Home ಕರಾವಳಿ Archive by category ಮಂಗಳೂರು (Page 4)

ಎಸ್‌ಜೆಇಸಿ ಬಿಇ ವಿದ್ಯಾರ್ಥಿನಿ ಎನ್‌ಸಿಸಿ ಪಿಒ ಕ್ಯಾಡೆಟ್ ಲಿಷಾ ಡಿ. ಸುವರ್ಣಗೆ ರಕ್ಷಣಾ ಸಚಿವರ ಪ್ರಶಂಸಾ ಪ್ರಶಸ್ತಿ

ಮಂಗಳೂರು ವಾಮಂಜೂರಿನ ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಎಂಜಿನಿಯರಿಂಗ್ ವಿಭಾಗದ ಬಿಇ ವಿದ್ಯಾರ್ಥಿನಿ ಹಾಗೂ ಎನ್‌ಸಿಸಿ ಪಿಒ ಕ್ಯಾಡೆಟ್ ಲಿಷಾ ಡಿ. ಸುವರ್ಣ ಅವರಿಗೆ ರಾಷ್ಟ್ರ ಮಟ್ಟದ ಅತ್ಯುನ್ನತ ಗೌರವವಾದ ರಕ್ಷಣಾ ಸಚಿವರ ಪ್ರಶಂಸಾ ಪ್ರಶಸ್ತಿ ಪ್ರದಾನವಾಗಿದೆ. ಎನ್‌ಸಿಸಿ ಸಂಘಟನೆಯಲ್ಲಿ ಅವರು ತೋರಿದ ಅಪೂರ್ವ ನಾಯಕತ್ವ,

ಲೇಬರ್ ಕೋಡ್ ಹೆಸರಿನಲ್ಲಿ ಕಾರ್ಪೊರೇಟ್ ಕೋಡ್ ಜಾರಿ – ಕಾರ್ಮಿಕ ಸಂಹಿತೆಗಳ ವಿರುದ್ದ ಸುನಿಲ್ ಕುಮಾರ್ ಬಜಾಲ್ ಆಕ್ರೋಶ

ಕೇಂದ್ರ ಸರಕಾರವು ದೇಶದ ಕಾರ್ಮಿಕ ವರ್ಗವನ್ನು ದುರ್ಬಲಗೊಳಿಸಿ ಮತ್ತೆ ಗುಲಾಮಗಿರಿಯತ್ತ ತಳ್ಳಲು, ಕಾರ್ಮಿಕರ ಹಕ್ಕು ಭಾಧ್ಯತೆಗಳನ್ನು ನಾಶ ಮಾಡಲು, ಕಾರ್ಮಿಕ ಚಳುವಳಿಯನ್ನೇ ಹತ್ತಿಕ್ಕಲು ಹಾಗೂ ಬಂಡವಾಳಿಗರ ಹಿತಾಸಕ್ತಿಗಳನ್ನು ಕಾಪಾಡಲು ದೇಶದ ಪ್ರಮುಖ 29 ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿ ಕಾರ್ಪೊರೇಟ್ ಪರವಾದ 4 ಸಂಹಿತೆಗಳನ್ನು ರೂಪಿಸಿ ತಕ್ಷಣದಿಂದಲೇ ಜಾರಿಯಾಗುವಂತೆ ಏಕಪಕ್ಷೀಯ ತೀರ್ಮಾನವನ್ನು ಕೈಗೊಂಡಿದೆ.ಆದ್ದರಿಂದ ಇದು ಕೇವಲ ಲೇಬರ್ ಕೋಡ್ ಅಲ್ಲ ಬದಲಾಗಿ

ಓಂ ಕ್ರಿಕೆಟರ್ಸ್ ಪಾವಂಜೆ ನೂತನ ಅಧ್ಯಕ್ಷರಾಗಿ ಗಣೇಶ್ ದೇವಾಡಿಗರವರು ಆಯ್ಕೆ

ಪಾವಂಜೆ : ಓಂ ಕ್ರಿಕೆಟರ್ಸ ಪಾವಂಜೆ ಇದರ ವಾರ್ಷಿಕ ಮಹಾಸಭೆಯು ಸುಕೇಶ್ ಪಾವಂಜೆ ಇವರ ಅಧ್ಯಕ್ಷತೆಯಲ್ಲಿ ನೆರವೇರಿತು. ಸಂಘಟನೆಯ ನೂತನ ಅಧ್ಯಕ್ಷರಾಗಿ ಗಣೇಶ್ ದೇವಾಡಿಗರವರನ್ನು ಆಯ್ಕೆ ಮಾಡಲಾಯಿತು. ಸಂಸ್ಥೆಯ ಉಪಾಧ್ಯಕ್ಷರಾಗಿ ಪ್ರಮೋದ್, ಕಾರ್ಯದರ್ಶಿಯಾಗಿ ವರುಣ್, ಕೋಶಾಧಿಕಾರಿಯಾಗಿ ಸುನಿಲ್ ಕುಮಾರ್, ತಂಡದ ಕಪ್ತಾನರಾಗಿ ಕಾರ್ತಿಕ್, ಉಪ ಕಪ್ತಾನರಾಗಿ ಪ್ರವೀಣ್ ರವರನ್ನು ಆಯ್ಕೆ ಮಾಡಲಾಯಿತು. ಸಂಸ್ಥೆಯ ಒಟ್ಟು 40 ಸದಸ್ಯರು ಈ ನೂತನ ಪದಾಧಿಕಾರಿಗಳ ಆಯ್ಕೆ

ಉಡುಪಿ: ನೇತ್ರ ಜ್ಯೋತಿ ಕಾಲೇಜಿನಲ್ಲಿ ಸಂಭ್ರಮದ 77ನೆ ಗಣರಾಜ್ಯೋತ್ಸವ

ಉಡುಪಿ: ಉಡುಪಿಯ ಪ್ರತಿಷ್ಠಿತ ನೇತ್ರ ಜ್ಯೋತಿ ಕಾಲೇಜಿನಲ್ಲಿ 77ನೆಯ ಗಣರಾಜ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು.ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಧ್ವಜಾರೋಹಣ ನೆರವೇರಿಸಿದ ಸಾಯಿ ರಾಧಾ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಮನೋಹರ್ ಎಸ್. ಶೆಟ್ಟಿಯವರು ಮಾತನಾಡಿ ಭಾರತವು ವಿವಿಧತೆಯಲ್ಲಿ ಏಕತೆಯನ್ನು ಹೊಂದಿದ ದೇಶ. ಅನೇಕ ಮಹಾನ್ ನಾಯಕರ ತ್ಯಾಗದ ಫಲದಿಂದ ಇಂದು ನಾವು ಸ್ವಾತಂತ್ರ್ಯವನ್ನು ಅನುಭವಿಸುತ್ತಿದ್ದೇವೆ ಎಂದರು. ತಾನು

ಶ್ರೀ ಬಾಲಾಂಜನೇಯ ದೇವರ ಹಾಡಿನ ವಿಡಿಯೋ ಶೀಘ್ರದಲ್ಲಿ ಬಿಡುಗಡೆ

ಶ್ರೀ ಬಾಲಾಂಜನೇಯ ದೇವರ ವಿಡಿಯೋ ಸಹಿತ ಹಾಡು ಸದ್ಯದಲ್ಲೇ ಬಿಡುಗಡೆಯಾಗಲಿದೆ ಹಾಡಿನ ರೆಕಾರ್ಡಿಂಗ್ ಕಾರ್ಯವು 27-01-2026 ಮಧ್ಯಾಹ್ನ ಕ್ಯಾಡ್ ಸ್ಟೂಡಿಯೋದಲ್ಲಿ ನಡೆಯಿತು. ಈ ಸಂದರ್ಭ ಗಾಯಕರಾದ ರವೀಂದ್ರ ಪ್ರಭು ಇವರೊಂದಿಗೆ ಗೀತೆ ರಚನೆಕಾರ ಯಶವಂತ ಬೋಳೂರು ಹಾಗು ದೇವಸ್ಥಾನದ ಅಧ್ಯಕ್ಷರಾದ ರಂಜನ್ ಕಾಂಚನ್ ಉಪಸ್ಥಿತರಿದ್ದರು.

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯದಲ್ಲಿ 77ನೇ ಗಣರಾಜ್ಯೋತ್ಸವ

ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯಲ್ಲಿ 77ನೇ ವರ್ಷದ ಗಣರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಜನವರಿ 26ರಂದು ಆಚರಿಸಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ.) ಕುರುಂಜಿಭಾಗ್ ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ ವಿ ಚಿದಾನಂದ ಧ್ವಜರೋಹಣವನ್ನು ನೆರವೇರಿಸಿ ಗಣರಾಜ್ಯೋತ್ಸವದ ಮಹತ್ವವನ್ನು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯ ಇದರ ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಶ್ರೀ. ಚಂದ್ರಶೇಖರ

ಕಾಪು ಪುರಸಭೆ ವ್ಯಾಪ್ತಿಯ 15 ಲಕ್ಷ ರೂಪಾಯಿ ಅನುದಾನದ ರಸ್ತೆ ಕಾಮಗಾರಿಗೆ ಶಾಸಕರಿಂದ ಗುದ್ದಲಿ ಪೂಜೆ

ಕಾಪು ಪುರಸಭಾ ವ್ಯಾಪ್ತಿಯ ಕಲ್ಯಾ ವಾರ್ಡಿನ ಮಾತಾ ರೆಸಿಡೆನ್ಸಿ ಬಳಿಯ ಅಲ್ಪಸಂಖ್ಯಾತರ ಕಾಲೋನಿ ರಸ್ತೆ ಅಭಿವೃದ್ಧಿಗೆ 15 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಇಂದು ದಿನಾಂಕ 26-01-2026 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಕಾಪು ಪುರಸಭೆಯ ಅಧ್ಯಕ್ಷರಾದ ಹರೀಣಾಕ್ಷಿ ದೇವಾಡಿಗ, ಉಪಾಧ್ಯಕ್ಷರಾದ ಸರೀತಾ ಶಿವಾನಂದ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಕಿರಣ್ ಆಳ್ವ, ಕಾಪು ಪುರಸಭೆಯ

ಮೂಡುಬಿದಿರೆ: ನ್ಯೂ ವೈಬ್ರೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ 77ನೇ ಗಣರಾಜ್ಯೋತ್ಸವ

ಮೂಡುಬಿದಿರೆ: ಕಲ್ಲಬೆಟ್ಟುವಿನಲ್ಲಿರುವ ನ್ಯೂ ವೈಬ್ರೆಂಟ್ ಪದವಿಪೂರ್ವ ಕಾಲೇಜಿನಲ್ಲಿ 77ನೇ ಗಣರಾಜ್ಯೋತ್ಸವ ಸಮಾರಂಭವನ್ನು ಕಾಲೇಜಿನ ಆವರಣದಲ್ಲಿ ನಡೆಯಿತು. ಕಾಲೇಜಿನ ಟ್ರಸ್ಟಿ ಮೆಹಬೂಬ್ ಬಾಷಾ ಅಧ್ಯಕ್ಷತೆ ವಹಿಸಿ ಮಾತನಾಡಿ ಈ ಪವಿತ್ರ ದಿನವು ನಮ್ಮ ದೇಶದ ಸ್ವಾತಂತ್ರ್ಯ, ಸಂವಿಧಾನ ಮತ್ತು ಏಕತೆಯ ಮಹತ್ವವನ್ನು ನೆನಪಿಸುವುದಾಗಿ ಹೇಳಿದರು. ಈ ವರ್ಷವೂ ಭಾರತವು ಅಭಿವೃದ್ಧಿಯ ಹೊಸ ಹಾದಿಯಲ್ಲಿ ಸಾಗಲಿ, ಪ್ರತಿಯೊಬ್ಬ ನಾಗರಿಕನ ಜೀವನದಲ್ಲಿ ಹೊಸ ಕನಸುಗಳು, ಹೊಸ ಆಶಯಗಳು

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಬಿಗ್ ಬಾಸ್ ರನ್ನರ್ ಆಫ್ ರಕ್ಷಿತಾ ಶೆಟ್ಟಿ ಭೇಟಿ

ಕಾಪು: ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಬಿಗ್ ಬಾಸ್ ರನ್ನರ್ ಆಫ್ ರಕ್ಷಿತಾ ಶೆಟ್ಟಿ ಅವರು ಶನಿವಾರ ಮಧ್ಯಾಹ್ನ ಭೇಟಿ ನೀಡಿದರು.ಭೇಟಿ ನೀಡಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರುಶನ ಪಡೆದರು. ದೇವಸ್ಥಾನಕ್ಕೆ ಆಗಮಿಸಿದ ಬಿಗ್ ಬಾಸ್- 12 ರ ರನ್ನರ್ ಆಫ್ ರಕ್ಷಿತಾ ಶೆಟ್ಟಿ ಅವರನ್ನು ವ್ಯವಸ್ಥಾಪನ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಅಮ್ಮನ ಅನುಗ್ರಹ ಪ್ರಸಾದವನ್ನು ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ದೇವಳದ ಅಭಿವೃದ್ಧಿ ಸಮಿತಿಯ ಪ್ರಧಾನ

ಶ್ರೀ ರಾಮಕೃಷ್ಣ ಶಿಕ್ಷಣ ಸಂಸ್ಥೆ ಸ್ಮಾರ್ಟ್ ಬೋರ್ಡ್ ಉದ್ಘಾಟನಾ ಕಾರ್ಯಕ್ರಮ

ಶ್ರೀ ರಾಮಕೃಷ್ಣ ಶಿಕ್ಷಣ ಸಂಸ್ಥೆ, ಬಂಟ್ಸ್ ಹಾಸ್ಟೆಲ್ ಮಂಗಳೂರು ಇಲ್ಲಿ ಸ್ಮಾರ್ಟ್ ಬೋರ್ಡ್ ಉದ್ಘಾಟನಾ ಕಾರ್ಯಕ್ರಮವು ಶಾಲಾ ಸಭಾಂಗಣದಲ್ಲಿ ನಡೆಯಿತು. ಸಂಸ್ಥೆಯ ಸಂಚಾಲಕರಾದ ಡಾ. ಬಿ ಸಂಜೀವ್ ರೈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಮಂಗಳೂರು ನಾರ್ತ್ ರೋಟರಿ ಕ್ಲಬ್ ಹಾಗೂ ಬೆಂಗಳೂರು ವಿಜಯನಗರ ರೋಡ್ ಮತ್ತು ಫಿಕ್ಸೆಲ್ ಸಾಫ್ಟ್ ಟೆಕ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗಳು ಐದು ಸ್ಮಾರ್ಟ್ ಬೋರ್ಡ್ ಗಳನ್ನು ಶಿಕ್ಷಣ ಸಂಸ್ಥೆಗಳಿಗೆ ದೇಣಿಗೆಯಾಗಿ ನೀಡಿದವು.