ಮಂಗಳೂರು ವಿಶ್ವವಿದ್ಯಾನಿಲಯದ ಸಮಾಜ ಕಾರ್ಯದಲ್ಲಿ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ವಿಭಾಗ, ದಕ್ಷಿಣ ಕೆನರಾದ ಕ್ಯಾಥೋಲಿಕ್ ಸಂಘ ಮತ್ತು ಕಣಚೂರು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಸಹಯೋಗದಲ್ಲಿ ಎಮ್ಎಸ್ಡಬ್ಲ್ಯುನ ಕೈಗಾರಿಕಾ ಮನೋವಿಜ್ಞಾನ ವಿದ್ಯಾರ್ಥಿಗಳಿಗಾಗಿ ಮನೋವಿಜ್ಞಾನ ಶಿಬಿರವನ್ನು ಆಯೋಜಿಸಲಾಗಿತ್ತು. ಕಣಚೂರು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ
ವಿಶ್ವವಿದ್ಯಾನಿಲಯದ 43ನೇ ಘಟಿಕೋತ್ಸದಲ್ಲಿ ಉದ್ಯಮಿಗಳಾದ ರೋಹನ್ ಮೊಂತೆರೋ, ಡಾ.ಎಂ.ಎನ್.ರಾಜೇಂದ್ರ ಕುಮಾರ್ , ಕನ್ಯಾನ ಸದಾಶಿವ ಶೆಟ್ಟಿ ಅವರಿಗೆ ಮಂಗಳೂರು ವಿವಿಯಿಂದ ಗೌರವ ಡಾಕ್ಟರೇಟ್ ಪದವಿ ಪಡೆಯಲಿದ್ದಾರೆ. ಮಾ. 29ರಂದು ಪೂರ್ವಾಹ್ನ 11ಕ್ಕೆ ವಿಶ್ವವಿದ್ಯಾನಿಲಯದ ಆವರಣದ ಮಂಗಳ ಸಭಾಂಗಣದಲ್ಲಿ ಘಟಿಕೋತ್ಸವ ನಡೆಯಲಿದೆ ಎಂದು ವಿವಿ ಕುಲಪತಿ ಪ್ರೊ.ಧರ್ಮ ತಿಳಿಸಿದ್ದಾರೆ. ಕೊಣಾಜೆಯ ಮಂಗಳೂರು ವಿವಿಯ ಆಡಳಿತ ಸೌಧದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಈ ಮಾಹಿತಿ
ನೇತ್ರಾವತಿ ನದಿ ತೀರದಲ್ಲೇ ಇರುವ ಬಜಾಲ್ ಕಟ್ಟಪುನಿ ಪ್ರದೇಶಕ್ಕೆ ಸರಿಯಾದ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಸಾಧ್ಯವಾಗದ ಶಾಸಕರು, ಪಾಲಿಕೆ ಸದಸ್ಯರು ಯಾಕಿರಬೇಕು. ಈ ಕೂಡಲೇ ನೀರು ವಿತರಿಸುವಲ್ಲಿ ವಿಳಂಬವಾದರೆ ಇದೇ ಖಾಲಿ ಕೊಡಗಳನ್ನು ಹಿಡಿದು ಪಾಲಿಕೆ ಆಯುಕ್ತರ ಕಚೇರಿಗೆ ಮುತ್ತಿಗೆ ಹಾಕಲಿದ್ದೇವೆ ಎಂದು ಬಜಾಲ್ ವಾರ್ಡ್ ಅಭಿವೃದ್ಧಿ ಹೋರಾಟ ಸಮಿತಿ ಕಾರ್ಯದರ್ಶಿ, ಡಿವೈಎಫ್ಐ ಮುಖಂಡ ಸಂತೋಷ್ ಬಜಾಲ್ ಇಂದು ( 27-03-2025) ಬಜಾಲ್ ಕಟ್ಟಪುನಿ ಪ್ರದೇಶದ
ನವದೆಹಲಿ: ಪುತ್ತೂರು ಶ್ರೀ ಮಹಾಲಿಂಗೇಶ್ವರ, ಶಿಶಿಲದ ಶ್ರೀ ಶಿಶಿಲೇಶ್ವರ ದೇವಸ್ಥಾನ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಪ್ರಮುಖ ದೇವಾಲಯಗಳನ್ನು ಕೇಂದ್ರ ಸರ್ಕಾರ ‘ಪ್ರಸಾದ್’ ಯೋಜನೆಯಡಿಯಲ್ಲಿ ಅಭಿವೃದ್ದಿಪಡಿಸುವಂತೆ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ಜೊತೆ ನವದೆಹಲಿಯಲ್ಲಿ
ಮಂಗಳೂರು : ಸಮರ ವೀರ ಕೆದಂಬಾಡಿ ರಾಮಯ್ಯ ಗೌಡ್ರ ಮುಂದಾಳತ್ವದಲ್ಲಿ ನಡೆದ ಅಮರ ಸುಳ್ಯ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಗೆದ್ದು ಮಂಗಳೂರಿನ ಬಾವುಟ ಗುಡ್ಡೆಯಲ್ಲಿ ವಿಜಯ ದ್ವಜ ಹಾರಿಸಿ ಮತ್ತು 13 ದಿವಸ ಆಡಳಿತ ನಡೆಸಿದ ಸಂಸ್ಮರಣಾ ದಿನ ಆಚರಣೆಯ ಅಂಗವಾಗಿ ತುಳುನಾಡ ಅಮರ ಸುಳ್ಯ ಸಮರ – 1837 ಸಂಸ್ಮರಣಾ ಮತ್ತು ವಿಜಯದಿನಾಚರಣೆ ಕಾರ್ಯಕ್ರಮ ಪ್ರಯುಕ್ತ ಸಮರ ವೀರ ಕೆದಂಬಾಡಿ ರಾಮಯ್ಯ ಗೌಡ ಸ್ಥಾಪನ ಸಮಿತಿ ಮಂಗಳೂರು ವತಿಯಿಂದ ಚಿತ್ರಕಲಾ ಸ್ಪರ್ಧೆ ಏ.5 ರಂದು ಬೆಳಗ್ಗೆ 9 […]
ಮಂಗಳೂರು ದೇರಳಕಟ್ಟೆಯ ಯೆನೆಪೊಯ ಡೆಂಟಲ್ ಕಾಲೇಜಿನ ಆರ್ಥೊಡಾಂಟಿಕ್ಸ್ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥರಾದ ಡಾ. ಸಂದೀಪ್ ಶೆಟ್ಟಿ ಅವರು, ಕ್ಲಾಸ್ III ಮ್ಯಾಲೋಕ್ಲೂಷನ್ ಚಿಕಿತ್ಸೆಗಾಗಿ ಹೊಸತು SAVE ಸಾಧನವನ್ನು ಅಭಿವೃದ್ಧಿಪಡಿಸಿ ಹೊಸ ತಂತ್ರವನ್ನು ಪರಿಚಯಿಸಿದ್ದಾರೆ. ಡಾ. ಸಂದೀಪ್ ಶೆಟ್ಟಿ ಅವರ ಪಿಎಚ್ಡಿ ಪ್ರಬಂಧ "SAVE: A Novel Appliance and Its Finite Evaluation for Correction of Deficient Maxilla" ನಲ್ಲಿ ಪ್ರಸ್ತಾಪಿಸಿದ ಅವರ
ಮಂಗಳೂರು: ಮಂಗಳೂರಿನ ಅಳಕೆಯಲ್ಲಿರುವ ಮುದ್ರಾ ಪ್ರಿಂಟರ್ಸ್ನಲ್ಲಿ ನವ ನವೀನ ಮಾದರಿಯ ಉತ್ಕೃಷ್ಟ ಗುಣಮಟ್ಟದ ಪ್ರಪಂಚದಲ್ಲೇ ಪ್ರಸಿದ್ಧಿ ಮತ್ತು ಪ್ರಖ್ಯಾತಿಯನ್ನು ಹೊಂದಿರುವ ಫ್ಲೆಕ್ಸ್ ಪ್ರಿಂಟಿಂಗ್ ಪ್ರೀಮಿಯಂ ಆಲ್ವಿನ್ ಬ್ರಾಂಡ್ನ ಹೊಸ ನೂತನ ಮಿಷಿನ ಉದ್ಘಾಟನೆ ಸಮಾರಂಭ ನಡೆಯಿತು. ಕಳೆದ ೩೦ ವರ್ಷಗಳಿಂದ ಮುದ್ರಣ ಕ್ಷೇತ್ರದಲ್ಲಿ ಮನೆ ಮಾತಾಗಿರುವ ನಗರದ ಕುದ್ರೋಳಿ ಅಳಕೆಯಲ್ಲಿರುವ ಮುದ್ರ ಪ್ರಿಂಟರ್ಸ್ನಲ್ಲಿ ಉತ್ಕೃಷ್ಟ ಗುಣಮಟ್ಟದ
ಯಮಹಾದ ಅಧಿಕೃತ ಡೀಲರ್ಗಳಾದ ಮೊಟೊ ವರ್ಲ್ಡ್ ತೊಕ್ಕೊಟ್ಟು ವತಿಯಿಂದ ದ್ವಿಚಕ್ರ ವಾಹನ ಖರೀದಿಯ ಮೇಲೆ ವಿಶೇಷ ಆಫರ್ಗಳನ್ನು ಘೋಷಿಸಿದ್ದಾರೆ.ಯಮಹಾದ ಯಾವುದೇ ಮಾದರಿಯ ಸ್ಕೂಟರ್ ಖರೀದಿಸಿದರೆ ನಾಲ್ಕು ಸಾವಿರ ಕ್ಯಾಶ್ಬ್ಯಾಕ್, ಪುಲ್ ಟ್ಯಾಂಕ್ ಪೆಟ್ರೋಲ್, ಉಚಿತ ಹೆಲ್ಮೆಟ್ ಮತ್ತು ಕಡಿಮೆ ಡೌನ್ ಪೇಮೆಂಟ್ ವ್ಯವಸ್ಥೆಯೂ ಇದೆ.ಇನ್ನು ಯಮಹಾದ ಯಾವುದೇ ಮಾದರಿಯ ಮೋಟಾರ್ ಬೈಕ್ ಖರೀದಿಸಿದರೆ, ೩ ಸಾವಿರ ರೂಪಾಯಿ ಕ್ಯಾಶ್ಬ್ಯಾಕ್, ಕಡಿಮೆ ಡೌನ್ಪೇಮೆಂಟ್, ಉಚಿತ ಹೆಲ್ಮೆಟ್,
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಕರಾವಳಿ ಲೇಖಕಿಯರ ವಾಚಕಿಯರ ಸಂಘ, ಹೇಮಾಂಶು ಪ್ರಕಾಶನ, ಆಕೃತಿ ಆಶಯ ಪಬ್ಲಿಕೇಶನ್ಸ್ ವತಿಯಿಂದ ಇತ್ತೀಚೆಗೆ ನಿಧನರಾದ ಹಿರಿಯ ವಿದ್ವಾಂಸರಾದ ಡಾ. ವಾಮನ ನಂದಾವರ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮವು ನಗರದ ತುಳು ಅಕಾಡೆಮಿಯ ಸಿರಿ ಚಾವಡಿಯಲ್ಲಿ ನಡೆಯಿತು. ಆರದ ಎಣ್ಣೆ, ಮಾಸದ ಬತ್ತಿ, ಆರದ ದೀಪ ಎಂಬ ಹೆಸರಿನಲ್ಲಿ ನುಡಿನಮನ ಕಾರ್ಯಕ್ರಮವನ್ನು ಹಮ್ಮಿಕೊಂಡರು. ಕಾರ್ಯಕ್ರಮದ ಮೊದಲಿಗೆ ವಾಮನ ನಂದಾವರ ಅವರ ಭಾವ ಚಿತ್ರಕ್ಕೆ ಪುಷ್ಪ
ಮಂಗಳೂರು ಸಿಸಿಬಿ ಪೊಲೀಸರು ರಾಜ್ಯದ ಇತಿಹಾಸದಲ್ಲೇ ಅತೀ ದೊಡ್ಡ ಡ್ರಗ್ಸ್ ಜಾಲವನ್ನು ಬೇಧಿಸಿರುವುದು ಪೊಲೀಸ್ ಇಲಾಖೆಯ ಬಗ್ಗೆ ಜಿಲ್ಲೆಯ ನಾಗರಿಕರು ಹೆಮ್ಮೆ ಪಡುವಂತಹ ವಿಷಯವಾಗಿದೆ ಎಂದು ವಿಧಾನ ಪರಿಷತ್ಸದಸ್ಯರಾದ ಮಂಜುನಾಥ ಭಂಡಾರಿ ಹೇಳಿದರು.ದಕ್ಷಿಣ ಕನ್ನಡ ಜಿಲ್ಲೆ ಇತ್ತೀಚಿನ ದಿನಗಳಲ್ಲಿ ಡ್ರಗ್ಸ್ ಜಾಲದ ಕಬಂಧಬಾಹುಗಳಲ್ಲಿ ಬಂಧಿಯಾಗಿದ್ದು ಜನಸಾಮಾನ್ಯರು ಆತಂಕ ಪಡುವಂತಹ ವಾತಾವರಣ ಸೃಷ್ಟಿಯಾಗಿತ್ತು. ಆದರೆ ಈ ಜಾಲದ ಬೆನ್ನುಬಿದ್ದ ಪೊಲೀಸರು ಅಂದಾಜು 75 ಕೋಟಿ




























