Home ಕರಾವಳಿ Archive by category ಮಂಗಳೂರು (Page 73)

ಮಂಗಳೂರು: ಫೆ.12 ರಿಂದ 16 ವರಗೆ ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ ಕುಂಭ ಮಹೋತ್ಸವ

ಮಂಗಳೂರು: ಕಳೆದ ವರ್ಷ ಸಂಪೂರ್ಣವಾಗಿ ನವೀಕರಣಗೊಂಡು ಸಂಭ್ರಮದಿಂದ ಬ್ರಹ್ಮಕಲಶೋತ್ಸವವನ್ನು ಆಚರಿಸಿರುವ ಕುಲಶೇಖರದ ಶ್ರೀ ವೀರನಾರಾಯಣ ದೇವರ ವರ್ಷಾವಧಿ ಜಾತ್ರೋತ್ಸವ “ಕುಂಭ ಮಹೋತ್ಸವ” ಎಂಬ ಪದನಾಮದಲ್ಲಿ ಆಚರಿಸಲ್ಪಡುತ್ತಿದ್ದು, ಈ ಬಾರಿಯ ಮಹೋತ್ಸವ ಫೆ. 12 ರಿಂದ 16ರ ತನಕ ಸಂಭ್ರಮದಿಂದ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಶ್ರೀ

ಮಂಗಳೂರು: ಇಂದು ಧ್ಯಾನ ಸಂಗೀತ ಅಕಾಡೆಮಿ ಕಲಾ ಟ್ರಸ್ಟ್‌ನಿಂದ ಸ್ವರ ಶ್ರದ್ಧಾಂಜಲಿ ಹಿಂದುಸ್ಥಾನಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ

ನಗರದ ಉರ್ವಸ್ಟೋರ್ ಧ್ಯಾನ ಸಂಗೀತ ಅಕಾಡೆಮಿ ಕಲಾ ಟ್ರಸ್ಟ್ ವತಿಯಿಂದ ಕನ್ನಡ ಮತ್ತು ಸಂಸ್ಕೃತ ಇಲಾಖೆ ಕರ್ನಾಟಕ ಸರಕಾರ ಸಹಯೋಗದೊಂದಿಗೆ ಸ್ವರ ಶ್ರದ್ಧಾಂಜಲಿ ಹಿಂದುಸ್ಥಾನಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮವು ಫೆ.೧೦ರಂದು ಸಂಜೆ ೫ ಗಂಟೆಗೆ ನಗರದ ಕೊಡಿಯಾಲ್‌ಬೈಲ್‌ನ ಶಾರದಾ ವಿದ್ಯಾಲಯದ ಸಭಾಂಗಣದಲ್ಲಿ ನಡೆಯಲಿದೆ.ಇತ್ತೀಚೆಗೆ ನಿಧನಹೊಂದಿದ ಹಿಂದೂಸ್ತಾನಿ ಸಂಗೀತ ದಿಗ್ಗಜರಾದ ಪ್ರಭಾ ಅತ್ರೆ,ಪಮಡಿತ್ ರಶೀದ್ ಖಾನ್ ಪಂಡಿತ್ ಕೇದಾರ್ ಬೋಡಸ್ ಅವರ ಸ್ಮರಣಾರ್ಥವಾಗಿ

ಕಾವೂರು: ಪ್ರಧಾನಿಗೆ ಪೋಸ್ಟ್ ಕಾರ್ಡ್ ಮೂಲಕ ಅಭಿನಂದನೆ ಸಲ್ಲಿಸುವ ಅಭಿಯಾನ

ಕಾವೂರು: ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆ ವೈಭವವನ್ನು ಮರು ಸೃಷ್ಟಿಸಿ ಶ್ರೀ ಬಾಲರಾಮನ ಪ್ರತಿಷ್ಟೆಯನ್ನು ಮಾಡಿ ಕೋಟಿ ಕೋಟಿ ಜನರ ಆಶಯ ಈಡೇರಿಸಿದ್ದು, ಇದಕ್ಕಾಗಿ ಮಂಗಳೂರು ನಗರ ಉತ್ತರ ಮಂಡಲದ ವತಿಯಿಂದ ಪ್ರಧಾನಿಗೆ ಸಾವಿರಾರು ಪೋಸ್ಟ್ ಕಾರ್ಡ್ ಮೂಲಕ ಅಭಿನಂದನೆ ಸಲ್ಲಿಸುವ ಅಭಿಯಾನ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರಾದ ಡಾ.ಭರತ್ ಶೆಟ್ಟಿ ವೈ ಅವರು, ಸಂತನಂತೆ ಬದುಕು ನಡೆಸುತ್ತಾ ಸನಾತನ ಧರ್ಮದ ಅಸ್ಮಿತೆಯ ಪ್ರತೀಕವಾದ ಶ್ರೀರಾಮನ ಮಂದಿರವನ್ನು

ಮಂಗಳೂರು : ಶ್ರೀ ಗುಜರಾತಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿಗಳಿಂದ ರಸ್ತೆ ಸುರಕ್ಷತೆ ಜಾಗೃತಿ ಕಾರ್ಯಕ್ರಮ

ಮಂಗಳೂರಿನ ಶ್ರೀ ಗುಜರಾತಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಸಿಬಿಎಸ್‌ಸಿ ರಸ್ತೆ ಸುರಕ್ಷತೆ ಜಾಗೃತಿ ತಿಂಗಳ ನಿಮಿತ್ತ ವಿಶಿಷ್ಟ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಶಿಕ್ಷಕರಾದ ನಾಗರಾಜ್ ಮತ್ತು ಜಯಶ್ರೀ ಅವರ ಮಾರ್ಗದರ್ಶನದಲ್ಲಿ ಶಾಲೆಯ ವಿದ್ಯಾರ್ಥಿಗಳು ದ್ವಿಚಕ್ರ ವಾಹನ ಸವಾರರಲ್ಲಿ ಹೆಲ್ಮೆಟ್ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಆಯೋಜಿಸಿದರು. ಕುದ್ರೋಳಿ ಬಳಿ ರಸ್ತೆಬದಿಯಲ್ಲಿ ನಿಂತು ಹೆಲ್ಮೆಟ್ನ ಮಹತ್ವ ಸಾರುವ ಘೋಷಣಾ ಫಲಕಗಳನ್ನು ಹಿಡಿದರು. ಅವರು

ಗುಡ್ಡೆ ಹೋಟೆಲಿನ ಅಯ್ಯಪ್ಪ ಸ್ವಾಮಿ ಭಕ್ತವೃಂದದವರಿಂದ ಹೆಮ್ಮುಂಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾಭಿವೃದ್ಧಿಗಾಗಿ ನೆರವು

ಬೈಂದೂರು ತಾಲೂಕುಗುಡ್ಡೆ ಹೋಟೆಲ್ ಅಯ್ಯಪ್ಪ ಸ್ವಾಮಿ ಮಂದಿರದ ಗುರು ಸ್ವಾಮಿ ಕಾಮೇಶ್ ಹಾಗೂ ಭಕ್ತವೃಂದದವರು ಹೆಮ್ಮುಂಜೆಯಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಸಿಹಿ ತಿಂಡಿ ಹಂಚಿ ರೂಪಾಯಿ ಹತ್ತು ಸಾವಿರದ ನೂರನ್ನು ಶಾಲೆಯ ಕಂಪ್ಯೂಟರ್ ಕ್ಯಾಬಿನ್ ರಚನೆಗೆ ದೇಣಿಗೆಯಾಗಿ ನೀಡಿದರು. ಶಾಲೆಯ ಬಗ್ಗೆ ಇರುವ ಕಾಳಜಿ, ಅಭಿಮಾನ ಹಾಗೂ ಪ್ರೋತ್ಸಾಹವನ್ನು ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ,ಎಸ್.ಎಮ್. ಡಿ .ಸಿ.ಯ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ಊರಿನ ಜನತೆ ತಮ್ಮ

ಮಂಗಳೂರು ಇಎಸ್ ಐ ಆಸ್ಪತ್ರೆ ಮೇಲ್ದರ್ಜೆಗೇರಿಸಲು ನಳಿನ್ ಕುಮಾರ್ ಕಟೀಲ್ ಮನವಿ

ಮಂಗಳೂರಿನಲ್ಲಿರುವ ಇ ಎಸ್ ಐ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವಂತೆ ಕೇಂದ್ರ ಕಾರ್ಮಿಕ ಸಚಿವರಾದ ಶ್ರೀ ಭೋಪೇಂದ್ರ ಯಾದವ್ ರವರನ್ನು ಇಂದು ನಳಿನ್ ಕುಮಾರ್ ಕಟೀಲ್ ರವರು ನವದೆಹಲಿಯಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದರು.ಜಿಲ್ಲೆಯ ಶ್ರಮಿಕ ವರ್ಗಕ್ಕೆ ಅನುಕೂಲವಾಗುವಂತೆ, ಮಂಗಳೂರು ಇಎಸ್ಐ ಆಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿ, ಅತ್ಯಾದುನಿಕ ವೈದ್ಯಕೀಯ ಉಪಕರಣಗಳು, ಎಂ.ಆರ್.ಐ. ಘಟಕ, ಸಿ.ಟಿ. ಸ್ಕಾನಿಂಗ್ ಯಂತ್ರಗಳ ಅಳವಡಿಕೆ, ತಜ್ಞ ವೈದ್ಯರ ಹಾಗೂ ಇತರೆ

ಉರ್ವ ಶ್ರೀ ಮಹಾಗಣಪತಿ ದೇವಳದಲ್ಲಿ ಬ್ರಹ್ಮಕಲಶೋತ್ಸವ

ನಗರದ ಉರ್ವಸ್ಟೋರ್ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಫೆ.11ರಿಂದ 18ರವರೆಗೆ ಭಾರೀ ವಿಜೃಂಭಣೆಯ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಬ್ರಹ್ಮರಥೋತ್ಸವ ನಡೆಯಲಿದ್ದು ಅದರ ಪೂರ್ವಸಿದ್ಧತೆಯ ಹಿನ್ನಲೆಯಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರು ಮಹಾನಗರ ಪಾಲಿಕೆ, ಆರೋಗ್ಯ, ಪೊಲೀಸ್ ಹಾಗೂ ಮೆಸ್ಕಾಂ ಅಧಿಕಾರಿಗಳ ಸಭೆ ನಡೆಸಿದರು. ಈ ಬಾರಿ ಬ್ರಹ್ಮಕಲಶೋತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಭಿಮಾನಿಗಳು ಆಗಮಿಸಲಿದ್ದಾರೆ. ಅದರಲ್ಲೂ ವಿಶೇಷವಾಗಿ ನಡೆಯಲಿರುವ ನೂತನ ಬ್ರಹ್ಮರಥದ

ಫೆ.4ರಂದು ಬೊಂದೆಲ್ ಚರ್ಚ್ ಶಾಲಾ ವಠಾರದಲ್ಲಿ 16 ನೇ ಸ್ಟ್ಯಾನ್ ನೈಟ್

ಬೋಂದೆಲ್ ದೇವಾಲಯದ ನವೀಕೃತ ಯೋಜನೆಗೆ ಸಹಾಯಾರ್ಥವಾಗಿ ಆಲ್ಫ್ರೆಡ್ ಬೆನ್ನಿಸ್ ಕ್ರಿಯೇಶನ್ಸ್ ಮಂಗಳೂರು ಮತ್ತು ಸಂತ ಲಾರೆನ್ಸರ ದೇವಾಲಯ ಮತ್ತು ಪುಣ್ಯಕ್ಷೇತ್ರ ಪ್ರಸ್ತುತಪಡಿಸಿದ 16 ನೇ ಸ್ಟ್ಯಾನ್ ನೈಟ್ ಕಾರ್ಯಕ್ರಮವನ್ನು ಫೆಬ್ರವರಿ 4ರಂದು ಆದಿತ್ಯವಾರ ಬೊಂದೆಲ್ ಶಾಲಾ ವಠಾರದಲ್ಲಿ ಆಯೋಜಿಸಲಾಗಿತ್ತು. ವೇದಿಕೆಯಲ್ಲಿ ಗಣ್ಯ ವ್ಯಕ್ತಿ: ವ| ಫಾ ಆಂಡ್ರ್ಯೂ ಲಿಯೋ ಡಿಸೋಜ, “ಶ್ರೀ ರಾಯ್ ಕಾಸ್ಟೆಲಿನೊ” ಶ್ರೀ ಲುವಿ ಪಿಂಟೊ,ಶ್ರೀ ಜೋಸೆಫ್ ಮಾಥಾಯಸ್, ಶ್ರೀ

ಮಂಗಳೂರು: ಬಿಎನ್‌ ಐ ಯುನಿಟಿ ಕಪ್ ಸೀಸನ್-4ಗೆ ಚಾಲನೆ

ಮುಕುಂದ್ ಎಂಜಿಎಮ್ ರಿಯಾಲಿಟಿ ವತಿಯಿಂದ ಬಿಎನ್‌ಐ ಮಂಗಳೂರು ಮತ್ತು ಉಡುಪಿ ಸಹಯೋಗದೊಂದಿಗೆ ಯುನಿಟಿ ಕಪ್ ಸೀಸನ್ -4 ನಗರದ ಪದವು ಹೈಸ್ಕೂಲ್ ಮೈದಾನದಲ್ಲಿ ನಡೆಯಿತು. ಉದ್ಯಮ ಕ್ಷೇತ್ರದಲ್ಲಿ ತನ್ನದೇ ಆದ ಚಾಪನ್ನು ಮೂಡಿಸಿರುವ ಬಿಎನ್‌ಐ ಸಂಸ್ಥೆ, ಉದ್ಯಮದ ಜೊತೆಗೆ ಕ್ರೀಡಾ ಕ್ಷೇತ್ರದಲ್ಲೂ ತನ್ನನ್ನು ತಾನು ತೊಡಗಿಸಿಕೊಂಡು ಬಿಡುವಿನ ಸಂದರ್ಭದಲ್ಲಿ ಕ್ರೀಡಾಕೂಟವನ್ನು ಆಯೋಜಿಸಿ, ಕ್ರೀಡೆಗೆ ಕೂಡ ಪ್ರೋತ್ಸಾಹ ನೀಡಿಕೊಂಡು ಬರುತ್ತಿದ್ದಾರೆ. ಅಂತೆಯೇ ಇಂದು ನಗರದ ಪದವು

ಪಡುಬಿದ್ರಿ: ಯುಪಿಸಿಎಲ್‌ನಿಂದ ಕೇರಳಕ್ಕೆ ವಿದ್ಯುತ್ ಸರಬರಾಜು, ಗ್ರಾಮಸ್ಥರ ವಿರೋಧ

ಪಡುಬಿದ್ರಿ ಸಮೀಪದ ಯುಪಿಸಿಎಲ್ ಕಂಪನಿಯಿಂದ ಕೇರಳಕ್ಕೆ ವಿದ್ಯುತ್ ಸರಬರಾಜು ನಡೆಸಲು ಟವರ್ ನಿರ್ಮಾಣಕ್ಕೆ ಜಿಲ್ಲಾಡಳಿತದ ನಿರ್ದೇಶನದಂತೆ ಗ್ರಾಮಸ್ಥರಿಗೆ ಮಾಹಿತಿ ನೀಡದೆ ಆಗಮಿಸಿದ ಅಧಿಕಾರಿಗಳ ತಂಡವನ್ನು ಗ್ರಾಮಸ್ಥರು ವಾಪಾಸು ಕಳುಹಿಸಿದ ಘಟನೆ ಇನ್ನಾ ಗ್ರಾಮದಲ್ಲಿ ನಡೆದಿದೆ. ಈ ಬಗ್ಗೆ ಮಾತನಾಡಿದ ಇನ್ನಾ ಗ್ರಾ.ಪಂ.ಸದಸ್ಯ ದೀಪಕ್ ಕೋಟ್ಯಾನ್, ಜನರ ವಿರೋಧದ ನಡುವೆಯೂ ಜನರಿಗೆ ಯಾವುದೇ ಮಾಹಿತಿ ನೀಡದೆ ಇನ್ನಾ ಪ್ರೌಢಶಾಲಾ ಬಳಿ ಯುಪಿಸಿಎಲ್ ನಿಂದ ಕೇರಳಕ್ಕೆ ವಿದ್ಯುತ್