Home ಕರಾವಳಿ Archive by category ಮಂಗಳೂರು (Page 37)

ಮಂಗಳೂರು: ದಕ್ಷಿಣದ ರಾಜ್ಯಗಳಲ್ಲಿ ಲೋಕಸಭಾ ಕ್ಷೇತ್ರಗಳನ್ನು ಕುಗ್ಗಿಸಲು ಕೇಂದ್ರ ಸರ್ಕಾರ ಯತ್ನ :ಡಿ.ಕೆ ಶಿವಕುಮಾರ್

ದಕ್ಷಿಣದ ರಾಜ್ಯಗಳಲ್ಲಿ ಲೋಕಸಭಾ ಕ್ಷೇತ್ರಗಳನ್ನು ಕುಗ್ಗಿಸಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದ್ದು, ಇದರ ವಿರುದ್ಧ ಕಾಂಗ್ರೆಸ್ ಹೋರಾಡಲಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು. ಉಡುಪಿ ಜಿಲ್ಲೆಯ ಕಾಪು ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಆಯೋಜಿಸಿರುವ ಅಮ್ಮನ ಪ್ರತಿಷ್ಠಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು

ರೂ.1200 ಕೋಟಿ ವ್ಯವಹಾರದ 113 ವರ್ಷಗಳ ಇತಿಹಾಸವಿರುವ
ಎಂ.ಸಿ.ಸಿ. ಬ್ಯಾಂಕಿನ 19ನೇ ಶಾಖೆ ಬೆಳ್ಮಣ್‌ನಲ್ಲಿ ಉದ್ಘಾಟನೆ

113 ವರ್ಷಗಳ ಇತಿಹಾಸವಿರುವ ಎಂ.ಸಿ.ಸಿ. ಬ್ಯಾಂಕ್ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅತ್ಯುತ್ತಮ ಪ್ರಗತಿ ಸಾಧಿಸುತ್ತಿದ್ದು 2023-24ನೇ ವಿತ್ತೀಯ ವರ್ಷದಲ್ಲಿ ಶೇಕಡಾ 10% ಲಾಭಾಂಶ ಘೋಷಿಸಿರುತ್ತದೆ. ಬ್ಯಾಂಕ್ ಸತತವಾಗಿ ಲಾಭ ಗಳಿಸುತ್ತಿದ್ದು. 2023-24ನೇ ವಿತ್ತೀಯ ವರ್ಷದಲ್ಲಿ ಲಾಭ ಗಳಿಕೆಯಲ್ಲಿ ಅಭೂತಪೂರ್ವ ಪ್ರಗತಿ ಸಾಧಿಸಿದ್ದು, ಬ್ಯಾಂಕಿನ ನಿವ್ವಳ ಲಾಭವು ರೂ.10.45 ಕೋಟಿಯಾಗಿರುತ್ತದೆ. ಇದು ಬ್ಯಾಂಕಿನ ಚರಿತ್ರೆಯಲ್ಲಿಯೇ ಅತ್ಯಂತ ಹೆಚ್ಚಿನ ಲಾಭವಾಗಿರುತ್ತದೆ. ಕಳೆದ

ಮಂಗಳೂರು : ಎ.ಜೆ.ಆಸ್ಪತ್ರೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೊದಲ ಅಪರೂಪದ ಗಾಲಿಯಂ-68 ಟ್ರೈವಿಹೆಕ್ಸಿನ್ PET-CT ಸ್ಕ್ಯಾನ್ ಯಶಸ್ವಿ ನಿರ್ವಹಣೆ

ಮಂಗಳೂರಿನ ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರವು ದಕ್ಷಿಣ ಕನ್ನಡದಲ್ಲಿ ಪ್ರಥಮ ಬಾರಿಗೆ ಅಪರೂಪದ ಮತ್ತು ಸುಧಾರಿತ PET-CT ಸ್ಕ್ಯಾನ್  (Gallium-68 Trivehexin) ಯಶಸ್ವಿಯಾಗಿ ನಡೆಸಿರುವುದನ್ನು ಘೋಷಿಸುತ್ತದೆ. ಇದು ನಿರ್ಧಾರಾತ್ಮಕ ಇಮೇಜಿಂಗ್ ಕ್ಷೇತ್ರದಲ್ಲಿ  ಮಹತ್ವದ ಮೈಲಿಗಲ್ಲಾಗಿದೆ. Gallium-68 Trivehexin ಸ್ಕ್ಯಾನ್ ಅನ್ನು ಪ್ರಾಥಮಿಕ ಹೈಪರ್‌ಪ್ಯಾರಾಥೈರಾಯಿಡಿಸಂ (PHPT) ಕಾಯಿಲೆಯಿಂದ ಪೀಡಿತ ರೋಗಿಗಳಲ್ಲಿ ಹೈಪರ್‌ಫಂಕ್ಷನಿಂಗ್

ಕೋಟೆಕಾರು : “ಮಾಡೂರು ಶಾಖಾ ಅಂಚೆ ಕಚೇರಿ ಉದ್ಘಾಟನೆ”

ಅಂಚೆ ಕಚೇರಿಗಳು ಜನ ಸಾಮಾನ್ಯರ ಜೀವನಕ್ಕೆ ಅವಶ್ಯವಾದಂತಹ ಸೇವೆಗಳನ್ನು ಮನೆಬಾಗಿಲಿನಲ್ಲಿ ಆಧುನಿಕ ತಂತ್ರಜ್ಞಾನದೊಂದಿಗೆ ನೀಡುವ ಮೂಲಕ ಹಿಂದೆಂದಿಗಿಂತಲೂ ಹೆಚ್ಚು ಪ್ರಸ್ತುತವಾಗಿವೆ ಮತ್ತು ಬದಲಾದ ಕಾಲ ಘಟ್ಟದಲ್ಲಿ ಅಂಚೆ ಇಲಾಖೆಯ ಜನಸೇವೆ ಅತ್ಯಂತ ಶ್ಲಾಘನೀಯ ಎಂದು ಮಾಜಿ ಸಂಸದರಾದ ನಳಿನ್ ಕುಮಾರ್ ಕಟೀಲ್ ರವರು ಹೇಳಿದರು. ಕೋಟೆಕಾರಿನ ಮಾಡೂರಿನಲ್ಲಿ ಹೊಸ ಶಾಖಾ ಅಂಚೆ ಕಚೇರಿಯ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು. ಹೊಸ ಶಾಖಾ

ನೆಹರೂ ಮೆಮೋರಿಯಲ್ ಕಾಲೇಜಿನ ರಾಷ್ಟ್ರೀಯ ಸೇವಾಯೋಜನೆಯ 47ನೇ ವರ್ಷದ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆ

ಮಂಗಳೂರು ವಿಶ್ವವಿದ್ಯಾನಿಲಯ, ನೆಹರೂ ಮೆಮೋರಿಯಲ್ ಕಾಲೇಜಿನ ರಾಷ್ಟ್ರೀಯ ಸೇವಾಯೋಜನೆಯ ನಲವತ್ತೇಳನೇ ವರ್ಷದ ವಾರ್ಷಿಕ ವಿಶೇಷ ಶಿಬಿರವು ಫೆ. 22ನೇ ಶನಿವಾರದಿಂದ ಫೆ. 28 ಶುಕ್ರವಾರದವರೆಗೆ ಮಂಡೆಕೋಲು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕನ್ಯಾನದಲ್ಲಿ ನಡೆಯುತ್ತಿದ್ದು ಈ ಶಿಬಿರವನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ.ವಿ. ಚಿದಾನಂದ ಇವರು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಡಾ| ರುದ್ರಕುಮಾರ್ ಎಂ. ಎಂ.,

ಮಂಗಳೂರು : ಪದವು ಫ್ರೆಂಡ್ಸ್ ಕ್ಲಬ್ ನ 49ನೇ ವರ್ಷದ ವಾರ್ಷಿಕೋತ್ಸವ ಆಚರಣೆ

ಮಂಗಳೂರು : ಶಕ್ತಿನಗರದ ಪದವು ಫ್ರೆಂಡ್ಸ್ ಕ್ಲಬ್ ನ 49ನೇ ವರ್ಷದ ವಾರ್ಷಿಕೋತ್ಸವ ಸಮಾರಂಭವು ಶನಿವಾರ ನಡೆಯಿತು. ಪದವು ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಕುಶಾಲ್ ಕುಮಾರ್ .ಕೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಹಿರಿಯ ರಂಗಕರ್ಮಿ ಜಿ.ಎಸ್.ಆಚಾರ್ ರವರಿಗೆ ಹಾಸ್ಯ ಚಕ್ರವರ್ತಿ ಬಿರುದಾಂಕಿತ ದಿ| ಮಾಧವ ಕೆ. ಶಕ್ತಿನಗರ ಸ್ಮಾರಕ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಾಯಿತು. ದೆಹಲಿಯಲ್ಲಿ ನಡೆದ ರಾಷ್ಟ್ರೀಯ ಶಾಲಾ ನಾಯಕತ್ವ ಸಮಾವೇಶಕ್ಕೆ ಆಯ್ಕೆಯಾದ ಕರ್ನಾಟಕದ ಏಕೈಕ

ಫೆ.18ರಂದು ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಪದಗ್ರಹಣ, ಸಂವಿಧಾನ ಜಾಗೃತಿ ಸಮಾವೇಶ

ಮಂಗಳೂರು: ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಜಾತಿ ಘಟಕದ ಪದಗ್ರಹಣ ಕಾರ್ಯಕ್ರಮ ಹಾಗೂ ಸಂವಿಧಾನ ಜಾಗೃತಿ ಸಮಾವೇಶ ಫೆ.18ರಂದು ನಗರದ ಊರ್ವಸ್ಟೋರ್ ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಜಿಲ್ಲಾಧ್ಯಕ್ಷ ದಿನೇಶ್ ಮುಳೂರು ತಿಳಿಸಿದ್ದಾರೆ. ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಂದು ಮಧ್ಯಾಹ್ನ 2ಕ್ಕೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ನಾರಾಯಣ ಗುರು

ಮಂಗಳೂರು : ಶಕ್ತಿನಗರ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಬಾಲಾಲಯ ಪ್ರತಿಷ್ಠೆ

ಮಂಗಳೂರು : ಶಕ್ತಿನಗರ ಶ್ರೀ ಕೃಷ್ಣ ಭಜನಾ ಮಂದಿರದ ರಜತಮಹೋತ್ಸವದ ಪ್ರಯುಕ್ತ ನಡೆಯಲಿರುವ ಬ್ರಹ್ಮಕಲಶೋತ್ಸವ ಹಾಗೂ ಪುನಃಪ್ರತಿಷ್ಠೆ ಕಾರ್ಯಕ್ರಮಗಳಿಗೆ ಪೂರ್ವಭಾವಿಯಾಗಿ ಬಾಲಾಲಯ ಪ್ರತಿಷ್ಠೆಯು ಸೋಮವಾರ ಶ್ರೀ ಕ್ಷೇತ್ರದಲ್ಲಿ ನಡೆಯಿತು. ಪ್ರಾತಃಕಾಲ ಬ್ರಹ್ಮಶ್ರೀ ಕದ್ರಿ ಕೃಷ್ಣ ಅಡಿಗರ ನೇತೃತ್ವದಲ್ಲಿ ಗಣಪತಿ ಹೋಮ, ಮೃತ್ಯುಂಜಯ ಹೋಮ ನಡೆದು, ಸಾನಿಧ್ಯದಲ್ಲಿ ಸಂಕೋಚದ ವಿಧಿ ವಿಧಾನಗಳನ್ನು ನಡೆಸಿ ಶ್ರೀ ಕೃಷ್ಣದೇವರನ್ನು ಬಾಲಾಲಯದಲ್ಲಿ ಪ್ರತಿಷ್ಠಾಪಿಸಲಾಯಿತು. ನಂತರ

ಅಪ್ಪಣ್ಣ ಕಟ್ಟೆಯ ಶೆಟ್ಟಿ ಆಟೋ ಪಾರ್ಕ್ ಮೇಲ್ಛಾವಣಿ ಅಭಿವೃದ್ಧಿ – ಶಾಸಕ ವೇದವ್ಯಾಸ ಕಾಮತ್ ಉದ್ಘಾಟನೆ

ನಗರದ ಅಪ್ಪಣ್ಣ ಕಟ್ಟೆಯ ಶೆಟ್ಟಿ ಆಟೋ ಪಾರ್ಕ್ ನ ಮೇಲ್ಛಾವಣಿಯನ್ನು ಶಾಸಕರ ನಿಧಿಯಲ್ಲಿ ಅಭಿವೃದ್ಧಿ ಪಡಿಸಲಾಗಿದ್ದು ಶಾಸಕ ವೇದವ್ಯಾಸ ಕಾಮತ್ ರವರು ಉದ್ಘಾಟಿಸಿದರು. ನಂತರ ಮಾತನಾಡಿದ ಶಾಸಕರು, ಮಂಗಳೂರು ಮಹಾನಗರ ಪಾಲಿಕೆಯ 41ನೇ ಸೆಂಟ್ರಲ್ ವಾರ್ಡಿನ ವ್ಯಾಪ್ತಿಯ ಈ ಆಟೋ ಪಾರ್ಕ್ ಜಿಲ್ಲೆಯ ಅತೀ ಹಳೆಯ ನಿಲ್ದಾಣಗಳಲ್ಲಿ ಒಂದಾಗಿದ್ದು ಸಾರ್ವಜನಿಕರಿಗೆ ಅತ್ಯುತ್ತಮ ಸೇವೆ ಒದಗಿಸುತ್ತಾ ಬಂದಿದೆ. ದಿನನಿತ್ಯ ದುಡಿಯುವ ಆಟೋ ಚಾಲಕರದ್ದು ಶ್ರಮಿಕ ವರ್ಗವಾಗಿದ್ದು ಅವರುಗಳು

ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ ಫೆ. 11 ರಿಂದ 15 ರವರೆಗೆ ಕುಂಭ ಮಹೋತ್ಸವ

ಮಂಗಳೂರು:ದ.ಕ ಜಿಲ್ಲೆಯ ಕುಲಶೇಖರದಲ್ಲಿರುವ ಅತ್ಯಂತ ಪುರಾತಣ ಧಾರ್ಮಿಕ ಶ್ರದ್ಧಾ ಕೇಂದ್ರ ಶ್ರೀ ವೀರ ನಾರಾಯಣ ದೇವಸ್ಥಾನದಲ್ಲಿ ಪೆ 11 ರಿಂದ 15 ತನಕ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರ ಶುಭಾಶಿರ್ವಾದಗಳೊಂದಿಗೆ ಕ್ಷೇತ್ರದ ತಂತ್ರಿಗಳಾದ ಅನಂತ ಉಪಾಧ್ಯಾಯ ವಾಮಂಜೂರು ಇವರ ಪೌರೋಹಿತ್ಯದಲ್ಲಿ ವಿಜೃಂಭಣೆಯಿಂದ ಜರುಗಲಿರುವುದು.ಫೆ. 11 ಮಂಗಳವಾರ ಸಂಜೆ 3 ರಿಂದ ಭಜನಾ, ಕುಣಿತ ಭಜನೆಯೊಂದಿಗೆ ಸಂಜೆ ರಾಜಾಂಗಣದಲ್ಲಿರುವ ಭವ್ಯ ವೇದಿಕೆಯಲ್ಲಿ ಧಾರ್ಮಿಕ ಸಭೆಯು. ಶ್ರೀ