಲ.! ಈಗ ಬದಲಾಗಿದೆ ಆನ್‍ಲೈನ್ ಶಾಪಿಂಗ್ ಆ್ಯಪ್ ಒಂದಾದ ಅಮೇಜಾನ್‍ನಲ್ಲಿ 21 ಮಾವಿನ ಎಲೆಗೆ 290 ರೂಪಾಯಿಯಾಗಿದ್ದು 64% ಡಿಸ್ಕೌಂಟ್ ಆಗಿ 109 ರೂಪಾಯಿಯಾಗಿದೆ. ಮೊನ್ನೆ ಹಲಸಿನ ಬೀಜಕ್ಕೆ ಇಂದು ಮಾವಿನ ಎಲೆಗೆ ಡಿಮ್ಯಾಂಡ್ ಹೆಚ್ಚಾಗಿದ್ದು.

ಪತ್ರಕರ್ತ ಡಾ.ಸಂದೀಪ್ ವಾಗ್ಲೆ ಅವರಿಗೆ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿ

ಸೌಹಾರ್ದತೆ ಮತ್ತು ಮಾನವೀಯ ಮೌಲ್ಯವನ್ನು ಪ್ರತಿ ಬಿಂಬಿಸುವ ವರದಿಗೆ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ನೀಡಲಾಗುವ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಕನ್ನಡ ಪ್ರಭ ದಿನಪತ್ರಿಕೆಯ ವರದಿಗಾರ ಡಾ.ಸಂದೀಪ್ ವಾಗ್ಲೆ ಆಯ್ಕೆಯಾಗಿದ್ದಾರೆ.ಕನ್ನಡ ಪ್ರಭ ದಿನ ಪತ್ರಿಕೆಯಲ್ಲಿ 2020, ನವಂಬರ್ 25ರಂದು ಪ್ರಕಟಗೊಂಡ ಸಂದೀಪ್ ವಾಗ್ಲೆ ಅವರ ವರದಿ‘ ಕೋಮು ಸೌಹಾರ್ದ ತೆಗೆ ಸಾಕ್ಷಿ-ಸೇತುವಾದ ಯಕ್ಷಗಾನ’ ಎಂಬ ವರದಿಗೆ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿಯು ರೂ.

ರಾಷ್ಟ್ರಪಕ್ಷಿಗೆ ಸ್ಕೂಟರ್ ಢಿಕ್ಕಿ: ದ್ವಿಚಕ್ರ ಸವಾರ ಮೃತ್ಯು

ತೆಂಕ ಎರ್ಮಾಳು ಗರೋಡಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನವಿಲೊಂದಕ್ಕೆ ಡಿಕ್ಕಿಯಾಗಿ ನಿಯಂತ್ರಣ ಕಳೆದುಕೊಂಡ ಸ್ಕೂಟರ್ ಸವಾರ ರಸ್ತೆಯಂಚಿನ ಬಾಂಡ್ ಕಲ್ಲೊಂದಕ್ಕೆ ಡಿಕ್ಕಿಯಾಗಿ ತಲೆಗೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಮೃತ ಯುವಕ ಬೆಳಪು ನಿವಾಸಿ ಪಡುಬಿದ್ರಿ ಮೊಬೈಲ್ ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ. ಅಬ್ದುಲ್ (25) ಎಂದು ಗುರುತಿಸಲಾಗಿದೆ. ಪಡುಬಿದ್ರಿ ಕಡೆಯಿಂದ ತನ್ನ ಸ್ಕೂಟರಲ್ಲಿ ಬರುತ್ತಿದ್ದ ಯುವಕನಿಗೆ ನವಿಲೊಂದು ಹಾರಿಕೊಂಡು ಬಂದು ಡಿಕ್ಕಿಯಾಗಿದೆ.

“ಯಾರಿಗೂ ಹೇಳ್ಬೇಡಿ” – ತನಿಖೆಗೆ ಸಚಿವರನ್ನ ಒತ್ತಾಯ: ಶಾಸಕ ವೇದವ್ಯಾಸ್ ಕಾಮತ್ ಹೇಳಿಕೆ

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಘನತೆಗೆ ಕುತ್ತು ತರಲು ರಾಜಕೀಯ ಪ್ರೇರಿತ ಹಿತಾಸಕ್ತಿಗಳು ರಾಜ್ಯಾಧ್ಯಕ್ಷರ ಧ್ವನಿ ಅನುಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ ಮತ್ತು ತನಿಖೆಗೆ ಗೃಹ‌ ಸಚಿವರನ್ನು ಒತ್ತಾಯಿಸುತ್ತೇನೆ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದ್ದಾರೆ. ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದ ವಿಚಾರಗಳ ಚರ್ಚೆಯಾದರೂ ಅದನ್ನು ಶಾಸಕರ ಬಳಿ ಮಾತನಾಡದೆ ಪಕ್ಷದ ಶಿಸ್ತಿಗೆ ಬದ್ಧವಾಗಿರುವ

ಬೆಂಕಿ ಅವಘಡ : ಎಸೆಸೆಲ್ಸಿ ವಿದ್ಯಾರ್ಥಿಗಳು ಸ್ಥಳಾಂತರ

ಎಸೆಸೆಲ್ಸಿ ಪರೀಕ್ಷೆ ನಡೆಯುತ್ತಿದ್ದ ಕೊಠಡಿಯ ಸಮೀಪವೆ ಇದ್ದ ಲ್ಯಾಬ್‍ನಲ್ಲಿ ಬೆಂಕಿ ಅವಘಡ ಸಂಭವಿಸಿ ಇಡೀ ಲ್ಯಾಬ್ ಹೊತ್ತಿ ಉರಿದ ಘಟನೆ ಬಬ್ಬುಕಟ್ಟೆಯ ಖಾಸಗಿ ಮಹಿಳಾ ಕಾಲೇಜಿನಲ್ಲಿ ನಡೆದಿದೆ. ಬೆಂಕಿ ಅವಘಡ ಸಂಭವಿಸಿದ ಲ್ಯಾಬ್ ಇದ್ದ ಕಟ್ಟಡದಲ್ಲಿ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಎಸೆಸೆಲ್ಸಿ ಪರೀಕ್ಷೆ ಬರೆಯುತ್ತಿದ್ದು, ಅವರನ್ನೆಲ್ಲಾ ಡ್ಯುಟಿಯಲ್ಲಿದ್ದ ಶಿಕ್ಷಕರು ಮತ್ತು ಸಿಬ್ಬಂದಿಗಳು ಸುರಕ್ಷಿತವಾಗಿ ಮತ್ತೊಂದು ಕಟ್ಟಡಕ್ಕೆ ಸ್ಥಳಾಂತರಿಸಿದ್ದಾರೆ. ಸರ್ವಿಸ್

ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಕ್ಕೆ ದ.ಕ ಜಿಲ್ಲಾಧಿಕಾರಿ ಭೇಟಿ

ಕೋವಿಡ್ ಭೀತಿ ಮಧ್ಯೆಯೂ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಮುಂದಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 179 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಮಂಗಳೂರಿನ ನಂತೂರಿನ ಪದವು ಹಾಗೂ ಕಪಿತಾನಿಯ ಶಾಲೆಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ|ಕೆ.ವಿ. ರಾಜೇಂದ್ರ ಅವರು ಭೇಟಿ ನೀಡಿ. ಪರಿಶೀಲನೆ ನಡೆಸಿದರು. ಕೊರೋನ ಮಾರ್ಗಸೂಚಿ ಅನ್ವಯ ಮುಂಜಾಗ್ರತಾ

ನಾಳೆ ಪಿಯುಸಿ ಫಲಿತಾಂಶ: ಎಷ್ಟು ಗಂಟೆಗೆ ..? ರಿಸಲ್ಟ್ ನೋಡುವುದು ಹೇಗೆ ಇಲ್ಲಿದೆ ಮಾಹಿತಿ..

ಯುಸಿ ವಿದ್ಯಾರ್ಥಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಫಲಿತಾಂಶವನ್ನು ನಾಳೆ ಅಂದರೆ ಜುಲೈ 20ರಂದು ಪ್ರಕಟಿಸಲಾಗುತ್ತಿದೆ. ಶಿಕ್ಷಣ ಇಲಾಖೆಯ ವೆಬ್ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗಲಿದ್ದು, ಸಂಜೆ 4.30 ಗಂಟೆಗೆ ಫಲಿತಾಂಶ ನೋಡಬಹುದಾಗಿದೆ. ಇದಾಗಲೇ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ತಿಳಿಸಿರುವಂತೆ ಎಸ್ಎಸ್ಎಲ್ಸಿ ಮತ್ತು ಪ್ರಥಮ ಪಿಯುಸಿ ಅಂಕಗಳು ಹಾಗೂ ಇಂಟರ್ನಲ್ ಅಸೆಸ್‍ಮೆಂಟ್ ಪರಿಗಣಿಸಿ ಫಲಿತಾಂಶ ನೀಡಲಾಗುತ್ತದೆ. ಈ ಕುರಿತು ಸುರೇಶ್ ಕುಮಾರ್

“ಯಾರಿಗೂ ಹೇಳ್ಬೇಡಿ” – ಸಚಿವ ಸ್ಥಾನ ಹೋದ್ರು ಪರವಾಗಿಲ್ಲ: ಸಚಿವ ಈಶ್ವರಪ್ಪ

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋ ವೈರಲ್ ಮತ್ತು ಅದರಲ್ಲಿ ಉಲ್ಲೇಖಿತ ಶೆಟ್ಟರ್, ಈಶ್ವರಪ್ಪ ಸೈಡ್ ಲೈನ್ ಬಗ್ಗೆ ಈಶ್ವರಪ್ಪ ಪ್ರತಿಕ್ರಿಯಿಸಿದ್ದಾರೆ. ಯಾರು ಆಡಿಯೋ ವೈರಲ್ ಮಾಡಿದ್ದಾರೆ ಎನ್ನುವ ಬಗ್ಗೆ ತನಿಖೆಯಾಗಲಿದೆ. ನಳಿನ್ ಕುಮಾರ್ ವಿರುದ್ಧ ವ್ಯವಸ್ಥಿತ ಸಂಚು ರೂಪಿಸಿ ಅವರನ್ನು ಬಲಿಪಶು ಮಾಡಲು ಹೊರಟಿದ್ದಾರೆ. ಯಾರೋ ಹುಚ್ಚರು ಆಡಿಯೋವನ್ನು ಸೃಷ್ಟಿ ಮಾಡಿದ್ದಾರೆ. ನಳಿನ್ ಕುಮಾರ್ ಕಟೀಲ್ ಆಡಿಯೋ ನನ್ನದಲ್ಲ ಎಂದು